Homeಮುಖಪುಟನಮ್ಮ ಕರ್ನಾಟಕ ಅಮಾನವೀಯ ನಾಡಾಗುವುದು ಸರಿಯೇ?

ನಮ್ಮ ಕರ್ನಾಟಕ ಅಮಾನವೀಯ ನಾಡಾಗುವುದು ಸರಿಯೇ?

ಸೋಂಕಿನಿಂದ ಸಾಯುವವರು ಶೇ.2-3 ಇರಬಹುದು. ಹಸಿವಿನಿಂದ ಅವಮಾನದಿಂದ ಸಾಯುವವರ ಪ್ರಮಾಣ ಶೇ.10 ಆಗಿಬಿಟ್ಟರೆ ಅದನ್ನು ಮನುಷ್ಯ ಸಮಾಜವೆನ್ನಲಾಗದು.

- Advertisement -
- Advertisement -

ಬಹಳ ಹಿಂದೆ ಬೆಂಗಳೂರಿನಲ್ಲಿ ತಮಿಳು ವಿರೋಧಿ ಭಾವನೆ ಒಂದಷ್ಟು ಜನರಲ್ಲಿ ಗಾಢವಾಗಿಯೇ ಇತ್ತು. ಆಗಾಗ ಅದು ಬಡತಮಿಳರ ವಿರುದ್ಧ ತಿರುಗಿಬಿಡುತ್ತಿತ್ತು. ಯಾವುದೋ ಒಂದು ರೀತಿಯಲ್ಲಿ ದಕ್ಷಿಣ ಭಾರತದ ಆರ್ಥಿಕತೆ, ಕೇಂದ್ರ ಸರ್ಕಾರೀ ಕಚೇರಿಗಳು ಮತ್ತು ಸಾರ್ವಜನಿಕ ವಲಯದ ಕಂಪೆನಿಗಳು ಹಾಗೂ ಚಿತ್ರರಂಗದಲ್ಲಿದ್ದ ತಮಿಳುನಾಡಿನ ಯಜಮಾನಿಕೆಯ ವಿರುದ್ಧದ ಸಿಟ್ಟೂ ಅದರಲ್ಲಿ ವ್ಯಕ್ತವಾಗುತ್ತಿತ್ತು. ಆದರೆ, ಅದು ಕೆಲವೊಮ್ಮೆ ಅತಾರ್ತಿಕವಾಗುತ್ತಿತ್ತು ಮತ್ತು ಕರ್ನಾಟಕದ ಅಸಲೀ ಶೋಷಕರನ್ನು ಗುರುತಿಸುವುದನ್ನು ತಪ್ಪಿಸಲೆಂದೂ ಬಳಕೆಯಾಗುತ್ತಿತ್ತು.

ಬೆಂಗಳೂರೆಂಬುದು ಕರ್ನಾಟಕದ ಎಷ್ಟೋ ಭಾಗಗಳಿಗಿಂತ ತಮಿಳುನಾಡು ಮತ್ತು ಆಂಧ್ರದ ಕೆಲವು ಜಿಲ್ಲೆಗಳಿಗೆ ಭೌಗೋಳಿಕವಾಗಿ ಹತ್ತಿರವಿದೆ. ಹಾಗಾಗಿಯೇ ಬೆಂಗಳೂರಿನಿಂದ ದೂರವಿದ್ದ ಉತ್ತರ ಕರ್ನಾಟಕದ ಬಡಜನರು ಮುಂಬಯಿ, ಗೋವಾಗಳಿಗೆ ವಲಸೆ ಹೋಗುತ್ತಿದ್ದರು. ಈ ಸಂಗತಿಯನ್ನು ಅರ್ಥ ಮಾಡಿಕೊಳ್ಳದೇ ಕೇವಲ ಭಾಷಿಕ ನೆಲೆಯಲ್ಲಿ ಇದನ್ನು ನೋಡುವುದರಿಂದ ಆಗುತ್ತಿದ್ದ ಎಡವಟ್ಟುಗಳು ಸಾವು ನೋವುಗಳಿಗೂ ಕಾರಣವಾಗಿದ್ದಿದೆ. ಕಾವೇರಿ ವಿವಾದವು ತೀವ್ರಗೊಂಡ ಒಂದು ಸಂದರ್ಭದಲ್ಲಿ ಇದು ಸಾವಿರಾರು ತಮಿಳು ಭಾಷಿಕರು ಕರ್ನಾಟಕವನ್ನು ತೊರೆಯುವಂತೆಯೂ ಮಾಡಿತ್ತು.

ಆದರೆ, ಈ ಸಾರಿ ನಡೆಯುತ್ತಿರುವುದು ಬೇರೆ. ಕರ್ನಾಟಕದಲ್ಲಿ ದುಡಿಯುತ್ತಿದ್ದ ಉತ್ತರ ಮತ್ತು ಪೂರ್ವ ಭಾರತದ ಬಡವರು ಬೆಂಗಳೂರು ಬಿಟ್ಟು ಹೋಗಬಾರದೆಂದು ಸರ್ಕಾರವೇ ದೊಡ್ಡ ರಿಯಲ್ ಎಸ್ಟೇಟ್ ಕುಳಗಳ ಪರವಾಗಿ ಸಂಚು ನಡೆಸಿತು. ಲಾಕ್‌ಡೌನ್ ಸಡಿಲಿಸಿ ಉತ್ತರ ಕರ್ನಾಟಕದ ಕಾರ್ಮಿಕರನ್ನು ಕಳಿಸಿಕೊಟ್ಟ ಸರ್ಕಾರವು, ಉತ್ತರ ಭಾರತೀಯರಿಗಾಗಿ ಬುಕ್ ಮಾಡಿದ್ದ ರೈಲನ್ನು ರದ್ದುಗೊಳಿಸಿ ಅವರನ್ನು ಇಲ್ಲೇ ಕೂಡಿ ಹಾಕಲು ಯೋಜಿಸಿತು. ಇದನ್ನು ಬರೆಯುವ ಹೊತ್ತಿಗೆ ಮತ್ತೆ ರೈಲು ಶುರು ಮಾಡುವ ಕುರಿತ ಸುದ್ದಿ ಬಂದಿದೆ.

ಇದೇ ವಿಚಾರವನ್ನು ಕೇರಳ ನಿಭಾಯಿಸಿದ ರೀತಿಯನ್ನೊಮ್ಮೆ ಇದರ ಜೊತೆಗೆ ಹೋಲಿಸಿ ನೋಡಬೇಕು. ವಲಸೆ ಕಾರ್ಮಿಕರನ್ನು ಅತಿಥಿ ಕಾರ್ಮಿಕರು ಎಂದು ಅಲ್ಲಿನ ರಾಜ್ಯ ಸರ್ಕಾರವು ಕರೆಯಲು ಅಲ್ಲಿ ಕಮ್ಯುನಿಸ್ಟ್ ಪಕ್ಷದ ಆಡಳಿತವಿರುವುದು ಒಂದು ಕಾರಣ. ಎರಡನೆಯ ಕಾರಣ, ಕೇರಳದಿಂದ ಪ್ರಪಂಚದ ಬೇರೆ ಬೇರೆ ಭಾಗಗಳಿಗೆ ಬದುಕನ್ನು ಉತ್ತಮಪಡಿಸಿಕೊಳ್ಳಲು ಲಕ್ಷಾಂತರ ಜನರು ವಲಸೆ ಹೋಗಿದ್ದು, ವಲಸೆಯನ್ನು ನಿರಾಕರಿಸುವ ಸ್ಥಿತಿಯಲ್ಲಿ ಅವರಿಲ್ಲ. ಮೂರನೆಯದಾಗಿ ಸ್ಥಳೀಯವಾಗಿ ಕಷ್ಟದ ಕೆಲಸಗಳನ್ನು ಮಾಡುವ ಜನರು ಕಡಿಮೆಯಾಗಿದ್ದು ಅಲ್ಲಿನ ಯಂತ್ರವು ನಡೆಯಲು ಇನ್ನಷ್ಟು ಬಡಜನರ ಅಗತ್ಯ ಅವರಿಗಿದೆ. ಅದೇನೇ ಇದ್ದರೂ, ವಲಸೆ ಕಾರ್ಮಿಕರನ್ನು ಕೇರಳವು ಅತ್ಯುತ್ತಮವಾಗಿ ನಡೆಸಿಕೊಂಡಿತು. ದೇಶದಲ್ಲಿದ್ದ ಒಟ್ಟೂ ವಲಸೆ ಕಾರ್ಮಿಕರ ಕೇಂದ್ರಗಳ ಪೈಕಿ ಶೇ.60ಕ್ಕೂ ಹೆಚ್ಚು ಶಿಬಿರಗಳನ್ನು ಅಲ್ಲೊಂದೇ ಕಡೆ ತೆರೆಯಲಾಗಿತ್ತು. ಆ ಶಿಬಿರಗಳಲ್ಲಿ ಉತ್ತಮ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.

ಎಲ್ಲಕ್ಕಿಂತ ಮುಖ್ಯವಾಗಿ, ಆ ಕಾರ್ಮಿಕರು ವಾಪಸ್ಸು ತೆರಳುವ ಸಂದರ್ಭ ಬಂದಾಗ ಅತ್ಯಂತ ಗೌರವಯುತವಾಗಿ ಬೀಳ್ಕೊಟ್ಟರು. ಹೋಗುವವರಿಗೆ ಉಚಿತ ಬಸ್ಸು, ರೈಲು ವ್ಯವಸ್ಥೆ ಮಾಡಿ ತಲಾ ಒಂದು ರೇಷನ್ ಕಿಟ್ ಸಹಾ ಕೊಟ್ಟು ಕಳಿಸಿದರು. ಅಂದರೆ ಹೋದವರಿಗೆ ಮತ್ತೆ ವಾಪಸ್ಸು ಬರಬೇಕು ಎನ್ನಿಸುವ ಹಾಗೆ. ಕರ್ನಾಟಕದ ಸರ್ಕಾರವು ನಡೆದುಕೊಂಡ ರೀತಿ ಹೇಗಿತ್ತೆಂದರೆ, ಇಲ್ಲಿದ್ದವರು ನಡೆದುಕೊಂಡು ವಾಪಸ್ಸು ಹೋಗಿಬಿಡಲೇಬೇಕು ಮತ್ತು ಈ ಕಡೆಗೆ ಎಂದಿಗೂ ತಿರುಗಿನೋಡಬಾರದು, ಆ ರೀತಿ.

ಆ ನಂತರ ಹೊರಬಂದ ಸಂಗತಿಗಳು ಇನ್ನೂ ಭೀಕರವಾಗಿದ್ದವು. ಮೈಸೂರಿನಲ್ಲಿ ಕೂಡಿಹಾಕಲ್ಪಟ್ಟಿದ್ದ ಕಾರ್ಮಿಕರು, ದೇವನಹಳ್ಳಿ, ಗುಬ್ಬಿಗಳಲ್ಲಿ ಇದ್ದ ಶೆಡ್ಡುಗಳಿಂದಲೂ ಹೊರದಬ್ಬಲು ಪ್ರಯತ್ನಿಸುತ್ತಿದ್ದ ಗುತ್ತಿಗೆದಾರರು, ಮಗುವಿಗೆ ನೀಡಲು ಎದೆಹಾಲೂ ಇಲ್ಲದೇ ಕಂಗೆಟ್ಟಿದ್ದ ಕಾರ್ಮಿಕ ಮಹಿಳೆಯರು – ಇದು ನಮ್ಮದೇ ರಾಜ್ಯದಲ್ಲಿ ನಡೆಯಿತೆಂಬುದಕ್ಕೆ ನಾವು ಅವಮಾನದಿಂದ ತಲೆ ತಗ್ಗಿಸುವಂತಹ ಘಟನೆಗಳು. ಸೋಂಕಿನಿಂದ ಸಾಯುವವರು ಶೇ.2-3 ಇರಬಹುದು. ಹಸಿವಿನಿಂದ ಅವಮಾನದಿಂದ ಸಾಯುವವರ ಪ್ರಮಾಣ ಶೇ.10 ಆಗಿಬಿಟ್ಟರೆ ಅದನ್ನು ಮನುಷ್ಯ ಸಮಾಜವೆನ್ನಲಾಗದು. ಅಂತಹ ಸ್ಥಿತಿ ಏಕೆ ಬಂದಿತೆಂಬುದನ್ನು ಲಾಕ್‌ಡೌನ್ ಹೇರಿದ ತಕ್ಷಣ ಎಲ್ಲ ಬಗೆಯ ಪರ್ಯಾಯ ವ್ಯವಸ್ಥೆಗೆ ಅವಕಾಶ ಮಾಡಿಕೊಡಬೇಕಿದ್ದ ಕೇಂದ್ರ ಸರ್ಕಾರವೂ ಮತ್ತು ಕರ್ನಾಟಕದಲ್ಲಿ ತಳಮಟ್ಟದಲ್ಲಿ ಕೆಲಸ ಮಾಡಬೇಕಿದ್ದ ರಾಜ್ಯ ಸರ್ಕಾರವೂ ಯೋಚಿಸಬೇಕು. ವಿಮಾನಗಳಲ್ಲಿ ಓಡಾಡುವವರು ತಂದಿದ್ದ ರೋಗದ ಕಾರಣಕ್ಕೆ ಹೇರಿದ್ದ ಲಾಕ್‌ಡೌನ್‌ನಿಂದ ಹಸಿದು ಕಂಗೆಟ್ಟಿದ್ದ ಕಾರ್ಮಿಕರಿಗೆ ಕಳಿಸಿಕೊಡುವ ಬಸ್ಸುಗಳಿಗೆ ಮೂರು ಪಟ್ಟು ದರ ನಿಗದಿ ಮಾಡುವಷ್ಟು ಹೀನ ಸ್ಥಿತಿಯಲ್ಲಿ ಈ ರಾಜ್ಯದ ಸರ್ಕಾರವಿದೆ.

ಇನ್ನು ಕೇಂದ್ರದ ವಿಚಾರಕ್ಕೆ ಬರುವುದಾದರೆ, ಪಿಎಂ ಕೇರ್ಸ್ ಎಂಬ ನಿಧಿಗೆ 150 ಕೋಟಿ ಕೊಟ್ಟಿದ್ದ ರೈಲ್ವೇ ಇಲಾಖೆಯು 60 ಕೋಟಿ ವೆಚ್ಚ ಮಾಡಿ ಕಾರ್ಮಿಕರನ್ನು ಕಳಿಸಿಕೊಡಲು ಮುಂದಾಗಲಿಲ್ಲ. ಅಂದರೆ ಅಲ್ಲಿನ ಮೇಲ್ಪಂಕ್ತಿಯೇ ಎಲ್ಲರಿಗೂ ಮಾದರಿಯಾಗಿದೆ. ‘ಎಲ್ಲರ ಒಳಿತಿನ ದೃಷ್ಟಿಯಿಂದಲೇ’ ಹೇರಲಾದ ಲಾಕ್‌ಡೌನ್ ಇದಿರಬಹುದಾದರೂ, ಅದರಲ್ಲಿ ಈ ಜನರ ತಪ್ಪೇನೂ ಇರಲಿಲ್ಲ ಎಂಬುದೂ ಕಾಣದಷ್ಟು ಕಣ್ಣುಗಳು ಇಂಗಿ ಹೋಗಿದ್ದವೇ? ಎಲ್ಲ ಸಿದ್ಧಾಂತಗಳಾಚೆ ಕನಿಷ್ಠ ಮಾನವೀಯತೆ ನಾಗರಿಕವೆನಿಸಿಕೊಳ್ಳುವ ಸರ್ಕಾರಗಳಿಗೆ ಇರಬೇಕಿತ್ತಲ್ಲವೇ? ಅಥವಾ ಸಿದ್ಧಾಂತದ ಕಾರಣಕ್ಕೇ ಈ ಸರ್ಕಾರಗಳು ಹೀಗೆ ನಡೆದುಕೊಳ್ಳುತ್ತಿವೆಯೇ?

ಈ ಬರಹ ಶುರುವಾದ ಕಡೆಗೆ ಮತ್ತೆ ಬರುವುದಾದರೆ, ಇಂದು ವಲಸೆ ಬೇಡ ಎಂದು ಹೇಳುವ ಸ್ಥಿತಿಯಲ್ಲಿ ಯಾವ ರಾಜ್ಯವೂ, ದೇಶವೂ ಇಲ್ಲ. ಕೆಲವೆಡೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಮಾಡಲಾಗದೇ ಬೇರೆ ಕಡೆಗೆ ಹೋದರೆ ಸಾಕು ಎಂಬ ಪರಿಸ್ಥಿತಿಯಿದ್ದರೆ, ಇನ್ನು ಕೆಲವೆಡೆ ಸ್ಥಳೀಯ ಜನರು ಹಲವು ರೀತಿಯ ದೈಹಿಕ ಶ್ರಮದ ಕೆಲಸಗಳನ್ನು ಮಾಡುವ ಮನಸ್ಥಿತಿಯಲ್ಲಿಲ್ಲ. ಹಾಗಿಲ್ಲದೇ ಹೋಗಿದ್ದರೆ ಬಿಲ್ಡರ್‌ಗಳು ಸರ್ಕಾರದ ಬಳಿ ಹೋಗಿ, ಕಾರ್ಮಿಕರನ್ನು ‘ಹೇಗಾದರೂ ಮಾಡಿ’ ಇಲ್ಲಿಯೇ ಉಳಿಸಿ ಎಂದು ಒತ್ತಡ ಹಾಕುತ್ತಿರಲಿಲ್ಲ. ಹಾಗಾಗಿ ಇನ್ನೂ ಭಿನ್ನ ರೀತಿಯಲ್ಲಿ ಈ ವಿದ್ಯಮಾನವನ್ನು ನೋಡುವ ಅಗತ್ಯವನ್ನು ನಾವೆಲ್ಲರೂ ಮನಗಾಣಬೇಕಿದೆ.


ಇದನ್ನೂ ಓದಿ: ಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...