Homeರಾಷ್ಟ್ರೀಯನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಸಾಮ್ರಾಜ್ಯವನ್ನು ಸ್ಥಾಪಿಸಿದ್ದನು, ಆದರೆ ಈ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಭಾರತದ ಹೆಚ್ಚಿನ ಇತಿಹಾಸಕಾರರು ಪಾಂಡ್ಯರು ಮತ್ತು ಚೋಳರಂತಹ ಅನೇಕ ಸಾಮ್ರಾಜ್ಯಗಳ ವೈಭವದ ಆಡಳಿತಗಳನ್ನು ನಿರ್ಲಕ್ಷಿಸಿ ಮೊಘಲರ ಇತಿಹಾಸವನ್ನು ಮಾತ್ರ ದಾಖಲಿಸಲು ಪ್ರಾಮುಖ್ಯತೆ ನೀಡಿದ್ದಾರೆ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಆರೋಪಿಸಿದ್ದು, “ಈಗ ನಾವು ಸ್ವತಂತ್ರರಾಗಿರುವುದರಿಂದ, ಇತಿಹಾಸ ಬರೆಯುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

‘‘ಮಹಾರಾಣಾ: ಸಹಸ್ತ್ರ ವರ್ಷ ಕಾ ಧರ್ಮ ಯುದ್ಧ” ಎಂಬ ಪುಸ್ತಕವನ್ನು ಬಿಡುಗಡೆ ಮಾಡುತ್ತಾ ಮಾತನಾಡಿದ ಅಮಿತ್‌ ಶಾ, ಗತಕಾಲದ ವೈಭವವನ್ನು ವರ್ತಮಾನಕ್ಕೆ ಪುನರುಜ್ಜೀವನಗೊಳಿಸುವಂತೆ ಇತಿಹಾಸಕಾರರನ್ನು ಕೋರಿದ್ದಾರೆ. “ಇತಿಹಾಸವನ್ನು ಸರ್ಕಾರಗಳು ಮತ್ತು ಇತರ ಪುಸ್ತಕಗಳ ಆಜ್ಞೆಯ ಮೇರೆಗೆ ಬರೆಯುವುದಲ್ಲ, ವಾಸ್ತವಿಕ ಘಟನೆಗಳ ಆಧಾರದ ಮೇಲೆ ಬರೆಯಬೇಕು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅನೇಕ ಭಾರತೀಯ ರಾಜರು ಆಕ್ರಮಣಕಾರರ ವಿರುದ್ಧ ಹೋರಾಡಿದ್ದು, ಅವರನ್ನು ಧೈರ್ಯದಿಂದ ಸೋಲಿಸುವ ಮೂಲಕ ತಮ್ಮ ಪ್ರದೇಶಗಳನ್ನು ರಕ್ಷಿಸಿದ್ದಾರೆ. ಆದರೆ ದುರದೃಷ್ಟವಶಾತ್ ಇದುವರೆಗಿನ ಇತಿಹಾಸದಲ್ಲಿ ಈ ಬಗ್ಗೆ ಹೆಚ್ಚಿನ ವಿವರಗಳು ಸ್ಥಾನ ಪಡೆದಿಲ್ಲ” ಎಂದು ಅಮಿತ್‌ ಶಾ ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

“1,000 ವರ್ಷಗಳಿಂದ ಸಂಸ್ಕೃತಿ, ಭಾಷೆ ಮತ್ತು ಧರ್ಮದ ರಕ್ಷಣೆಗಾಗಿ ನಡೆಸಿದ ಹೋರಾಟವು ವ್ಯರ್ಥವಾಗಲಿಲ್ಲ. ಭಾರತವು ಈಗ ಪ್ರಪಂಚದ ಮುಂದೆ ಮತ್ತೆ ಗೌರವದಿಂದ ನಿಂತಿದೆ. ದೇಶದ ಕೀರ್ತಿಯನ್ನು ಗುರುತಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

“ನಾನು ಇತಿಹಾಸಕಾರರಿಗೆ ಹೇಳಲು ಬಯಸುವುದೇನೆಂದರೆ, ನಾವು ಅನೇಕ ಸಾಮ್ರಾಜ್ಯಗಳನ್ನು ಹೊಂದಿದ್ದೆವು. ಆದರೆ ಇತಿಹಾಸಕಾರರು ಮೊಘಲರ ಮೇಲೆ ಮಾತ್ರ ಕೇಂದ್ರೀಕರಿಸಿದ್ದಾರೆ ಮತ್ತು ಅವರ ಬಗ್ಗೆ ಹೆಚ್ಚಾಗಿ ಬರೆದಿದ್ದಾರೆ. ಪಾಂಡ್ಯ ಸಾಮ್ರಾಜ್ಯವು 800 ವರ್ಷಗಳ ಕಾಲ ಆಳಿತು. ಅಹೋಮ್ ಸಾಮ್ರಾಜ್ಯವು ಅಸ್ಸಾಂ ಅನ್ನು 650 ವರ್ಷಗಳ ಕಾಲ ಆಳಿತು. ಅಹೋಮರು ಭಕ್ತಿಯಾರ್ ಖಿಲ್ಜಿ, ಔರಂಗಜೇಬ್ ಅವರನ್ನು ಸೋಲಿಸಿ ಅಸ್ಸಾಂನ ಸಾರ್ವಭೌಮತ್ವವನ್ನು ಉಳಿಸಿಕೊಂಡಿದ್ದರು. ಪಲ್ಲವ ಸಾಮ್ರಾಜ್ಯವು 600 ವರ್ಷಗಳ ಕಾಲ ಆಳಿತು. ಚೋಳರು 600 ವರ್ಷಗಳ ಕಾಲ ಆಳಿದರು”

“ಮೌರ್ಯರು ಇಡೀ ದೇಶವನ್ನು – ಅಫ್ಘಾನಿಸ್ತಾನದಿಂದ ಲಂಕಾದವರೆಗೆ 550 ವರ್ಷಗಳ ಕಾಲ ಆಳಿದರು. ಸಾತವಾಹನರು 500 ವರ್ಷಗಳ ಕಾಲ ಆಳಿದರು. ಗುಪ್ತರು 400 ವರ್ಷಗಳ ಕಾಲ ಆಳಿದರು ಮತ್ತು ಗುಪ್ತ ಚಕ್ರವರ್ತಿ ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಇಡೀ ದೇಶದೊಂದಿಗೆ ಸಾಮ್ರಾಜ್ಯವನ್ನು ಸ್ಥಾಪಿಸಿದನು. ಆದರೆ ಅವರ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ” ಎಂದು ಅಮಿತ್‌ ಶಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

“ನಾವೀಗ ಸ್ವತಂತ್ರರಾಗಿದ್ದು, ಸತ್ಯವನ್ನು ಬರೆಯುವುದನ್ನು ಯಾರೂ ತಡೆಯಲಾರರು. ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಕಾಲ್ಪನಿಕ ಕಥೆಗಳ ಹರಿಕಾರರು… ಬೊಡ ಬರ್ಕೊ ಆದ್ರೆ ಮಕ್ಕಳಿಗೆ ಓಡಿಸೋಕೆ ಶಾಲೆಗಳ ಮೇಲೆ ಬಲವಂತವಾಗಿ ಹೇರಬೇಡ…. ಇಲ್ಲ ಅಂದ್ರೆ ಚರಂಡಿಗೆ ಪೈಪ್ ಹಾಕಿ ಗ್ಯಾಸ್ ಮಾಡಿ ಸ್ಟೋವ್ ಊರಿಸಬಹುದು ಅಂತ ಬುರುಡೆ ಬಿಡ್ತಾರೆ… ಹುಷಾರ್…..

  2. ನೀನಾಗಲಿ ನಿನ್ನ ಪಕ್ಷ, ಪಕ್ಷದಲ್ಲಿರೋ ಡೋಂಗಿಗಳೇ ಒಂದು ಇತಿಹಾಸ ಆಗತೀರ ಹೊರತು ನಿಮ್ಮಿಂದ ಯಾವ ಇತಿಹಾಸ ಬರೆಯೋಕು ಆಗಲ್ಲ,, ದೇಶದ ಮಾನ ಮರ್ಯಾದೆ ತೆಗದಿದ್ದು ಸಾಕು ಎಲ್ಲ ರಾಜೀನಾಮೆ ಕೊಟ್ಟು ತೊಲಗಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...