Homeಮುಖಪುಟ'ಫೋನ್ ಕದ್ದಾಲಿಕೆಗೆ ನಾವು ಹೆದರುವುದಿಲ್ಲ': ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

‘ಫೋನ್ ಕದ್ದಾಲಿಕೆಗೆ ನಾವು ಹೆದರುವುದಿಲ್ಲ’: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

- Advertisement -
- Advertisement -

‘ಸರ್ಕಾರಿ ಪ್ರಾಯೋಜಿತ ದಾಳಿಕೋರರು ನಿಮ್ಮ ಐಫೋನ್‌ಗಳನ್ನು ದೂರದಿಂದಲೇ ನಿಯಂತ್ರಣ ಮಾಡುವ ಮೂಲಕ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ’ ಎಂದು ಪತ್ರಕರ್ತರು ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರಿಗೆ ಆ್ಯಪಲ್ ಎಚ್ಚರಿಕೆಯ ಸಂದೇಶ ರವಾನಿಸಿದೆ. ಈ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ”ನಾವು ಫೋನ್ ಕದ್ದಾಲಿಕೆಯ ಬಗ್ಗೆ ಹೆದರಿಕೊಂಡಿಲ್ಲ” ಎಂದು ಹೇಳಿದ್ದಾರೆ.

ಈ ವಿಚಾರವಾಗಿ ದೆಹಲಿಯಲ್ಲಿ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ”ನೀವು ಸರ್ಕಾರಿ ಪ್ರಾಯೋಜಿತ ದಾಳಿಕೋರರಿಂದ ಗುರಿಯಾಗಲಿದ್ದೀರಿ ಎಂದು ಆ್ಯಪಲ್ ಭಾವಿಸಿದೆ ಎಂಬ ಎಚ್ಚರಿಕೆ ಸಂದೇಶ ಎಲ್ಲ ವಿರೋಧ ಪಕ್ಷಗಳ ನಾಯಕರಿಗೆ ಬಂದಿದೆ. ನಮ್ಮ ಕಚೇರಿಯ ಎಲ್ಲ ಪದಾಧಿಕಾರಿಗಳು ಈ ಎಚ್ಚರಿಕೆ ಸಂದೇಶವನ್ನು ಸ್ವೀಕರಿಸಿದ್ದಾರೆ. ಕೆ.ಸಿ.ವೇಣುಗೋಪಾಲ್, ಪವನ್ ಖೇರಾ, ಸೀತಾರಾಂ ಯೆಚೂರಿ, ಪ್ರಿಯಾಂಕಾ ಚತುರ್ವೇದಿ, ಟಿ.ಎಸ್.ಸಿಂಗ್ ಡಿಯೊ, ಮಹುವಾ ಮೊಯಿತ್ರಾ, ರಾಘವ್ ಛಡ್ಡಾ ಕೂಡಾ ಇದೇ ಬಗೆಯ ಎಚ್ಚರಿಕೆ ಸಂದೇಶವನ್ನು ಸ್ವೀಕರಿಸಿದ್ದಾರೆ. ನೀವು ಎಷ್ಟು ಬೇಕೋ ಅಷ್ಟು ನಮ್ಮಫೋನ್ ಗಳನ್ನು ಕದ್ದಾಲಿಸಬಹುದು. ನಾನು ಹೆದರುವುದಿಲ್ಲ. ನಿಮಗೆ ಅಗತ್ಯವಿದ್ದರೆ ನಾನು ನನ್ನ ಫೋನ್ ಕೂಡಾ ನೀಡಬಲ್ಲೆ. ನಾವು ಹೆದರಿಕೊಂಡಿಲ್ಲ. ನಾವು ಹೋರಾಡುತ್ತಿದ್ದೇವೆ” ಎಂದು ಆಡಳಿತಾರೂಢ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

”ಮೋದಿ ಸರ್ಕಾರದ ಆತ್ಮವು ಅದಾನಿ ಸಮೂಹದ ಹಿಡಿತದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗಿಂತ ಅದಾನಿ ಮೇಲಿದ್ದಾರೆ” ಎಂದು ರಾಹುಲ್ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅದಾನಿಗಾಗಿ ದುಡಿಯುತ್ತಿದ್ದಾರೆ’ ಎಂಬ ತಮ್ಮ ಆರೋಪವನ್ನು ಪುನರುಚ್ಚರಿಸಿದ್ದಾರೆ. ”ಬಿಜೆಪಿ ಸರ್ಕಾರ ಹಾಗೂ ಬಿಜೆಪಿಯ ಹಣಕಾಸು ವ್ಯವಸ್ಥೆಯು ನೇರವಾಗಿ ಅದಾನಿಯೊಂದಿಗೆ ಸಂಪರ್ಕ ಹೊಂದಿದೆ” ಎಂದೂ ಅವರು ಆರೋಪಿಸಿದ್ದಾರೆ.

”ಈ ಜನರು ತಂತ್ರಜ್ಞಾನವನ್ನು ನಿಯಂತ್ರಿಸುವ ಮೂಲಕ ಭಾರತದ ಯುವಜನರನ್ನು ನಿಯಂತ್ರಿಸಬಹುದು ಎಂದು ಭಾವಿಸಿದ್ದಾರೆ. ಆದರೆ, ರಾಜಕೀಯ ಸಂಪರ್ಕಗಳ ಹಳೆಯ ಶಸ್ತ್ರಾಸ್ತ್ರಗಳು ಹೆಚ್ಚು ಪರಿಣಾಮಕಾರಿಯಾಗಿವೆ ಎಂಬುದನ್ನು ನೆನಪಿಡಿ” ಎಂದು ತಮ್ಮಭಾರತ್ ಜೋಡೊ ಯಾತ್ರೆಯನ್ನು ಉಲ್ಲೇಖಿಸಿ ಅವರು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಇದೇ ಸಂದರ್ಭದಲ್ಲಿ ತನಗೆ ಅದಾನಿ ಸಮೂಹದೊಂದಿಗೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದ ರಾಹುಲ್ ಗಾಂಧಿ, ಅದಾನಿ ಸಮೂಹದಂಥ ಏಕಸ್ವಾಮ್ಯಗಳನ್ನು ಸೃಷ್ಟಿಸುವುದಕ್ಕೆ ನನ್ನ ವಿರೋಧವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ಐಫೋನ್ ಹ್ಯಾಕ್ ಮಾಡಿರಬಹುದು: ಪತ್ರಕರ್ತರು ಸೇರಿ ಹಲವು ವಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...