Homeರಾಷ್ಟ್ರೀಯನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಸಾಮ್ರಾಜ್ಯವನ್ನು ಸ್ಥಾಪಿಸಿದ್ದನು, ಆದರೆ ಈ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಭಾರತದ ಹೆಚ್ಚಿನ ಇತಿಹಾಸಕಾರರು ಪಾಂಡ್ಯರು ಮತ್ತು ಚೋಳರಂತಹ ಅನೇಕ ಸಾಮ್ರಾಜ್ಯಗಳ ವೈಭವದ ಆಡಳಿತಗಳನ್ನು ನಿರ್ಲಕ್ಷಿಸಿ ಮೊಘಲರ ಇತಿಹಾಸವನ್ನು ಮಾತ್ರ ದಾಖಲಿಸಲು ಪ್ರಾಮುಖ್ಯತೆ ನೀಡಿದ್ದಾರೆ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಆರೋಪಿಸಿದ್ದು, “ಈಗ ನಾವು ಸ್ವತಂತ್ರರಾಗಿರುವುದರಿಂದ, ಇತಿಹಾಸ ಬರೆಯುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

‘‘ಮಹಾರಾಣಾ: ಸಹಸ್ತ್ರ ವರ್ಷ ಕಾ ಧರ್ಮ ಯುದ್ಧ” ಎಂಬ ಪುಸ್ತಕವನ್ನು ಬಿಡುಗಡೆ ಮಾಡುತ್ತಾ ಮಾತನಾಡಿದ ಅಮಿತ್‌ ಶಾ, ಗತಕಾಲದ ವೈಭವವನ್ನು ವರ್ತಮಾನಕ್ಕೆ ಪುನರುಜ್ಜೀವನಗೊಳಿಸುವಂತೆ ಇತಿಹಾಸಕಾರರನ್ನು ಕೋರಿದ್ದಾರೆ. “ಇತಿಹಾಸವನ್ನು ಸರ್ಕಾರಗಳು ಮತ್ತು ಇತರ ಪುಸ್ತಕಗಳ ಆಜ್ಞೆಯ ಮೇರೆಗೆ ಬರೆಯುವುದಲ್ಲ, ವಾಸ್ತವಿಕ ಘಟನೆಗಳ ಆಧಾರದ ಮೇಲೆ ಬರೆಯಬೇಕು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅನೇಕ ಭಾರತೀಯ ರಾಜರು ಆಕ್ರಮಣಕಾರರ ವಿರುದ್ಧ ಹೋರಾಡಿದ್ದು, ಅವರನ್ನು ಧೈರ್ಯದಿಂದ ಸೋಲಿಸುವ ಮೂಲಕ ತಮ್ಮ ಪ್ರದೇಶಗಳನ್ನು ರಕ್ಷಿಸಿದ್ದಾರೆ. ಆದರೆ ದುರದೃಷ್ಟವಶಾತ್ ಇದುವರೆಗಿನ ಇತಿಹಾಸದಲ್ಲಿ ಈ ಬಗ್ಗೆ ಹೆಚ್ಚಿನ ವಿವರಗಳು ಸ್ಥಾನ ಪಡೆದಿಲ್ಲ” ಎಂದು ಅಮಿತ್‌ ಶಾ ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

“1,000 ವರ್ಷಗಳಿಂದ ಸಂಸ್ಕೃತಿ, ಭಾಷೆ ಮತ್ತು ಧರ್ಮದ ರಕ್ಷಣೆಗಾಗಿ ನಡೆಸಿದ ಹೋರಾಟವು ವ್ಯರ್ಥವಾಗಲಿಲ್ಲ. ಭಾರತವು ಈಗ ಪ್ರಪಂಚದ ಮುಂದೆ ಮತ್ತೆ ಗೌರವದಿಂದ ನಿಂತಿದೆ. ದೇಶದ ಕೀರ್ತಿಯನ್ನು ಗುರುತಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

“ನಾನು ಇತಿಹಾಸಕಾರರಿಗೆ ಹೇಳಲು ಬಯಸುವುದೇನೆಂದರೆ, ನಾವು ಅನೇಕ ಸಾಮ್ರಾಜ್ಯಗಳನ್ನು ಹೊಂದಿದ್ದೆವು. ಆದರೆ ಇತಿಹಾಸಕಾರರು ಮೊಘಲರ ಮೇಲೆ ಮಾತ್ರ ಕೇಂದ್ರೀಕರಿಸಿದ್ದಾರೆ ಮತ್ತು ಅವರ ಬಗ್ಗೆ ಹೆಚ್ಚಾಗಿ ಬರೆದಿದ್ದಾರೆ. ಪಾಂಡ್ಯ ಸಾಮ್ರಾಜ್ಯವು 800 ವರ್ಷಗಳ ಕಾಲ ಆಳಿತು. ಅಹೋಮ್ ಸಾಮ್ರಾಜ್ಯವು ಅಸ್ಸಾಂ ಅನ್ನು 650 ವರ್ಷಗಳ ಕಾಲ ಆಳಿತು. ಅಹೋಮರು ಭಕ್ತಿಯಾರ್ ಖಿಲ್ಜಿ, ಔರಂಗಜೇಬ್ ಅವರನ್ನು ಸೋಲಿಸಿ ಅಸ್ಸಾಂನ ಸಾರ್ವಭೌಮತ್ವವನ್ನು ಉಳಿಸಿಕೊಂಡಿದ್ದರು. ಪಲ್ಲವ ಸಾಮ್ರಾಜ್ಯವು 600 ವರ್ಷಗಳ ಕಾಲ ಆಳಿತು. ಚೋಳರು 600 ವರ್ಷಗಳ ಕಾಲ ಆಳಿದರು”

“ಮೌರ್ಯರು ಇಡೀ ದೇಶವನ್ನು – ಅಫ್ಘಾನಿಸ್ತಾನದಿಂದ ಲಂಕಾದವರೆಗೆ 550 ವರ್ಷಗಳ ಕಾಲ ಆಳಿದರು. ಸಾತವಾಹನರು 500 ವರ್ಷಗಳ ಕಾಲ ಆಳಿದರು. ಗುಪ್ತರು 400 ವರ್ಷಗಳ ಕಾಲ ಆಳಿದರು ಮತ್ತು ಗುಪ್ತ ಚಕ್ರವರ್ತಿ ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಇಡೀ ದೇಶದೊಂದಿಗೆ ಸಾಮ್ರಾಜ್ಯವನ್ನು ಸ್ಥಾಪಿಸಿದನು. ಆದರೆ ಅವರ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ” ಎಂದು ಅಮಿತ್‌ ಶಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

“ನಾವೀಗ ಸ್ವತಂತ್ರರಾಗಿದ್ದು, ಸತ್ಯವನ್ನು ಬರೆಯುವುದನ್ನು ಯಾರೂ ತಡೆಯಲಾರರು. ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಕಾಲ್ಪನಿಕ ಕಥೆಗಳ ಹರಿಕಾರರು… ಬೊಡ ಬರ್ಕೊ ಆದ್ರೆ ಮಕ್ಕಳಿಗೆ ಓಡಿಸೋಕೆ ಶಾಲೆಗಳ ಮೇಲೆ ಬಲವಂತವಾಗಿ ಹೇರಬೇಡ…. ಇಲ್ಲ ಅಂದ್ರೆ ಚರಂಡಿಗೆ ಪೈಪ್ ಹಾಕಿ ಗ್ಯಾಸ್ ಮಾಡಿ ಸ್ಟೋವ್ ಊರಿಸಬಹುದು ಅಂತ ಬುರುಡೆ ಬಿಡ್ತಾರೆ… ಹುಷಾರ್…..

  2. ನೀನಾಗಲಿ ನಿನ್ನ ಪಕ್ಷ, ಪಕ್ಷದಲ್ಲಿರೋ ಡೋಂಗಿಗಳೇ ಒಂದು ಇತಿಹಾಸ ಆಗತೀರ ಹೊರತು ನಿಮ್ಮಿಂದ ಯಾವ ಇತಿಹಾಸ ಬರೆಯೋಕು ಆಗಲ್ಲ,, ದೇಶದ ಮಾನ ಮರ್ಯಾದೆ ತೆಗದಿದ್ದು ಸಾಕು ಎಲ್ಲ ರಾಜೀನಾಮೆ ಕೊಟ್ಟು ತೊಲಗಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...