Homeರಾಷ್ಟ್ರೀಯನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಸಾಮ್ರಾಜ್ಯವನ್ನು ಸ್ಥಾಪಿಸಿದ್ದನು, ಆದರೆ ಈ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಭಾರತದ ಹೆಚ್ಚಿನ ಇತಿಹಾಸಕಾರರು ಪಾಂಡ್ಯರು ಮತ್ತು ಚೋಳರಂತಹ ಅನೇಕ ಸಾಮ್ರಾಜ್ಯಗಳ ವೈಭವದ ಆಡಳಿತಗಳನ್ನು ನಿರ್ಲಕ್ಷಿಸಿ ಮೊಘಲರ ಇತಿಹಾಸವನ್ನು ಮಾತ್ರ ದಾಖಲಿಸಲು ಪ್ರಾಮುಖ್ಯತೆ ನೀಡಿದ್ದಾರೆ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಆರೋಪಿಸಿದ್ದು, “ಈಗ ನಾವು ಸ್ವತಂತ್ರರಾಗಿರುವುದರಿಂದ, ಇತಿಹಾಸ ಬರೆಯುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

‘‘ಮಹಾರಾಣಾ: ಸಹಸ್ತ್ರ ವರ್ಷ ಕಾ ಧರ್ಮ ಯುದ್ಧ” ಎಂಬ ಪುಸ್ತಕವನ್ನು ಬಿಡುಗಡೆ ಮಾಡುತ್ತಾ ಮಾತನಾಡಿದ ಅಮಿತ್‌ ಶಾ, ಗತಕಾಲದ ವೈಭವವನ್ನು ವರ್ತಮಾನಕ್ಕೆ ಪುನರುಜ್ಜೀವನಗೊಳಿಸುವಂತೆ ಇತಿಹಾಸಕಾರರನ್ನು ಕೋರಿದ್ದಾರೆ. “ಇತಿಹಾಸವನ್ನು ಸರ್ಕಾರಗಳು ಮತ್ತು ಇತರ ಪುಸ್ತಕಗಳ ಆಜ್ಞೆಯ ಮೇರೆಗೆ ಬರೆಯುವುದಲ್ಲ, ವಾಸ್ತವಿಕ ಘಟನೆಗಳ ಆಧಾರದ ಮೇಲೆ ಬರೆಯಬೇಕು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅನೇಕ ಭಾರತೀಯ ರಾಜರು ಆಕ್ರಮಣಕಾರರ ವಿರುದ್ಧ ಹೋರಾಡಿದ್ದು, ಅವರನ್ನು ಧೈರ್ಯದಿಂದ ಸೋಲಿಸುವ ಮೂಲಕ ತಮ್ಮ ಪ್ರದೇಶಗಳನ್ನು ರಕ್ಷಿಸಿದ್ದಾರೆ. ಆದರೆ ದುರದೃಷ್ಟವಶಾತ್ ಇದುವರೆಗಿನ ಇತಿಹಾಸದಲ್ಲಿ ಈ ಬಗ್ಗೆ ಹೆಚ್ಚಿನ ವಿವರಗಳು ಸ್ಥಾನ ಪಡೆದಿಲ್ಲ” ಎಂದು ಅಮಿತ್‌ ಶಾ ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

“1,000 ವರ್ಷಗಳಿಂದ ಸಂಸ್ಕೃತಿ, ಭಾಷೆ ಮತ್ತು ಧರ್ಮದ ರಕ್ಷಣೆಗಾಗಿ ನಡೆಸಿದ ಹೋರಾಟವು ವ್ಯರ್ಥವಾಗಲಿಲ್ಲ. ಭಾರತವು ಈಗ ಪ್ರಪಂಚದ ಮುಂದೆ ಮತ್ತೆ ಗೌರವದಿಂದ ನಿಂತಿದೆ. ದೇಶದ ಕೀರ್ತಿಯನ್ನು ಗುರುತಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

“ನಾನು ಇತಿಹಾಸಕಾರರಿಗೆ ಹೇಳಲು ಬಯಸುವುದೇನೆಂದರೆ, ನಾವು ಅನೇಕ ಸಾಮ್ರಾಜ್ಯಗಳನ್ನು ಹೊಂದಿದ್ದೆವು. ಆದರೆ ಇತಿಹಾಸಕಾರರು ಮೊಘಲರ ಮೇಲೆ ಮಾತ್ರ ಕೇಂದ್ರೀಕರಿಸಿದ್ದಾರೆ ಮತ್ತು ಅವರ ಬಗ್ಗೆ ಹೆಚ್ಚಾಗಿ ಬರೆದಿದ್ದಾರೆ. ಪಾಂಡ್ಯ ಸಾಮ್ರಾಜ್ಯವು 800 ವರ್ಷಗಳ ಕಾಲ ಆಳಿತು. ಅಹೋಮ್ ಸಾಮ್ರಾಜ್ಯವು ಅಸ್ಸಾಂ ಅನ್ನು 650 ವರ್ಷಗಳ ಕಾಲ ಆಳಿತು. ಅಹೋಮರು ಭಕ್ತಿಯಾರ್ ಖಿಲ್ಜಿ, ಔರಂಗಜೇಬ್ ಅವರನ್ನು ಸೋಲಿಸಿ ಅಸ್ಸಾಂನ ಸಾರ್ವಭೌಮತ್ವವನ್ನು ಉಳಿಸಿಕೊಂಡಿದ್ದರು. ಪಲ್ಲವ ಸಾಮ್ರಾಜ್ಯವು 600 ವರ್ಷಗಳ ಕಾಲ ಆಳಿತು. ಚೋಳರು 600 ವರ್ಷಗಳ ಕಾಲ ಆಳಿದರು”

“ಮೌರ್ಯರು ಇಡೀ ದೇಶವನ್ನು – ಅಫ್ಘಾನಿಸ್ತಾನದಿಂದ ಲಂಕಾದವರೆಗೆ 550 ವರ್ಷಗಳ ಕಾಲ ಆಳಿದರು. ಸಾತವಾಹನರು 500 ವರ್ಷಗಳ ಕಾಲ ಆಳಿದರು. ಗುಪ್ತರು 400 ವರ್ಷಗಳ ಕಾಲ ಆಳಿದರು ಮತ್ತು ಗುಪ್ತ ಚಕ್ರವರ್ತಿ ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಇಡೀ ದೇಶದೊಂದಿಗೆ ಸಾಮ್ರಾಜ್ಯವನ್ನು ಸ್ಥಾಪಿಸಿದನು. ಆದರೆ ಅವರ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ” ಎಂದು ಅಮಿತ್‌ ಶಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

“ನಾವೀಗ ಸ್ವತಂತ್ರರಾಗಿದ್ದು, ಸತ್ಯವನ್ನು ಬರೆಯುವುದನ್ನು ಯಾರೂ ತಡೆಯಲಾರರು. ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಕಾಲ್ಪನಿಕ ಕಥೆಗಳ ಹರಿಕಾರರು… ಬೊಡ ಬರ್ಕೊ ಆದ್ರೆ ಮಕ್ಕಳಿಗೆ ಓಡಿಸೋಕೆ ಶಾಲೆಗಳ ಮೇಲೆ ಬಲವಂತವಾಗಿ ಹೇರಬೇಡ…. ಇಲ್ಲ ಅಂದ್ರೆ ಚರಂಡಿಗೆ ಪೈಪ್ ಹಾಕಿ ಗ್ಯಾಸ್ ಮಾಡಿ ಸ್ಟೋವ್ ಊರಿಸಬಹುದು ಅಂತ ಬುರುಡೆ ಬಿಡ್ತಾರೆ… ಹುಷಾರ್…..

  2. ನೀನಾಗಲಿ ನಿನ್ನ ಪಕ್ಷ, ಪಕ್ಷದಲ್ಲಿರೋ ಡೋಂಗಿಗಳೇ ಒಂದು ಇತಿಹಾಸ ಆಗತೀರ ಹೊರತು ನಿಮ್ಮಿಂದ ಯಾವ ಇತಿಹಾಸ ಬರೆಯೋಕು ಆಗಲ್ಲ,, ದೇಶದ ಮಾನ ಮರ್ಯಾದೆ ತೆಗದಿದ್ದು ಸಾಕು ಎಲ್ಲ ರಾಜೀನಾಮೆ ಕೊಟ್ಟು ತೊಲಗಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...