Homeಮುಖಪುಟನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಜೈಲಿಗೆ ಭಯಪಡುವುದಿಲ್ಲ: ಕೇಜ್ರಿವಾಲ್

ನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಜೈಲಿಗೆ ಭಯಪಡುವುದಿಲ್ಲ: ಕೇಜ್ರಿವಾಲ್

- Advertisement -
- Advertisement -

ನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಬದಲಿಗೆ ನಮ್ಮ ಇಡೀ ಪಕ್ಷ ಬ್ರಿಟಿಷರೆದುರು ನಡುಬಗ್ಗಿಸದೆ ನೇಣುಗಂಬಕ್ಕೆ ಕೊರಳೊಡ್ಡಿದ ವೀರ ಭಗತ್‌ಸಿಂಗ್‌ರವರ ಸಂತತಿ. ಹಾಗಾಗಿ ಜೈಲಿಗೆ ಹೋಗಲು ಹೆದರುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಮೇಲೆ ಲಿಕ್ಕರ್ ಟೆಂಡರ್‌ನಲ್ಲಿ ಅಕ್ರಮ ಆರೋಪದ ಮೇಲೆ ಲೆಫ್ಟಿನೆಂಟ್ ವಿನಯ್ ಕುಮಾರ್‌ ಸಕ್ಸೇನಾ ಸಿಬಿಐ ತನಿಖೆಗೆ ಆದೇಶಿಸಿರುವುದಕ್ಕೆ ಕೇಜ್ರಿವಾಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಲಿಕ್ಕರ್ ಮಾಫಿಯಾದ ಎಲ್ಲಾ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ನಿರಾಧಾರದಿಂದ ಕೂಡಿವೆ. ನಾನು ಬಹಳ ಹಿಂದಿನಿಂದಲೂ ಸಿಸೋಡಿಯರವರನ್ನು 22 ವರ್ಷಗಳಿಂದ ಹತ್ತಿರದಿಂದ ಬಲ್ಲೆ. ಅವರು ಕಡು ಪ್ರಾಮಾಣಿಕರು ಮತ್ತು ಶ್ರಮ ಜೀವಿಗಳು. ದೆಹಲಿಯ ಶಿಕ್ಷಣ ವ್ಯವಸ್ಥೆಯನ್ನು ಉನ್ನತ ಮಟ್ಟಕ್ಕೇರಿಸಿ ಶ್ಲಾಘನೆ ಪಡೆದಿದ್ದಾರೆ. ಹಾಗಾಗಿ ಜನ ನಮ್ಮ ಪಕ್ಷಕ್ಕೆ ಮತ ಹಾಕುತ್ತಿದ್ದಾರೆ. ಇದರಿಂದ ಹತಾಶೆಗೆ ಒಳಗಾಗಿರುವ ಕೇಂದ್ರ ಸರ್ಕಾರ ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಕಿಡಿಕಾರಿದ್ದಾರೆ.

ಸಿಸೋಡಿಯ ಮೇಲಿನ ಆರೋಪಗಳಲ್ಲಿ ಎಳ್ಳಷ್ಟು ಸತ್ಯವಿಲ್ಲ. ಅದು ಶುದ್ದ ಸುಳ್ಳು ಕೇಸ್. ಆದರೂ ಸಿಬಿಐ ಅವರನ್ನು ಬಂಧಿಸಲು ಯತ್ನಿಸುತ್ತಿದೆ. ಆ ಮೂಲಕ ನಾವು ಕೆಲಸ ಮಾಡಲು ಕೇಂದ್ರ ಸರ್ಕಾರ ಬಿಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಂಗಾಪುರ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳಬಾರದೆಂಬ ರಾಜ್ಯದ ಲೆಫ್ಟಿನೆಂಟ್ ಗವರ್ನರ್‌ ಆಜ್ಞೆಯನ್ನು ಕೇಜ್ರಿವಾಲ್ ಉಲ್ಲಂಘಿಸಿದ ಬೆನ್ನಲ್ಲೆ ಅವರ ಪಕ್ಷದ ವಿರುದ್ದ ಲಿಕ್ಕರ್ ವಿಷಯಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಲಾಗಿದೆ.

ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನೇರವಾಗಿ ಹೆಸರಿಸಿರುವ ಲೆಫ್ಟಿನೆಂಟ್ ಗವರ್ನರ್, ವರದಿಯು ಉನ್ನತ ರಾಜಕೀಯ ಮಟ್ಟದಲ್ಲಿ “ಗಣನೀಯ” ಹಣಕಾಸಿನ ಅನುಕೂಲಗಳನ್ನು ಸೂಚಿಸುತ್ತದೆ ಎಂದು ಆರೋಪಿಸಿದ್ದಾರೆ.

“ವಿಶ್ವ ನಗರಗಳ ಶೃಂಗಸಭೆ”ಗಾಗಿ ಕೇಜ್ರಿವಾಲ್ ಅವರನ್ನು ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಆಹ್ವಾನಿಸಿದ್ದರು. ಅವರು ಆಗಸ್ಟ್ 1 ರಂದು ನಡೆಯುವ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಆದರೆ ಆ ಕಾರ್ಯಕ್ರಮ ಮೇಯರ್‌ಗಳದ್ದಾಗಿದ್ದು, ಮುಖ್ಯಮಂತ್ರಿಗಳು ಅದಕ್ಕೆ ಹೋಗಬಾರದು ಎಂದು ಲೆಫ್ಟಿನೆಂಟ್ ಗವರ್ನರ್‌ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಈ ವಾದವೆ ಸರಿಯೆಂದಾದರೆ, ಪ್ರಧಾನಿ ಮೋದಿ ಅವರು ಕೂಡ ಎಲ್ಲಿಗೂ ಹೋಗಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಿ ಸಭೆಗೆ ಹೋಗುವುದಾಗಿ ಘೋಷಿಸಿದ್ದಾರೆ.

ದೆಹಲಿ ಮಾದರಿ ಕುರಿತು ಸಿಂಗಾಪುರ್‌ನಲ್ಲಿ ನಾನು ಮಾತನಾಡಲಿದ್ದೇನೆ. ಇದನ್ನು ತಡೆಯುವ ಸಲುವಾಗಿ ವಿನಾಕಾರಣ ತಡೆ ನೀಡಲಾಗುತ್ತಿದೆ ಎಂದು ಕೇಜ್ರಿವಾಲ್ ದೂರಿದ್ದರು.

2019 ರಲ್ಲಿ, ಮೇಯರ್‌ಗಳಿಗೆ ಮೀಸಲಾದ ಸಭೆಯಲ್ಲಿ ಮುಖ್ಯಮಂತ್ರಿ ಭಾಗವಹಿಸುವುದು ಯೋಗ್ಯವಲ್ಲ ಎಂದು ಹೇಳುವ ಮೂಲಕ ಒಕ್ಕೂಟ ಸರ್ಕಾರವೂ ಕೇಜ್ರಿವಾಲ್‌ಗೆ ಇದೇ ರೀತಿಯ ಭೇಟಿಗೆ ಅನುಮತಿಯನ್ನು ತಡೆಹಿಡಿದಿತ್ತು. ಅಂತಿಮವಾಗಿ ಕೇಜ್ರಿವಾಲ್ ಅವರು ಆನ್‌ಲೈನ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಬೇಕಾಯಿತು.

ಇದನ್ನೂ ಓದಿ: ತನ್ನ ಆಜ್ಞೆ ಉಲ್ಲಂಘಿಸಿದ ಕೇಜ್ರಿವಾಲ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....