Homeಮುಖಪುಟ’ನಾವೇನು 2014ರ ನಂತರ ರಾಗ ಬದಲಾಯಿಸಿದವರಲ್ಲ’: 2009 ರ ವಿಡಿಯೊ ಹಂಚಿಕೊಂಡ ನಟ ಸಿದ್ದಾರ್ಥ್

’ನಾವೇನು 2014ರ ನಂತರ ರಾಗ ಬದಲಾಯಿಸಿದವರಲ್ಲ’: 2009 ರ ವಿಡಿಯೊ ಹಂಚಿಕೊಂಡ ನಟ ಸಿದ್ದಾರ್ಥ್

- Advertisement -
- Advertisement -

ಸಾಮಾಜಿಕ ವಿಷಯದ ಬಗ್ಗೆ ಸದಾ ಧ್ವನಿ ಎತ್ತುತ್ತಿರುವ ಪ್ರತಿಭಾನ್ವಿತ ಬಹುಭಾಷ ನಟ ಸಿದ್ಧಾರ್ಥ್, ಟ್ವಿಟರ್‌‌ನಲ್ಲಿ 2009 ರಲ್ಲಿ ಇಂಡಿಯನ್ ಬ್ಯುಸಿನೆಸ್ ಸ್ಕೂಲ್‌‌ನಲ್ಲಿ ಮಾಡಿರುವ ಭಾಷಣವೊಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ 2009 ರಲ್ಲಿ ನನ್ನ ಅಭಿಪ್ರಾಯಕ್ಕಾಗಿ ಯಾರೂ ನನ್ನ ಮೇಲೆ ದಾಳಿ ಮಾಡಿಲ್ಲ. ಆದರೆ ಇದರ ನಂತರ ದೇಶವು ಎಷ್ಟು ಬದಲಾಗಿದೆ? ಎಂದು ಪ್ರಶ್ನಿಸಿದ್ದಾರೆ.

ಟೂಲ್‌ಕಿಟ್ ಪ್ರಕರಣದಲ್ಲಿ ಹವಾಮಾನ ಕಾರ್ಯಕರ್ತೆ ದಿಶಾ ರವಿ ಅವರನ್ನು ಬಂಧಿಸಿರುವುದನ್ನು ಸಿದ್ದಾರ್ಥ್ ಖಂಡಿಸಿದ್ದರು. ಇದಕ್ಕಾಗಿ ಅವರು ಮೇಲೆ ಬೆದರಿಕೆ ಸೇರಿದಂತೆ, ಟ್ರೋಲ್ ದಾಳಿಗಳಾಗಿದ್ದವು. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “2009 ರಲ್ಲಿ, ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ನಾನು ಮಾಡಿದ ಭಾಷಣ. ಈ ದೇಶಕ್ಕೆ ಮರೆವಿನ ರೋಗವಿದೆ. ಈಗ ಅದು ಬ್ರೈನ್ ವಾಶ್ ಆಗಿದೆ ಮತ್ತು ದುಷ್ಟತನದ ಅನುಮಾನದ ಬೀಜಗಳನ್ನು ಬಿತ್ತಲಾಗುತ್ತಿದೆ. ನಾವು 2014 ರ ನಂತರ ರಾಗವನ್ನು ಬದಲಾಯಿಸಿದವರಲ್ಲ. ಸತ್ಯದೊಂದಿಗೆ ನಿಲ್ಲಿ ಮತ್ತು ಸತ್ಯವನ್ನೇ ಮಾತನಾಡಿ” ಎಂದು ಟ್ವೀಟ್ ಮಾಡಿ, ಅದರಲ್ಲಿ ಅವರು 2009 ರಲ್ಲಿ ಮಾಡಿದ ಭಾಷಣವನ್ನು ಶೇರ್‌ ಮಾಡಿದ್ದಾರೆ.

ಇದನ್ನೂ ಓದಿ: ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

“ಈ ಭಾಷಣಕ್ಕಾಗಿ ನಾನು ಅವತ್ತು ಒಂದೇ ಒಂದು ದೂರು ಅಥವಾ ಬೆದರಿಕೆ ಎದುರಿಸಿಲ್ಲ ಎಂದು ನನಗೆ ಆಶ್ಚರ್ಯವಾಗುತ್ತಿದೆ. ಯಾರೂ ಕೂಡಾ ಈ ನನ್ನ ಅಭಿಪ್ರಾಯ ಹಾಗೂ ಪ್ರಶ್ನೆಗಳಿಗಾಗಿ ದಾಳಿ ಮಾಡಲಿಲ್ಲ. ಆದರೆ ಭಾರತವು ಬದಲಾಗಿದೆ. ಅದು ನಮ್ಮ ಕಣ್ಣುಗಳ ಮುಂದೆಯೆ ಬದಲಾಯಿತು. ಆದರೆ ಪ್ರಶ್ನೆಯಿರುವುದು, ಇದರ ಬಗ್ಗೆ ನಾವು ಏನು ಮಾಡಲಿದ್ದೇವೆ ಎಂಬುವುದಾಗಿದೆ” ಎಂದು ಅವರು ಹೇಳಿದ್ದಾರೆ.

ಹಲವಾರು ಹಿಟ್ ಚಿತ್ರದ ಮೂಲಕ ಖ್ಯಾತಿ ಗಳಿಸಿರುವ ನಟ ಸಿದ್ಧಾರ್ಥ್, 2009 ರಲ್ಲಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ದೇಶದ ಸ್ಥಿಗತಿಗಳ ಬಗ್ಗೆ ಮಾತನಾಡಿದ್ದರು. ಭಾಷಣದಲ್ಲಿ ಆಂಧ್ರಪ್ರದೇಶದಲ್ಲಿ ಸಂಭವಿಸಿದ ಪ್ರವಾಹವನ್ನು ಅಲ್ಲಿನ ಮುಖ್ಯಮಂತ್ರಿ ನಿಭಾಯಿಸಿದ ರೀತಿ ಮತ್ತು 25/11 ಮುಂಬೈ ಭಯೋತ್ಪಾದಕ ದಾಳಿಯನ್ನು ಮಾಧ್ಯಮಗಳು ನಿಭಾಯಿಸಿದ್ದ ರೀತಿಯನ್ನು ಅವರು ಭಾಷಣದಲ್ಲಿ ಟೀಕಿಸಿದ್ದರು.

ಇದನ್ನೂ ಓದಿ: ಟ್ರ್ಯಾಕ್ಟರ್ ಪರೇಡ್‌ನಲ್ಲಿ ರೈತನ ಸಾವಿನ ಕುರಿತ ಟ್ವೀಟ್: ‘ವೈರ್’ನ ಸಿದ್ದಾರ್ಥ್ ವರದರಾಜನ್ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...