Homeಮುಖಪುಟನಮ್ಮ ಕರ್ನಾಟಕ ಅಮಾನವೀಯ ನಾಡಾಗುವುದು ಸರಿಯೇ?

ನಮ್ಮ ಕರ್ನಾಟಕ ಅಮಾನವೀಯ ನಾಡಾಗುವುದು ಸರಿಯೇ?

ಸೋಂಕಿನಿಂದ ಸಾಯುವವರು ಶೇ.2-3 ಇರಬಹುದು. ಹಸಿವಿನಿಂದ ಅವಮಾನದಿಂದ ಸಾಯುವವರ ಪ್ರಮಾಣ ಶೇ.10 ಆಗಿಬಿಟ್ಟರೆ ಅದನ್ನು ಮನುಷ್ಯ ಸಮಾಜವೆನ್ನಲಾಗದು.

- Advertisement -
- Advertisement -

ಬಹಳ ಹಿಂದೆ ಬೆಂಗಳೂರಿನಲ್ಲಿ ತಮಿಳು ವಿರೋಧಿ ಭಾವನೆ ಒಂದಷ್ಟು ಜನರಲ್ಲಿ ಗಾಢವಾಗಿಯೇ ಇತ್ತು. ಆಗಾಗ ಅದು ಬಡತಮಿಳರ ವಿರುದ್ಧ ತಿರುಗಿಬಿಡುತ್ತಿತ್ತು. ಯಾವುದೋ ಒಂದು ರೀತಿಯಲ್ಲಿ ದಕ್ಷಿಣ ಭಾರತದ ಆರ್ಥಿಕತೆ, ಕೇಂದ್ರ ಸರ್ಕಾರೀ ಕಚೇರಿಗಳು ಮತ್ತು ಸಾರ್ವಜನಿಕ ವಲಯದ ಕಂಪೆನಿಗಳು ಹಾಗೂ ಚಿತ್ರರಂಗದಲ್ಲಿದ್ದ ತಮಿಳುನಾಡಿನ ಯಜಮಾನಿಕೆಯ ವಿರುದ್ಧದ ಸಿಟ್ಟೂ ಅದರಲ್ಲಿ ವ್ಯಕ್ತವಾಗುತ್ತಿತ್ತು. ಆದರೆ, ಅದು ಕೆಲವೊಮ್ಮೆ ಅತಾರ್ತಿಕವಾಗುತ್ತಿತ್ತು ಮತ್ತು ಕರ್ನಾಟಕದ ಅಸಲೀ ಶೋಷಕರನ್ನು ಗುರುತಿಸುವುದನ್ನು ತಪ್ಪಿಸಲೆಂದೂ ಬಳಕೆಯಾಗುತ್ತಿತ್ತು.

ಬೆಂಗಳೂರೆಂಬುದು ಕರ್ನಾಟಕದ ಎಷ್ಟೋ ಭಾಗಗಳಿಗಿಂತ ತಮಿಳುನಾಡು ಮತ್ತು ಆಂಧ್ರದ ಕೆಲವು ಜಿಲ್ಲೆಗಳಿಗೆ ಭೌಗೋಳಿಕವಾಗಿ ಹತ್ತಿರವಿದೆ. ಹಾಗಾಗಿಯೇ ಬೆಂಗಳೂರಿನಿಂದ ದೂರವಿದ್ದ ಉತ್ತರ ಕರ್ನಾಟಕದ ಬಡಜನರು ಮುಂಬಯಿ, ಗೋವಾಗಳಿಗೆ ವಲಸೆ ಹೋಗುತ್ತಿದ್ದರು. ಈ ಸಂಗತಿಯನ್ನು ಅರ್ಥ ಮಾಡಿಕೊಳ್ಳದೇ ಕೇವಲ ಭಾಷಿಕ ನೆಲೆಯಲ್ಲಿ ಇದನ್ನು ನೋಡುವುದರಿಂದ ಆಗುತ್ತಿದ್ದ ಎಡವಟ್ಟುಗಳು ಸಾವು ನೋವುಗಳಿಗೂ ಕಾರಣವಾಗಿದ್ದಿದೆ. ಕಾವೇರಿ ವಿವಾದವು ತೀವ್ರಗೊಂಡ ಒಂದು ಸಂದರ್ಭದಲ್ಲಿ ಇದು ಸಾವಿರಾರು ತಮಿಳು ಭಾಷಿಕರು ಕರ್ನಾಟಕವನ್ನು ತೊರೆಯುವಂತೆಯೂ ಮಾಡಿತ್ತು.

ಆದರೆ, ಈ ಸಾರಿ ನಡೆಯುತ್ತಿರುವುದು ಬೇರೆ. ಕರ್ನಾಟಕದಲ್ಲಿ ದುಡಿಯುತ್ತಿದ್ದ ಉತ್ತರ ಮತ್ತು ಪೂರ್ವ ಭಾರತದ ಬಡವರು ಬೆಂಗಳೂರು ಬಿಟ್ಟು ಹೋಗಬಾರದೆಂದು ಸರ್ಕಾರವೇ ದೊಡ್ಡ ರಿಯಲ್ ಎಸ್ಟೇಟ್ ಕುಳಗಳ ಪರವಾಗಿ ಸಂಚು ನಡೆಸಿತು. ಲಾಕ್‌ಡೌನ್ ಸಡಿಲಿಸಿ ಉತ್ತರ ಕರ್ನಾಟಕದ ಕಾರ್ಮಿಕರನ್ನು ಕಳಿಸಿಕೊಟ್ಟ ಸರ್ಕಾರವು, ಉತ್ತರ ಭಾರತೀಯರಿಗಾಗಿ ಬುಕ್ ಮಾಡಿದ್ದ ರೈಲನ್ನು ರದ್ದುಗೊಳಿಸಿ ಅವರನ್ನು ಇಲ್ಲೇ ಕೂಡಿ ಹಾಕಲು ಯೋಜಿಸಿತು. ಇದನ್ನು ಬರೆಯುವ ಹೊತ್ತಿಗೆ ಮತ್ತೆ ರೈಲು ಶುರು ಮಾಡುವ ಕುರಿತ ಸುದ್ದಿ ಬಂದಿದೆ.

ಇದೇ ವಿಚಾರವನ್ನು ಕೇರಳ ನಿಭಾಯಿಸಿದ ರೀತಿಯನ್ನೊಮ್ಮೆ ಇದರ ಜೊತೆಗೆ ಹೋಲಿಸಿ ನೋಡಬೇಕು. ವಲಸೆ ಕಾರ್ಮಿಕರನ್ನು ಅತಿಥಿ ಕಾರ್ಮಿಕರು ಎಂದು ಅಲ್ಲಿನ ರಾಜ್ಯ ಸರ್ಕಾರವು ಕರೆಯಲು ಅಲ್ಲಿ ಕಮ್ಯುನಿಸ್ಟ್ ಪಕ್ಷದ ಆಡಳಿತವಿರುವುದು ಒಂದು ಕಾರಣ. ಎರಡನೆಯ ಕಾರಣ, ಕೇರಳದಿಂದ ಪ್ರಪಂಚದ ಬೇರೆ ಬೇರೆ ಭಾಗಗಳಿಗೆ ಬದುಕನ್ನು ಉತ್ತಮಪಡಿಸಿಕೊಳ್ಳಲು ಲಕ್ಷಾಂತರ ಜನರು ವಲಸೆ ಹೋಗಿದ್ದು, ವಲಸೆಯನ್ನು ನಿರಾಕರಿಸುವ ಸ್ಥಿತಿಯಲ್ಲಿ ಅವರಿಲ್ಲ. ಮೂರನೆಯದಾಗಿ ಸ್ಥಳೀಯವಾಗಿ ಕಷ್ಟದ ಕೆಲಸಗಳನ್ನು ಮಾಡುವ ಜನರು ಕಡಿಮೆಯಾಗಿದ್ದು ಅಲ್ಲಿನ ಯಂತ್ರವು ನಡೆಯಲು ಇನ್ನಷ್ಟು ಬಡಜನರ ಅಗತ್ಯ ಅವರಿಗಿದೆ. ಅದೇನೇ ಇದ್ದರೂ, ವಲಸೆ ಕಾರ್ಮಿಕರನ್ನು ಕೇರಳವು ಅತ್ಯುತ್ತಮವಾಗಿ ನಡೆಸಿಕೊಂಡಿತು. ದೇಶದಲ್ಲಿದ್ದ ಒಟ್ಟೂ ವಲಸೆ ಕಾರ್ಮಿಕರ ಕೇಂದ್ರಗಳ ಪೈಕಿ ಶೇ.60ಕ್ಕೂ ಹೆಚ್ಚು ಶಿಬಿರಗಳನ್ನು ಅಲ್ಲೊಂದೇ ಕಡೆ ತೆರೆಯಲಾಗಿತ್ತು. ಆ ಶಿಬಿರಗಳಲ್ಲಿ ಉತ್ತಮ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.

ಎಲ್ಲಕ್ಕಿಂತ ಮುಖ್ಯವಾಗಿ, ಆ ಕಾರ್ಮಿಕರು ವಾಪಸ್ಸು ತೆರಳುವ ಸಂದರ್ಭ ಬಂದಾಗ ಅತ್ಯಂತ ಗೌರವಯುತವಾಗಿ ಬೀಳ್ಕೊಟ್ಟರು. ಹೋಗುವವರಿಗೆ ಉಚಿತ ಬಸ್ಸು, ರೈಲು ವ್ಯವಸ್ಥೆ ಮಾಡಿ ತಲಾ ಒಂದು ರೇಷನ್ ಕಿಟ್ ಸಹಾ ಕೊಟ್ಟು ಕಳಿಸಿದರು. ಅಂದರೆ ಹೋದವರಿಗೆ ಮತ್ತೆ ವಾಪಸ್ಸು ಬರಬೇಕು ಎನ್ನಿಸುವ ಹಾಗೆ. ಕರ್ನಾಟಕದ ಸರ್ಕಾರವು ನಡೆದುಕೊಂಡ ರೀತಿ ಹೇಗಿತ್ತೆಂದರೆ, ಇಲ್ಲಿದ್ದವರು ನಡೆದುಕೊಂಡು ವಾಪಸ್ಸು ಹೋಗಿಬಿಡಲೇಬೇಕು ಮತ್ತು ಈ ಕಡೆಗೆ ಎಂದಿಗೂ ತಿರುಗಿನೋಡಬಾರದು, ಆ ರೀತಿ.

ಆ ನಂತರ ಹೊರಬಂದ ಸಂಗತಿಗಳು ಇನ್ನೂ ಭೀಕರವಾಗಿದ್ದವು. ಮೈಸೂರಿನಲ್ಲಿ ಕೂಡಿಹಾಕಲ್ಪಟ್ಟಿದ್ದ ಕಾರ್ಮಿಕರು, ದೇವನಹಳ್ಳಿ, ಗುಬ್ಬಿಗಳಲ್ಲಿ ಇದ್ದ ಶೆಡ್ಡುಗಳಿಂದಲೂ ಹೊರದಬ್ಬಲು ಪ್ರಯತ್ನಿಸುತ್ತಿದ್ದ ಗುತ್ತಿಗೆದಾರರು, ಮಗುವಿಗೆ ನೀಡಲು ಎದೆಹಾಲೂ ಇಲ್ಲದೇ ಕಂಗೆಟ್ಟಿದ್ದ ಕಾರ್ಮಿಕ ಮಹಿಳೆಯರು – ಇದು ನಮ್ಮದೇ ರಾಜ್ಯದಲ್ಲಿ ನಡೆಯಿತೆಂಬುದಕ್ಕೆ ನಾವು ಅವಮಾನದಿಂದ ತಲೆ ತಗ್ಗಿಸುವಂತಹ ಘಟನೆಗಳು. ಸೋಂಕಿನಿಂದ ಸಾಯುವವರು ಶೇ.2-3 ಇರಬಹುದು. ಹಸಿವಿನಿಂದ ಅವಮಾನದಿಂದ ಸಾಯುವವರ ಪ್ರಮಾಣ ಶೇ.10 ಆಗಿಬಿಟ್ಟರೆ ಅದನ್ನು ಮನುಷ್ಯ ಸಮಾಜವೆನ್ನಲಾಗದು. ಅಂತಹ ಸ್ಥಿತಿ ಏಕೆ ಬಂದಿತೆಂಬುದನ್ನು ಲಾಕ್‌ಡೌನ್ ಹೇರಿದ ತಕ್ಷಣ ಎಲ್ಲ ಬಗೆಯ ಪರ್ಯಾಯ ವ್ಯವಸ್ಥೆಗೆ ಅವಕಾಶ ಮಾಡಿಕೊಡಬೇಕಿದ್ದ ಕೇಂದ್ರ ಸರ್ಕಾರವೂ ಮತ್ತು ಕರ್ನಾಟಕದಲ್ಲಿ ತಳಮಟ್ಟದಲ್ಲಿ ಕೆಲಸ ಮಾಡಬೇಕಿದ್ದ ರಾಜ್ಯ ಸರ್ಕಾರವೂ ಯೋಚಿಸಬೇಕು. ವಿಮಾನಗಳಲ್ಲಿ ಓಡಾಡುವವರು ತಂದಿದ್ದ ರೋಗದ ಕಾರಣಕ್ಕೆ ಹೇರಿದ್ದ ಲಾಕ್‌ಡೌನ್‌ನಿಂದ ಹಸಿದು ಕಂಗೆಟ್ಟಿದ್ದ ಕಾರ್ಮಿಕರಿಗೆ ಕಳಿಸಿಕೊಡುವ ಬಸ್ಸುಗಳಿಗೆ ಮೂರು ಪಟ್ಟು ದರ ನಿಗದಿ ಮಾಡುವಷ್ಟು ಹೀನ ಸ್ಥಿತಿಯಲ್ಲಿ ಈ ರಾಜ್ಯದ ಸರ್ಕಾರವಿದೆ.

ಇನ್ನು ಕೇಂದ್ರದ ವಿಚಾರಕ್ಕೆ ಬರುವುದಾದರೆ, ಪಿಎಂ ಕೇರ್ಸ್ ಎಂಬ ನಿಧಿಗೆ 150 ಕೋಟಿ ಕೊಟ್ಟಿದ್ದ ರೈಲ್ವೇ ಇಲಾಖೆಯು 60 ಕೋಟಿ ವೆಚ್ಚ ಮಾಡಿ ಕಾರ್ಮಿಕರನ್ನು ಕಳಿಸಿಕೊಡಲು ಮುಂದಾಗಲಿಲ್ಲ. ಅಂದರೆ ಅಲ್ಲಿನ ಮೇಲ್ಪಂಕ್ತಿಯೇ ಎಲ್ಲರಿಗೂ ಮಾದರಿಯಾಗಿದೆ. ‘ಎಲ್ಲರ ಒಳಿತಿನ ದೃಷ್ಟಿಯಿಂದಲೇ’ ಹೇರಲಾದ ಲಾಕ್‌ಡೌನ್ ಇದಿರಬಹುದಾದರೂ, ಅದರಲ್ಲಿ ಈ ಜನರ ತಪ್ಪೇನೂ ಇರಲಿಲ್ಲ ಎಂಬುದೂ ಕಾಣದಷ್ಟು ಕಣ್ಣುಗಳು ಇಂಗಿ ಹೋಗಿದ್ದವೇ? ಎಲ್ಲ ಸಿದ್ಧಾಂತಗಳಾಚೆ ಕನಿಷ್ಠ ಮಾನವೀಯತೆ ನಾಗರಿಕವೆನಿಸಿಕೊಳ್ಳುವ ಸರ್ಕಾರಗಳಿಗೆ ಇರಬೇಕಿತ್ತಲ್ಲವೇ? ಅಥವಾ ಸಿದ್ಧಾಂತದ ಕಾರಣಕ್ಕೇ ಈ ಸರ್ಕಾರಗಳು ಹೀಗೆ ನಡೆದುಕೊಳ್ಳುತ್ತಿವೆಯೇ?

ಈ ಬರಹ ಶುರುವಾದ ಕಡೆಗೆ ಮತ್ತೆ ಬರುವುದಾದರೆ, ಇಂದು ವಲಸೆ ಬೇಡ ಎಂದು ಹೇಳುವ ಸ್ಥಿತಿಯಲ್ಲಿ ಯಾವ ರಾಜ್ಯವೂ, ದೇಶವೂ ಇಲ್ಲ. ಕೆಲವೆಡೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಮಾಡಲಾಗದೇ ಬೇರೆ ಕಡೆಗೆ ಹೋದರೆ ಸಾಕು ಎಂಬ ಪರಿಸ್ಥಿತಿಯಿದ್ದರೆ, ಇನ್ನು ಕೆಲವೆಡೆ ಸ್ಥಳೀಯ ಜನರು ಹಲವು ರೀತಿಯ ದೈಹಿಕ ಶ್ರಮದ ಕೆಲಸಗಳನ್ನು ಮಾಡುವ ಮನಸ್ಥಿತಿಯಲ್ಲಿಲ್ಲ. ಹಾಗಿಲ್ಲದೇ ಹೋಗಿದ್ದರೆ ಬಿಲ್ಡರ್‌ಗಳು ಸರ್ಕಾರದ ಬಳಿ ಹೋಗಿ, ಕಾರ್ಮಿಕರನ್ನು ‘ಹೇಗಾದರೂ ಮಾಡಿ’ ಇಲ್ಲಿಯೇ ಉಳಿಸಿ ಎಂದು ಒತ್ತಡ ಹಾಕುತ್ತಿರಲಿಲ್ಲ. ಹಾಗಾಗಿ ಇನ್ನೂ ಭಿನ್ನ ರೀತಿಯಲ್ಲಿ ಈ ವಿದ್ಯಮಾನವನ್ನು ನೋಡುವ ಅಗತ್ಯವನ್ನು ನಾವೆಲ್ಲರೂ ಮನಗಾಣಬೇಕಿದೆ.


ಇದನ್ನೂ ಓದಿ: ಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...