Homeಮುಖಪುಟಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ನಾನು ಎಡಪಂಥೀಯ ಎಂಬ ಕಾರಣಕ್ಕಾಗಿ ಬಲಪಂಥೀಯರು ನನ್ನನ್ನು ದ್ವೇಷಿಸುತ್ತಾರೆ. ನಾನು ದ್ವೇಷ ಮಾಡುವವರನ್ನೂ ಪ್ರೀತಿಸುತ್ತೇನೆ....

- Advertisement -
- Advertisement -

ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ದಲಿತರನ್ನು ಗುರುತಿಸಲು, ನಾಯಕರನ್ನಾಗಿ, ಮುಖ್ಯಮಂತ್ರಿಯನ್ನಾಗಿ ಮಾಡಲು ಸಾಧ್ಯವಾಗುತ್ತದೆ. ದಲಿತರು ಮುಖ್ಯಮಂತ್ರಿಯಾಗಲಿಕ್ಕೆ ನನ್ನ ವಿರೋಧವೇನೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕ್ಲಬ್‌ಹೌಸ್‌ನಲ್ಲಿ ಅನುಭವ ಮಂಟಪ ಕ್ಲಬ್‌ ಶನಿವಾರ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರ ಪ್ರಶ್ನೆಗಳಿಗೆ ಉತ್ತರಿಸಿದರು.

‘ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯನವರ ಅಭ್ಯಂತರವೇನಾದರೂ ಇದೆಯೇ?’ ಎನ್ನುವ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

“ಭಾರತದ ದೇಶದಲ್ಲಿ ಐದಾರು ರಾಜ್ಯಗಳಲ್ಲಿ ದಲಿತ ಮುಖ್ಯಮಂತ್ರಿಗಳನ್ನು ಕಾಂಗ್ರೆಸ್‌ ಪಕ್ಷ ಮಾಡಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ದಲಿತರ ಪರವಾಗಿ ಅನೇಕ ಕೆಲಸಗಳನ್ನು ಮಾಡಿದ್ದೇನೆ. ಯಾರು ಮುಖ್ಯಮಂತ್ರಿ ಎಂಬುದಕ್ಕಿಂತ ದಲಿತರ ಪರವಾಗಿ ಕೆಲಸ ಮಾಡುವವರು ಮುಖ್ಯವಾಗುತ್ತಾರೆ. ಮೊದಲನೇ ಬಾರಿಗೆ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿಪಿ, ಟಿಎಸ್‌ಪಿ ಹಣ ಖರ್ಚು ಮಾಡಲು ಮುಂದಾಗಿದ್ದು ನಮ್ಮ ನೇತೃತ್ವದ ಸರ್ಕಾರ” ಎಂದು ತಿಳಿಸಿದರು.

ಬಜೆಟ್‌ನಲ್ಲಿ ಶೇ. 24ರಷ್ಟು ಹಣವನ್ನು ಎಸ್‌ಸಿಪಿ, ಟಿಎಸ್‌ಪಿಗೆ ಹಣ ಖರ್ಚು ಮಾಡಬೇಕು ಎಂದು ನಾವು ಕಾನೂನು ಮಾಡಿದೆವು. ಒಂದು ವರ್ಷಕ್ಕೆ ಮೂವತ್ತು ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡುವ ಕೆಲಸವನ್ನು ನಾನು ಕೊನೆಯ ಬಜೆಟ್‌ ಮಂಡಿಸಿದಾಗ ಮಾಡಿದ್ದೇನೆ. ಸುಪ್ರೀಂ ಕೋರ್ಟ್‌ ಬಡ್ತಿ ರದ್ದು ಮಾಡಿದಾಗ ಅಹಿಂಸಾ ಸಂಘಟನೆಯ ತೀವ್ರ ವಿರೋಧದ ನಡುವೆಯೂ ಕಾನೂನು ರೂಪಿಸಿ ದಲಿತರಿಗೆ ರಕ್ಷಣೆ ನೀಡಿದ್ದು ನಮ್ಮ ಸರ್ಕಾರ. ದಲಿತರಿಗೆ ಮೊದಲ ಬಾರಿಗೆ ಇಡೀ ದೇಶದಲ್ಲಿ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ಸರ್ಕಾರ ಎಂದು ಹೇಳಿದರು.

ದಲಿತರು ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯವಿದೆ ಹೊರತು ಬೇರೆ ಪಕ್ಷಗಳಲ್ಲಿ ಅಲ್ಲ. ಈಗ ಪಂಜಾಬ್‌ನಲ್ಲಿ ಸಿಖ್‌ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲಾಗಿದೆ. ಆಂಧ್ರದಲ್ಲಿ ಸಂಜೀವಯ್ಯನವರು ಮುಖ್ಯಮಂತ್ರಿ ಆಗಿದ್ದರು. ಹೀಗೆ ಬೇರೆ ಬೇರೆ ರಾಜ್ಯಗಳಲ್ಲೂ ದಲಿತರು ಮುಖ್ಯಮಂತ್ರಿಗಳಾಗಿದ್ದಾರೆ. ದಲಿತರು ಮುಖ್ಯಮಂತ್ರಿಯಾಗಲಿಕ್ಕೆ ನನ್ನ ವಿರೋಧವೇನೂ ಇಲ್ಲ ಎಂದರು.

 ‘ಕರಾವಳಿಯಲ್ಲಿ ಕೋಮುಗಲಭೆ ತಡೆಯುವಲ್ಲಿ ಹಿನ್ನಡೆಯಾಯಿತು’

‘ಕರಾವಳಿಯಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚಾಗುತ್ತಿದೆ. ಒಂದು ಹುಡುಗ, ಒಂದು ಹುಡುಗಿ ಒಂದು ಕಡೆ ನಿಂತು ಮಾತನಾಡುತ್ತಿದ್ದರೆ, ಧರ್ಮದ ಹೆಸರಲ್ಲಿ ಗೂಂಡಾಗಿರಿ ಮಾಡುವವರಿಗೆ ಸುದ್ದಿ ಮುಟ್ಟಿಸಿ ಆ ಜೋಡಿಗಳಿಗೆ ತೊಂದರೆ ನೀಡುವ ಜಾಲ ದೊಡ್ಡದಾಗಿ ಬೆಳೆಯುತ್ತಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇಂತಹ ಪ್ರವೃತ್ತಿಯ ಕಡಿವಾಣಕ್ಕೆ ಕಠಿಣ ಕ್ರಮ ಜರುಗಿಸದಿರುವುದೂ ಇದಕ್ಕೆ ಕಾರಣವೇ?’ ಎಂದು ಶ್ರೀನಿವಾಸ ಕಾರ್ಕಳ ಅವರು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯನವರು, ‘ಕರಾವಳಿ ಭಾಗವು ಕೋಮುವಾದದ ಪ್ರಯೋಗಾಲಯ ಎಂಬುದು ಸತ್ಯ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕರಾವಳಿಯಲ್ಲಿ ಕೋಮುಗಲಭೆಗಳನ್ನು ತಡೆಯುವಲ್ಲಿ ಹಿನ್ನಡೆಯಾಯಿತು ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಹಾಗೆಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಕುರಿತು ಯಾವುದೇ ಭಯವೇನೂ ಇಲ್ಲ ಎಂದರು.

ಬಜರಂಗದಳದ ಮಾಜಿ ಮುಖಂಡ ಸುನಿಲ್‌ ಬಜಿಲಕೇರಿಯವರು ಮಾತನಾಡಿ, “ವಿನಾಯಕ ಬಾಳಿಗ ಪ್ರಕರಣದ ಕುರಿತು ಕಾಂಗ್ರೆಸ್ ನಾಯಕರು ದ್ವಂದ್ವ ನಿಲುವು ತಾಳಿದರು. ವಿನಾಯಕ ಬಾಳಿಗ ಪ್ರಕರಣಕ್ಕೆ ನ್ಯಾಯ ದೊರಕಿಸಿದರೆ ಕಾಂಗ್ರೆಸ್‌ಗೆ ಕರಾವಳಿ ಭಾಗದಲ್ಲಿ ಹೆಚ್ಚಿನ ಜನರು ಬೆಂಬಲ ನೀಡುತ್ತಾರೆ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲು ಪ್ರಯತ್ನಿಸಿದರೆ ಕರಾವಳಿ ಭಾಗದ ಜನರು ಹೆಚ್ಚಿನ ಉದ್ಯೋಗ ಪಡೆಯುವರು. ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಸ್ಮರಿಸುವರು” ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಕಾಂಗ್ರೆಸ್ ಯಾವುದೇ ಸಮುದಾಯದ ವಿರುದ್ಧವೂ ಇಲ್ಲ, ಪರವೂ ಇಲ್ಲ. ಯಾರಿಗೆ ಅನ್ಯಾಯವಾದರೂ ಕಾಂಗ್ರೆಸ್ ಪ್ರಶ್ನಿಸಲಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಎಲ್ಲರಿಗೂ ಉದ್ಯೋಗ ಕೊಡಬೇಕಲ್ಲವೇ? ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ನಡೆಸಲು ಅವಕಾಶ ನೀಡಬೇಕಲ್ಲವೇ?” ಎಂದು ಪ್ರಶ್ನಿಸಿದರು.

ನಾನು ಎಡಪಂಥೀಯ, ಹೀಗಾಗಿ ಅವರು ದ್ವೇಷಿಸುತ್ತಾರೆ

‘ನೀವು ಮುಖ್ಯಮಂತ್ರಿಯಾದಾಗಿನಿಂದಲೂ ನಿಮ್ಮ ಮೇಲೆ ಬಲಪಂಥೀಯರು ದ್ವೇಷ ಕಾರುವುದು ನಡೆಯುತ್ತಿದೆ. ನಿಮ್ಮನ್ನು ಈ ಪರಿಯಾಗಿ ದ್ವೇಷಿಸಲು ಕಾರಣವೇನು?” ಎಂದು ಹರ್ಷಕುಮಾರ್‌ ಕುಗ್ವೆಯವರು ಕೇಳಿದರು.

ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯನವರು, “ಇದು ಬಹಳ ಸರಳವಾಗಿದೆ. ನಾನು ಎಡಪಂಥೀಯ ಎಂಬ ಕಾರಣಕ್ಕಾಗಿ ಬಲಪಂಥೀಯರು ನನ್ನನ್ನು ದ್ವೇಷಿಸುತ್ತಾರೆ. ನಾನು ದ್ವೇಷ ಮಾಡುವವರನ್ನೂ ಪ್ರೀತಿಸುತ್ತೇನೆ. ನನಗೂ ಮತ್ತು ಬಲಪಂಥೀಯರಿಗೂ ಇರುವ ವ್ಯತ್ಯಾಸವಿದು. ಪರಸ್ಪರ ಪ್ರೀತಿಸುವುದೇ ಮನುಷ್ಯತ್ವ.ಪರಸ್ವರ ಗೌರವಿಸುವುದೇ ಮನುಷ್ಯತ್ವ. ಮನುಷ್ಯತ್ವ ಇರದಿರುವವರು ದ್ವೇಷಿಸುತ್ತಾರೆ. ಹೀಗಾಗಿ ದ್ವೇಷ ಮಾಡುವವರನ್ನು ನಾನು ಪ್ರೀತಿಸುತ್ತೇನೆ” ಎಂದರು.

ಹಲವರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಅವರು, ಬಿಜೆಪಿ ನಾಯಕರು ಆರ್‌‌ಎಸ್‌ಎಸ್‌ ಕೈಗೊಂಬೆಗಳಾಗಿದ್ದಾರೆ ಎಂದರು. ‘ಎನ್‌ಇಪಿ’ ಶಿಕ್ಷಣ ವ್ಯವಸ್ಥೆಗೆ ಮಾರಕ. ಅದು ನಾಗಪುರ ಎಜುಕೇಷನ್‌ ಪಾಲಿಸಿ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಟೀಕಿಸಿದರು.

‘ಸರ್ಕಾರ ಯಾವುದೇ ಯೋಜನೆಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ವಸತಿ ನಿರ್ಮಾಣ ಯೋಜನೆ ಪ್ರಗತಿಯನ್ನು ಸಾಧಿಸಿಲ್ಲ’ ಎಂದರು.

ಸಿದ್ದರಾಮಯ್ಯನವರ ಕಾರ್ಯಕ್ರಮ ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ನಲ್ಲೂ ಪ್ರಸಾರವಾಯಿತು. ಸುಮಾರು 1500 ಮಂದಿ ಕ್ಲಬ್‌ಹೌಸ್‌ನಲ್ಲಿ ಸಿದ್ದರಾಮಯ್ಯನವರ ಮಾತುಗಳನ್ನು ಆಲಿಸಿದರು. ಸಾವಿರಾರು ಜನರು ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ನಲ್ಲೂ ಮಾತುಗಳನ್ನು ಆಲಿಸಿದರು.

ಇದನ್ನೂ ಓದಿ: ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...