Homeಮುಖಪುಟಅಯೋಧ್ಯೆ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಇಲ್ಲ: ಸುನ್ನಿ ವಕ್ಫ್‌ ಬೋರ್ಡ್‌ ಸ್ಪಷ್ಟನೆ

ಅಯೋಧ್ಯೆ ತೀರ್ಪಿನ ವಿರುದ್ಧ ಮರುಪರಿಶೀಲನಾ ಅರ್ಜಿ ಇಲ್ಲ: ಸುನ್ನಿ ವಕ್ಫ್‌ ಬೋರ್ಡ್‌ ಸ್ಪಷ್ಟನೆ

- Advertisement -
- Advertisement -

ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ವಿರುದ್ದ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸದಿರಲು ಕೇಂದ್ರ ಸುನ್ನಿ ವಕ್ಫ್‌ ಬೋರ್ಡ್ ತೀರ್ಮಾನಿಸಿದೆ. ಇದೇ ವೇಳೆ ಮಸೀದಿ ನಿರ್ಮಾಣಕ್ಕೆ ಪರ್ಯಾಯ 5 ಎಕರೆ ಭೂಮಿ ನೀಡುವುದನ್ನು ಒಪ್ಪುವ ಸಂಬಂಧ ಈವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮಂಡಳಿ ಅಧ್ಯಕ್ಷ ಜುಕಾರ್ ಫಾರೂಕಿ ಹೇಳಿದ್ದಾರೆ.

ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ಒಪ್ಪಿಕೊಂಡಿರುವ ವಕ್ಫ್ ಬೋರ್ಡ್ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಪುನರುಚ್ಛರಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವುದನ್ನು ಉಲ್ಲೇಖಿಸಿ ವರದಿ ಮಾಡಿರುವ ದಿ ವೈರ್.ಕಾಮ್ ಲಕ್ನೋದಲ್ಲಿ ನಡೆದ ವಕ್ಫ್‌ ಬೋರ್ಡ್ ಸಭೆಯಲ್ಲಿ ಒಟ್ಟು ಏಳು ಮಂದಿ ಭಾಗವಹಿಸಿದ್ದರು ಎಂದು ಹೇಳಿದೆ.

ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ ಅಬ್ದುಲ್ ರಜಾಕ್ ಖಾನ್ ಅಧ್ಯಕ್ಷರು ತೆಗೆದುಕೊಂಡಿರುವ ತೀರ್ಮಾನವನ್ನು ವಿರೋಧಿಸಿದ್ದಾರೆ. ಬಾಬ್ರಿ ಮಸೀದಿ ಜಾಗಕ್ಕೆ ಪರ್ಯಾಯವಾಗಿ 5 ಎಕರೆ ನೀಡುವಂತೆ ಆದೇಶಿರುವುದನ್ನು ಒಪ್ಪಿ ಕೊಳ್ಳಬೇಕೇ ಅಥವಾ ಒಪ್ಪಿಕೊಳ್ಳಬಾರದೇ ಎಂಬ ಬಗ್ಗೆ ಯಾವುದೇ ತೀರ್ಮಾವನ್ನು ಪ್ರಕಟಿಸಿಲ್ಲ.

ಈ ಸಂಬಂಧ ಅಭಿಪ್ರಾಯ ವ್ಯಕ್ತಪಡಿಸುವಂತೆ ಸಭೆಯಲ್ಲಿ ಕೋರಿದಾಗ ಆರು ಮಂದಿ ಸದಸ್ಯರು ತಮ್ಮ ಅಭಿಪ್ರಾಯ ಹೇಳಲು ಸಮಯವಕಾಶ ಕೊಡಬೇಕು. ಒಂದೊಮ್ಮೆ ನಿರ್ಧಾರ ಕೈಗೊಂಡರೆ ಅದನ್ನು ಪ್ರತ್ಯೇಕವಾಗಿ ತಿಳಿಸುತ್ತೇವೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ದಿ ವೈರ್ ತಿಳಿಸಿದೆ.

ಇದನ್ನೂ ಓದಿ: ಅಯೋಧ್ಯೆ ಪ್ರಕರಣ:ಸುಪ್ರೀಂ ತೀರ್ಪಿನ ವಿರುದ್ದ ಪುನರ್ ಪರಿಶೀಲನ ಅರ್ಜಿ ಸಲ್ಲಿಸಲು ನಿರ್ಧಾರ

ಆದರೆ ಅಖಿಲ ಭಾರತ ಮುಸ್ಲೀಂ ವೈಯಕ್ತಿಕ ಕಾನೂನು ಮಂಡಳಿ, ಸುಪ್ರೀಂಕೋರ್ಟ್ ತೀರ್ಪು ವಿರುದ್ದ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಮುಂದಾಗಿದೆ. ಬಾಬ್ರಿ ಮಸೀದಿಗೆ ನೀಡಲಾಗುವ ಪರ್ಯಾಯ 5 ಎಕರೆ ಭೂಮಿಯನ್ನು ಒಪ್ಪಿಕೊಳ್ಳದಿರಲು ಅದು ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....

ಕಾಂಗ್ರೆಸ್ ಮುಸ್ಲಿಮರನ್ನು ದುರ್ಬಳಕೆ ಮಾಡಿಕೊಂಡಿದೆ: ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

ದಾವಣಗೆರೆ: ಕಾಂಗ್ರೆಸ್ ಪಕ್ಷವು ಇಷ್ಟು ವರ್ಷಗಳಿಂದ ಮುಸ್ಲಿಮರನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಮುಸ್ಲಿಮರು ತಮ್ಮೊಳಗೆ ಚರ್ಚಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ...

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ. ಪ್ಯಾಲೆಸ್ತೀನ್‌ನ ತಯಾಸಿರ್...

ಪಶ್ಚಿಮ ಏಷ್ಯಾ ಸಂಘರ್ಷ: ಮಧ್ಯಪ್ರಾಚ್ಯಕ್ಕೆ 3,500 ಅಮೆರಿಕ ಸೈನಿಕರ ನಿಯೋಜನೆ; ಇರಾನ್ ಮೇಲೆ ಭೂದಾಳಿ ನಡೆಸಲು ಪೆಂಟಗನ್ ಸಿದ್ಧತೆ

ಇರಾನ್ ಜೊತೆಗಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆ, ಪೆಂಟಗನ್ ಸಂಭಾವ್ಯ ನೆಲದ ಕಾರ್ಯಾಚರಣೆಗಳಿಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳು ಸೂಚಿಸುತ್ತಿರುವಾಗಲೂ, ಅಮೆರಿಕವು ಮಧ್ಯಪ್ರಾಚ್ಯದಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ, 3,500 ಕ್ಕೂ ಹೆಚ್ಚು ಸೈನಿಕರನ್ನು...

ಮುಂಬೈನಲ್ಲಿ ವಿತರಣಾ ಟೆಂಪೋದಿಂದ 27 ಎಲ್‌ಪಿಜಿ ಸಿಲಿಂಡರ್‌ಗಳು ಕಳವು; ತನಿಖೆ 

ಮುಂಬೈನಲ್ಲಿ ವಿತರಣಾ ವಾಹನದಿಂದ ಐದು ತುಂಬಿದ ಎಲ್‌ಪಿಜಿ ಸಿಲಿಂಡರ್‌ಗಳು ಸೇರಿದಂತೆ ಇಪ್ಪತ್ತೇಳು ಎಲ್‌ಪಿಜಿ ಸಿಲಿಂಡರ್‌ಗಳು ಕಳವಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಅನಿಲ ಪೂರೈಕೆಯ...

No Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕದಾದ್ಯಂತ ಶನಿವಾರ (ಮಾ. 28) ದೊಡ್ಡ ಮಟ್ಟದ 'ನೋ ಕಿಂಗ್ಸ್' ಪ್ರತಿಭಟನೆಗಳು ನಡೆದಿವೆ. ಟ್ರಂಪ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು ಲಕ್ಷಾಂತರ ಸಂಖ್ಯೆಯಲ್ಲಿ...

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...