Homeರಾಷ್ಟ್ರೀಯನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಸಾಮ್ರಾಜ್ಯವನ್ನು ಸ್ಥಾಪಿಸಿದ್ದನು, ಆದರೆ ಈ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಭಾರತದ ಹೆಚ್ಚಿನ ಇತಿಹಾಸಕಾರರು ಪಾಂಡ್ಯರು ಮತ್ತು ಚೋಳರಂತಹ ಅನೇಕ ಸಾಮ್ರಾಜ್ಯಗಳ ವೈಭವದ ಆಡಳಿತಗಳನ್ನು ನಿರ್ಲಕ್ಷಿಸಿ ಮೊಘಲರ ಇತಿಹಾಸವನ್ನು ಮಾತ್ರ ದಾಖಲಿಸಲು ಪ್ರಾಮುಖ್ಯತೆ ನೀಡಿದ್ದಾರೆ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಆರೋಪಿಸಿದ್ದು, “ಈಗ ನಾವು ಸ್ವತಂತ್ರರಾಗಿರುವುದರಿಂದ, ಇತಿಹಾಸ ಬರೆಯುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

‘‘ಮಹಾರಾಣಾ: ಸಹಸ್ತ್ರ ವರ್ಷ ಕಾ ಧರ್ಮ ಯುದ್ಧ” ಎಂಬ ಪುಸ್ತಕವನ್ನು ಬಿಡುಗಡೆ ಮಾಡುತ್ತಾ ಮಾತನಾಡಿದ ಅಮಿತ್‌ ಶಾ, ಗತಕಾಲದ ವೈಭವವನ್ನು ವರ್ತಮಾನಕ್ಕೆ ಪುನರುಜ್ಜೀವನಗೊಳಿಸುವಂತೆ ಇತಿಹಾಸಕಾರರನ್ನು ಕೋರಿದ್ದಾರೆ. “ಇತಿಹಾಸವನ್ನು ಸರ್ಕಾರಗಳು ಮತ್ತು ಇತರ ಪುಸ್ತಕಗಳ ಆಜ್ಞೆಯ ಮೇರೆಗೆ ಬರೆಯುವುದಲ್ಲ, ವಾಸ್ತವಿಕ ಘಟನೆಗಳ ಆಧಾರದ ಮೇಲೆ ಬರೆಯಬೇಕು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅನೇಕ ಭಾರತೀಯ ರಾಜರು ಆಕ್ರಮಣಕಾರರ ವಿರುದ್ಧ ಹೋರಾಡಿದ್ದು, ಅವರನ್ನು ಧೈರ್ಯದಿಂದ ಸೋಲಿಸುವ ಮೂಲಕ ತಮ್ಮ ಪ್ರದೇಶಗಳನ್ನು ರಕ್ಷಿಸಿದ್ದಾರೆ. ಆದರೆ ದುರದೃಷ್ಟವಶಾತ್ ಇದುವರೆಗಿನ ಇತಿಹಾಸದಲ್ಲಿ ಈ ಬಗ್ಗೆ ಹೆಚ್ಚಿನ ವಿವರಗಳು ಸ್ಥಾನ ಪಡೆದಿಲ್ಲ” ಎಂದು ಅಮಿತ್‌ ಶಾ ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

“1,000 ವರ್ಷಗಳಿಂದ ಸಂಸ್ಕೃತಿ, ಭಾಷೆ ಮತ್ತು ಧರ್ಮದ ರಕ್ಷಣೆಗಾಗಿ ನಡೆಸಿದ ಹೋರಾಟವು ವ್ಯರ್ಥವಾಗಲಿಲ್ಲ. ಭಾರತವು ಈಗ ಪ್ರಪಂಚದ ಮುಂದೆ ಮತ್ತೆ ಗೌರವದಿಂದ ನಿಂತಿದೆ. ದೇಶದ ಕೀರ್ತಿಯನ್ನು ಗುರುತಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

“ನಾನು ಇತಿಹಾಸಕಾರರಿಗೆ ಹೇಳಲು ಬಯಸುವುದೇನೆಂದರೆ, ನಾವು ಅನೇಕ ಸಾಮ್ರಾಜ್ಯಗಳನ್ನು ಹೊಂದಿದ್ದೆವು. ಆದರೆ ಇತಿಹಾಸಕಾರರು ಮೊಘಲರ ಮೇಲೆ ಮಾತ್ರ ಕೇಂದ್ರೀಕರಿಸಿದ್ದಾರೆ ಮತ್ತು ಅವರ ಬಗ್ಗೆ ಹೆಚ್ಚಾಗಿ ಬರೆದಿದ್ದಾರೆ. ಪಾಂಡ್ಯ ಸಾಮ್ರಾಜ್ಯವು 800 ವರ್ಷಗಳ ಕಾಲ ಆಳಿತು. ಅಹೋಮ್ ಸಾಮ್ರಾಜ್ಯವು ಅಸ್ಸಾಂ ಅನ್ನು 650 ವರ್ಷಗಳ ಕಾಲ ಆಳಿತು. ಅಹೋಮರು ಭಕ್ತಿಯಾರ್ ಖಿಲ್ಜಿ, ಔರಂಗಜೇಬ್ ಅವರನ್ನು ಸೋಲಿಸಿ ಅಸ್ಸಾಂನ ಸಾರ್ವಭೌಮತ್ವವನ್ನು ಉಳಿಸಿಕೊಂಡಿದ್ದರು. ಪಲ್ಲವ ಸಾಮ್ರಾಜ್ಯವು 600 ವರ್ಷಗಳ ಕಾಲ ಆಳಿತು. ಚೋಳರು 600 ವರ್ಷಗಳ ಕಾಲ ಆಳಿದರು”

“ಮೌರ್ಯರು ಇಡೀ ದೇಶವನ್ನು – ಅಫ್ಘಾನಿಸ್ತಾನದಿಂದ ಲಂಕಾದವರೆಗೆ 550 ವರ್ಷಗಳ ಕಾಲ ಆಳಿದರು. ಸಾತವಾಹನರು 500 ವರ್ಷಗಳ ಕಾಲ ಆಳಿದರು. ಗುಪ್ತರು 400 ವರ್ಷಗಳ ಕಾಲ ಆಳಿದರು ಮತ್ತು ಗುಪ್ತ ಚಕ್ರವರ್ತಿ ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಇಡೀ ದೇಶದೊಂದಿಗೆ ಸಾಮ್ರಾಜ್ಯವನ್ನು ಸ್ಥಾಪಿಸಿದನು. ಆದರೆ ಅವರ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ” ಎಂದು ಅಮಿತ್‌ ಶಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

“ನಾವೀಗ ಸ್ವತಂತ್ರರಾಗಿದ್ದು, ಸತ್ಯವನ್ನು ಬರೆಯುವುದನ್ನು ಯಾರೂ ತಡೆಯಲಾರರು. ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಕಾಲ್ಪನಿಕ ಕಥೆಗಳ ಹರಿಕಾರರು… ಬೊಡ ಬರ್ಕೊ ಆದ್ರೆ ಮಕ್ಕಳಿಗೆ ಓಡಿಸೋಕೆ ಶಾಲೆಗಳ ಮೇಲೆ ಬಲವಂತವಾಗಿ ಹೇರಬೇಡ…. ಇಲ್ಲ ಅಂದ್ರೆ ಚರಂಡಿಗೆ ಪೈಪ್ ಹಾಕಿ ಗ್ಯಾಸ್ ಮಾಡಿ ಸ್ಟೋವ್ ಊರಿಸಬಹುದು ಅಂತ ಬುರುಡೆ ಬಿಡ್ತಾರೆ… ಹುಷಾರ್…..

  2. ನೀನಾಗಲಿ ನಿನ್ನ ಪಕ್ಷ, ಪಕ್ಷದಲ್ಲಿರೋ ಡೋಂಗಿಗಳೇ ಒಂದು ಇತಿಹಾಸ ಆಗತೀರ ಹೊರತು ನಿಮ್ಮಿಂದ ಯಾವ ಇತಿಹಾಸ ಬರೆಯೋಕು ಆಗಲ್ಲ,, ದೇಶದ ಮಾನ ಮರ್ಯಾದೆ ತೆಗದಿದ್ದು ಸಾಕು ಎಲ್ಲ ರಾಜೀನಾಮೆ ಕೊಟ್ಟು ತೊಲಗಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...