Homeಮುಖಪುಟಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ನಾನು ಎಡಪಂಥೀಯ ಎಂಬ ಕಾರಣಕ್ಕಾಗಿ ಬಲಪಂಥೀಯರು ನನ್ನನ್ನು ದ್ವೇಷಿಸುತ್ತಾರೆ. ನಾನು ದ್ವೇಷ ಮಾಡುವವರನ್ನೂ ಪ್ರೀತಿಸುತ್ತೇನೆ....

- Advertisement -
- Advertisement -

ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ದಲಿತರನ್ನು ಗುರುತಿಸಲು, ನಾಯಕರನ್ನಾಗಿ, ಮುಖ್ಯಮಂತ್ರಿಯನ್ನಾಗಿ ಮಾಡಲು ಸಾಧ್ಯವಾಗುತ್ತದೆ. ದಲಿತರು ಮುಖ್ಯಮಂತ್ರಿಯಾಗಲಿಕ್ಕೆ ನನ್ನ ವಿರೋಧವೇನೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕ್ಲಬ್‌ಹೌಸ್‌ನಲ್ಲಿ ಅನುಭವ ಮಂಟಪ ಕ್ಲಬ್‌ ಶನಿವಾರ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರ ಪ್ರಶ್ನೆಗಳಿಗೆ ಉತ್ತರಿಸಿದರು.

‘ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯನವರ ಅಭ್ಯಂತರವೇನಾದರೂ ಇದೆಯೇ?’ ಎನ್ನುವ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

“ಭಾರತದ ದೇಶದಲ್ಲಿ ಐದಾರು ರಾಜ್ಯಗಳಲ್ಲಿ ದಲಿತ ಮುಖ್ಯಮಂತ್ರಿಗಳನ್ನು ಕಾಂಗ್ರೆಸ್‌ ಪಕ್ಷ ಮಾಡಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ದಲಿತರ ಪರವಾಗಿ ಅನೇಕ ಕೆಲಸಗಳನ್ನು ಮಾಡಿದ್ದೇನೆ. ಯಾರು ಮುಖ್ಯಮಂತ್ರಿ ಎಂಬುದಕ್ಕಿಂತ ದಲಿತರ ಪರವಾಗಿ ಕೆಲಸ ಮಾಡುವವರು ಮುಖ್ಯವಾಗುತ್ತಾರೆ. ಮೊದಲನೇ ಬಾರಿಗೆ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿಪಿ, ಟಿಎಸ್‌ಪಿ ಹಣ ಖರ್ಚು ಮಾಡಲು ಮುಂದಾಗಿದ್ದು ನಮ್ಮ ನೇತೃತ್ವದ ಸರ್ಕಾರ” ಎಂದು ತಿಳಿಸಿದರು.

ಬಜೆಟ್‌ನಲ್ಲಿ ಶೇ. 24ರಷ್ಟು ಹಣವನ್ನು ಎಸ್‌ಸಿಪಿ, ಟಿಎಸ್‌ಪಿಗೆ ಹಣ ಖರ್ಚು ಮಾಡಬೇಕು ಎಂದು ನಾವು ಕಾನೂನು ಮಾಡಿದೆವು. ಒಂದು ವರ್ಷಕ್ಕೆ ಮೂವತ್ತು ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡುವ ಕೆಲಸವನ್ನು ನಾನು ಕೊನೆಯ ಬಜೆಟ್‌ ಮಂಡಿಸಿದಾಗ ಮಾಡಿದ್ದೇನೆ. ಸುಪ್ರೀಂ ಕೋರ್ಟ್‌ ಬಡ್ತಿ ರದ್ದು ಮಾಡಿದಾಗ ಅಹಿಂಸಾ ಸಂಘಟನೆಯ ತೀವ್ರ ವಿರೋಧದ ನಡುವೆಯೂ ಕಾನೂನು ರೂಪಿಸಿ ದಲಿತರಿಗೆ ರಕ್ಷಣೆ ನೀಡಿದ್ದು ನಮ್ಮ ಸರ್ಕಾರ. ದಲಿತರಿಗೆ ಮೊದಲ ಬಾರಿಗೆ ಇಡೀ ದೇಶದಲ್ಲಿ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ಸರ್ಕಾರ ಎಂದು ಹೇಳಿದರು.

ದಲಿತರು ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯವಿದೆ ಹೊರತು ಬೇರೆ ಪಕ್ಷಗಳಲ್ಲಿ ಅಲ್ಲ. ಈಗ ಪಂಜಾಬ್‌ನಲ್ಲಿ ಸಿಖ್‌ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲಾಗಿದೆ. ಆಂಧ್ರದಲ್ಲಿ ಸಂಜೀವಯ್ಯನವರು ಮುಖ್ಯಮಂತ್ರಿ ಆಗಿದ್ದರು. ಹೀಗೆ ಬೇರೆ ಬೇರೆ ರಾಜ್ಯಗಳಲ್ಲೂ ದಲಿತರು ಮುಖ್ಯಮಂತ್ರಿಗಳಾಗಿದ್ದಾರೆ. ದಲಿತರು ಮುಖ್ಯಮಂತ್ರಿಯಾಗಲಿಕ್ಕೆ ನನ್ನ ವಿರೋಧವೇನೂ ಇಲ್ಲ ಎಂದರು.

 ‘ಕರಾವಳಿಯಲ್ಲಿ ಕೋಮುಗಲಭೆ ತಡೆಯುವಲ್ಲಿ ಹಿನ್ನಡೆಯಾಯಿತು’

‘ಕರಾವಳಿಯಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚಾಗುತ್ತಿದೆ. ಒಂದು ಹುಡುಗ, ಒಂದು ಹುಡುಗಿ ಒಂದು ಕಡೆ ನಿಂತು ಮಾತನಾಡುತ್ತಿದ್ದರೆ, ಧರ್ಮದ ಹೆಸರಲ್ಲಿ ಗೂಂಡಾಗಿರಿ ಮಾಡುವವರಿಗೆ ಸುದ್ದಿ ಮುಟ್ಟಿಸಿ ಆ ಜೋಡಿಗಳಿಗೆ ತೊಂದರೆ ನೀಡುವ ಜಾಲ ದೊಡ್ಡದಾಗಿ ಬೆಳೆಯುತ್ತಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇಂತಹ ಪ್ರವೃತ್ತಿಯ ಕಡಿವಾಣಕ್ಕೆ ಕಠಿಣ ಕ್ರಮ ಜರುಗಿಸದಿರುವುದೂ ಇದಕ್ಕೆ ಕಾರಣವೇ?’ ಎಂದು ಶ್ರೀನಿವಾಸ ಕಾರ್ಕಳ ಅವರು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯನವರು, ‘ಕರಾವಳಿ ಭಾಗವು ಕೋಮುವಾದದ ಪ್ರಯೋಗಾಲಯ ಎಂಬುದು ಸತ್ಯ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕರಾವಳಿಯಲ್ಲಿ ಕೋಮುಗಲಭೆಗಳನ್ನು ತಡೆಯುವಲ್ಲಿ ಹಿನ್ನಡೆಯಾಯಿತು ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಹಾಗೆಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಕುರಿತು ಯಾವುದೇ ಭಯವೇನೂ ಇಲ್ಲ ಎಂದರು.

ಬಜರಂಗದಳದ ಮಾಜಿ ಮುಖಂಡ ಸುನಿಲ್‌ ಬಜಿಲಕೇರಿಯವರು ಮಾತನಾಡಿ, “ವಿನಾಯಕ ಬಾಳಿಗ ಪ್ರಕರಣದ ಕುರಿತು ಕಾಂಗ್ರೆಸ್ ನಾಯಕರು ದ್ವಂದ್ವ ನಿಲುವು ತಾಳಿದರು. ವಿನಾಯಕ ಬಾಳಿಗ ಪ್ರಕರಣಕ್ಕೆ ನ್ಯಾಯ ದೊರಕಿಸಿದರೆ ಕಾಂಗ್ರೆಸ್‌ಗೆ ಕರಾವಳಿ ಭಾಗದಲ್ಲಿ ಹೆಚ್ಚಿನ ಜನರು ಬೆಂಬಲ ನೀಡುತ್ತಾರೆ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲು ಪ್ರಯತ್ನಿಸಿದರೆ ಕರಾವಳಿ ಭಾಗದ ಜನರು ಹೆಚ್ಚಿನ ಉದ್ಯೋಗ ಪಡೆಯುವರು. ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಸ್ಮರಿಸುವರು” ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಕಾಂಗ್ರೆಸ್ ಯಾವುದೇ ಸಮುದಾಯದ ವಿರುದ್ಧವೂ ಇಲ್ಲ, ಪರವೂ ಇಲ್ಲ. ಯಾರಿಗೆ ಅನ್ಯಾಯವಾದರೂ ಕಾಂಗ್ರೆಸ್ ಪ್ರಶ್ನಿಸಲಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಎಲ್ಲರಿಗೂ ಉದ್ಯೋಗ ಕೊಡಬೇಕಲ್ಲವೇ? ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ನಡೆಸಲು ಅವಕಾಶ ನೀಡಬೇಕಲ್ಲವೇ?” ಎಂದು ಪ್ರಶ್ನಿಸಿದರು.

ನಾನು ಎಡಪಂಥೀಯ, ಹೀಗಾಗಿ ಅವರು ದ್ವೇಷಿಸುತ್ತಾರೆ

‘ನೀವು ಮುಖ್ಯಮಂತ್ರಿಯಾದಾಗಿನಿಂದಲೂ ನಿಮ್ಮ ಮೇಲೆ ಬಲಪಂಥೀಯರು ದ್ವೇಷ ಕಾರುವುದು ನಡೆಯುತ್ತಿದೆ. ನಿಮ್ಮನ್ನು ಈ ಪರಿಯಾಗಿ ದ್ವೇಷಿಸಲು ಕಾರಣವೇನು?” ಎಂದು ಹರ್ಷಕುಮಾರ್‌ ಕುಗ್ವೆಯವರು ಕೇಳಿದರು.

ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯನವರು, “ಇದು ಬಹಳ ಸರಳವಾಗಿದೆ. ನಾನು ಎಡಪಂಥೀಯ ಎಂಬ ಕಾರಣಕ್ಕಾಗಿ ಬಲಪಂಥೀಯರು ನನ್ನನ್ನು ದ್ವೇಷಿಸುತ್ತಾರೆ. ನಾನು ದ್ವೇಷ ಮಾಡುವವರನ್ನೂ ಪ್ರೀತಿಸುತ್ತೇನೆ. ನನಗೂ ಮತ್ತು ಬಲಪಂಥೀಯರಿಗೂ ಇರುವ ವ್ಯತ್ಯಾಸವಿದು. ಪರಸ್ಪರ ಪ್ರೀತಿಸುವುದೇ ಮನುಷ್ಯತ್ವ.ಪರಸ್ವರ ಗೌರವಿಸುವುದೇ ಮನುಷ್ಯತ್ವ. ಮನುಷ್ಯತ್ವ ಇರದಿರುವವರು ದ್ವೇಷಿಸುತ್ತಾರೆ. ಹೀಗಾಗಿ ದ್ವೇಷ ಮಾಡುವವರನ್ನು ನಾನು ಪ್ರೀತಿಸುತ್ತೇನೆ” ಎಂದರು.

ಹಲವರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಅವರು, ಬಿಜೆಪಿ ನಾಯಕರು ಆರ್‌‌ಎಸ್‌ಎಸ್‌ ಕೈಗೊಂಬೆಗಳಾಗಿದ್ದಾರೆ ಎಂದರು. ‘ಎನ್‌ಇಪಿ’ ಶಿಕ್ಷಣ ವ್ಯವಸ್ಥೆಗೆ ಮಾರಕ. ಅದು ನಾಗಪುರ ಎಜುಕೇಷನ್‌ ಪಾಲಿಸಿ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಟೀಕಿಸಿದರು.

‘ಸರ್ಕಾರ ಯಾವುದೇ ಯೋಜನೆಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ವಸತಿ ನಿರ್ಮಾಣ ಯೋಜನೆ ಪ್ರಗತಿಯನ್ನು ಸಾಧಿಸಿಲ್ಲ’ ಎಂದರು.

ಸಿದ್ದರಾಮಯ್ಯನವರ ಕಾರ್ಯಕ್ರಮ ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ನಲ್ಲೂ ಪ್ರಸಾರವಾಯಿತು. ಸುಮಾರು 1500 ಮಂದಿ ಕ್ಲಬ್‌ಹೌಸ್‌ನಲ್ಲಿ ಸಿದ್ದರಾಮಯ್ಯನವರ ಮಾತುಗಳನ್ನು ಆಲಿಸಿದರು. ಸಾವಿರಾರು ಜನರು ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ನಲ್ಲೂ ಮಾತುಗಳನ್ನು ಆಲಿಸಿದರು.

ಇದನ್ನೂ ಓದಿ: ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...