Homeಕರೋನಾ ತಲ್ಲಣಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದು ಈ ಹಿಂದೆ ಬಾಬಾ ರಾಮ್‌ದೇವ್ ಹೇಳಿದ್ದರು.

- Advertisement -
- Advertisement -

ತಮ್ಮ ಪತಂಜಲಿ ಔಷಧಿಗಳಿಂದ ಕೊರೊನಾ ಗುಣಪಡಿಸಬಹುದು ಎಂದು ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದ ಎಂದಿಗೂ ಹೇಳಿಕೊಂಡಿಲ್ಲ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆ. ಕಳದ ವಾರ ಸರ್ಕಾರವು ಪತಂಜಲಿ ಕೊರೊನಾ ಔಷಧಿಗಳನ್ನು ಮಾರಬಾರದು ಎಂದು ಅದರ ಜಾಹೀರಾತುಗಳನ್ನು ನಿಷೇಧಿಸಿತ್ತು.

“ಕರೋನಿಲ್ ಮತ್ತ ಸಸ್ವಾರ ಔ‍ಷಧಿಯು ಕೊರೊನಾವನ್ನು ಗುಣಪಡಿಸಬಹುದು ಅಥವಾ ನಿಯಂತ್ರಿಸಬಹುದು ಎಂದು ನಾವು ಎಂದಿಗೂ ಹೇಳಿಲ್ಲ. ನಾವು ಔಷಧಿಗಳನ್ನು ತಯಾರಿಸಿದ್ದೇವೆ ಮತ್ತು ಕೊರೊನಾ ರೋಗಿಗಳನ್ನು ಗುಣಪಡಿಸುವ ನಿಯಂತ್ರಿತ ಕ್ಲಿನಿಕಲ್  ಪ್ರಯೋಗದಲ್ಲಿ ಬಳಸಿದ್ದೇವೆ ಎಂದು ಮಾತ್ರ ನಾವು ಹೇಳಿದ್ದೇವೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ” ಎಂದು ಪತಂಜಲಿಯ ಸಿಇಒ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಔಷಧಿಗಳ ಸಂಯೋಜನೆ, ಅದರ ಸಂಶೋಧನೆಯ ಫಲಿತಾಂಶಗಳು, ಸಂಶೋಧನೆ ನಡೆಸಿದ ಆಸ್ಪತ್ರೆಗಳು, ಕಂಪನಿಯು ಸಾಂಸ್ಥಿಕ ನೈತಿಕ ಸಮಿತಿಯಿಂದ ಅನುಮತಿ ಪಡೆದಿದೆಯೇ ಮತ್ತು ಕ್ಲಿನಿಕಲ್ ಪ್ರಯೋಗ ನಡೆಸಲು ನೋಂದಾಯಿಸಿಕೊಂಡಿದೆಯೇ ಎಂಬ ವಿವರಗಳನ್ನು ಒದಗಿಸುವಂತೆ ಆಯುಷ್ ಸಚಿವಾಲಯ ಪತಂಜಲಿಯನ್ನು ಕೇಳಿದೆ.

ಪರವಾನಗಿ ನೀಡುವ ಅಧಿಕಾರಿಯೊಬ್ಬರು “ಪತಂಜಲಿ ಕಂಪನಿಯು ರೋಗನಿರೋಧಕ ವರ್ಧಕ, ಕೆಮ್ಮು ಮತ್ತು ಜ್ವರ ಗುಣಪಡಿಸುವಿಕೆಗಾಗಿ ಪರವಾನಗಿ ಕೋರಿದ್ದಾರೆ. ಉತ್ಪನ್ನಗಳು ಕೊರೊನಾ ಔಷಧಿ ಕಿಟ್‌ಗಳ ಭಾಗವೆಂದು ಅದು ಎಂದಿಗೂ ಬಹಿರಂಗಪಡಿಸಿಲ್ಲ” ಎಂದು ಹೇಳಿದ್ದಾರೆ. ಈ ಕುರಿತು ಕಂಪನಿಗೆ ರಾಜ್ಯ ಸರ್ಕಾರ ನೋಟಿಸ್ ಕಳುಹಿಸಿತ್ತು.

“ನಮ್ಮ ನೋಟಿಸ್‌ಗೆ ಉತ್ತರವಾಗಿ, ಪತಂಜಲಿ ಅವರು ಯಾವುದೇ ಕರೋನಾ ಕಿಟ್ ಅನ್ನು ಪ್ಯಾಕೇಜ್ ಮಾಡಿಲ್ಲ ಎಂದು ಹೇಳಿದೆ. ಕರೋನಿಲ್ ಪ್ಯಾಕೇಜಿಂಗ್‌ನಲ್ಲಿ ಕರೋನವೈರಸ್‌ನ ಪ್ರತಿನಿಧಿ ಚಿತ್ರವನ್ನು ಪತಂಜಲಿ ಮುದ್ರಿಸಿದ್ದಾರೆ. ಕೊರೊನಿಲ್ ಮತ್ತು ಇತರ ಎರಡು ಔಷಧಿಗಳನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ” ಎಂದು ಉತ್ತರಾಖಂಡ ಆಯುರ್ವೇದ ಇಲಾಖೆ ಪರವಾನಗಿ ಅಧಿಕಾರಿ ವೈ.ಎಸ್. ರಾವತ್ ಹೇಳಿದ್ದಾರೆ.

“ನಾವು ಇಂದು ಕೋವಿಡ್‌ ಔಷಧಿಗಳಾದ ಕೊರೊನಿಲ್ ಮತ್ತು ಸ್ವಸರಿಯನ್ನು ಪ್ರಾರಂಭಿಸುತ್ತಿದ್ದೇವೆ. ಇವುಗಳ ಎರಡು ಪ್ರಯೋಗಗಳನ್ನು ನಾವು ನಡೆಸಿದ್ದೇವೆ. ಮೊದಲ ಕ್ಲಿನಿಕಲ್ ನಿಯಂತ್ರಿತ ಅಧ್ಯಯನವು ದೆಹಲಿ, ಅಹಮದಾಬಾದ್ ಇತರ ಅನೇಕ ನಗರಗಳಲ್ಲಿ ನಡೆಯಿತು. ಇದರ ಅಡಿಯಲ್ಲಿ 280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು. ಇದರ ನಂತರ ಎಲ್ಲ ಪ್ರಮುಖ ಕ್ಲಿನಿಕಲ್ ನಿಯಂತ್ರಣ ಪ್ರಯೋಗವನ್ನು ನಡೆಸಲಾಯಿತು” ಎಂದು ಉದ್ಘಾಟನೆ ವೇಳೆ ಬಾಬಾ ರಾಮ್‌ದೇವ್‌ ಹೇಳಿದ್ದರು.

“ಜೈಪುರದ ನಿಮ್ಸ್ ಸಹಾಯದಿಂದ ನಾವು 95 ರೋಗಿಗಳ ಮೇಲೆ ಕ್ಲಿನಿಕಲ್ ನಿಯಂತ್ರಣ ಅಧ್ಯಯನವನ್ನು ನಡೆಸಿದ್ದೇವೆ. ಇದರಿಂದ ಹೊರಬಂದ ದೊಡ್ಡ ವಿಷಯವೆಂದರೆ ಮೂರು ದಿನಗಳಲ್ಲಿ ಶೇಕಡಾ 69 ರಷ್ಟು ರೋಗಿಗಳು ಚೇತರಿಸಿಕೊಂಡರು ಮತ್ತು ಪಾಸಿಟಿವ್ ಪ್ರಕರಣಗಳಿಂದ ನೆಗೆಟಿವ್ ಆದರು. ಏಳು ದಿನಗಳಲ್ಲಿ ಶೇಕಡಾ 100 ಕ್ಕೆ 100 ರಷ್ಟು ಜನರು ನೆಗೆಟಿವ್ ಆದರು ಎಂದು ಅವರು ಹೇಳಿದ್ದರು.

ಈಗ ಅದೇ ಕಂಪನಿಯ ಸಿಇಓ ನಾವು ಕೊರನಾ ಗುಣಪಡಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂಬ ಹೇಳಿಕೆ ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.


ಮತ್ತಷ್ಟು ಸುದ್ದಿಗಳು

ಪತಂಜಲಿ ಕೊರೊನಾ ಔಷಧಿ ಮಾರಿದರೆ ಕ್ರಮ: ರಾಜಸ್ಥಾನ ಸಚಿವರ ಎಚ್ಚರಿಕೆ

ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...