Homeಮುಖಪುಟಅಯೋಧ್ಯೆ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಇಲ್ಲ: ಸುನ್ನಿ ವಕ್ಫ್‌ ಬೋರ್ಡ್‌ ಸ್ಪಷ್ಟನೆ

ಅಯೋಧ್ಯೆ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಇಲ್ಲ: ಸುನ್ನಿ ವಕ್ಫ್‌ ಬೋರ್ಡ್‌ ಸ್ಪಷ್ಟನೆ

- Advertisement -
- Advertisement -

ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ವಿರುದ್ದ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸದಿರಲು ಕೇಂದ್ರ ಸುನ್ನಿ ವಕ್ಫ್‌ ಬೋರ್ಡ್ ತೀರ್ಮಾನಿಸಿದೆ. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಪರ್ಯಾಯ 5 ಎಕರೆ ಭೂಮಿ ನೀಡುವುದನ್ನು ಒಪ್ಪುವ ಸಂಬಂಧ ಈವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮಂಡಳಿ ಅಧ್ಯಕ್ಷ ಜುಕಾರ್ ಫಾರೂಕಿ ಹೇಳಿದ್ದಾರೆ.

ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ಒಪ್ಪಿಕೊಂಡಿರುವ ವಕ್ಫ್ ಬೋರ್ಡ್ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಪುನರುಚ್ಛರಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವುದನ್ನು ಉಲ್ಲೇಖಿಸಿ ವರದಿ ಮಾಡಿರುವ ದಿ ವೈರ್.ಕಾಮ್ ಲಕ್ನೋದಲ್ಲಿ ನಡೆದ ವಕ್ಫ್‌ ಬೋರ್ಡ್ ಸಭೆಯಲ್ಲಿ ಒಟ್ಟು ಏಳು ಮಂದಿ ಭಾಗವಹಿಸಿದ್ದರು ಎಂದು ಹೇಳಿದೆ.

ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ ಅಬ್ದುಲ್ ರಜಾಕ್ ಖಾನ್ ಅಧ್ಯಕ್ಷರು ತೆಗೆದುಕೊಂಡಿರುವ ತೀರ್ಮಾನವನ್ನು ವಿರೋಧಿಸಿದ್ದಾರೆ. ಬಾಬ್ರಿ ಮಸೀದಿ ಜಾಗಕ್ಕೆ ಪರ್ಯಾಯವಾಗಿ 5 ಎಕರೆ ನೀಡುವಂತೆ ಆದೇಶಿರುವುದನ್ನು ಒಪ್ಪಿ ಕೊಳ್ಳಬೇಕೇ ಅಥವಾ ಒಪ್ಪಿಕೊಳ್ಳಬಾರದೇ ಎಂಬ ಬಗ್ಗೆ ಯಾವುದೇ ತೀರ್ಮಾವನ್ನು ಪ್ರಕಟಿಸಿಲ್ಲ.

ಈ ಸಂಬಂಧ ಅಭಿಪ್ರಾಯ ವ್ಯಕ್ತಪಡಿಸುವಂತೆ ಸಭೆಯಲ್ಲಿ ಕೋರಿದಾಗ ಆರು ಮಂದಿ ಸದಸ್ಯರು ತಮ್ಮ ಅಭಿಪ್ರಾಯ ಹೇಳಲು ಸಮಯವಕಾಶ ಕೊಡಬೇಕು. ಒಂದೊಮ್ಮೆ ನಿರ್ಧಾರ ಕೈಗೊಂಡರೆ ಅದನ್ನು ಪ್ರತ್ಯೇಕವಾಗಿ ತಿಳಿಸುತ್ತೇವೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ದಿ ವೈರ್ ತಿಳಿಸಿದೆ.

ಇದನ್ನೂ ಓದಿ: ಅಯೋಧ್ಯೆ ಪ್ರಕರಣ:ಸುಪ್ರೀಂ ತೀರ್ಪಿನ ವಿರುದ್ದ ಪುನರ್ ಪರಿಶೀಲನ ಅರ್ಜಿ ಸಲ್ಲಿಸಲು ನಿರ್ಧಾರ

ಆದರೆ ಅಖಿಲ ಭಾರತ ಮುಸ್ಲೀಂ ವೈಯಕ್ತಿಕ ಕಾನೂನು ಮಂಡಳಿ, ಸುಪ್ರೀಂಕೋರ್ಟ್ ತೀರ್ಪು ವಿರುದ್ದ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಮುಂದಾಗಿದೆ. ಬಾಬ್ರಿ ಮಸೀದಿಗೆ ನೀಡಲಾಗುವ ಪರ್ಯಾಯ 5 ಎಕರೆ ಭೂಮಿಯನ್ನು ಒಪ್ಪಿಕೊಳ್ಳದಿರಲು ಅದು ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...