Homeಕರೋನಾ ತಲ್ಲಣಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದು ಈ ಹಿಂದೆ ಬಾಬಾ ರಾಮ್‌ದೇವ್ ಹೇಳಿದ್ದರು.

- Advertisement -
- Advertisement -

ತಮ್ಮ ಪತಂಜಲಿ ಔಷಧಿಗಳಿಂದ ಕೊರೊನಾ ಗುಣಪಡಿಸಬಹುದು ಎಂದು ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದ ಎಂದಿಗೂ ಹೇಳಿಕೊಂಡಿಲ್ಲ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆ. ಕಳದ ವಾರ ಸರ್ಕಾರವು ಪತಂಜಲಿ ಕೊರೊನಾ ಔಷಧಿಗಳನ್ನು ಮಾರಬಾರದು ಎಂದು ಅದರ ಜಾಹೀರಾತುಗಳನ್ನು ನಿಷೇಧಿಸಿತ್ತು.

“ಕರೋನಿಲ್ ಮತ್ತ ಸಸ್ವಾರ ಔ‍ಷಧಿಯು ಕೊರೊನಾವನ್ನು ಗುಣಪಡಿಸಬಹುದು ಅಥವಾ ನಿಯಂತ್ರಿಸಬಹುದು ಎಂದು ನಾವು ಎಂದಿಗೂ ಹೇಳಿಲ್ಲ. ನಾವು ಔಷಧಿಗಳನ್ನು ತಯಾರಿಸಿದ್ದೇವೆ ಮತ್ತು ಕೊರೊನಾ ರೋಗಿಗಳನ್ನು ಗುಣಪಡಿಸುವ ನಿಯಂತ್ರಿತ ಕ್ಲಿನಿಕಲ್  ಪ್ರಯೋಗದಲ್ಲಿ ಬಳಸಿದ್ದೇವೆ ಎಂದು ಮಾತ್ರ ನಾವು ಹೇಳಿದ್ದೇವೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ” ಎಂದು ಪತಂಜಲಿಯ ಸಿಇಒ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಔಷಧಿಗಳ ಸಂಯೋಜನೆ, ಅದರ ಸಂಶೋಧನೆಯ ಫಲಿತಾಂಶಗಳು, ಸಂಶೋಧನೆ ನಡೆಸಿದ ಆಸ್ಪತ್ರೆಗಳು, ಕಂಪನಿಯು ಸಾಂಸ್ಥಿಕ ನೈತಿಕ ಸಮಿತಿಯಿಂದ ಅನುಮತಿ ಪಡೆದಿದೆಯೇ ಮತ್ತು ಕ್ಲಿನಿಕಲ್ ಪ್ರಯೋಗ ನಡೆಸಲು ನೋಂದಾಯಿಸಿಕೊಂಡಿದೆಯೇ ಎಂಬ ವಿವರಗಳನ್ನು ಒದಗಿಸುವಂತೆ ಆಯುಷ್ ಸಚಿವಾಲಯ ಪತಂಜಲಿಯನ್ನು ಕೇಳಿದೆ.

ಪರವಾನಗಿ ನೀಡುವ ಅಧಿಕಾರಿಯೊಬ್ಬರು “ಪತಂಜಲಿ ಕಂಪನಿಯು ರೋಗನಿರೋಧಕ ವರ್ಧಕ, ಕೆಮ್ಮು ಮತ್ತು ಜ್ವರ ಗುಣಪಡಿಸುವಿಕೆಗಾಗಿ ಪರವಾನಗಿ ಕೋರಿದ್ದಾರೆ. ಉತ್ಪನ್ನಗಳು ಕೊರೊನಾ ಔಷಧಿ ಕಿಟ್‌ಗಳ ಭಾಗವೆಂದು ಅದು ಎಂದಿಗೂ ಬಹಿರಂಗಪಡಿಸಿಲ್ಲ” ಎಂದು ಹೇಳಿದ್ದಾರೆ. ಈ ಕುರಿತು ಕಂಪನಿಗೆ ರಾಜ್ಯ ಸರ್ಕಾರ ನೋಟಿಸ್ ಕಳುಹಿಸಿತ್ತು.

“ನಮ್ಮ ನೋಟಿಸ್‌ಗೆ ಉತ್ತರವಾಗಿ, ಪತಂಜಲಿ ಅವರು ಯಾವುದೇ ಕರೋನಾ ಕಿಟ್ ಅನ್ನು ಪ್ಯಾಕೇಜ್ ಮಾಡಿಲ್ಲ ಎಂದು ಹೇಳಿದೆ. ಕರೋನಿಲ್ ಪ್ಯಾಕೇಜಿಂಗ್‌ನಲ್ಲಿ ಕರೋನವೈರಸ್‌ನ ಪ್ರತಿನಿಧಿ ಚಿತ್ರವನ್ನು ಪತಂಜಲಿ ಮುದ್ರಿಸಿದ್ದಾರೆ. ಕೊರೊನಿಲ್ ಮತ್ತು ಇತರ ಎರಡು ಔಷಧಿಗಳನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ” ಎಂದು ಉತ್ತರಾಖಂಡ ಆಯುರ್ವೇದ ಇಲಾಖೆ ಪರವಾನಗಿ ಅಧಿಕಾರಿ ವೈ.ಎಸ್. ರಾವತ್ ಹೇಳಿದ್ದಾರೆ.

“ನಾವು ಇಂದು ಕೋವಿಡ್‌ ಔಷಧಿಗಳಾದ ಕೊರೊನಿಲ್ ಮತ್ತು ಸ್ವಸರಿಯನ್ನು ಪ್ರಾರಂಭಿಸುತ್ತಿದ್ದೇವೆ. ಇವುಗಳ ಎರಡು ಪ್ರಯೋಗಗಳನ್ನು ನಾವು ನಡೆಸಿದ್ದೇವೆ. ಮೊದಲ ಕ್ಲಿನಿಕಲ್ ನಿಯಂತ್ರಿತ ಅಧ್ಯಯನವು ದೆಹಲಿ, ಅಹಮದಾಬಾದ್ ಇತರ ಅನೇಕ ನಗರಗಳಲ್ಲಿ ನಡೆಯಿತು. ಇದರ ಅಡಿಯಲ್ಲಿ 280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು. ಇದರ ನಂತರ ಎಲ್ಲ ಪ್ರಮುಖ ಕ್ಲಿನಿಕಲ್ ನಿಯಂತ್ರಣ ಪ್ರಯೋಗವನ್ನು ನಡೆಸಲಾಯಿತು” ಎಂದು ಉದ್ಘಾಟನೆ ವೇಳೆ ಬಾಬಾ ರಾಮ್‌ದೇವ್‌ ಹೇಳಿದ್ದರು.

“ಜೈಪುರದ ನಿಮ್ಸ್ ಸಹಾಯದಿಂದ ನಾವು 95 ರೋಗಿಗಳ ಮೇಲೆ ಕ್ಲಿನಿಕಲ್ ನಿಯಂತ್ರಣ ಅಧ್ಯಯನವನ್ನು ನಡೆಸಿದ್ದೇವೆ. ಇದರಿಂದ ಹೊರಬಂದ ದೊಡ್ಡ ವಿಷಯವೆಂದರೆ ಮೂರು ದಿನಗಳಲ್ಲಿ ಶೇಕಡಾ 69 ರಷ್ಟು ರೋಗಿಗಳು ಚೇತರಿಸಿಕೊಂಡರು ಮತ್ತು ಪಾಸಿಟಿವ್ ಪ್ರಕರಣಗಳಿಂದ ನೆಗೆಟಿವ್ ಆದರು. ಏಳು ದಿನಗಳಲ್ಲಿ ಶೇಕಡಾ 100 ಕ್ಕೆ 100 ರಷ್ಟು ಜನರು ನೆಗೆಟಿವ್ ಆದರು ಎಂದು ಅವರು ಹೇಳಿದ್ದರು.

ಈಗ ಅದೇ ಕಂಪನಿಯ ಸಿಇಓ ನಾವು ಕೊರನಾ ಗುಣಪಡಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂಬ ಹೇಳಿಕೆ ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.


ಮತ್ತಷ್ಟು ಸುದ್ದಿಗಳು

ಪತಂಜಲಿ ಕೊರೊನಾ ಔಷಧಿ ಮಾರಿದರೆ ಕ್ರಮ: ರಾಜಸ್ಥಾನ ಸಚಿವರ ಎಚ್ಚರಿಕೆ

ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...