Homeರಾಷ್ಟ್ರೀಯನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಸಾಮ್ರಾಜ್ಯವನ್ನು ಸ್ಥಾಪಿಸಿದ್ದನು, ಆದರೆ ಈ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಭಾರತದ ಹೆಚ್ಚಿನ ಇತಿಹಾಸಕಾರರು ಪಾಂಡ್ಯರು ಮತ್ತು ಚೋಳರಂತಹ ಅನೇಕ ಸಾಮ್ರಾಜ್ಯಗಳ ವೈಭವದ ಆಡಳಿತಗಳನ್ನು ನಿರ್ಲಕ್ಷಿಸಿ ಮೊಘಲರ ಇತಿಹಾಸವನ್ನು ಮಾತ್ರ ದಾಖಲಿಸಲು ಪ್ರಾಮುಖ್ಯತೆ ನೀಡಿದ್ದಾರೆ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಆರೋಪಿಸಿದ್ದು, “ಈಗ ನಾವು ಸ್ವತಂತ್ರರಾಗಿರುವುದರಿಂದ, ಇತಿಹಾಸ ಬರೆಯುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

‘‘ಮಹಾರಾಣಾ: ಸಹಸ್ತ್ರ ವರ್ಷ ಕಾ ಧರ್ಮ ಯುದ್ಧ” ಎಂಬ ಪುಸ್ತಕವನ್ನು ಬಿಡುಗಡೆ ಮಾಡುತ್ತಾ ಮಾತನಾಡಿದ ಅಮಿತ್‌ ಶಾ, ಗತಕಾಲದ ವೈಭವವನ್ನು ವರ್ತಮಾನಕ್ಕೆ ಪುನರುಜ್ಜೀವನಗೊಳಿಸುವಂತೆ ಇತಿಹಾಸಕಾರರನ್ನು ಕೋರಿದ್ದಾರೆ. “ಇತಿಹಾಸವನ್ನು ಸರ್ಕಾರಗಳು ಮತ್ತು ಇತರ ಪುಸ್ತಕಗಳ ಆಜ್ಞೆಯ ಮೇರೆಗೆ ಬರೆಯುವುದಲ್ಲ, ವಾಸ್ತವಿಕ ಘಟನೆಗಳ ಆಧಾರದ ಮೇಲೆ ಬರೆಯಬೇಕು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅನೇಕ ಭಾರತೀಯ ರಾಜರು ಆಕ್ರಮಣಕಾರರ ವಿರುದ್ಧ ಹೋರಾಡಿದ್ದು, ಅವರನ್ನು ಧೈರ್ಯದಿಂದ ಸೋಲಿಸುವ ಮೂಲಕ ತಮ್ಮ ಪ್ರದೇಶಗಳನ್ನು ರಕ್ಷಿಸಿದ್ದಾರೆ. ಆದರೆ ದುರದೃಷ್ಟವಶಾತ್ ಇದುವರೆಗಿನ ಇತಿಹಾಸದಲ್ಲಿ ಈ ಬಗ್ಗೆ ಹೆಚ್ಚಿನ ವಿವರಗಳು ಸ್ಥಾನ ಪಡೆದಿಲ್ಲ” ಎಂದು ಅಮಿತ್‌ ಶಾ ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

“1,000 ವರ್ಷಗಳಿಂದ ಸಂಸ್ಕೃತಿ, ಭಾಷೆ ಮತ್ತು ಧರ್ಮದ ರಕ್ಷಣೆಗಾಗಿ ನಡೆಸಿದ ಹೋರಾಟವು ವ್ಯರ್ಥವಾಗಲಿಲ್ಲ. ಭಾರತವು ಈಗ ಪ್ರಪಂಚದ ಮುಂದೆ ಮತ್ತೆ ಗೌರವದಿಂದ ನಿಂತಿದೆ. ದೇಶದ ಕೀರ್ತಿಯನ್ನು ಗುರುತಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

“ನಾನು ಇತಿಹಾಸಕಾರರಿಗೆ ಹೇಳಲು ಬಯಸುವುದೇನೆಂದರೆ, ನಾವು ಅನೇಕ ಸಾಮ್ರಾಜ್ಯಗಳನ್ನು ಹೊಂದಿದ್ದೆವು. ಆದರೆ ಇತಿಹಾಸಕಾರರು ಮೊಘಲರ ಮೇಲೆ ಮಾತ್ರ ಕೇಂದ್ರೀಕರಿಸಿದ್ದಾರೆ ಮತ್ತು ಅವರ ಬಗ್ಗೆ ಹೆಚ್ಚಾಗಿ ಬರೆದಿದ್ದಾರೆ. ಪಾಂಡ್ಯ ಸಾಮ್ರಾಜ್ಯವು 800 ವರ್ಷಗಳ ಕಾಲ ಆಳಿತು. ಅಹೋಮ್ ಸಾಮ್ರಾಜ್ಯವು ಅಸ್ಸಾಂ ಅನ್ನು 650 ವರ್ಷಗಳ ಕಾಲ ಆಳಿತು. ಅಹೋಮರು ಭಕ್ತಿಯಾರ್ ಖಿಲ್ಜಿ, ಔರಂಗಜೇಬ್ ಅವರನ್ನು ಸೋಲಿಸಿ ಅಸ್ಸಾಂನ ಸಾರ್ವಭೌಮತ್ವವನ್ನು ಉಳಿಸಿಕೊಂಡಿದ್ದರು. ಪಲ್ಲವ ಸಾಮ್ರಾಜ್ಯವು 600 ವರ್ಷಗಳ ಕಾಲ ಆಳಿತು. ಚೋಳರು 600 ವರ್ಷಗಳ ಕಾಲ ಆಳಿದರು”

“ಮೌರ್ಯರು ಇಡೀ ದೇಶವನ್ನು – ಅಫ್ಘಾನಿಸ್ತಾನದಿಂದ ಲಂಕಾದವರೆಗೆ 550 ವರ್ಷಗಳ ಕಾಲ ಆಳಿದರು. ಸಾತವಾಹನರು 500 ವರ್ಷಗಳ ಕಾಲ ಆಳಿದರು. ಗುಪ್ತರು 400 ವರ್ಷಗಳ ಕಾಲ ಆಳಿದರು ಮತ್ತು ಗುಪ್ತ ಚಕ್ರವರ್ತಿ ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಇಡೀ ದೇಶದೊಂದಿಗೆ ಸಾಮ್ರಾಜ್ಯವನ್ನು ಸ್ಥಾಪಿಸಿದನು. ಆದರೆ ಅವರ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ” ಎಂದು ಅಮಿತ್‌ ಶಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

“ನಾವೀಗ ಸ್ವತಂತ್ರರಾಗಿದ್ದು, ಸತ್ಯವನ್ನು ಬರೆಯುವುದನ್ನು ಯಾರೂ ತಡೆಯಲಾರರು. ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಕಾಲ್ಪನಿಕ ಕಥೆಗಳ ಹರಿಕಾರರು… ಬೊಡ ಬರ್ಕೊ ಆದ್ರೆ ಮಕ್ಕಳಿಗೆ ಓಡಿಸೋಕೆ ಶಾಲೆಗಳ ಮೇಲೆ ಬಲವಂತವಾಗಿ ಹೇರಬೇಡ…. ಇಲ್ಲ ಅಂದ್ರೆ ಚರಂಡಿಗೆ ಪೈಪ್ ಹಾಕಿ ಗ್ಯಾಸ್ ಮಾಡಿ ಸ್ಟೋವ್ ಊರಿಸಬಹುದು ಅಂತ ಬುರುಡೆ ಬಿಡ್ತಾರೆ… ಹುಷಾರ್…..

  2. ನೀನಾಗಲಿ ನಿನ್ನ ಪಕ್ಷ, ಪಕ್ಷದಲ್ಲಿರೋ ಡೋಂಗಿಗಳೇ ಒಂದು ಇತಿಹಾಸ ಆಗತೀರ ಹೊರತು ನಿಮ್ಮಿಂದ ಯಾವ ಇತಿಹಾಸ ಬರೆಯೋಕು ಆಗಲ್ಲ,, ದೇಶದ ಮಾನ ಮರ್ಯಾದೆ ತೆಗದಿದ್ದು ಸಾಕು ಎಲ್ಲ ರಾಜೀನಾಮೆ ಕೊಟ್ಟು ತೊಲಗಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...