Homeಕರೋನಾ ತಲ್ಲಣಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದು ಈ ಹಿಂದೆ ಬಾಬಾ ರಾಮ್‌ದೇವ್ ಹೇಳಿದ್ದರು.

- Advertisement -
- Advertisement -

ತಮ್ಮ ಪತಂಜಲಿ ಔಷಧಿಗಳಿಂದ ಕೊರೊನಾ ಗುಣಪಡಿಸಬಹುದು ಎಂದು ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದ ಎಂದಿಗೂ ಹೇಳಿಕೊಂಡಿಲ್ಲ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆ. ಕಳದ ವಾರ ಸರ್ಕಾರವು ಪತಂಜಲಿ ಕೊರೊನಾ ಔಷಧಿಗಳನ್ನು ಮಾರಬಾರದು ಎಂದು ಅದರ ಜಾಹೀರಾತುಗಳನ್ನು ನಿಷೇಧಿಸಿತ್ತು.

“ಕರೋನಿಲ್ ಮತ್ತ ಸಸ್ವಾರ ಔ‍ಷಧಿಯು ಕೊರೊನಾವನ್ನು ಗುಣಪಡಿಸಬಹುದು ಅಥವಾ ನಿಯಂತ್ರಿಸಬಹುದು ಎಂದು ನಾವು ಎಂದಿಗೂ ಹೇಳಿಲ್ಲ. ನಾವು ಔಷಧಿಗಳನ್ನು ತಯಾರಿಸಿದ್ದೇವೆ ಮತ್ತು ಕೊರೊನಾ ರೋಗಿಗಳನ್ನು ಗುಣಪಡಿಸುವ ನಿಯಂತ್ರಿತ ಕ್ಲಿನಿಕಲ್  ಪ್ರಯೋಗದಲ್ಲಿ ಬಳಸಿದ್ದೇವೆ ಎಂದು ಮಾತ್ರ ನಾವು ಹೇಳಿದ್ದೇವೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ” ಎಂದು ಪತಂಜಲಿಯ ಸಿಇಒ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಔಷಧಿಗಳ ಸಂಯೋಜನೆ, ಅದರ ಸಂಶೋಧನೆಯ ಫಲಿತಾಂಶಗಳು, ಸಂಶೋಧನೆ ನಡೆಸಿದ ಆಸ್ಪತ್ರೆಗಳು, ಕಂಪನಿಯು ಸಾಂಸ್ಥಿಕ ನೈತಿಕ ಸಮಿತಿಯಿಂದ ಅನುಮತಿ ಪಡೆದಿದೆಯೇ ಮತ್ತು ಕ್ಲಿನಿಕಲ್ ಪ್ರಯೋಗ ನಡೆಸಲು ನೋಂದಾಯಿಸಿಕೊಂಡಿದೆಯೇ ಎಂಬ ವಿವರಗಳನ್ನು ಒದಗಿಸುವಂತೆ ಆಯುಷ್ ಸಚಿವಾಲಯ ಪತಂಜಲಿಯನ್ನು ಕೇಳಿದೆ.

ಪರವಾನಗಿ ನೀಡುವ ಅಧಿಕಾರಿಯೊಬ್ಬರು “ಪತಂಜಲಿ ಕಂಪನಿಯು ರೋಗನಿರೋಧಕ ವರ್ಧಕ, ಕೆಮ್ಮು ಮತ್ತು ಜ್ವರ ಗುಣಪಡಿಸುವಿಕೆಗಾಗಿ ಪರವಾನಗಿ ಕೋರಿದ್ದಾರೆ. ಉತ್ಪನ್ನಗಳು ಕೊರೊನಾ ಔಷಧಿ ಕಿಟ್‌ಗಳ ಭಾಗವೆಂದು ಅದು ಎಂದಿಗೂ ಬಹಿರಂಗಪಡಿಸಿಲ್ಲ” ಎಂದು ಹೇಳಿದ್ದಾರೆ. ಈ ಕುರಿತು ಕಂಪನಿಗೆ ರಾಜ್ಯ ಸರ್ಕಾರ ನೋಟಿಸ್ ಕಳುಹಿಸಿತ್ತು.

“ನಮ್ಮ ನೋಟಿಸ್‌ಗೆ ಉತ್ತರವಾಗಿ, ಪತಂಜಲಿ ಅವರು ಯಾವುದೇ ಕರೋನಾ ಕಿಟ್ ಅನ್ನು ಪ್ಯಾಕೇಜ್ ಮಾಡಿಲ್ಲ ಎಂದು ಹೇಳಿದೆ. ಕರೋನಿಲ್ ಪ್ಯಾಕೇಜಿಂಗ್‌ನಲ್ಲಿ ಕರೋನವೈರಸ್‌ನ ಪ್ರತಿನಿಧಿ ಚಿತ್ರವನ್ನು ಪತಂಜಲಿ ಮುದ್ರಿಸಿದ್ದಾರೆ. ಕೊರೊನಿಲ್ ಮತ್ತು ಇತರ ಎರಡು ಔಷಧಿಗಳನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ” ಎಂದು ಉತ್ತರಾಖಂಡ ಆಯುರ್ವೇದ ಇಲಾಖೆ ಪರವಾನಗಿ ಅಧಿಕಾರಿ ವೈ.ಎಸ್. ರಾವತ್ ಹೇಳಿದ್ದಾರೆ.

“ನಾವು ಇಂದು ಕೋವಿಡ್‌ ಔಷಧಿಗಳಾದ ಕೊರೊನಿಲ್ ಮತ್ತು ಸ್ವಸರಿಯನ್ನು ಪ್ರಾರಂಭಿಸುತ್ತಿದ್ದೇವೆ. ಇವುಗಳ ಎರಡು ಪ್ರಯೋಗಗಳನ್ನು ನಾವು ನಡೆಸಿದ್ದೇವೆ. ಮೊದಲ ಕ್ಲಿನಿಕಲ್ ನಿಯಂತ್ರಿತ ಅಧ್ಯಯನವು ದೆಹಲಿ, ಅಹಮದಾಬಾದ್ ಇತರ ಅನೇಕ ನಗರಗಳಲ್ಲಿ ನಡೆಯಿತು. ಇದರ ಅಡಿಯಲ್ಲಿ 280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು. ಇದರ ನಂತರ ಎಲ್ಲ ಪ್ರಮುಖ ಕ್ಲಿನಿಕಲ್ ನಿಯಂತ್ರಣ ಪ್ರಯೋಗವನ್ನು ನಡೆಸಲಾಯಿತು” ಎಂದು ಉದ್ಘಾಟನೆ ವೇಳೆ ಬಾಬಾ ರಾಮ್‌ದೇವ್‌ ಹೇಳಿದ್ದರು.

“ಜೈಪುರದ ನಿಮ್ಸ್ ಸಹಾಯದಿಂದ ನಾವು 95 ರೋಗಿಗಳ ಮೇಲೆ ಕ್ಲಿನಿಕಲ್ ನಿಯಂತ್ರಣ ಅಧ್ಯಯನವನ್ನು ನಡೆಸಿದ್ದೇವೆ. ಇದರಿಂದ ಹೊರಬಂದ ದೊಡ್ಡ ವಿಷಯವೆಂದರೆ ಮೂರು ದಿನಗಳಲ್ಲಿ ಶೇಕಡಾ 69 ರಷ್ಟು ರೋಗಿಗಳು ಚೇತರಿಸಿಕೊಂಡರು ಮತ್ತು ಪಾಸಿಟಿವ್ ಪ್ರಕರಣಗಳಿಂದ ನೆಗೆಟಿವ್ ಆದರು. ಏಳು ದಿನಗಳಲ್ಲಿ ಶೇಕಡಾ 100 ಕ್ಕೆ 100 ರಷ್ಟು ಜನರು ನೆಗೆಟಿವ್ ಆದರು ಎಂದು ಅವರು ಹೇಳಿದ್ದರು.

ಈಗ ಅದೇ ಕಂಪನಿಯ ಸಿಇಓ ನಾವು ಕೊರನಾ ಗುಣಪಡಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂಬ ಹೇಳಿಕೆ ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.


ಮತ್ತಷ್ಟು ಸುದ್ದಿಗಳು

ಪತಂಜಲಿ ಕೊರೊನಾ ಔಷಧಿ ಮಾರಿದರೆ ಕ್ರಮ: ರಾಜಸ್ಥಾನ ಸಚಿವರ ಎಚ್ಚರಿಕೆ

ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...