Homeಕರೋನಾ ತಲ್ಲಣಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದು ಈ ಹಿಂದೆ ಬಾಬಾ ರಾಮ್‌ದೇವ್ ಹೇಳಿದ್ದರು.

- Advertisement -
- Advertisement -

ತಮ್ಮ ಪತಂಜಲಿ ಔಷಧಿಗಳಿಂದ ಕೊರೊನಾ ಗುಣಪಡಿಸಬಹುದು ಎಂದು ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದ ಎಂದಿಗೂ ಹೇಳಿಕೊಂಡಿಲ್ಲ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆ. ಕಳದ ವಾರ ಸರ್ಕಾರವು ಪತಂಜಲಿ ಕೊರೊನಾ ಔಷಧಿಗಳನ್ನು ಮಾರಬಾರದು ಎಂದು ಅದರ ಜಾಹೀರಾತುಗಳನ್ನು ನಿಷೇಧಿಸಿತ್ತು.

“ಕರೋನಿಲ್ ಮತ್ತ ಸಸ್ವಾರ ಔ‍ಷಧಿಯು ಕೊರೊನಾವನ್ನು ಗುಣಪಡಿಸಬಹುದು ಅಥವಾ ನಿಯಂತ್ರಿಸಬಹುದು ಎಂದು ನಾವು ಎಂದಿಗೂ ಹೇಳಿಲ್ಲ. ನಾವು ಔಷಧಿಗಳನ್ನು ತಯಾರಿಸಿದ್ದೇವೆ ಮತ್ತು ಕೊರೊನಾ ರೋಗಿಗಳನ್ನು ಗುಣಪಡಿಸುವ ನಿಯಂತ್ರಿತ ಕ್ಲಿನಿಕಲ್  ಪ್ರಯೋಗದಲ್ಲಿ ಬಳಸಿದ್ದೇವೆ ಎಂದು ಮಾತ್ರ ನಾವು ಹೇಳಿದ್ದೇವೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ” ಎಂದು ಪತಂಜಲಿಯ ಸಿಇಒ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಔಷಧಿಗಳ ಸಂಯೋಜನೆ, ಅದರ ಸಂಶೋಧನೆಯ ಫಲಿತಾಂಶಗಳು, ಸಂಶೋಧನೆ ನಡೆಸಿದ ಆಸ್ಪತ್ರೆಗಳು, ಕಂಪನಿಯು ಸಾಂಸ್ಥಿಕ ನೈತಿಕ ಸಮಿತಿಯಿಂದ ಅನುಮತಿ ಪಡೆದಿದೆಯೇ ಮತ್ತು ಕ್ಲಿನಿಕಲ್ ಪ್ರಯೋಗ ನಡೆಸಲು ನೋಂದಾಯಿಸಿಕೊಂಡಿದೆಯೇ ಎಂಬ ವಿವರಗಳನ್ನು ಒದಗಿಸುವಂತೆ ಆಯುಷ್ ಸಚಿವಾಲಯ ಪತಂಜಲಿಯನ್ನು ಕೇಳಿದೆ.

ಪರವಾನಗಿ ನೀಡುವ ಅಧಿಕಾರಿಯೊಬ್ಬರು “ಪತಂಜಲಿ ಕಂಪನಿಯು ರೋಗನಿರೋಧಕ ವರ್ಧಕ, ಕೆಮ್ಮು ಮತ್ತು ಜ್ವರ ಗುಣಪಡಿಸುವಿಕೆಗಾಗಿ ಪರವಾನಗಿ ಕೋರಿದ್ದಾರೆ. ಉತ್ಪನ್ನಗಳು ಕೊರೊನಾ ಔಷಧಿ ಕಿಟ್‌ಗಳ ಭಾಗವೆಂದು ಅದು ಎಂದಿಗೂ ಬಹಿರಂಗಪಡಿಸಿಲ್ಲ” ಎಂದು ಹೇಳಿದ್ದಾರೆ. ಈ ಕುರಿತು ಕಂಪನಿಗೆ ರಾಜ್ಯ ಸರ್ಕಾರ ನೋಟಿಸ್ ಕಳುಹಿಸಿತ್ತು.

“ನಮ್ಮ ನೋಟಿಸ್‌ಗೆ ಉತ್ತರವಾಗಿ, ಪತಂಜಲಿ ಅವರು ಯಾವುದೇ ಕರೋನಾ ಕಿಟ್ ಅನ್ನು ಪ್ಯಾಕೇಜ್ ಮಾಡಿಲ್ಲ ಎಂದು ಹೇಳಿದೆ. ಕರೋನಿಲ್ ಪ್ಯಾಕೇಜಿಂಗ್‌ನಲ್ಲಿ ಕರೋನವೈರಸ್‌ನ ಪ್ರತಿನಿಧಿ ಚಿತ್ರವನ್ನು ಪತಂಜಲಿ ಮುದ್ರಿಸಿದ್ದಾರೆ. ಕೊರೊನಿಲ್ ಮತ್ತು ಇತರ ಎರಡು ಔಷಧಿಗಳನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ” ಎಂದು ಉತ್ತರಾಖಂಡ ಆಯುರ್ವೇದ ಇಲಾಖೆ ಪರವಾನಗಿ ಅಧಿಕಾರಿ ವೈ.ಎಸ್. ರಾವತ್ ಹೇಳಿದ್ದಾರೆ.

“ನಾವು ಇಂದು ಕೋವಿಡ್‌ ಔಷಧಿಗಳಾದ ಕೊರೊನಿಲ್ ಮತ್ತು ಸ್ವಸರಿಯನ್ನು ಪ್ರಾರಂಭಿಸುತ್ತಿದ್ದೇವೆ. ಇವುಗಳ ಎರಡು ಪ್ರಯೋಗಗಳನ್ನು ನಾವು ನಡೆಸಿದ್ದೇವೆ. ಮೊದಲ ಕ್ಲಿನಿಕಲ್ ನಿಯಂತ್ರಿತ ಅಧ್ಯಯನವು ದೆಹಲಿ, ಅಹಮದಾಬಾದ್ ಇತರ ಅನೇಕ ನಗರಗಳಲ್ಲಿ ನಡೆಯಿತು. ಇದರ ಅಡಿಯಲ್ಲಿ 280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು. ಇದರ ನಂತರ ಎಲ್ಲ ಪ್ರಮುಖ ಕ್ಲಿನಿಕಲ್ ನಿಯಂತ್ರಣ ಪ್ರಯೋಗವನ್ನು ನಡೆಸಲಾಯಿತು” ಎಂದು ಉದ್ಘಾಟನೆ ವೇಳೆ ಬಾಬಾ ರಾಮ್‌ದೇವ್‌ ಹೇಳಿದ್ದರು.

“ಜೈಪುರದ ನಿಮ್ಸ್ ಸಹಾಯದಿಂದ ನಾವು 95 ರೋಗಿಗಳ ಮೇಲೆ ಕ್ಲಿನಿಕಲ್ ನಿಯಂತ್ರಣ ಅಧ್ಯಯನವನ್ನು ನಡೆಸಿದ್ದೇವೆ. ಇದರಿಂದ ಹೊರಬಂದ ದೊಡ್ಡ ವಿಷಯವೆಂದರೆ ಮೂರು ದಿನಗಳಲ್ಲಿ ಶೇಕಡಾ 69 ರಷ್ಟು ರೋಗಿಗಳು ಚೇತರಿಸಿಕೊಂಡರು ಮತ್ತು ಪಾಸಿಟಿವ್ ಪ್ರಕರಣಗಳಿಂದ ನೆಗೆಟಿವ್ ಆದರು. ಏಳು ದಿನಗಳಲ್ಲಿ ಶೇಕಡಾ 100 ಕ್ಕೆ 100 ರಷ್ಟು ಜನರು ನೆಗೆಟಿವ್ ಆದರು ಎಂದು ಅವರು ಹೇಳಿದ್ದರು.

ಈಗ ಅದೇ ಕಂಪನಿಯ ಸಿಇಓ ನಾವು ಕೊರನಾ ಗುಣಪಡಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂಬ ಹೇಳಿಕೆ ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.


ಮತ್ತಷ್ಟು ಸುದ್ದಿಗಳು

ಪತಂಜಲಿ ಕೊರೊನಾ ಔಷಧಿ ಮಾರಿದರೆ ಕ್ರಮ: ರಾಜಸ್ಥಾನ ಸಚಿವರ ಎಚ್ಚರಿಕೆ

ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...