Homeಮುಖಪುಟನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ: ಪತ್ರಕರ್ತ ಪತ್ರೀಕ್ ಸಿನ್ಹಾ

ನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ: ಪತ್ರಕರ್ತ ಪತ್ರೀಕ್ ಸಿನ್ಹಾ

ದಿಟ್ಟ ಪತ್ರಕರ್ತ ದ್ಯಾನಿಶ್ ಸಿದ್ದೀಕಿ ಅವರ ಸಾವನ್ನು ಸಂಭ್ರಮಿಸುತ್ತಿರುವ ಬಲಪಂಥೀಯರ ದ್ವೇಷವನ್ನು ನಿರ್ಲಕ್ಷಿಸಲು ಸಾಧ್ಯವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತರಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿದೆ. ವಿಶ್ವಪ್ರಸಿದ್ದ ದಿಟ್ಟ ಪತ್ರಕರ್ತನ ಸಾವಿಗೆ ಬಲಪಂಥೀಯರು ಸಂಭ್ರಮಿಸುತ್ತಿದ್ದು, ಇದಕ್ಕೆ ಪ್ರಕತಿಕ್ರಿಯಸಿರುವ ಆಲ್ಟ್‌ನ್ಯೂಸ್‌ ಸಂಸ್ಥಾಪಕ ಪ್ರತೀಕ್ ಸಿನ್ಹಾ, “ನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ಮತ್ತು ಅಫ್ಘಾನ್‌‌ನ ಪ್ರಮುಖ ಗಡಿಯಾಗಿರುವ ‘ಸ್ಪಿನ್ ಬೋಲ್ಡಾಕ್‌’ನ ಬಾರ್ಡರ್‌ ಕ್ರಾಸಿಂಗ್‌‌ ಅನ್ನು ತಾಲಿಬಾನ್‌‌ ವಶಪಡಿಸಿಕೊಂಡಿತ್ತು. ಈ ಪ್ರಮುಖ ಗಡಿಯನ್ನು ಹಿಂಪಡೆಯಲು ಕಾರ್ಯಾಚರಣೆ ಪ್ರಾರಂಭಿಸಿದ್ದ ಅಫ್ಘಾನ್ ಪಡೆಗಳು ಸ್ಪಿನ್ ಬೋಲ್ಡಾಕ್‌ನಲ್ಲಿ ತಾಲಿಬಾನ್‌ ಬಂಡುಕೋರರೊಂದಿಗೆ ಘರ್ಷಣೆ ನಡೆಸಿದ್ದವು, ಈ ವೇಳೆ ಪತ್ರಕರ್ತ ದಾನಿಶ್ ಸಿದ್ದೀಕಿ ಹತರಾಗಿದ್ದಾರೆ.

ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ವಿಶ್ವದ ಪ್ರಮುಖ ಪತ್ರಕರ್ತನ ಸಾವಿಗೆ ಬಲಪಂಥೀಯರು ಸಂಭ್ರಮಿಸುತ್ತಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪತ್ರಕರ್ತ ಪ್ರತೀಕ್ ಸಿನ್ಹಾ, “ನೀವು ಇಂದು ಟ್ವಿಟ್ಟರ್‌‌ನಲ್ಲಿನ ದ್ವೇಷವನ್ನು ನೋಡಿದ್ದೀರಾ? ದಿಟ್ಟ ಪತ್ರಕರ್ತನ ಸಾವಿಗೆ ಜನರು ಸಂಭ್ರಮಿಸುತ್ತಿದ್ದಾರೆ? ಈ ದ್ವೇಷವನ್ನು ನಾವು ನಿರ್ಲಕ್ಷಿಸಲು ಬಯಸುತ್ತೀರಾ? ಈ ದ್ವೇಷವು ತೀವ್ರವಾದಿ ಆಗುತ್ತಿರುವ ಅಥವಾ ಈಗಾಗಲೇ ತೀವ್ರವಾದಿಗಳಾಗಿರುವ ಜನರಿಂದ ಬರುತ್ತಿದೆ. ನಾವು ನಮ್ಮದೇ ತಾಲಿಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಹೇಳಿದ್ದಾರೆ.

2018 ರಲ್ಲಿ ತನ್ನ ‘ಫೀಚರ್‌ ಫೋಟೋಗ್ರಾಫಿ’ ಸರಣಿಗಾಗಿ ಪ್ರತಿಷ್ಠಿತ ಪುಲಿಟ್ಜೆರ್‌‌ ಪ್ರಶಸ್ತಿಯನ್ನು ಅವರು ಪಡೆದಿದ್ದರು. ಆ ವರ್ಷ ರಾಯ್ಟರ್ಸ್‌ನ ಒಟ್ಟು ಏಳು ಪತ್ರಕರ್ತರಿಗೆ ಪ್ರಶಸ್ತಿ ಬಂದಿದ್ದು, ಅದರಲ್ಲಿನ ಇಬ್ಬರು ಭಾರತೀಯರಲ್ಲಿ ದಾನಿಶ್ ಸಿದ್ದೀಕಿ ಒಬ್ಬರಾಗಿದ್ದಾರೆ. ಅಂದಿನ ಅವರ ಫೋಟೊ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿತ್ತು.

ಇದನ್ನೂ ಓದಿ: ರಾಯ್ಟರ್ಸ್‌‌ನ ಖ್ಯಾತ ಫೋಟೋಗ್ರಾಫರ್‌ ದಾನಿಶ್ ಸಿದ್ದೀಕಿ ಅಫ್ಘಾನ್‌ ಘರ್ಷಣೆಯಲ್ಲಿ ಹತ

ದಾನಿಶ್ ಅವರು, ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳು, ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟು, ಹಾಂಗ್ ಕಾಂಗ್ ಪ್ರತಿಭಟನೆಗಳು, ನೇಪಾಳ ಭೂಕಂಪಗಳು, ಉತ್ತರ ಕೊರಿಯಾದಲ್ಲಿ ನಡೆದ ಕ್ರೀಡಾಕೂಟಗಳ ವರದಿಗಳ ಸಹಿತ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪಿನ ವರದಿಗಳನ್ನು ಮಾಡಿದ್ದರು.

ಕಳೆದ ವರ್ಷ ದೇಶದಲ್ಲಿ ಕೊರೊನಾ ಪತ್ತೆಯಾದಾಗ, ಯಾವುದೆ ಪೂರ್ವ ತಯಾರಿ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಅವೈಜ್ಞಾನಿಕ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು ಪಟ್ಟ ಬವಣೆಗೆಗಳು, ಕೊರೊನಾ ಎರಡನೆ ಅಲೆಯ ಸಮಯದಲ್ಲಿ ದೇಶದ ಸ್ಮಶಾನದಲ್ಲಿನ ಚಿತ್ರಣಗಳನ್ನು ಮತ್ತು ಜನರ ಸಂಕಷ್ಟಗಳನ್ನು ಅವರು ಸಮರ್ಪಕವಾಗಿ ಸೆರೆ ಹಿಡಿದು ಜನರ ಮುಂದೆ ಇಟ್ಟಿದ್ದರು. ಅಷ್ಟೇ ಅಲ್ಲದೆ CAA-NRC-NPR ವಿರೋಧಿ ಹೋರಾಟದ ಸಮಯದಲ್ಲಿ ನಡೆದ ಘಟನೆಗಳು ಹಾಗೂ ದೆಹಲಿ ಗಲಭೆಯ ಕ್ರೂರ ಚಿತ್ರಗಳನ್ನು ಅವರು ಸೆರೆ ಹಿಡಿದಿದ್ದರು.

ಇದನ್ನೂ ಓದಿ: ರಾಯ್ಟರ್ಸ್ ವರ್ಷದ ಫೋಟೋವಾಗಿ ದೆಹಲಿ ಹಿಂಚಾಚಾರದ ಚಿತ್ರ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೌದು..ನಾವು ನಮ್ಮದೇ ತಾಲಿಬಾನ್ ರಚಿಸುವ ಅದರೊಟ್ಟಿಗೆ ಅಲ್ ಖೈದಾ,ಹಿಜ್ಬುಲ್ ಮುಜಾಹಿದ್ದೀನ್,isis ರಚನೆಯಲ್ಲಿ ನಿರತರಾದಂತೆ ಇದೆ.
    ಇದು ಈಗ ಅನುವಾರ್ಯವಿದೆಯೇ?
    ಏಕೆಂದರೆ ಭಾರತದಲ್ಲಿ ಇಂತಹ ಸಂಘಟನೆಗಳು ಇಲ್ಲದೆ ಇರುವುದರಿಂದ…ಇಲ್ಲಿರುವುದು ಕೇವಲ ….ಅಲ್ಲವೇ..?

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...