Homeಮುಖಪುಟ'ಫೋನ್ ಕದ್ದಾಲಿಕೆಗೆ ನಾವು ಹೆದರುವುದಿಲ್ಲ': ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

‘ಫೋನ್ ಕದ್ದಾಲಿಕೆಗೆ ನಾವು ಹೆದರುವುದಿಲ್ಲ’: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

- Advertisement -
- Advertisement -

‘ಸರ್ಕಾರಿ ಪ್ರಾಯೋಜಿತ ದಾಳಿಕೋರರು ನಿಮ್ಮ ಐಫೋನ್‌ಗಳನ್ನು ದೂರದಿಂದಲೇ ನಿಯಂತ್ರಣ ಮಾಡುವ ಮೂಲಕ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ’ ಎಂದು ಪತ್ರಕರ್ತರು ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರಿಗೆ ಆ್ಯಪಲ್ ಎಚ್ಚರಿಕೆಯ ಸಂದೇಶ ರವಾನಿಸಿದೆ. ಈ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ”ನಾವು ಫೋನ್ ಕದ್ದಾಲಿಕೆಯ ಬಗ್ಗೆ ಹೆದರಿಕೊಂಡಿಲ್ಲ” ಎಂದು ಹೇಳಿದ್ದಾರೆ.

ಈ ವಿಚಾರವಾಗಿ ದೆಹಲಿಯಲ್ಲಿ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ”ನೀವು ಸರ್ಕಾರಿ ಪ್ರಾಯೋಜಿತ ದಾಳಿಕೋರರಿಂದ ಗುರಿಯಾಗಲಿದ್ದೀರಿ ಎಂದು ಆ್ಯಪಲ್ ಭಾವಿಸಿದೆ ಎಂಬ ಎಚ್ಚರಿಕೆ ಸಂದೇಶ ಎಲ್ಲ ವಿರೋಧ ಪಕ್ಷಗಳ ನಾಯಕರಿಗೆ ಬಂದಿದೆ. ನಮ್ಮ ಕಚೇರಿಯ ಎಲ್ಲ ಪದಾಧಿಕಾರಿಗಳು ಈ ಎಚ್ಚರಿಕೆ ಸಂದೇಶವನ್ನು ಸ್ವೀಕರಿಸಿದ್ದಾರೆ. ಕೆ.ಸಿ.ವೇಣುಗೋಪಾಲ್, ಪವನ್ ಖೇರಾ, ಸೀತಾರಾಂ ಯೆಚೂರಿ, ಪ್ರಿಯಾಂಕಾ ಚತುರ್ವೇದಿ, ಟಿ.ಎಸ್.ಸಿಂಗ್ ಡಿಯೊ, ಮಹುವಾ ಮೊಯಿತ್ರಾ, ರಾಘವ್ ಛಡ್ಡಾ ಕೂಡಾ ಇದೇ ಬಗೆಯ ಎಚ್ಚರಿಕೆ ಸಂದೇಶವನ್ನು ಸ್ವೀಕರಿಸಿದ್ದಾರೆ. ನೀವು ಎಷ್ಟು ಬೇಕೋ ಅಷ್ಟು ನಮ್ಮಫೋನ್ ಗಳನ್ನು ಕದ್ದಾಲಿಸಬಹುದು. ನಾನು ಹೆದರುವುದಿಲ್ಲ. ನಿಮಗೆ ಅಗತ್ಯವಿದ್ದರೆ ನಾನು ನನ್ನ ಫೋನ್ ಕೂಡಾ ನೀಡಬಲ್ಲೆ. ನಾವು ಹೆದರಿಕೊಂಡಿಲ್ಲ. ನಾವು ಹೋರಾಡುತ್ತಿದ್ದೇವೆ” ಎಂದು ಆಡಳಿತಾರೂಢ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

”ಮೋದಿ ಸರ್ಕಾರದ ಆತ್ಮವು ಅದಾನಿ ಸಮೂಹದ ಹಿಡಿತದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗಿಂತ ಅದಾನಿ ಮೇಲಿದ್ದಾರೆ” ಎಂದು ರಾಹುಲ್ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅದಾನಿಗಾಗಿ ದುಡಿಯುತ್ತಿದ್ದಾರೆ’ ಎಂಬ ತಮ್ಮ ಆರೋಪವನ್ನು ಪುನರುಚ್ಚರಿಸಿದ್ದಾರೆ. ”ಬಿಜೆಪಿ ಸರ್ಕಾರ ಹಾಗೂ ಬಿಜೆಪಿಯ ಹಣಕಾಸು ವ್ಯವಸ್ಥೆಯು ನೇರವಾಗಿ ಅದಾನಿಯೊಂದಿಗೆ ಸಂಪರ್ಕ ಹೊಂದಿದೆ” ಎಂದೂ ಅವರು ಆರೋಪಿಸಿದ್ದಾರೆ.

”ಈ ಜನರು ತಂತ್ರಜ್ಞಾನವನ್ನು ನಿಯಂತ್ರಿಸುವ ಮೂಲಕ ಭಾರತದ ಯುವಜನರನ್ನು ನಿಯಂತ್ರಿಸಬಹುದು ಎಂದು ಭಾವಿಸಿದ್ದಾರೆ. ಆದರೆ, ರಾಜಕೀಯ ಸಂಪರ್ಕಗಳ ಹಳೆಯ ಶಸ್ತ್ರಾಸ್ತ್ರಗಳು ಹೆಚ್ಚು ಪರಿಣಾಮಕಾರಿಯಾಗಿವೆ ಎಂಬುದನ್ನು ನೆನಪಿಡಿ” ಎಂದು ತಮ್ಮಭಾರತ್ ಜೋಡೊ ಯಾತ್ರೆಯನ್ನು ಉಲ್ಲೇಖಿಸಿ ಅವರು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಇದೇ ಸಂದರ್ಭದಲ್ಲಿ ತನಗೆ ಅದಾನಿ ಸಮೂಹದೊಂದಿಗೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದ ರಾಹುಲ್ ಗಾಂಧಿ, ಅದಾನಿ ಸಮೂಹದಂಥ ಏಕಸ್ವಾಮ್ಯಗಳನ್ನು ಸೃಷ್ಟಿಸುವುದಕ್ಕೆ ನನ್ನ ವಿರೋಧವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ಐಫೋನ್ ಹ್ಯಾಕ್ ಮಾಡಿರಬಹುದು: ಪತ್ರಕರ್ತರು ಸೇರಿ ಹಲವು ವಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...