Homeಮುಖಪುಟಅಯೋಧ್ಯೆ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಇಲ್ಲ: ಸುನ್ನಿ ವಕ್ಫ್‌ ಬೋರ್ಡ್‌ ಸ್ಪಷ್ಟನೆ

ಅಯೋಧ್ಯೆ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಇಲ್ಲ: ಸುನ್ನಿ ವಕ್ಫ್‌ ಬೋರ್ಡ್‌ ಸ್ಪಷ್ಟನೆ

- Advertisement -
- Advertisement -

ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ವಿರುದ್ದ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸದಿರಲು ಕೇಂದ್ರ ಸುನ್ನಿ ವಕ್ಫ್‌ ಬೋರ್ಡ್ ತೀರ್ಮಾನಿಸಿದೆ. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಪರ್ಯಾಯ 5 ಎಕರೆ ಭೂಮಿ ನೀಡುವುದನ್ನು ಒಪ್ಪುವ ಸಂಬಂಧ ಈವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮಂಡಳಿ ಅಧ್ಯಕ್ಷ ಜುಕಾರ್ ಫಾರೂಕಿ ಹೇಳಿದ್ದಾರೆ.

ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ಒಪ್ಪಿಕೊಂಡಿರುವ ವಕ್ಫ್ ಬೋರ್ಡ್ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಪುನರುಚ್ಛರಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವುದನ್ನು ಉಲ್ಲೇಖಿಸಿ ವರದಿ ಮಾಡಿರುವ ದಿ ವೈರ್.ಕಾಮ್ ಲಕ್ನೋದಲ್ಲಿ ನಡೆದ ವಕ್ಫ್‌ ಬೋರ್ಡ್ ಸಭೆಯಲ್ಲಿ ಒಟ್ಟು ಏಳು ಮಂದಿ ಭಾಗವಹಿಸಿದ್ದರು ಎಂದು ಹೇಳಿದೆ.

ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ ಅಬ್ದುಲ್ ರಜಾಕ್ ಖಾನ್ ಅಧ್ಯಕ್ಷರು ತೆಗೆದುಕೊಂಡಿರುವ ತೀರ್ಮಾನವನ್ನು ವಿರೋಧಿಸಿದ್ದಾರೆ. ಬಾಬ್ರಿ ಮಸೀದಿ ಜಾಗಕ್ಕೆ ಪರ್ಯಾಯವಾಗಿ 5 ಎಕರೆ ನೀಡುವಂತೆ ಆದೇಶಿರುವುದನ್ನು ಒಪ್ಪಿ ಕೊಳ್ಳಬೇಕೇ ಅಥವಾ ಒಪ್ಪಿಕೊಳ್ಳಬಾರದೇ ಎಂಬ ಬಗ್ಗೆ ಯಾವುದೇ ತೀರ್ಮಾವನ್ನು ಪ್ರಕಟಿಸಿಲ್ಲ.

ಈ ಸಂಬಂಧ ಅಭಿಪ್ರಾಯ ವ್ಯಕ್ತಪಡಿಸುವಂತೆ ಸಭೆಯಲ್ಲಿ ಕೋರಿದಾಗ ಆರು ಮಂದಿ ಸದಸ್ಯರು ತಮ್ಮ ಅಭಿಪ್ರಾಯ ಹೇಳಲು ಸಮಯವಕಾಶ ಕೊಡಬೇಕು. ಒಂದೊಮ್ಮೆ ನಿರ್ಧಾರ ಕೈಗೊಂಡರೆ ಅದನ್ನು ಪ್ರತ್ಯೇಕವಾಗಿ ತಿಳಿಸುತ್ತೇವೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ದಿ ವೈರ್ ತಿಳಿಸಿದೆ.

ಇದನ್ನೂ ಓದಿ: ಅಯೋಧ್ಯೆ ಪ್ರಕರಣ:ಸುಪ್ರೀಂ ತೀರ್ಪಿನ ವಿರುದ್ದ ಪುನರ್ ಪರಿಶೀಲನ ಅರ್ಜಿ ಸಲ್ಲಿಸಲು ನಿರ್ಧಾರ

ಆದರೆ ಅಖಿಲ ಭಾರತ ಮುಸ್ಲೀಂ ವೈಯಕ್ತಿಕ ಕಾನೂನು ಮಂಡಳಿ, ಸುಪ್ರೀಂಕೋರ್ಟ್ ತೀರ್ಪು ವಿರುದ್ದ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಮುಂದಾಗಿದೆ. ಬಾಬ್ರಿ ಮಸೀದಿಗೆ ನೀಡಲಾಗುವ ಪರ್ಯಾಯ 5 ಎಕರೆ ಭೂಮಿಯನ್ನು ಒಪ್ಪಿಕೊಳ್ಳದಿರಲು ಅದು ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...