Homeಮುಖಪುಟ’ದಾರಿ ತಪ್ಪಲು ನಾವು ಮಕ್ಕಳಲ್ಲ’: ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

’ದಾರಿ ತಪ್ಪಲು ನಾವು ಮಕ್ಕಳಲ್ಲ’: ಮೋಹನ್ ಭಾಗವತ್‌ಗೆ ಓವೈಸಿ ತಿರುಗೇಟು

ಸಿಎಎ ವಿರೋಧಿ ಪ್ರತಿಭಟನೆ ಸಂದರ್ಭಗಳಲ್ಲಿ ಮೌನವಾಗಿದ್ದ ಕಾಂಗ್ರೆಸ್ ಮತ್ತು ಆರ್‌ಜೆಡಿ ಪಕ್ಷಗಳ ಮೇಲೂ ಓವೈಸಿ ವಾಗ್ದಾಳಿ ನಡೆಸಿದ್ದಾರೆ.

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ “ಮುಸ್ಲಿಂ ಸಹೋದರರು” ದಾರಿ ತಪ್ಪಿದ್ದಾರೆ ಎಂಬ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಅಭಿಪ್ರಾಯಕ್ಕೆ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್-ಉಲ್-ಮುಸ್ಲೇಮಿನ್ (AIMIM)  ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

’ನಾವು ದಾರಿ ತಪ್ಪಲು ಮಕ್ಕಳಲ್ಲ’ ಸಿಎಎ ಮತ್ತು ಎನ್‌ಆರ್‌ಸಿ ಏನು ಮಾಡುತ್ತವೆ ಎಂಬ ಬಗ್ಗೆ ಬಿಜೆಪಿ ಒಂದು ಪದಗಳನ್ನು ಹೇಳಲಿಲ್ಲ. ಆ ಕಾಯ್ದೆಗಳು ಮುಸ್ಲಿಮರ ಬಗ್ಗೆ ಇಲ್ಲದಿದ್ದರೆ, ಧರ್ಮದ ಎಲ್ಲ ಉಲ್ಲೇಖಗಳನ್ನು ಕಾನೂನಿನಿಂದ ತೆಗೆದುಹಾಕಿ ”ಎಂದು ಓವೈಸಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಜೊತೆಗೆ, “ಇದನ್ನು ತಿಳಿದುಕೊಳ್ಳಿ: ನಮ್ಮ ಭಾರತೀಯತೆಯನ್ನು ಸಾಬೀತುಪಡಿಸಲು ಕಾನೂನುಗಳು ಇರುವವರೆಗೂ ನಾವು ಮತ್ತೆ ಮತ್ತೆ ಪ್ರತಿಭಟಿಸುತ್ತೇವೆ” ಎಂದು ಓವೈಸಿ ಸೇರಿಸಿದ್ದಾರೆ.

ಇದನ್ನೂ ಓದಿ: ’ಮಹಾಘಟಬಂಧನ್’ ಗೆದ್ದರೆ ಕೇಂದ್ರದ ಕೃಷಿ ವಿರೋಧಿ ಕಾನೂನುಗಳು ರದ್ದು!

ಆರ್‌ಎಸ್‌ಎಸ್ ಸ್ವಯಂ ಸೇವಕರನ್ನು ಉದ್ದೇಶಿಸಿ ಭಾಷಣ ಮಾಡಿದ ಮೊಹನ್ ಭಾಗವತ್ ತಮ್ಮ ಭಾಷಣದಲ್ಲಿ ಸಿಎಎ ವಿರೋಧಿ ಪ್ರತಿಭಟನೆಗಳ ಬಗ್ಗೆ ಪ್ರಸ್ತಾಪಿಸಿದರು. “ಸಿಎಎ ಯಾವುದೇ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ವಿರೋಧಿಸುವುದಿಲ್ಲ. ಆದರೆ ಈ ಹೊಸ ಕಾನೂನನ್ನು ವಿರೋಧಿಸಲು ಬಯಸುವವರು ಮುಸ್ಲಿಂ ಸಮುದಾಯವನ್ನು ನಿರ್ಬಂಧಿಸುವ ಗುರಿಯನ್ನು ಈ ಕಾಯ್ದೆಗಳು ಹೊಂದಿವೆ ಎಂಬ ಸುಳ್ಳು ವದಂತಿಯನ್ನು ಪ್ರಚಾರ ಮಾಡಿದರು. ಆ ಮೂಲಕ ಮೂಲಕ ನಮ್ಮ ಮುಸ್ಲಿಂ ಸಹೋದರರನ್ನು ದಾರಿ ತಪ್ಪಿಸಿದರು. ಸಿಎಎ ಬಳಸಿ, ಅವಕಾಶವಾದಿಗಳು ಪ್ರತಿಭಟನೆಯ ಹೆಸರಿನಲ್ಲಿ ಸಂಘಟಿತ ಹಿಂಸಾಚಾರವನ್ನು ನಡೆಸಿದರು” ಎಂದು ಹೇಳಿದ್ದರು.

ಸಿಎಎ ಬಗ್ಗೆ ಮುಸ್ಲಿಮರು ದಾರಿ ತಪ್ಪುತ್ತಿದ್ದಾರೆ ಎಂಬ ಭಾಗವತ್ ಅವರ ಹೇಳಿಕೆ ಮೇರೆಗೆ ಓವೈಸಿ ಕಾಂಗ್ರೆಸ್ ಮತ್ತು ಆರ್‌ಜೆಡಿ ಪಕ್ಷಗಳ ಮೇಲೂ ವಾಗ್ದಾಳಿ ನಡೆಸಿದ್ದಾರೆ. “ನಾವು ಪೌರತ್ವದ ಆಧಾರದ ಮೇಲೆ ಧರ್ಮವನ್ನು ಸೇರಿಸುವ ಕಾನೂನಿನ ವಿರುದ್ಧ ಪ್ರತಿಭಟಿಸುತ್ತೇವೆ. ನಾನು ಕಾಂಗ್ರೆಸ್, ಆರ್‌ಜೆಡಿ ಮತ್ತು ಅಂತ ಪಕ್ಷಗಳ ತದ್ರೂಪುಗಳನ್ನು ಸಹ ಹೆಸರಿಸಲು ಬಯಸುತ್ತೇನೆ” ಎಂದಿದ್ದಾರೆ

ಇನ್ನು,’ ಪ್ರತಿಭಟನೆಯ ಸಮಯದಲ್ಲಿ ನಿಮ್ಮ ಮೌನವನ್ನು ಮರೆಯಲಾಗುವುದಿಲ್ಲ. ಬಿಜೆಪಿ ನಾಯಕರು ಸೀಮಾಂಚಲ್ ಜನರನ್ನು ನುಸುಳುಕೋರರು ಎಂದು ಕರೆಯುತ್ತಿರುವಾಗ, ಆರ್‌ಜೆಡಿ-ಐಎನ್‌ಸಿ ಒಮ್ಮೆಯೂ ಬಾಯಿ ತೆರೆಯಲಿಲ್ಲ ”ಎಂದು ಓವೈಸಿ ಆಕ್ರೋಶ ಹೊರಹಾಕಿದ್ದಾರೆ.

ಗ್ರ್ಯಾಂಡ್ ಡೆಮಾಕ್ರಟಿಕ್ ಸೆಕ್ಯುಲರ್ ಫ್ರಂಟ್ ನ ಅಂಗವಾಗಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 24 ಸ್ಥಾನಗಳಲ್ಲಿ ಮಜ್ಲಿಸ್-ಇ-ಇತ್ತೆಹಾದ್-ಉಲ್-ಮುಸ್ಲೇಮಿನ್ ಸ್ಪರ್ಧಿಸುತ್ತಿದೆ.


ಇದನ್ನೂ ಓದಿ: ಚೀನಾ ನಮ್ಮ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟ: ಮೋಹನ್ ಭಾಗವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...