Homeಮುಖಪುಟನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಜೈಲಿಗೆ ಭಯಪಡುವುದಿಲ್ಲ: ಕೇಜ್ರಿವಾಲ್

ನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಜೈಲಿಗೆ ಭಯಪಡುವುದಿಲ್ಲ: ಕೇಜ್ರಿವಾಲ್

- Advertisement -
- Advertisement -

ನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಬದಲಿಗೆ ನಮ್ಮ ಇಡೀ ಪಕ್ಷ ಬ್ರಿಟಿಷರೆದುರು ನಡುಬಗ್ಗಿಸದೆ ನೇಣುಗಂಬಕ್ಕೆ ಕೊರಳೊಡ್ಡಿದ ವೀರ ಭಗತ್‌ಸಿಂಗ್‌ರವರ ಸಂತತಿ. ಹಾಗಾಗಿ ಜೈಲಿಗೆ ಹೋಗಲು ಹೆದರುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಮೇಲೆ ಲಿಕ್ಕರ್ ಟೆಂಡರ್‌ನಲ್ಲಿ ಅಕ್ರಮ ಆರೋಪದ ಮೇಲೆ ಲೆಫ್ಟಿನೆಂಟ್ ವಿನಯ್ ಕುಮಾರ್‌ ಸಕ್ಸೇನಾ ಸಿಬಿಐ ತನಿಖೆಗೆ ಆದೇಶಿಸಿರುವುದಕ್ಕೆ ಕೇಜ್ರಿವಾಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಲಿಕ್ಕರ್ ಮಾಫಿಯಾದ ಎಲ್ಲಾ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ನಿರಾಧಾರದಿಂದ ಕೂಡಿವೆ. ನಾನು ಬಹಳ ಹಿಂದಿನಿಂದಲೂ ಸಿಸೋಡಿಯರವರನ್ನು 22 ವರ್ಷಗಳಿಂದ ಹತ್ತಿರದಿಂದ ಬಲ್ಲೆ. ಅವರು ಕಡು ಪ್ರಾಮಾಣಿಕರು ಮತ್ತು ಶ್ರಮ ಜೀವಿಗಳು. ದೆಹಲಿಯ ಶಿಕ್ಷಣ ವ್ಯವಸ್ಥೆಯನ್ನು ಉನ್ನತ ಮಟ್ಟಕ್ಕೇರಿಸಿ ಶ್ಲಾಘನೆ ಪಡೆದಿದ್ದಾರೆ. ಹಾಗಾಗಿ ಜನ ನಮ್ಮ ಪಕ್ಷಕ್ಕೆ ಮತ ಹಾಕುತ್ತಿದ್ದಾರೆ. ಇದರಿಂದ ಹತಾಶೆಗೆ ಒಳಗಾಗಿರುವ ಕೇಂದ್ರ ಸರ್ಕಾರ ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಕಿಡಿಕಾರಿದ್ದಾರೆ.

ಸಿಸೋಡಿಯ ಮೇಲಿನ ಆರೋಪಗಳಲ್ಲಿ ಎಳ್ಳಷ್ಟು ಸತ್ಯವಿಲ್ಲ. ಅದು ಶುದ್ದ ಸುಳ್ಳು ಕೇಸ್. ಆದರೂ ಸಿಬಿಐ ಅವರನ್ನು ಬಂಧಿಸಲು ಯತ್ನಿಸುತ್ತಿದೆ. ಆ ಮೂಲಕ ನಾವು ಕೆಲಸ ಮಾಡಲು ಕೇಂದ್ರ ಸರ್ಕಾರ ಬಿಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಂಗಾಪುರ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳಬಾರದೆಂಬ ರಾಜ್ಯದ ಲೆಫ್ಟಿನೆಂಟ್ ಗವರ್ನರ್‌ ಆಜ್ಞೆಯನ್ನು ಕೇಜ್ರಿವಾಲ್ ಉಲ್ಲಂಘಿಸಿದ ಬೆನ್ನಲ್ಲೆ ಅವರ ಪಕ್ಷದ ವಿರುದ್ದ ಲಿಕ್ಕರ್ ವಿಷಯಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಲಾಗಿದೆ.

ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನೇರವಾಗಿ ಹೆಸರಿಸಿರುವ ಲೆಫ್ಟಿನೆಂಟ್ ಗವರ್ನರ್, ವರದಿಯು ಉನ್ನತ ರಾಜಕೀಯ ಮಟ್ಟದಲ್ಲಿ “ಗಣನೀಯ” ಹಣಕಾಸಿನ ಅನುಕೂಲಗಳನ್ನು ಸೂಚಿಸುತ್ತದೆ ಎಂದು ಆರೋಪಿಸಿದ್ದಾರೆ.

“ವಿಶ್ವ ನಗರಗಳ ಶೃಂಗಸಭೆ”ಗಾಗಿ ಕೇಜ್ರಿವಾಲ್ ಅವರನ್ನು ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಆಹ್ವಾನಿಸಿದ್ದರು. ಅವರು ಆಗಸ್ಟ್ 1 ರಂದು ನಡೆಯುವ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಆದರೆ ಆ ಕಾರ್ಯಕ್ರಮ ಮೇಯರ್‌ಗಳದ್ದಾಗಿದ್ದು, ಮುಖ್ಯಮಂತ್ರಿಗಳು ಅದಕ್ಕೆ ಹೋಗಬಾರದು ಎಂದು ಲೆಫ್ಟಿನೆಂಟ್ ಗವರ್ನರ್‌ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಈ ವಾದವೆ ಸರಿಯೆಂದಾದರೆ, ಪ್ರಧಾನಿ ಮೋದಿ ಅವರು ಕೂಡ ಎಲ್ಲಿಗೂ ಹೋಗಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಿ ಸಭೆಗೆ ಹೋಗುವುದಾಗಿ ಘೋಷಿಸಿದ್ದಾರೆ.

ದೆಹಲಿ ಮಾದರಿ ಕುರಿತು ಸಿಂಗಾಪುರ್‌ನಲ್ಲಿ ನಾನು ಮಾತನಾಡಲಿದ್ದೇನೆ. ಇದನ್ನು ತಡೆಯುವ ಸಲುವಾಗಿ ವಿನಾಕಾರಣ ತಡೆ ನೀಡಲಾಗುತ್ತಿದೆ ಎಂದು ಕೇಜ್ರಿವಾಲ್ ದೂರಿದ್ದರು.

2019 ರಲ್ಲಿ, ಮೇಯರ್‌ಗಳಿಗೆ ಮೀಸಲಾದ ಸಭೆಯಲ್ಲಿ ಮುಖ್ಯಮಂತ್ರಿ ಭಾಗವಹಿಸುವುದು ಯೋಗ್ಯವಲ್ಲ ಎಂದು ಹೇಳುವ ಮೂಲಕ ಒಕ್ಕೂಟ ಸರ್ಕಾರವೂ ಕೇಜ್ರಿವಾಲ್‌ಗೆ ಇದೇ ರೀತಿಯ ಭೇಟಿಗೆ ಅನುಮತಿಯನ್ನು ತಡೆಹಿಡಿದಿತ್ತು. ಅಂತಿಮವಾಗಿ ಕೇಜ್ರಿವಾಲ್ ಅವರು ಆನ್‌ಲೈನ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಬೇಕಾಯಿತು.

ಇದನ್ನೂ ಓದಿ: ತನ್ನ ಆಜ್ಞೆ ಉಲ್ಲಂಘಿಸಿದ ಕೇಜ್ರಿವಾಲ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...