Homeಮುಖಪುಟ’ದಾರಿ ತಪ್ಪಲು ನಾವು ಮಕ್ಕಳಲ್ಲ’: ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

’ದಾರಿ ತಪ್ಪಲು ನಾವು ಮಕ್ಕಳಲ್ಲ’: ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ಸಿಎಎ ವಿರೋಧಿ ಪ್ರತಿಭಟನೆ ಸಂದರ್ಭಗಳಲ್ಲಿ ಮೌನವಾಗಿದ್ದ ಕಾಂಗ್ರೆಸ್ ಮತ್ತು ಆರ್‌ಜೆಡಿ ಪಕ್ಷಗಳ ಮೇಲೂ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ “ಮುಸ್ಲಿಂ ಸಹೋದರರು” ದಾರಿ ತಪ್ಪಿದ್ದಾರೆ ಎಂಬ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಅಭಿಪ್ರಾಯಕ್ಕೆ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್-ಉಲ್-ಮುಸ್ಲೇಮಿನ್ (AIMIM)  ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

’ನಾವು ದಾರಿ ತಪ್ಪಲು ಮಕ್ಕಳಲ್ಲ’ ಸಿಎಎ ಮತ್ತು ಎನ್‌ಆರ್‌ಸಿ ಏನು ಮಾಡುತ್ತವೆ ಎಂಬ ಬಗ್ಗೆ ಬಿಜೆಪಿ ಒಂದು ಪದಗಳನ್ನು ಹೇಳಲಿಲ್ಲ. ಆ ಕಾಯ್ದೆಗಳು ಮುಸ್ಲಿಮರ ಬಗ್ಗೆ ಇಲ್ಲದಿದ್ದರೆ, ಧರ್ಮದ ಎಲ್ಲ ಉಲ್ಲೇಖಗಳನ್ನು ಕಾನೂನಿನಿಂದ ತೆಗೆದುಹಾಕಿ ”ಎಂದು ಓವೈಸಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಜೊತೆಗೆ, “ಇದನ್ನು ತಿಳಿದುಕೊಳ್ಳಿ: ನಮ್ಮ ಭಾರತೀಯತೆಯನ್ನು ಸಾಬೀತುಪಡಿಸಲು ಕಾನೂನುಗಳು ಇರುವವರೆಗೂ ನಾವು ಮತ್ತೆ ಮತ್ತೆ ಪ್ರತಿಭಟಿಸುತ್ತೇವೆ” ಎಂದು ಓವೈಸಿ ಸೇರಿಸಿದ್ದಾರೆ.

ಇದನ್ನೂ ಓದಿ: ’ಮಹಾಘಟಬಂಧನ್’ ಗೆದ್ದರೆ ಕೇಂದ್ರದ ಕೃಷಿ ವಿರೋಧಿ ಕಾನೂನುಗಳು ರದ್ದು!

ಆರ್‌ಎಸ್‌ಎಸ್ ಸ್ವಯಂ ಸೇವಕರನ್ನು ಉದ್ದೇಶಿಸಿ ಭಾಷಣ ಮಾಡಿದ ಮೊಹನ್ ಭಾಗವತ್ ತಮ್ಮ ಭಾಷಣದಲ್ಲಿ ಸಿಎಎ ವಿರೋಧಿ ಪ್ರತಿಭಟನೆಗಳ ಬಗ್ಗೆ ಪ್ರಸ್ತಾಪಿಸಿದರು. “ಸಿಎಎ ಯಾವುದೇ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ವಿರೋಧಿಸುವುದಿಲ್ಲ. ಆದರೆ ಈ ಹೊಸ ಕಾನೂನನ್ನು ವಿರೋಧಿಸಲು ಬಯಸುವವರು ಮುಸ್ಲಿಂ ಸಮುದಾಯವನ್ನು ನಿರ್ಬಂಧಿಸುವ ಗುರಿಯನ್ನು ಈ ಕಾಯ್ದೆಗಳು ಹೊಂದಿವೆ ಎಂಬ ಸುಳ್ಳು ವದಂತಿಯನ್ನು ಪ್ರಚಾರ ಮಾಡಿದರು. ಆ ಮೂಲಕ ಮೂಲಕ ನಮ್ಮ ಮುಸ್ಲಿಂ ಸಹೋದರರನ್ನು ದಾರಿ ತಪ್ಪಿಸಿದರು. ಸಿಎಎ ಬಳಸಿ, ಅವಕಾಶವಾದಿಗಳು ಪ್ರತಿಭಟನೆಯ ಹೆಸರಿನಲ್ಲಿ ಸಂಘಟಿತ ಹಿಂಸಾಚಾರವನ್ನು ನಡೆಸಿದರು” ಎಂದು ಹೇಳಿದ್ದರು.

ಸಿಎಎ ಬಗ್ಗೆ ಮುಸ್ಲಿಮರು ದಾರಿ ತಪ್ಪುತ್ತಿದ್ದಾರೆ ಎಂಬ ಭಾಗವತ್ ಅವರ ಹೇಳಿಕೆ ಮೇರೆಗೆ ಓವೈಸಿ ಕಾಂಗ್ರೆಸ್ ಮತ್ತು ಆರ್‌ಜೆಡಿ ಪಕ್ಷಗಳ ಮೇಲೂ ವಾಗ್ದಾಳಿ ನಡೆಸಿದ್ದಾರೆ. “ನಾವು ಪೌರತ್ವದ ಆಧಾರದ ಮೇಲೆ ಧರ್ಮವನ್ನು ಸೇರಿಸುವ ಕಾನೂನಿನ ವಿರುದ್ಧ ಪ್ರತಿಭಟಿಸುತ್ತೇವೆ. ನಾನು ಕಾಂಗ್ರೆಸ್, ಆರ್‌ಜೆಡಿ ಮತ್ತು ಅಂತ ಪಕ್ಷಗಳ ತದ್ರೂಪುಗಳನ್ನು ಸಹ ಹೆಸರಿಸಲು ಬಯಸುತ್ತೇನೆ” ಎಂದಿದ್ದಾರೆ

ಇನ್ನು,’ ಪ್ರತಿಭಟನೆಯ ಸಮಯದಲ್ಲಿ ನಿಮ್ಮ ಮೌನವನ್ನು ಮರೆಯಲಾಗುವುದಿಲ್ಲ. ಬಿಜೆಪಿ ನಾಯಕರು ಸೀಮಾಂಚಲ್ ಜನರನ್ನು ನುಸುಳುಕೋರರು ಎಂದು ಕರೆಯುತ್ತಿರುವಾಗ, ಆರ್‌ಜೆಡಿ-ಐಎನ್‌ಸಿ ಒಮ್ಮೆಯೂ ಬಾಯಿ ತೆರೆಯಲಿಲ್ಲ ”ಎಂದು ಓವೈಸಿ ಆಕ್ರೋಶ ಹೊರಹಾಕಿದ್ದಾರೆ.

ಗ್ರ್ಯಾಂಡ್ ಡೆಮಾಕ್ರಟಿಕ್ ಸೆಕ್ಯುಲರ್ ಫ್ರಂಟ್ ನ ಅಂಗವಾಗಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 24 ಸ್ಥಾನಗಳಲ್ಲಿ ಮಜ್ಲಿಸ್-ಇ-ಇತ್ತೆಹಾದ್-ಉಲ್-ಮುಸ್ಲೇಮಿನ್ ಸ್ಪರ್ಧಿಸುತ್ತಿದೆ.


ಇದನ್ನೂ ಓದಿ: ಚೀನಾ ನಮ್ಮ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟ: ಮೋಹನ್ ಭಾಗವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...