Homeಮುಖಪುಟಅಯೋಧ್ಯೆ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಇಲ್ಲ: ಸುನ್ನಿ ವಕ್ಫ್‌ ಬೋರ್ಡ್‌ ಸ್ಪಷ್ಟನೆ

ಅಯೋಧ್ಯೆ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಇಲ್ಲ: ಸುನ್ನಿ ವಕ್ಫ್‌ ಬೋರ್ಡ್‌ ಸ್ಪಷ್ಟನೆ

- Advertisement -
- Advertisement -

ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ವಿರುದ್ದ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸದಿರಲು ಕೇಂದ್ರ ಸುನ್ನಿ ವಕ್ಫ್‌ ಬೋರ್ಡ್ ತೀರ್ಮಾನಿಸಿದೆ. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಪರ್ಯಾಯ 5 ಎಕರೆ ಭೂಮಿ ನೀಡುವುದನ್ನು ಒಪ್ಪುವ ಸಂಬಂಧ ಈವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮಂಡಳಿ ಅಧ್ಯಕ್ಷ ಜುಕಾರ್ ಫಾರೂಕಿ ಹೇಳಿದ್ದಾರೆ.

ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ಒಪ್ಪಿಕೊಂಡಿರುವ ವಕ್ಫ್ ಬೋರ್ಡ್ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಪುನರುಚ್ಛರಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವುದನ್ನು ಉಲ್ಲೇಖಿಸಿ ವರದಿ ಮಾಡಿರುವ ದಿ ವೈರ್.ಕಾಮ್ ಲಕ್ನೋದಲ್ಲಿ ನಡೆದ ವಕ್ಫ್‌ ಬೋರ್ಡ್ ಸಭೆಯಲ್ಲಿ ಒಟ್ಟು ಏಳು ಮಂದಿ ಭಾಗವಹಿಸಿದ್ದರು ಎಂದು ಹೇಳಿದೆ.

ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ ಅಬ್ದುಲ್ ರಜಾಕ್ ಖಾನ್ ಅಧ್ಯಕ್ಷರು ತೆಗೆದುಕೊಂಡಿರುವ ತೀರ್ಮಾನವನ್ನು ವಿರೋಧಿಸಿದ್ದಾರೆ. ಬಾಬ್ರಿ ಮಸೀದಿ ಜಾಗಕ್ಕೆ ಪರ್ಯಾಯವಾಗಿ 5 ಎಕರೆ ನೀಡುವಂತೆ ಆದೇಶಿರುವುದನ್ನು ಒಪ್ಪಿ ಕೊಳ್ಳಬೇಕೇ ಅಥವಾ ಒಪ್ಪಿಕೊಳ್ಳಬಾರದೇ ಎಂಬ ಬಗ್ಗೆ ಯಾವುದೇ ತೀರ್ಮಾವನ್ನು ಪ್ರಕಟಿಸಿಲ್ಲ.

ಈ ಸಂಬಂಧ ಅಭಿಪ್ರಾಯ ವ್ಯಕ್ತಪಡಿಸುವಂತೆ ಸಭೆಯಲ್ಲಿ ಕೋರಿದಾಗ ಆರು ಮಂದಿ ಸದಸ್ಯರು ತಮ್ಮ ಅಭಿಪ್ರಾಯ ಹೇಳಲು ಸಮಯವಕಾಶ ಕೊಡಬೇಕು. ಒಂದೊಮ್ಮೆ ನಿರ್ಧಾರ ಕೈಗೊಂಡರೆ ಅದನ್ನು ಪ್ರತ್ಯೇಕವಾಗಿ ತಿಳಿಸುತ್ತೇವೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ದಿ ವೈರ್ ತಿಳಿಸಿದೆ.

ಇದನ್ನೂ ಓದಿ: ಅಯೋಧ್ಯೆ ಪ್ರಕರಣ:ಸುಪ್ರೀಂ ತೀರ್ಪಿನ ವಿರುದ್ದ ಪುನರ್ ಪರಿಶೀಲನ ಅರ್ಜಿ ಸಲ್ಲಿಸಲು ನಿರ್ಧಾರ

ಆದರೆ ಅಖಿಲ ಭಾರತ ಮುಸ್ಲೀಂ ವೈಯಕ್ತಿಕ ಕಾನೂನು ಮಂಡಳಿ, ಸುಪ್ರೀಂಕೋರ್ಟ್ ತೀರ್ಪು ವಿರುದ್ದ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಮುಂದಾಗಿದೆ. ಬಾಬ್ರಿ ಮಸೀದಿಗೆ ನೀಡಲಾಗುವ ಪರ್ಯಾಯ 5 ಎಕರೆ ಭೂಮಿಯನ್ನು ಒಪ್ಪಿಕೊಳ್ಳದಿರಲು ಅದು ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...