Homeಮುಖಪುಟ’ನಾವೇನು 2014ರ ನಂತರ ರಾಗ ಬದಲಾಯಿಸಿದವರಲ್ಲ’: 2009 ರ ವಿಡಿಯೊ ಹಂಚಿಕೊಂಡ ನಟ ಸಿದ್ದಾರ್ಥ್

’ನಾವೇನು 2014ರ ನಂತರ ರಾಗ ಬದಲಾಯಿಸಿದವರಲ್ಲ’: 2009 ರ ವಿಡಿಯೊ ಹಂಚಿಕೊಂಡ ನಟ ಸಿದ್ದಾರ್ಥ್

- Advertisement -
- Advertisement -

ಸಾಮಾಜಿಕ ವಿಷಯದ ಬಗ್ಗೆ ಸದಾ ಧ್ವನಿ ಎತ್ತುತ್ತಿರುವ ಪ್ರತಿಭಾನ್ವಿತ ಬಹುಭಾಷ ನಟ ಸಿದ್ಧಾರ್ಥ್, ಟ್ವಿಟರ್‌‌ನಲ್ಲಿ 2009 ರಲ್ಲಿ ಇಂಡಿಯನ್ ಬ್ಯುಸಿನೆಸ್ ಸ್ಕೂಲ್‌‌ನಲ್ಲಿ ಮಾಡಿರುವ ಭಾಷಣವೊಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ 2009 ರಲ್ಲಿ ನನ್ನ ಅಭಿಪ್ರಾಯಕ್ಕಾಗಿ ಯಾರೂ ನನ್ನ ಮೇಲೆ ದಾಳಿ ಮಾಡಿಲ್ಲ. ಆದರೆ ಇದರ ನಂತರ ದೇಶವು ಎಷ್ಟು ಬದಲಾಗಿದೆ? ಎಂದು ಪ್ರಶ್ನಿಸಿದ್ದಾರೆ.

ಟೂಲ್‌ಕಿಟ್ ಪ್ರಕರಣದಲ್ಲಿ ಹವಾಮಾನ ಕಾರ್ಯಕರ್ತೆ ದಿಶಾ ರವಿ ಅವರನ್ನು ಬಂಧಿಸಿರುವುದನ್ನು ಸಿದ್ದಾರ್ಥ್ ಖಂಡಿಸಿದ್ದರು. ಇದಕ್ಕಾಗಿ ಅವರು ಮೇಲೆ ಬೆದರಿಕೆ ಸೇರಿದಂತೆ, ಟ್ರೋಲ್ ದಾಳಿಗಳಾಗಿದ್ದವು. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “2009 ರಲ್ಲಿ, ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ನಾನು ಮಾಡಿದ ಭಾಷಣ. ಈ ದೇಶಕ್ಕೆ ಮರೆವಿನ ರೋಗವಿದೆ. ಈಗ ಅದು ಬ್ರೈನ್ ವಾಶ್ ಆಗಿದೆ ಮತ್ತು ದುಷ್ಟತನದ ಅನುಮಾನದ ಬೀಜಗಳನ್ನು ಬಿತ್ತಲಾಗುತ್ತಿದೆ. ನಾವು 2014 ರ ನಂತರ ರಾಗವನ್ನು ಬದಲಾಯಿಸಿದವರಲ್ಲ. ಸತ್ಯದೊಂದಿಗೆ ನಿಲ್ಲಿ ಮತ್ತು ಸತ್ಯವನ್ನೇ ಮಾತನಾಡಿ” ಎಂದು ಟ್ವೀಟ್ ಮಾಡಿ, ಅದರಲ್ಲಿ ಅವರು 2009 ರಲ್ಲಿ ಮಾಡಿದ ಭಾಷಣವನ್ನು ಶೇರ್‌ ಮಾಡಿದ್ದಾರೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

“ಈ ಭಾಷಣಕ್ಕಾಗಿ ನಾನು ಅವತ್ತು ಒಂದೇ ಒಂದು ದೂರು ಅಥವಾ ಬೆದರಿಕೆ ಎದುರಿಸಿಲ್ಲ ಎಂದು ನನಗೆ ಆಶ್ಚರ್ಯವಾಗುತ್ತಿದೆ. ಯಾರೂ ಕೂಡಾ ಈ ನನ್ನ ಅಭಿಪ್ರಾಯ ಹಾಗೂ ಪ್ರಶ್ನೆಗಳಿಗಾಗಿ ದಾಳಿ ಮಾಡಲಿಲ್ಲ. ಆದರೆ ಭಾರತವು ಬದಲಾಗಿದೆ. ಅದು ನಮ್ಮ ಕಣ್ಣುಗಳ ಮುಂದೆಯೆ ಬದಲಾಯಿತು. ಆದರೆ ಪ್ರಶ್ನೆಯಿರುವುದು, ಇದರ ಬಗ್ಗೆ ನಾವು ಏನು ಮಾಡಲಿದ್ದೇವೆ ಎಂಬುವುದಾಗಿದೆ” ಎಂದು ಅವರು ಹೇಳಿದ್ದಾರೆ.

ಹಲವಾರು ಹಿಟ್ ಚಿತ್ರದ ಮೂಲಕ ಖ್ಯಾತಿ ಗಳಿಸಿರುವ ನಟ ಸಿದ್ಧಾರ್ಥ್, 2009 ರಲ್ಲಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ದೇಶದ ಸ್ಥಿಗತಿಗಳ ಬಗ್ಗೆ ಮಾತನಾಡಿದ್ದರು. ಭಾಷಣದಲ್ಲಿ ಆಂಧ್ರಪ್ರದೇಶದಲ್ಲಿ ಸಂಭವಿಸಿದ ಪ್ರವಾಹವನ್ನು ಅಲ್ಲಿನ ಮುಖ್ಯಮಂತ್ರಿ ನಿಭಾಯಿಸಿದ ರೀತಿ ಮತ್ತು 25/11 ಮುಂಬೈ ಭಯೋತ್ಪಾದಕ ದಾಳಿಯನ್ನು ಮಾಧ್ಯಮಗಳು ನಿಭಾಯಿಸಿದ್ದ ರೀತಿಯನ್ನು ಅವರು ಭಾಷಣದಲ್ಲಿ ಟೀಕಿಸಿದ್ದರು.

ಇದನ್ನೂ ಓದಿ: ಟ್ರ್ಯಾಕ್ಟರ್ ಪರೇಡ್‌ನಲ್ಲಿ ರೈತನ ಸಾವಿನ ಕುರಿತ ಟ್ವೀಟ್: ‘ವೈರ್’ನ ಸಿದ್ದಾರ್ಥ್ ವರದರಾಜನ್ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...