Homeಮುಖಪುಟನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ: ಪತ್ರಕರ್ತ ಪತ್ರೀಕ್ ಸಿನ್ಹಾ

ನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ: ಪತ್ರಕರ್ತ ಪತ್ರೀಕ್ ಸಿನ್ಹಾ

ದಿಟ್ಟ ಪತ್ರಕರ್ತ ದ್ಯಾನಿಶ್ ಸಿದ್ದೀಕಿ ಅವರ ಸಾವನ್ನು ಸಂಭ್ರಮಿಸುತ್ತಿರುವ ಬಲಪಂಥೀಯರ ದ್ವೇಷವನ್ನು ನಿರ್ಲಕ್ಷಿಸಲು ಸಾಧ್ಯವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತರಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿದೆ. ವಿಶ್ವಪ್ರಸಿದ್ದ ದಿಟ್ಟ ಪತ್ರಕರ್ತನ ಸಾವಿಗೆ ಬಲಪಂಥೀಯರು ಸಂಭ್ರಮಿಸುತ್ತಿದ್ದು, ಇದಕ್ಕೆ ಪ್ರಕತಿಕ್ರಿಯಸಿರುವ ಆಲ್ಟ್‌ನ್ಯೂಸ್‌ ಸಂಸ್ಥಾಪಕ ಪ್ರತೀಕ್ ಸಿನ್ಹಾ, “ನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ಮತ್ತು ಅಫ್ಘಾನ್‌‌ನ ಪ್ರಮುಖ ಗಡಿಯಾಗಿರುವ ‘ಸ್ಪಿನ್ ಬೋಲ್ಡಾಕ್‌’ನ ಬಾರ್ಡರ್‌ ಕ್ರಾಸಿಂಗ್‌‌ ಅನ್ನು ತಾಲಿಬಾನ್‌‌ ವಶಪಡಿಸಿಕೊಂಡಿತ್ತು. ಈ ಪ್ರಮುಖ ಗಡಿಯನ್ನು ಹಿಂಪಡೆಯಲು ಕಾರ್ಯಾಚರಣೆ ಪ್ರಾರಂಭಿಸಿದ್ದ ಅಫ್ಘಾನ್ ಪಡೆಗಳು ಸ್ಪಿನ್ ಬೋಲ್ಡಾಕ್‌ನಲ್ಲಿ ತಾಲಿಬಾನ್‌ ಬಂಡುಕೋರರೊಂದಿಗೆ ಘರ್ಷಣೆ ನಡೆಸಿದ್ದವು, ಈ ವೇಳೆ ಪತ್ರಕರ್ತ ದಾನಿಶ್ ಸಿದ್ದೀಕಿ ಹತರಾಗಿದ್ದಾರೆ.

ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ವಿಶ್ವದ ಪ್ರಮುಖ ಪತ್ರಕರ್ತನ ಸಾವಿಗೆ ಬಲಪಂಥೀಯರು ಸಂಭ್ರಮಿಸುತ್ತಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪತ್ರಕರ್ತ ಪ್ರತೀಕ್ ಸಿನ್ಹಾ, “ನೀವು ಇಂದು ಟ್ವಿಟ್ಟರ್‌‌ನಲ್ಲಿನ ದ್ವೇಷವನ್ನು ನೋಡಿದ್ದೀರಾ? ದಿಟ್ಟ ಪತ್ರಕರ್ತನ ಸಾವಿಗೆ ಜನರು ಸಂಭ್ರಮಿಸುತ್ತಿದ್ದಾರೆ? ಈ ದ್ವೇಷವನ್ನು ನಾವು ನಿರ್ಲಕ್ಷಿಸಲು ಬಯಸುತ್ತೀರಾ? ಈ ದ್ವೇಷವು ತೀವ್ರವಾದಿ ಆಗುತ್ತಿರುವ ಅಥವಾ ಈಗಾಗಲೇ ತೀವ್ರವಾದಿಗಳಾಗಿರುವ ಜನರಿಂದ ಬರುತ್ತಿದೆ. ನಾವು ನಮ್ಮದೇ ತಾಲಿಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಹೇಳಿದ್ದಾರೆ.

2018 ರಲ್ಲಿ ತನ್ನ ‘ಫೀಚರ್‌ ಫೋಟೋಗ್ರಾಫಿ’ ಸರಣಿಗಾಗಿ ಪ್ರತಿಷ್ಠಿತ ಪುಲಿಟ್ಜೆರ್‌‌ ಪ್ರಶಸ್ತಿಯನ್ನು ಅವರು ಪಡೆದಿದ್ದರು. ಆ ವರ್ಷ ರಾಯ್ಟರ್ಸ್‌ನ ಒಟ್ಟು ಏಳು ಪತ್ರಕರ್ತರಿಗೆ ಪ್ರಶಸ್ತಿ ಬಂದಿದ್ದು, ಅದರಲ್ಲಿನ ಇಬ್ಬರು ಭಾರತೀಯರಲ್ಲಿ ದಾನಿಶ್ ಸಿದ್ದೀಕಿ ಒಬ್ಬರಾಗಿದ್ದಾರೆ. ಅಂದಿನ ಅವರ ಫೋಟೊ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿತ್ತು.

ಇದನ್ನೂ ಓದಿ: ರಾಯ್ಟರ್ಸ್‌‌ನ ಖ್ಯಾತ ಫೋಟೋಗ್ರಾಫರ್‌ ದಾನಿಶ್ ಸಿದ್ದೀಕಿ ಅಫ್ಘಾನ್‌ ಘರ್ಷಣೆಯಲ್ಲಿ ಹತ

ದಾನಿಶ್ ಅವರು, ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳು, ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟು, ಹಾಂಗ್ ಕಾಂಗ್ ಪ್ರತಿಭಟನೆಗಳು, ನೇಪಾಳ ಭೂಕಂಪಗಳು, ಉತ್ತರ ಕೊರಿಯಾದಲ್ಲಿ ನಡೆದ ಕ್ರೀಡಾಕೂಟಗಳ ವರದಿಗಳ ಸಹಿತ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪಿನ ವರದಿಗಳನ್ನು ಮಾಡಿದ್ದರು.

ಕಳೆದ ವರ್ಷ ದೇಶದಲ್ಲಿ ಕೊರೊನಾ ಪತ್ತೆಯಾದಾಗ, ಯಾವುದೆ ಪೂರ್ವ ತಯಾರಿ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಅವೈಜ್ಞಾನಿಕ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು ಪಟ್ಟ ಬವಣೆಗೆಗಳು, ಕೊರೊನಾ ಎರಡನೆ ಅಲೆಯ ಸಮಯದಲ್ಲಿ ದೇಶದ ಸ್ಮಶಾನದಲ್ಲಿನ ಚಿತ್ರಣಗಳನ್ನು ಮತ್ತು ಜನರ ಸಂಕಷ್ಟಗಳನ್ನು ಅವರು ಸಮರ್ಪಕವಾಗಿ ಸೆರೆ ಹಿಡಿದು ಜನರ ಮುಂದೆ ಇಟ್ಟಿದ್ದರು. ಅಷ್ಟೇ ಅಲ್ಲದೆ CAA-NRC-NPR ವಿರೋಧಿ ಹೋರಾಟದ ಸಮಯದಲ್ಲಿ ನಡೆದ ಘಟನೆಗಳು ಹಾಗೂ ದೆಹಲಿ ಗಲಭೆಯ ಕ್ರೂರ ಚಿತ್ರಗಳನ್ನು ಅವರು ಸೆರೆ ಹಿಡಿದಿದ್ದರು.

ಇದನ್ನೂ ಓದಿ: ರಾಯ್ಟರ್ಸ್ ವರ್ಷದ ಫೋಟೋವಾಗಿ ದೆಹಲಿ ಹಿಂಚಾಚಾರದ ಚಿತ್ರ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೌದು..ನಾವು ನಮ್ಮದೇ ತಾಲಿಬಾನ್ ರಚಿಸುವ ಅದರೊಟ್ಟಿಗೆ ಅಲ್ ಖೈದಾ,ಹಿಜ್ಬುಲ್ ಮುಜಾಹಿದ್ದೀನ್,isis ರಚನೆಯಲ್ಲಿ ನಿರತರಾದಂತೆ ಇದೆ.
    ಇದು ಈಗ ಅನುವಾರ್ಯವಿದೆಯೇ?
    ಏಕೆಂದರೆ ಭಾರತದಲ್ಲಿ ಇಂತಹ ಸಂಘಟನೆಗಳು ಇಲ್ಲದೆ ಇರುವುದರಿಂದ…ಇಲ್ಲಿರುವುದು ಕೇವಲ ….ಅಲ್ಲವೇ..?

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...