Homeಕರೋನಾ ತಲ್ಲಣಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

ಪತಂಜಲಿಯಿಂದ ಕೊರೊನಾ ಗುಣಪಡಿಸಬಹುದೆಂದು ನಾವು ಹೇಳಿಲ್ಲ: ಸಿಇಒ ಆಚಾರ್ಯ ಬಾಲಕೃಷ್ಣ

280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು ಎಂದು ಈ ಹಿಂದೆ ಬಾಬಾ ರಾಮ್‌ದೇವ್ ಹೇಳಿದ್ದರು.

- Advertisement -
- Advertisement -

ತಮ್ಮ ಪತಂಜಲಿ ಔಷಧಿಗಳಿಂದ ಕೊರೊನಾ ಗುಣಪಡಿಸಬಹುದು ಎಂದು ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದ ಎಂದಿಗೂ ಹೇಳಿಕೊಂಡಿಲ್ಲ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆ. ಕಳದ ವಾರ ಸರ್ಕಾರವು ಪತಂಜಲಿ ಕೊರೊನಾ ಔಷಧಿಗಳನ್ನು ಮಾರಬಾರದು ಎಂದು ಅದರ ಜಾಹೀರಾತುಗಳನ್ನು ನಿಷೇಧಿಸಿತ್ತು.

“ಕರೋನಿಲ್ ಮತ್ತ ಸಸ್ವಾರ ಔ‍ಷಧಿಯು ಕೊರೊನಾವನ್ನು ಗುಣಪಡಿಸಬಹುದು ಅಥವಾ ನಿಯಂತ್ರಿಸಬಹುದು ಎಂದು ನಾವು ಎಂದಿಗೂ ಹೇಳಿಲ್ಲ. ನಾವು ಔಷಧಿಗಳನ್ನು ತಯಾರಿಸಿದ್ದೇವೆ ಮತ್ತು ಕೊರೊನಾ ರೋಗಿಗಳನ್ನು ಗುಣಪಡಿಸುವ ನಿಯಂತ್ರಿತ ಕ್ಲಿನಿಕಲ್  ಪ್ರಯೋಗದಲ್ಲಿ ಬಳಸಿದ್ದೇವೆ ಎಂದು ಮಾತ್ರ ನಾವು ಹೇಳಿದ್ದೇವೆ. ಇದರಲ್ಲಿ ಯಾವುದೇ ಗೊಂದಲಗಳಿಲ್ಲ” ಎಂದು ಪತಂಜಲಿಯ ಸಿಇಒ ಆಚಾರ್ಯ ಬಾಲಕೃಷ್ಣ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಔಷಧಿಗಳ ಸಂಯೋಜನೆ, ಅದರ ಸಂಶೋಧನೆಯ ಫಲಿತಾಂಶಗಳು, ಸಂಶೋಧನೆ ನಡೆಸಿದ ಆಸ್ಪತ್ರೆಗಳು, ಕಂಪನಿಯು ಸಾಂಸ್ಥಿಕ ನೈತಿಕ ಸಮಿತಿಯಿಂದ ಅನುಮತಿ ಪಡೆದಿದೆಯೇ ಮತ್ತು ಕ್ಲಿನಿಕಲ್ ಪ್ರಯೋಗ ನಡೆಸಲು ನೋಂದಾಯಿಸಿಕೊಂಡಿದೆಯೇ ಎಂಬ ವಿವರಗಳನ್ನು ಒದಗಿಸುವಂತೆ ಆಯುಷ್ ಸಚಿವಾಲಯ ಪತಂಜಲಿಯನ್ನು ಕೇಳಿದೆ.

ಪರವಾನಗಿ ನೀಡುವ ಅಧಿಕಾರಿಯೊಬ್ಬರು “ಪತಂಜಲಿ ಕಂಪನಿಯು ರೋಗನಿರೋಧಕ ವರ್ಧಕ, ಕೆಮ್ಮು ಮತ್ತು ಜ್ವರ ಗುಣಪಡಿಸುವಿಕೆಗಾಗಿ ಪರವಾನಗಿ ಕೋರಿದ್ದಾರೆ. ಉತ್ಪನ್ನಗಳು ಕೊರೊನಾ ಔಷಧಿ ಕಿಟ್‌ಗಳ ಭಾಗವೆಂದು ಅದು ಎಂದಿಗೂ ಬಹಿರಂಗಪಡಿಸಿಲ್ಲ” ಎಂದು ಹೇಳಿದ್ದಾರೆ. ಈ ಕುರಿತು ಕಂಪನಿಗೆ ರಾಜ್ಯ ಸರ್ಕಾರ ನೋಟಿಸ್ ಕಳುಹಿಸಿತ್ತು.

“ನಮ್ಮ ನೋಟಿಸ್‌ಗೆ ಉತ್ತರವಾಗಿ, ಪತಂಜಲಿ ಅವರು ಯಾವುದೇ ಕರೋನಾ ಕಿಟ್ ಅನ್ನು ಪ್ಯಾಕೇಜ್ ಮಾಡಿಲ್ಲ ಎಂದು ಹೇಳಿದೆ. ಕರೋನಿಲ್ ಪ್ಯಾಕೇಜಿಂಗ್‌ನಲ್ಲಿ ಕರೋನವೈರಸ್‌ನ ಪ್ರತಿನಿಧಿ ಚಿತ್ರವನ್ನು ಪತಂಜಲಿ ಮುದ್ರಿಸಿದ್ದಾರೆ. ಕೊರೊನಿಲ್ ಮತ್ತು ಇತರ ಎರಡು ಔಷಧಿಗಳನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ” ಎಂದು ಉತ್ತರಾಖಂಡ ಆಯುರ್ವೇದ ಇಲಾಖೆ ಪರವಾನಗಿ ಅಧಿಕಾರಿ ವೈ.ಎಸ್. ರಾವತ್ ಹೇಳಿದ್ದಾರೆ.

“ನಾವು ಇಂದು ಕೋವಿಡ್‌ ಔಷಧಿಗಳಾದ ಕೊರೊನಿಲ್ ಮತ್ತು ಸ್ವಸರಿಯನ್ನು ಪ್ರಾರಂಭಿಸುತ್ತಿದ್ದೇವೆ. ಇವುಗಳ ಎರಡು ಪ್ರಯೋಗಗಳನ್ನು ನಾವು ನಡೆಸಿದ್ದೇವೆ. ಮೊದಲ ಕ್ಲಿನಿಕಲ್ ನಿಯಂತ್ರಿತ ಅಧ್ಯಯನವು ದೆಹಲಿ, ಅಹಮದಾಬಾದ್ ಇತರ ಅನೇಕ ನಗರಗಳಲ್ಲಿ ನಡೆಯಿತು. ಇದರ ಅಡಿಯಲ್ಲಿ 280 ರೋಗಿಗಳನ್ನು ಪರೀಕ್ಷಿಸಲಾಗಿ 100 ಪ್ರತಿಶತದಷ್ಟು ರೋಗಿಗಳು ಗುಣವಾಗಿದ್ದಾರೆ. ನಾವು ಕರೋನಾ ಮತ್ತು ಅದರ ತೊಡಕುಗಳನ್ನು ನಿಯಂತ್ರಿಸಲು ಸಾಧ್ಯವಾಯಿತು. ಇದರ ನಂತರ ಎಲ್ಲ ಪ್ರಮುಖ ಕ್ಲಿನಿಕಲ್ ನಿಯಂತ್ರಣ ಪ್ರಯೋಗವನ್ನು ನಡೆಸಲಾಯಿತು” ಎಂದು ಉದ್ಘಾಟನೆ ವೇಳೆ ಬಾಬಾ ರಾಮ್‌ದೇವ್‌ ಹೇಳಿದ್ದರು.

“ಜೈಪುರದ ನಿಮ್ಸ್ ಸಹಾಯದಿಂದ ನಾವು 95 ರೋಗಿಗಳ ಮೇಲೆ ಕ್ಲಿನಿಕಲ್ ನಿಯಂತ್ರಣ ಅಧ್ಯಯನವನ್ನು ನಡೆಸಿದ್ದೇವೆ. ಇದರಿಂದ ಹೊರಬಂದ ದೊಡ್ಡ ವಿಷಯವೆಂದರೆ ಮೂರು ದಿನಗಳಲ್ಲಿ ಶೇಕಡಾ 69 ರಷ್ಟು ರೋಗಿಗಳು ಚೇತರಿಸಿಕೊಂಡರು ಮತ್ತು ಪಾಸಿಟಿವ್ ಪ್ರಕರಣಗಳಿಂದ ನೆಗೆಟಿವ್ ಆದರು. ಏಳು ದಿನಗಳಲ್ಲಿ ಶೇಕಡಾ 100 ಕ್ಕೆ 100 ರಷ್ಟು ಜನರು ನೆಗೆಟಿವ್ ಆದರು ಎಂದು ಅವರು ಹೇಳಿದ್ದರು.

ಈಗ ಅದೇ ಕಂಪನಿಯ ಸಿಇಓ ನಾವು ಕೊರನಾ ಗುಣಪಡಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂಬ ಹೇಳಿಕೆ ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.


ಮತ್ತಷ್ಟು ಸುದ್ದಿಗಳು

ಪತಂಜಲಿ ಕೊರೊನಾ ಔಷಧಿ ಮಾರಿದರೆ ಕ್ರಮ: ರಾಜಸ್ಥಾನ ಸಚಿವರ ಎಚ್ಚರಿಕೆ

ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...