Homeಕರೋನಾ ತಲ್ಲಣಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದು ಈ ಹಿಂದೆ ಬಾಬಾ ರಾಮ್‌ದೇವ್ ಹೇಳಿದ್ದರು.

- Advertisement -
- Advertisement -

ತಮ್ಮ ಪತಂಜಲಿ ಔಷಧಿಗಳಿಂದ ಕೊರೊನಾ ಗುಣಪಡಿಸಬಹುದು ಎಂದು ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದ ಎಂದಿಗೂ ಹೇಳಿಕೊಂಡಿಲ್ಲ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆ. ಕಳದ ವಾರ ಸರ್ಕಾರವು ಪತಂಜಲಿ ಕೊರೊನಾ ಔಷಧಿಗಳನ್ನು ಮಾರಬಾರದು ಎಂದು ಅದರ ಜಾಹೀರಾತುಗಳನ್ನು ನಿಷೇಧಿಸಿತ್ತು.

“ಕರೋನಿಲ್ ಮತ್ತ ಸಸ್ವಾರ ಔ‍ಷಧಿಯು ಕೊರೊನಾವನ್ನು ಗುಣಪಡಿಸಬಹುದು ಅಥವಾ ನಿಯಂತ್ರಿಸಬಹುದು ಎಂದು ನಾವು ಎಂದಿಗೂ ಹೇಳಿಲ್ಲ. ನಾವು ಔಷಧಿಗಳನ್ನು ತಯಾರಿಸಿದ್ದೇವೆ ಮತ್ತು ಕೊರೊನಾ ರೋಗಿಗಳನ್ನು ಗುಣಪಡಿಸುವ ನಿಯಂತ್ರಿತ ಕ್ಲಿನಿಕಲ್  ಪ್ರಯೋಗದಲ್ಲಿ ಬಳಸಿದ್ದೇವೆ ಎಂದು ಮಾತ್ರ ನಾವು ಹೇಳಿದ್ದೇವೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ” ಎಂದು ಪತಂಜಲಿಯ ಸಿಇಒ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಔಷಧಿಗಳ ಸಂಯೋಜನೆ, ಅದರ ಸಂಶೋಧನೆಯ ಫಲಿತಾಂಶಗಳು, ಸಂಶೋಧನೆ ನಡೆಸಿದ ಆಸ್ಪತ್ರೆಗಳು, ಕಂಪನಿಯು ಸಾಂಸ್ಥಿಕ ನೈತಿಕ ಸಮಿತಿಯಿಂದ ಅನುಮತಿ ಪಡೆದಿದೆಯೇ ಮತ್ತು ಕ್ಲಿನಿಕಲ್ ಪ್ರಯೋಗ ನಡೆಸಲು ನೋಂದಾಯಿಸಿಕೊಂಡಿದೆಯೇ ಎಂಬ ವಿವರಗಳನ್ನು ಒದಗಿಸುವಂತೆ ಆಯುಷ್ ಸಚಿವಾಲಯ ಪತಂಜಲಿಯನ್ನು ಕೇಳಿದೆ.

ಪರವಾನಗಿ ನೀಡುವ ಅಧಿಕಾರಿಯೊಬ್ಬರು “ಪತಂಜಲಿ ಕಂಪನಿಯು ರೋಗನಿರೋಧಕ ವರ್ಧಕ, ಕೆಮ್ಮು ಮತ್ತು ಜ್ವರ ಗುಣಪಡಿಸುವಿಕೆಗಾಗಿ ಪರವಾನಗಿ ಕೋರಿದ್ದಾರೆ. ಉತ್ಪನ್ನಗಳು ಕೊರೊನಾ ಔಷಧಿ ಕಿಟ್‌ಗಳ ಭಾಗವೆಂದು ಅದು ಎಂದಿಗೂ ಬಹಿರಂಗಪಡಿಸಿಲ್ಲ” ಎಂದು ಹೇಳಿದ್ದಾರೆ. ಈ ಕುರಿತು ಕಂಪನಿಗೆ ರಾಜ್ಯ ಸರ್ಕಾರ ನೋಟಿಸ್ ಕಳುಹಿಸಿತ್ತು.

“ನಮ್ಮ ನೋಟಿಸ್‌ಗೆ ಉತ್ತರವಾಗಿ, ಪತಂಜಲಿ ಅವರು ಯಾವುದೇ ಕರೋನಾ ಕಿಟ್ ಅನ್ನು ಪ್ಯಾಕೇಜ್ ಮಾಡಿಲ್ಲ ಎಂದು ಹೇಳಿದೆ. ಕರೋನಿಲ್ ಪ್ಯಾಕೇಜಿಂಗ್‌ನಲ್ಲಿ ಕರೋನವೈರಸ್‌ನ ಪ್ರತಿನಿಧಿ ಚಿತ್ರವನ್ನು ಪತಂಜಲಿ ಮುದ್ರಿಸಿದ್ದಾರೆ. ಕೊರೊನಿಲ್ ಮತ್ತು ಇತರ ಎರಡು ಔಷಧಿಗಳನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ” ಎಂದು ಉತ್ತರಾಖಂಡ ಆಯುರ್ವೇದ ಇಲಾಖೆ ಪರವಾನಗಿ ಅಧಿಕಾರಿ ವೈ.ಎಸ್. ರಾವತ್ ಹೇಳಿದ್ದಾರೆ.

“ನಾವು ಇಂದು ಕೋವಿಡ್‌ ಔಷಧಿಗಳಾದ ಕೊರೊನಿಲ್ ಮತ್ತು ಸ್ವಸರಿಯನ್ನು ಪ್ರಾರಂಭಿಸುತ್ತಿದ್ದೇವೆ. ಇವುಗಳ ಎರಡು ಪ್ರಯೋಗಗಳನ್ನು ನಾವು ನಡೆಸಿದ್ದೇವೆ. ಮೊದಲ ಕ್ಲಿನಿಕಲ್ ನಿಯಂತ್ರಿತ ಅಧ್ಯಯನವು ದೆಹಲಿ, ಅಹಮದಾಬಾದ್ ಇತರ ಅನೇಕ ನಗರಗಳಲ್ಲಿ ನಡೆಯಿತು. ಇದರ ಅಡಿಯಲ್ಲಿ 280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು. ಇದರ ನಂತರ ಎಲ್ಲ ಪ್ರಮುಖ ಕ್ಲಿನಿಕಲ್ ನಿಯಂತ್ರಣ ಪ್ರಯೋಗವನ್ನು ನಡೆಸಲಾಯಿತು” ಎಂದು ಉದ್ಘಾಟನೆ ವೇಳೆ ಬಾಬಾ ರಾಮ್‌ದೇವ್‌ ಹೇಳಿದ್ದರು.

“ಜೈಪುರದ ನಿಮ್ಸ್ ಸಹಾಯದಿಂದ ನಾವು 95 ರೋಗಿಗಳ ಮೇಲೆ ಕ್ಲಿನಿಕಲ್ ನಿಯಂತ್ರಣ ಅಧ್ಯಯನವನ್ನು ನಡೆಸಿದ್ದೇವೆ. ಇದರಿಂದ ಹೊರಬಂದ ದೊಡ್ಡ ವಿಷಯವೆಂದರೆ ಮೂರು ದಿನಗಳಲ್ಲಿ ಶೇಕಡಾ 69 ರಷ್ಟು ರೋಗಿಗಳು ಚೇತರಿಸಿಕೊಂಡರು ಮತ್ತು ಪಾಸಿಟಿವ್ ಪ್ರಕರಣಗಳಿಂದ ನೆಗೆಟಿವ್ ಆದರು. ಏಳು ದಿನಗಳಲ್ಲಿ ಶೇಕಡಾ 100 ಕ್ಕೆ 100 ರಷ್ಟು ಜನರು ನೆಗೆಟಿವ್ ಆದರು ಎಂದು ಅವರು ಹೇಳಿದ್ದರು.

ಈಗ ಅದೇ ಕಂಪನಿಯ ಸಿಇಓ ನಾವು ಕೊರನಾ ಗುಣಪಡಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂಬ ಹೇಳಿಕೆ ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.


ಮತ್ತಷ್ಟು ಸುದ್ದಿಗಳು

ಪತಂಜಲಿ ಕೊರೊನಾ ಔಷಧಿ ಮಾರಿದರೆ ಕ್ರಮ: ರಾಜಸ್ಥಾನ ಸಚಿವರ ಎಚ್ಚರಿಕೆ

ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...