Homeಕರೋನಾ ತಲ್ಲಣಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದು ಈ ಹಿಂದೆ ಬಾಬಾ ರಾಮ್‌ದೇವ್ ಹೇಳಿದ್ದರು.

- Advertisement -
- Advertisement -

ತಮ್ಮ ಪತಂಜಲಿ ಔಷಧಿಗಳಿಂದ ಕೊರೊನಾ ಗುಣಪಡಿಸಬಹುದು ಎಂದು ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದ ಎಂದಿಗೂ ಹೇಳಿಕೊಂಡಿಲ್ಲ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆ. ಕಳದ ವಾರ ಸರ್ಕಾರವು ಪತಂಜಲಿ ಕೊರೊನಾ ಔಷಧಿಗಳನ್ನು ಮಾರಬಾರದು ಎಂದು ಅದರ ಜಾಹೀರಾತುಗಳನ್ನು ನಿಷೇಧಿಸಿತ್ತು.

“ಕರೋನಿಲ್ ಮತ್ತ ಸಸ್ವಾರ ಔ‍ಷಧಿಯು ಕೊರೊನಾವನ್ನು ಗುಣಪಡಿಸಬಹುದು ಅಥವಾ ನಿಯಂತ್ರಿಸಬಹುದು ಎಂದು ನಾವು ಎಂದಿಗೂ ಹೇಳಿಲ್ಲ. ನಾವು ಔಷಧಿಗಳನ್ನು ತಯಾರಿಸಿದ್ದೇವೆ ಮತ್ತು ಕೊರೊನಾ ರೋಗಿಗಳನ್ನು ಗುಣಪಡಿಸುವ ನಿಯಂತ್ರಿತ ಕ್ಲಿನಿಕಲ್  ಪ್ರಯೋಗದಲ್ಲಿ ಬಳಸಿದ್ದೇವೆ ಎಂದು ಮಾತ್ರ ನಾವು ಹೇಳಿದ್ದೇವೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ” ಎಂದು ಪತಂಜಲಿಯ ಸಿಇಒ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಔಷಧಿಗಳ ಸಂಯೋಜನೆ, ಅದರ ಸಂಶೋಧನೆಯ ಫಲಿತಾಂಶಗಳು, ಸಂಶೋಧನೆ ನಡೆಸಿದ ಆಸ್ಪತ್ರೆಗಳು, ಕಂಪನಿಯು ಸಾಂಸ್ಥಿಕ ನೈತಿಕ ಸಮಿತಿಯಿಂದ ಅನುಮತಿ ಪಡೆದಿದೆಯೇ ಮತ್ತು ಕ್ಲಿನಿಕಲ್ ಪ್ರಯೋಗ ನಡೆಸಲು ನೋಂದಾಯಿಸಿಕೊಂಡಿದೆಯೇ ಎಂಬ ವಿವರಗಳನ್ನು ಒದಗಿಸುವಂತೆ ಆಯುಷ್ ಸಚಿವಾಲಯ ಪತಂಜಲಿಯನ್ನು ಕೇಳಿದೆ.

ಪರವಾನಗಿ ನೀಡುವ ಅಧಿಕಾರಿಯೊಬ್ಬರು “ಪತಂಜಲಿ ಕಂಪನಿಯು ರೋಗನಿರೋಧಕ ವರ್ಧಕ, ಕೆಮ್ಮು ಮತ್ತು ಜ್ವರ ಗುಣಪಡಿಸುವಿಕೆಗಾಗಿ ಪರವಾನಗಿ ಕೋರಿದ್ದಾರೆ. ಉತ್ಪನ್ನಗಳು ಕೊರೊನಾ ಔಷಧಿ ಕಿಟ್‌ಗಳ ಭಾಗವೆಂದು ಅದು ಎಂದಿಗೂ ಬಹಿರಂಗಪಡಿಸಿಲ್ಲ” ಎಂದು ಹೇಳಿದ್ದಾರೆ. ಈ ಕುರಿತು ಕಂಪನಿಗೆ ರಾಜ್ಯ ಸರ್ಕಾರ ನೋಟಿಸ್ ಕಳುಹಿಸಿತ್ತು.

“ನಮ್ಮ ನೋಟಿಸ್‌ಗೆ ಉತ್ತರವಾಗಿ, ಪತಂಜಲಿ ಅವರು ಯಾವುದೇ ಕರೋನಾ ಕಿಟ್ ಅನ್ನು ಪ್ಯಾಕೇಜ್ ಮಾಡಿಲ್ಲ ಎಂದು ಹೇಳಿದೆ. ಕರೋನಿಲ್ ಪ್ಯಾಕೇಜಿಂಗ್‌ನಲ್ಲಿ ಕರೋನವೈರಸ್‌ನ ಪ್ರತಿನಿಧಿ ಚಿತ್ರವನ್ನು ಪತಂಜಲಿ ಮುದ್ರಿಸಿದ್ದಾರೆ. ಕೊರೊನಿಲ್ ಮತ್ತು ಇತರ ಎರಡು ಔಷಧಿಗಳನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ” ಎಂದು ಉತ್ತರಾಖಂಡ ಆಯುರ್ವೇದ ಇಲಾಖೆ ಪರವಾನಗಿ ಅಧಿಕಾರಿ ವೈ.ಎಸ್. ರಾವತ್ ಹೇಳಿದ್ದಾರೆ.

“ನಾವು ಇಂದು ಕೋವಿಡ್‌ ಔಷಧಿಗಳಾದ ಕೊರೊನಿಲ್ ಮತ್ತು ಸ್ವಸರಿಯನ್ನು ಪ್ರಾರಂಭಿಸುತ್ತಿದ್ದೇವೆ. ಇವುಗಳ ಎರಡು ಪ್ರಯೋಗಗಳನ್ನು ನಾವು ನಡೆಸಿದ್ದೇವೆ. ಮೊದಲ ಕ್ಲಿನಿಕಲ್ ನಿಯಂತ್ರಿತ ಅಧ್ಯಯನವು ದೆಹಲಿ, ಅಹಮದಾಬಾದ್ ಇತರ ಅನೇಕ ನಗರಗಳಲ್ಲಿ ನಡೆಯಿತು. ಇದರ ಅಡಿಯಲ್ಲಿ 280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು. ಇದರ ನಂತರ ಎಲ್ಲ ಪ್ರಮುಖ ಕ್ಲಿನಿಕಲ್ ನಿಯಂತ್ರಣ ಪ್ರಯೋಗವನ್ನು ನಡೆಸಲಾಯಿತು” ಎಂದು ಉದ್ಘಾಟನೆ ವೇಳೆ ಬಾಬಾ ರಾಮ್‌ದೇವ್‌ ಹೇಳಿದ್ದರು.

“ಜೈಪುರದ ನಿಮ್ಸ್ ಸಹಾಯದಿಂದ ನಾವು 95 ರೋಗಿಗಳ ಮೇಲೆ ಕ್ಲಿನಿಕಲ್ ನಿಯಂತ್ರಣ ಅಧ್ಯಯನವನ್ನು ನಡೆಸಿದ್ದೇವೆ. ಇದರಿಂದ ಹೊರಬಂದ ದೊಡ್ಡ ವಿಷಯವೆಂದರೆ ಮೂರು ದಿನಗಳಲ್ಲಿ ಶೇಕಡಾ 69 ರಷ್ಟು ರೋಗಿಗಳು ಚೇತರಿಸಿಕೊಂಡರು ಮತ್ತು ಪಾಸಿಟಿವ್ ಪ್ರಕರಣಗಳಿಂದ ನೆಗೆಟಿವ್ ಆದರು. ಏಳು ದಿನಗಳಲ್ಲಿ ಶೇಕಡಾ 100 ಕ್ಕೆ 100 ರಷ್ಟು ಜನರು ನೆಗೆಟಿವ್ ಆದರು ಎಂದು ಅವರು ಹೇಳಿದ್ದರು.

ಈಗ ಅದೇ ಕಂಪನಿಯ ಸಿಇಓ ನಾವು ಕೊರನಾ ಗುಣಪಡಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂಬ ಹೇಳಿಕೆ ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.


ಮತ್ತಷ್ಟು ಸುದ್ದಿಗಳು

ಪತಂಜಲಿ ಕೊರೊನಾ ಔಷಧಿ ಮಾರಿದರೆ ಕ್ರಮ: ರಾಜಸ್ಥಾನ ಸಚಿವರ ಎಚ್ಚರಿಕೆ

ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...