Homeಮುಖಪುಟಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲಿ ಮಾತ್ರ ದಲಿತರು ಸಿಎಂ ಆಗಲು ಸಾಧ್ಯ, ದಲಿತರು ಸಿಎಂ ಆಗಲು ನನ್ನ ವಿರೋಧವಿಲ್ಲ: ಸಿದ್ದರಾಮಯ್ಯ

ನಾನು ಎಡಪಂಥೀಯ ಎಂಬ ಕಾರಣಕ್ಕಾಗಿ ಬಲಪಂಥೀಯರು ನನ್ನನ್ನು ದ್ವೇಷಿಸುತ್ತಾರೆ. ನಾನು ದ್ವೇಷ ಮಾಡುವವರನ್ನೂ ಪ್ರೀತಿಸುತ್ತೇನೆ....

- Advertisement -
- Advertisement -

ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ದಲಿತರನ್ನು ಗುರುತಿಸಲು, ನಾಯಕರನ್ನಾಗಿ, ಮುಖ್ಯಮಂತ್ರಿಯನ್ನಾಗಿ ಮಾಡಲು ಸಾಧ್ಯವಾಗುತ್ತದೆ. ದಲಿತರು ಮುಖ್ಯಮಂತ್ರಿಯಾಗಲಿಕ್ಕೆ ನನ್ನ ವಿರೋಧವೇನೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕ್ಲಬ್‌ಹೌಸ್‌ನಲ್ಲಿ ಅನುಭವ ಮಂಟಪ ಕ್ಲಬ್‌ ಶನಿವಾರ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರ ಪ್ರಶ್ನೆಗಳಿಗೆ ಉತ್ತರಿಸಿದರು.

‘ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯನವರ ಅಭ್ಯಂತರವೇನಾದರೂ ಇದೆಯೇ?’ ಎನ್ನುವ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

“ಭಾರತದ ದೇಶದಲ್ಲಿ ಐದಾರು ರಾಜ್ಯಗಳಲ್ಲಿ ದಲಿತ ಮುಖ್ಯಮಂತ್ರಿಗಳನ್ನು ಕಾಂಗ್ರೆಸ್‌ ಪಕ್ಷ ಮಾಡಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ದಲಿತರ ಪರವಾಗಿ ಅನೇಕ ಕೆಲಸಗಳನ್ನು ಮಾಡಿದ್ದೇನೆ. ಯಾರು ಮುಖ್ಯಮಂತ್ರಿ ಎಂಬುದಕ್ಕಿಂತ ದಲಿತರ ಪರವಾಗಿ ಕೆಲಸ ಮಾಡುವವರು ಮುಖ್ಯವಾಗುತ್ತಾರೆ. ಮೊದಲನೇ ಬಾರಿಗೆ ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿಪಿ, ಟಿಎಸ್‌ಪಿ ಹಣ ಖರ್ಚು ಮಾಡಲು ಮುಂದಾಗಿದ್ದು ನಮ್ಮ ನೇತೃತ್ವದ ಸರ್ಕಾರ” ಎಂದು ತಿಳಿಸಿದರು.

ಬಜೆಟ್‌ನಲ್ಲಿ ಶೇ. 24ರಷ್ಟು ಹಣವನ್ನು ಎಸ್‌ಸಿಪಿ, ಟಿಎಸ್‌ಪಿಗೆ ಹಣ ಖರ್ಚು ಮಾಡಬೇಕು ಎಂದು ನಾವು ಕಾನೂನು ಮಾಡಿದೆವು. ಒಂದು ವರ್ಷಕ್ಕೆ ಮೂವತ್ತು ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡುವ ಕೆಲಸವನ್ನು ನಾನು ಕೊನೆಯ ಬಜೆಟ್‌ ಮಂಡಿಸಿದಾಗ ಮಾಡಿದ್ದೇನೆ. ಸುಪ್ರೀಂ ಕೋರ್ಟ್‌ ಬಡ್ತಿ ರದ್ದು ಮಾಡಿದಾಗ ಅಹಿಂಸಾ ಸಂಘಟನೆಯ ತೀವ್ರ ವಿರೋಧದ ನಡುವೆಯೂ ಕಾನೂನು ರೂಪಿಸಿ ದಲಿತರಿಗೆ ರಕ್ಷಣೆ ನೀಡಿದ್ದು ನಮ್ಮ ಸರ್ಕಾರ. ದಲಿತರಿಗೆ ಮೊದಲ ಬಾರಿಗೆ ಇಡೀ ದೇಶದಲ್ಲಿ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ಸರ್ಕಾರ ಎಂದು ಹೇಳಿದರು.

ದಲಿತರು ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯವಿದೆ ಹೊರತು ಬೇರೆ ಪಕ್ಷಗಳಲ್ಲಿ ಅಲ್ಲ. ಈಗ ಪಂಜಾಬ್‌ನಲ್ಲಿ ಸಿಖ್‌ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲಾಗಿದೆ. ಆಂಧ್ರದಲ್ಲಿ ಸಂಜೀವಯ್ಯನವರು ಮುಖ್ಯಮಂತ್ರಿ ಆಗಿದ್ದರು. ಹೀಗೆ ಬೇರೆ ಬೇರೆ ರಾಜ್ಯಗಳಲ್ಲೂ ದಲಿತರು ಮುಖ್ಯಮಂತ್ರಿಗಳಾಗಿದ್ದಾರೆ. ದಲಿತರು ಮುಖ್ಯಮಂತ್ರಿಯಾಗಲಿಕ್ಕೆ ನನ್ನ ವಿರೋಧವೇನೂ ಇಲ್ಲ ಎಂದರು.

 ‘ಕರಾವಳಿಯಲ್ಲಿ ಕೋಮುಗಲಭೆ ತಡೆಯುವಲ್ಲಿ ಹಿನ್ನಡೆಯಾಯಿತು’

‘ಕರಾವಳಿಯಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚಾಗುತ್ತಿದೆ. ಒಂದು ಹುಡುಗ, ಒಂದು ಹುಡುಗಿ ಒಂದು ಕಡೆ ನಿಂತು ಮಾತನಾಡುತ್ತಿದ್ದರೆ, ಧರ್ಮದ ಹೆಸರಲ್ಲಿ ಗೂಂಡಾಗಿರಿ ಮಾಡುವವರಿಗೆ ಸುದ್ದಿ ಮುಟ್ಟಿಸಿ ಆ ಜೋಡಿಗಳಿಗೆ ತೊಂದರೆ ನೀಡುವ ಜಾಲ ದೊಡ್ಡದಾಗಿ ಬೆಳೆಯುತ್ತಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇಂತಹ ಪ್ರವೃತ್ತಿಯ ಕಡಿವಾಣಕ್ಕೆ ಕಠಿಣ ಕ್ರಮ ಜರುಗಿಸದಿರುವುದೂ ಇದಕ್ಕೆ ಕಾರಣವೇ?’ ಎಂದು ಶ್ರೀನಿವಾಸ ಕಾರ್ಕಳ ಅವರು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯನವರು, ‘ಕರಾವಳಿ ಭಾಗವು ಕೋಮುವಾದದ ಪ್ರಯೋಗಾಲಯ ಎಂಬುದು ಸತ್ಯ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕರಾವಳಿಯಲ್ಲಿ ಕೋಮುಗಲಭೆಗಳನ್ನು ತಡೆಯುವಲ್ಲಿ ಹಿನ್ನಡೆಯಾಯಿತು ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಹಾಗೆಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಕುರಿತು ಯಾವುದೇ ಭಯವೇನೂ ಇಲ್ಲ ಎಂದರು.

ಬಜರಂಗದಳದ ಮಾಜಿ ಮುಖಂಡ ಸುನಿಲ್‌ ಬಜಿಲಕೇರಿಯವರು ಮಾತನಾಡಿ, “ವಿನಾಯಕ ಬಾಳಿಗ ಪ್ರಕರಣದ ಕುರಿತು ಕಾಂಗ್ರೆಸ್ ನಾಯಕರು ದ್ವಂದ್ವ ನಿಲುವು ತಾಳಿದರು. ವಿನಾಯಕ ಬಾಳಿಗ ಪ್ರಕರಣಕ್ಕೆ ನ್ಯಾಯ ದೊರಕಿಸಿದರೆ ಕಾಂಗ್ರೆಸ್‌ಗೆ ಕರಾವಳಿ ಭಾಗದಲ್ಲಿ ಹೆಚ್ಚಿನ ಜನರು ಬೆಂಬಲ ನೀಡುತ್ತಾರೆ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲು ಪ್ರಯತ್ನಿಸಿದರೆ ಕರಾವಳಿ ಭಾಗದ ಜನರು ಹೆಚ್ಚಿನ ಉದ್ಯೋಗ ಪಡೆಯುವರು. ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಸ್ಮರಿಸುವರು” ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಕಾಂಗ್ರೆಸ್ ಯಾವುದೇ ಸಮುದಾಯದ ವಿರುದ್ಧವೂ ಇಲ್ಲ, ಪರವೂ ಇಲ್ಲ. ಯಾರಿಗೆ ಅನ್ಯಾಯವಾದರೂ ಕಾಂಗ್ರೆಸ್ ಪ್ರಶ್ನಿಸಲಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಎಲ್ಲರಿಗೂ ಉದ್ಯೋಗ ಕೊಡಬೇಕಲ್ಲವೇ? ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ನಡೆಸಲು ಅವಕಾಶ ನೀಡಬೇಕಲ್ಲವೇ?” ಎಂದು ಪ್ರಶ್ನಿಸಿದರು.

ನಾನು ಎಡಪಂಥೀಯ, ಹೀಗಾಗಿ ಅವರು ದ್ವೇಷಿಸುತ್ತಾರೆ

‘ನೀವು ಮುಖ್ಯಮಂತ್ರಿಯಾದಾಗಿನಿಂದಲೂ ನಿಮ್ಮ ಮೇಲೆ ಬಲಪಂಥೀಯರು ದ್ವೇಷ ಕಾರುವುದು ನಡೆಯುತ್ತಿದೆ. ನಿಮ್ಮನ್ನು ಈ ಪರಿಯಾಗಿ ದ್ವೇಷಿಸಲು ಕಾರಣವೇನು?” ಎಂದು ಹರ್ಷಕುಮಾರ್‌ ಕುಗ್ವೆಯವರು ಕೇಳಿದರು.

ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯನವರು, “ಇದು ಬಹಳ ಸರಳವಾಗಿದೆ. ನಾನು ಎಡಪಂಥೀಯ ಎಂಬ ಕಾರಣಕ್ಕಾಗಿ ಬಲಪಂಥೀಯರು ನನ್ನನ್ನು ದ್ವೇಷಿಸುತ್ತಾರೆ. ನಾನು ದ್ವೇಷ ಮಾಡುವವರನ್ನೂ ಪ್ರೀತಿಸುತ್ತೇನೆ. ನನಗೂ ಮತ್ತು ಬಲಪಂಥೀಯರಿಗೂ ಇರುವ ವ್ಯತ್ಯಾಸವಿದು. ಪರಸ್ಪರ ಪ್ರೀತಿಸುವುದೇ ಮನುಷ್ಯತ್ವ.ಪರಸ್ವರ ಗೌರವಿಸುವುದೇ ಮನುಷ್ಯತ್ವ. ಮನುಷ್ಯತ್ವ ಇರದಿರುವವರು ದ್ವೇಷಿಸುತ್ತಾರೆ. ಹೀಗಾಗಿ ದ್ವೇಷ ಮಾಡುವವರನ್ನು ನಾನು ಪ್ರೀತಿಸುತ್ತೇನೆ” ಎಂದರು.

ಹಲವರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದ ಅವರು, ಬಿಜೆಪಿ ನಾಯಕರು ಆರ್‌‌ಎಸ್‌ಎಸ್‌ ಕೈಗೊಂಬೆಗಳಾಗಿದ್ದಾರೆ ಎಂದರು. ‘ಎನ್‌ಇಪಿ’ ಶಿಕ್ಷಣ ವ್ಯವಸ್ಥೆಗೆ ಮಾರಕ. ಅದು ನಾಗಪುರ ಎಜುಕೇಷನ್‌ ಪಾಲಿಸಿ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಟೀಕಿಸಿದರು.

‘ಸರ್ಕಾರ ಯಾವುದೇ ಯೋಜನೆಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ವಸತಿ ನಿರ್ಮಾಣ ಯೋಜನೆ ಪ್ರಗತಿಯನ್ನು ಸಾಧಿಸಿಲ್ಲ’ ಎಂದರು.

ಸಿದ್ದರಾಮಯ್ಯನವರ ಕಾರ್ಯಕ್ರಮ ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ನಲ್ಲೂ ಪ್ರಸಾರವಾಯಿತು. ಸುಮಾರು 1500 ಮಂದಿ ಕ್ಲಬ್‌ಹೌಸ್‌ನಲ್ಲಿ ಸಿದ್ದರಾಮಯ್ಯನವರ ಮಾತುಗಳನ್ನು ಆಲಿಸಿದರು. ಸಾವಿರಾರು ಜನರು ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ನಲ್ಲೂ ಮಾತುಗಳನ್ನು ಆಲಿಸಿದರು.

ಇದನ್ನೂ ಓದಿ: ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....