Homeಕರೋನಾ ತಲ್ಲಣಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದು ಈ ಹಿಂದೆ ಬಾಬಾ ರಾಮ್‌ದೇವ್ ಹೇಳಿದ್ದರು.

- Advertisement -
- Advertisement -

ತಮ್ಮ ಪತಂಜಲಿ ಔಷಧಿಗಳಿಂದ ಕೊರೊನಾ ಗುಣಪಡಿಸಬಹುದು ಎಂದು ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದ ಎಂದಿಗೂ ಹೇಳಿಕೊಂಡಿಲ್ಲ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆ. ಕಳದ ವಾರ ಸರ್ಕಾರವು ಪತಂಜಲಿ ಕೊರೊನಾ ಔಷಧಿಗಳನ್ನು ಮಾರಬಾರದು ಎಂದು ಅದರ ಜಾಹೀರಾತುಗಳನ್ನು ನಿಷೇಧಿಸಿತ್ತು.

“ಕರೋನಿಲ್ ಮತ್ತ ಸಸ್ವಾರ ಔ‍ಷಧಿಯು ಕೊರೊನಾವನ್ನು ಗುಣಪಡಿಸಬಹುದು ಅಥವಾ ನಿಯಂತ್ರಿಸಬಹುದು ಎಂದು ನಾವು ಎಂದಿಗೂ ಹೇಳಿಲ್ಲ. ನಾವು ಔಷಧಿಗಳನ್ನು ತಯಾರಿಸಿದ್ದೇವೆ ಮತ್ತು ಕೊರೊನಾ ರೋಗಿಗಳನ್ನು ಗುಣಪಡಿಸುವ ನಿಯಂತ್ರಿತ ಕ್ಲಿನಿಕಲ್  ಪ್ರಯೋಗದಲ್ಲಿ ಬಳಸಿದ್ದೇವೆ ಎಂದು ಮಾತ್ರ ನಾವು ಹೇಳಿದ್ದೇವೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ” ಎಂದು ಪತಂಜಲಿಯ ಸಿಇಒ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಔಷಧಿಗಳ ಸಂಯೋಜನೆ, ಅದರ ಸಂಶೋಧನೆಯ ಫಲಿತಾಂಶಗಳು, ಸಂಶೋಧನೆ ನಡೆಸಿದ ಆಸ್ಪತ್ರೆಗಳು, ಕಂಪನಿಯು ಸಾಂಸ್ಥಿಕ ನೈತಿಕ ಸಮಿತಿಯಿಂದ ಅನುಮತಿ ಪಡೆದಿದೆಯೇ ಮತ್ತು ಕ್ಲಿನಿಕಲ್ ಪ್ರಯೋಗ ನಡೆಸಲು ನೋಂದಾಯಿಸಿಕೊಂಡಿದೆಯೇ ಎಂಬ ವಿವರಗಳನ್ನು ಒದಗಿಸುವಂತೆ ಆಯುಷ್ ಸಚಿವಾಲಯ ಪತಂಜಲಿಯನ್ನು ಕೇಳಿದೆ.

ಪರವಾನಗಿ ನೀಡುವ ಅಧಿಕಾರಿಯೊಬ್ಬರು “ಪತಂಜಲಿ ಕಂಪನಿಯು ರೋಗನಿರೋಧಕ ವರ್ಧಕ, ಕೆಮ್ಮು ಮತ್ತು ಜ್ವರ ಗುಣಪಡಿಸುವಿಕೆಗಾಗಿ ಪರವಾನಗಿ ಕೋರಿದ್ದಾರೆ. ಉತ್ಪನ್ನಗಳು ಕೊರೊನಾ ಔಷಧಿ ಕಿಟ್‌ಗಳ ಭಾಗವೆಂದು ಅದು ಎಂದಿಗೂ ಬಹಿರಂಗಪಡಿಸಿಲ್ಲ” ಎಂದು ಹೇಳಿದ್ದಾರೆ. ಈ ಕುರಿತು ಕಂಪನಿಗೆ ರಾಜ್ಯ ಸರ್ಕಾರ ನೋಟಿಸ್ ಕಳುಹಿಸಿತ್ತು.

“ನಮ್ಮ ನೋಟಿಸ್‌ಗೆ ಉತ್ತರವಾಗಿ, ಪತಂಜಲಿ ಅವರು ಯಾವುದೇ ಕರೋನಾ ಕಿಟ್ ಅನ್ನು ಪ್ಯಾಕೇಜ್ ಮಾಡಿಲ್ಲ ಎಂದು ಹೇಳಿದೆ. ಕರೋನಿಲ್ ಪ್ಯಾಕೇಜಿಂಗ್‌ನಲ್ಲಿ ಕರೋನವೈರಸ್‌ನ ಪ್ರತಿನಿಧಿ ಚಿತ್ರವನ್ನು ಪತಂಜಲಿ ಮುದ್ರಿಸಿದ್ದಾರೆ. ಕೊರೊನಿಲ್ ಮತ್ತು ಇತರ ಎರಡು ಔಷಧಿಗಳನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ” ಎಂದು ಉತ್ತರಾಖಂಡ ಆಯುರ್ವೇದ ಇಲಾಖೆ ಪರವಾನಗಿ ಅಧಿಕಾರಿ ವೈ.ಎಸ್. ರಾವತ್ ಹೇಳಿದ್ದಾರೆ.

“ನಾವು ಇಂದು ಕೋವಿಡ್‌ ಔಷಧಿಗಳಾದ ಕೊರೊನಿಲ್ ಮತ್ತು ಸ್ವಸರಿಯನ್ನು ಪ್ರಾರಂಭಿಸುತ್ತಿದ್ದೇವೆ. ಇವುಗಳ ಎರಡು ಪ್ರಯೋಗಗಳನ್ನು ನಾವು ನಡೆಸಿದ್ದೇವೆ. ಮೊದಲ ಕ್ಲಿನಿಕಲ್ ನಿಯಂತ್ರಿತ ಅಧ್ಯಯನವು ದೆಹಲಿ, ಅಹಮದಾಬಾದ್ ಇತರ ಅನೇಕ ನಗರಗಳಲ್ಲಿ ನಡೆಯಿತು. ಇದರ ಅಡಿಯಲ್ಲಿ 280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು. ಇದರ ನಂತರ ಎಲ್ಲ ಪ್ರಮುಖ ಕ್ಲಿನಿಕಲ್ ನಿಯಂತ್ರಣ ಪ್ರಯೋಗವನ್ನು ನಡೆಸಲಾಯಿತು” ಎಂದು ಉದ್ಘಾಟನೆ ವೇಳೆ ಬಾಬಾ ರಾಮ್‌ದೇವ್‌ ಹೇಳಿದ್ದರು.

“ಜೈಪುರದ ನಿಮ್ಸ್ ಸಹಾಯದಿಂದ ನಾವು 95 ರೋಗಿಗಳ ಮೇಲೆ ಕ್ಲಿನಿಕಲ್ ನಿಯಂತ್ರಣ ಅಧ್ಯಯನವನ್ನು ನಡೆಸಿದ್ದೇವೆ. ಇದರಿಂದ ಹೊರಬಂದ ದೊಡ್ಡ ವಿಷಯವೆಂದರೆ ಮೂರು ದಿನಗಳಲ್ಲಿ ಶೇಕಡಾ 69 ರಷ್ಟು ರೋಗಿಗಳು ಚೇತರಿಸಿಕೊಂಡರು ಮತ್ತು ಪಾಸಿಟಿವ್ ಪ್ರಕರಣಗಳಿಂದ ನೆಗೆಟಿವ್ ಆದರು. ಏಳು ದಿನಗಳಲ್ಲಿ ಶೇಕಡಾ 100 ಕ್ಕೆ 100 ರಷ್ಟು ಜನರು ನೆಗೆಟಿವ್ ಆದರು ಎಂದು ಅವರು ಹೇಳಿದ್ದರು.

ಈಗ ಅದೇ ಕಂಪನಿಯ ಸಿಇಓ ನಾವು ಕೊರನಾ ಗುಣಪಡಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂಬ ಹೇಳಿಕೆ ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.


ಮತ್ತಷ್ಟು ಸುದ್ದಿಗಳು

ಪತಂಜಲಿ ಕೊರೊನಾ ಔಷಧಿ ಮಾರಿದರೆ ಕ್ರಮ: ರಾಜಸ್ಥಾನ ಸಚಿವರ ಎಚ್ಚರಿಕೆ

ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...