Homeಮುಖಪುಟನಮ್ಮ ಕರ್ನಾಟಕ ಅಮಾನವೀಯ ನಾಡಾಗುವುದು ಸರಿಯೇ?

ನಮ್ಮ ಕರ್ನಾಟಕ ಅಮಾನವೀಯ ನಾಡಾಗುವುದು ಸರಿಯೇ?

ಸೋಂಕಿನಿಂದ ಸಾಯುವವರು ಶೇ.2-3 ಇರಬಹುದು. ಹಸಿವಿನಿಂದ ಅವಮಾನದಿಂದ ಸಾಯುವವರ ಪ್ರಮಾಣ ಶೇ.10 ಆಗಿಬಿಟ್ಟರೆ ಅದನ್ನು ಮನುಷ್ಯ ಸಮಾಜವೆನ್ನಲಾಗದು.

- Advertisement -
- Advertisement -

ಬಹಳ ಹಿಂದೆ ಬೆಂಗಳೂರಿನಲ್ಲಿ ತಮಿಳು ವಿರೋಧಿ ಭಾವನೆ ಒಂದಷ್ಟು ಜನರಲ್ಲಿ ಗಾಢವಾಗಿಯೇ ಇತ್ತು. ಆಗಾಗ ಅದು ಬಡತಮಿಳರ ವಿರುದ್ಧ ತಿರುಗಿಬಿಡುತ್ತಿತ್ತು. ಯಾವುದೋ ಒಂದು ರೀತಿಯಲ್ಲಿ ದಕ್ಷಿಣ ಭಾರತದ ಆರ್ಥಿಕತೆ, ಕೇಂದ್ರ ಸರ್ಕಾರೀ ಕಚೇರಿಗಳು ಮತ್ತು ಸಾರ್ವಜನಿಕ ವಲಯದ ಕಂಪೆನಿಗಳು ಹಾಗೂ ಚಿತ್ರರಂಗದಲ್ಲಿದ್ದ ತಮಿಳುನಾಡಿನ ಯಜಮಾನಿಕೆಯ ವಿರುದ್ಧದ ಸಿಟ್ಟೂ ಅದರಲ್ಲಿ ವ್ಯಕ್ತವಾಗುತ್ತಿತ್ತು. ಆದರೆ, ಅದು ಕೆಲವೊಮ್ಮೆ ಅತಾರ್ತಿಕವಾಗುತ್ತಿತ್ತು ಮತ್ತು ಕರ್ನಾಟಕದ ಅಸಲೀ ಶೋಷಕರನ್ನು ಗುರುತಿಸುವುದನ್ನು ತಪ್ಪಿಸಲೆಂದೂ ಬಳಕೆಯಾಗುತ್ತಿತ್ತು.

ಬೆಂಗಳೂರೆಂಬುದು ಕರ್ನಾಟಕದ ಎಷ್ಟೋ ಭಾಗಗಳಿಗಿಂತ ತಮಿಳುನಾಡು ಮತ್ತು ಆಂಧ್ರದ ಕೆಲವು ಜಿಲ್ಲೆಗಳಿಗೆ ಭೌಗೋಳಿಕವಾಗಿ ಹತ್ತಿರವಿದೆ. ಹಾಗಾಗಿಯೇ ಬೆಂಗಳೂರಿನಿಂದ ದೂರವಿದ್ದ ಉತ್ತರ ಕರ್ನಾಟಕದ ಬಡಜನರು ಮುಂಬಯಿ, ಗೋವಾಗಳಿಗೆ ವಲಸೆ ಹೋಗುತ್ತಿದ್ದರು. ಈ ಸಂಗತಿಯನ್ನು ಅರ್ಥ ಮಾಡಿಕೊಳ್ಳದೇ ಕೇವಲ ಭಾಷಿಕ ನೆಲೆಯಲ್ಲಿ ಇದನ್ನು ನೋಡುವುದರಿಂದ ಆಗುತ್ತಿದ್ದ ಎಡವಟ್ಟುಗಳು ಸಾವು ನೋವುಗಳಿಗೂ ಕಾರಣವಾಗಿದ್ದಿದೆ. ಕಾವೇರಿ ವಿವಾದವು ತೀವ್ರಗೊಂಡ ಒಂದು ಸಂದರ್ಭದಲ್ಲಿ ಇದು ಸಾವಿರಾರು ತಮಿಳು ಭಾಷಿಕರು ಕರ್ನಾಟಕವನ್ನು ತೊರೆಯುವಂತೆಯೂ ಮಾಡಿತ್ತು.

ಆದರೆ, ಈ ಸಾರಿ ನಡೆಯುತ್ತಿರುವುದು ಬೇರೆ. ಕರ್ನಾಟಕದಲ್ಲಿ ದುಡಿಯುತ್ತಿದ್ದ ಉತ್ತರ ಮತ್ತು ಪೂರ್ವ ಭಾರತದ ಬಡವರು ಬೆಂಗಳೂರು ಬಿಟ್ಟು ಹೋಗಬಾರದೆಂದು ಸರ್ಕಾರವೇ ದೊಡ್ಡ ರಿಯಲ್ ಎಸ್ಟೇಟ್ ಕುಳಗಳ ಪರವಾಗಿ ಸಂಚು ನಡೆಸಿತು. ಲಾಕ್‌ಡೌನ್ ಸಡಿಲಿಸಿ ಉತ್ತರ ಕರ್ನಾಟಕದ ಕಾರ್ಮಿಕರನ್ನು ಕಳಿಸಿಕೊಟ್ಟ ಸರ್ಕಾರವು, ಉತ್ತರ ಭಾರತೀಯರಿಗಾಗಿ ಬುಕ್ ಮಾಡಿದ್ದ ರೈಲನ್ನು ರದ್ದುಗೊಳಿಸಿ ಅವರನ್ನು ಇಲ್ಲೇ ಕೂಡಿ ಹಾಕಲು ಯೋಜಿಸಿತು. ಇದನ್ನು ಬರೆಯುವ ಹೊತ್ತಿಗೆ ಮತ್ತೆ ರೈಲು ಶುರು ಮಾಡುವ ಕುರಿತ ಸುದ್ದಿ ಬಂದಿದೆ.

ಇದೇ ವಿಚಾರವನ್ನು ಕೇರಳ ನಿಭಾಯಿಸಿದ ರೀತಿಯನ್ನೊಮ್ಮೆ ಇದರ ಜೊತೆಗೆ ಹೋಲಿಸಿ ನೋಡಬೇಕು. ವಲಸೆ ಕಾರ್ಮಿಕರನ್ನು ಅತಿಥಿ ಕಾರ್ಮಿಕರು ಎಂದು ಅಲ್ಲಿನ ರಾಜ್ಯ ಸರ್ಕಾರವು ಕರೆಯಲು ಅಲ್ಲಿ ಕಮ್ಯುನಿಸ್ಟ್ ಪಕ್ಷದ ಆಡಳಿತವಿರುವುದು ಒಂದು ಕಾರಣ. ಎರಡನೆಯ ಕಾರಣ, ಕೇರಳದಿಂದ ಪ್ರಪಂಚದ ಬೇರೆ ಬೇರೆ ಭಾಗಗಳಿಗೆ ಬದುಕನ್ನು ಉತ್ತಮಪಡಿಸಿಕೊಳ್ಳಲು ಲಕ್ಷಾಂತರ ಜನರು ವಲಸೆ ಹೋಗಿದ್ದು, ವಲಸೆಯನ್ನು ನಿರಾಕರಿಸುವ ಸ್ಥಿತಿಯಲ್ಲಿ ಅವರಿಲ್ಲ. ಮೂರನೆಯದಾಗಿ ಸ್ಥಳೀಯವಾಗಿ ಕಷ್ಟದ ಕೆಲಸಗಳನ್ನು ಮಾಡುವ ಜನರು ಕಡಿಮೆಯಾಗಿದ್ದು ಅಲ್ಲಿನ ಯಂತ್ರವು ನಡೆಯಲು ಇನ್ನಷ್ಟು ಬಡಜನರ ಅಗತ್ಯ ಅವರಿಗಿದೆ. ಅದೇನೇ ಇದ್ದರೂ, ವಲಸೆ ಕಾರ್ಮಿಕರನ್ನು ಕೇರಳವು ಅತ್ಯುತ್ತಮವಾಗಿ ನಡೆಸಿಕೊಂಡಿತು. ದೇಶದಲ್ಲಿದ್ದ ಒಟ್ಟೂ ವಲಸೆ ಕಾರ್ಮಿಕರ ಕೇಂದ್ರಗಳ ಪೈಕಿ ಶೇ.60ಕ್ಕೂ ಹೆಚ್ಚು ಶಿಬಿರಗಳನ್ನು ಅಲ್ಲೊಂದೇ ಕಡೆ ತೆರೆಯಲಾಗಿತ್ತು. ಆ ಶಿಬಿರಗಳಲ್ಲಿ ಉತ್ತಮ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.

ಎಲ್ಲಕ್ಕಿಂತ ಮುಖ್ಯವಾಗಿ, ಆ ಕಾರ್ಮಿಕರು ವಾಪಸ್ಸು ತೆರಳುವ ಸಂದರ್ಭ ಬಂದಾಗ ಅತ್ಯಂತ ಗೌರವಯುತವಾಗಿ ಬೀಳ್ಕೊಟ್ಟರು. ಹೋಗುವವರಿಗೆ ಉಚಿತ ಬಸ್ಸು, ರೈಲು ವ್ಯವಸ್ಥೆ ಮಾಡಿ ತಲಾ ಒಂದು ರೇಷನ್ ಕಿಟ್ ಸಹಾ ಕೊಟ್ಟು ಕಳಿಸಿದರು. ಅಂದರೆ ಹೋದವರಿಗೆ ಮತ್ತೆ ವಾಪಸ್ಸು ಬರಬೇಕು ಎನ್ನಿಸುವ ಹಾಗೆ. ಕರ್ನಾಟಕದ ಸರ್ಕಾರವು ನಡೆದುಕೊಂಡ ರೀತಿ ಹೇಗಿತ್ತೆಂದರೆ, ಇಲ್ಲಿದ್ದವರು ನಡೆದುಕೊಂಡು ವಾಪಸ್ಸು ಹೋಗಿಬಿಡಲೇಬೇಕು ಮತ್ತು ಈ ಕಡೆಗೆ ಎಂದಿಗೂ ತಿರುಗಿನೋಡಬಾರದು, ಆ ರೀತಿ.

ಆ ನಂತರ ಹೊರಬಂದ ಸಂಗತಿಗಳು ಇನ್ನೂ ಭೀಕರವಾಗಿದ್ದವು. ಮೈಸೂರಿನಲ್ಲಿ ಕೂಡಿಹಾಕಲ್ಪಟ್ಟಿದ್ದ ಕಾರ್ಮಿಕರು, ದೇವನಹಳ್ಳಿ, ಗುಬ್ಬಿಗಳಲ್ಲಿ ಇದ್ದ ಶೆಡ್ಡುಗಳಿಂದಲೂ ಹೊರದಬ್ಬಲು ಪ್ರಯತ್ನಿಸುತ್ತಿದ್ದ ಗುತ್ತಿಗೆದಾರರು, ಮಗುವಿಗೆ ನೀಡಲು ಎದೆಹಾಲೂ ಇಲ್ಲದೇ ಕಂಗೆಟ್ಟಿದ್ದ ಕಾರ್ಮಿಕ ಮಹಿಳೆಯರು – ಇದು ನಮ್ಮದೇ ರಾಜ್ಯದಲ್ಲಿ ನಡೆಯಿತೆಂಬುದಕ್ಕೆ ನಾವು ಅವಮಾನದಿಂದ ತಲೆ ತಗ್ಗಿಸುವಂತಹ ಘಟನೆಗಳು. ಸೋಂಕಿನಿಂದ ಸಾಯುವವರು ಶೇ.2-3 ಇರಬಹುದು. ಹಸಿವಿನಿಂದ ಅವಮಾನದಿಂದ ಸಾಯುವವರ ಪ್ರಮಾಣ ಶೇ.10 ಆಗಿಬಿಟ್ಟರೆ ಅದನ್ನು ಮನುಷ್ಯ ಸಮಾಜವೆನ್ನಲಾಗದು. ಅಂತಹ ಸ್ಥಿತಿ ಏಕೆ ಬಂದಿತೆಂಬುದನ್ನು ಲಾಕ್‌ಡೌನ್ ಹೇರಿದ ತಕ್ಷಣ ಎಲ್ಲ ಬಗೆಯ ಪರ್ಯಾಯ ವ್ಯವಸ್ಥೆಗೆ ಅವಕಾಶ ಮಾಡಿಕೊಡಬೇಕಿದ್ದ ಕೇಂದ್ರ ಸರ್ಕಾರವೂ ಮತ್ತು ಕರ್ನಾಟಕದಲ್ಲಿ ತಳಮಟ್ಟದಲ್ಲಿ ಕೆಲಸ ಮಾಡಬೇಕಿದ್ದ ರಾಜ್ಯ ಸರ್ಕಾರವೂ ಯೋಚಿಸಬೇಕು. ವಿಮಾನಗಳಲ್ಲಿ ಓಡಾಡುವವರು ತಂದಿದ್ದ ರೋಗದ ಕಾರಣಕ್ಕೆ ಹೇರಿದ್ದ ಲಾಕ್‌ಡೌನ್‌ನಿಂದ ಹಸಿದು ಕಂಗೆಟ್ಟಿದ್ದ ಕಾರ್ಮಿಕರಿಗೆ ಕಳಿಸಿಕೊಡುವ ಬಸ್ಸುಗಳಿಗೆ ಮೂರು ಪಟ್ಟು ದರ ನಿಗದಿ ಮಾಡುವಷ್ಟು ಹೀನ ಸ್ಥಿತಿಯಲ್ಲಿ ಈ ರಾಜ್ಯದ ಸರ್ಕಾರವಿದೆ.

ಇನ್ನು ಕೇಂದ್ರದ ವಿಚಾರಕ್ಕೆ ಬರುವುದಾದರೆ, ಪಿಎಂ ಕೇರ್ಸ್ ಎಂಬ ನಿಧಿಗೆ 150 ಕೋಟಿ ಕೊಟ್ಟಿದ್ದ ರೈಲ್ವೇ ಇಲಾಖೆಯು 60 ಕೋಟಿ ವೆಚ್ಚ ಮಾಡಿ ಕಾರ್ಮಿಕರನ್ನು ಕಳಿಸಿಕೊಡಲು ಮುಂದಾಗಲಿಲ್ಲ. ಅಂದರೆ ಅಲ್ಲಿನ ಮೇಲ್ಪಂಕ್ತಿಯೇ ಎಲ್ಲರಿಗೂ ಮಾದರಿಯಾಗಿದೆ. ‘ಎಲ್ಲರ ಒಳಿತಿನ ದೃಷ್ಟಿಯಿಂದಲೇ’ ಹೇರಲಾದ ಲಾಕ್‌ಡೌನ್ ಇದಿರಬಹುದಾದರೂ, ಅದರಲ್ಲಿ ಈ ಜನರ ತಪ್ಪೇನೂ ಇರಲಿಲ್ಲ ಎಂಬುದೂ ಕಾಣದಷ್ಟು ಕಣ್ಣುಗಳು ಇಂಗಿ ಹೋಗಿದ್ದವೇ? ಎಲ್ಲ ಸಿದ್ಧಾಂತಗಳಾಚೆ ಕನಿಷ್ಠ ಮಾನವೀಯತೆ ನಾಗರಿಕವೆನಿಸಿಕೊಳ್ಳುವ ಸರ್ಕಾರಗಳಿಗೆ ಇರಬೇಕಿತ್ತಲ್ಲವೇ? ಅಥವಾ ಸಿದ್ಧಾಂತದ ಕಾರಣಕ್ಕೇ ಈ ಸರ್ಕಾರಗಳು ಹೀಗೆ ನಡೆದುಕೊಳ್ಳುತ್ತಿವೆಯೇ?

ಈ ಬರಹ ಶುರುವಾದ ಕಡೆಗೆ ಮತ್ತೆ ಬರುವುದಾದರೆ, ಇಂದು ವಲಸೆ ಬೇಡ ಎಂದು ಹೇಳುವ ಸ್ಥಿತಿಯಲ್ಲಿ ಯಾವ ರಾಜ್ಯವೂ, ದೇಶವೂ ಇಲ್ಲ. ಕೆಲವೆಡೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿ ಮಾಡಲಾಗದೇ ಬೇರೆ ಕಡೆಗೆ ಹೋದರೆ ಸಾಕು ಎಂಬ ಪರಿಸ್ಥಿತಿಯಿದ್ದರೆ, ಇನ್ನು ಕೆಲವೆಡೆ ಸ್ಥಳೀಯ ಜನರು ಹಲವು ರೀತಿಯ ದೈಹಿಕ ಶ್ರಮದ ಕೆಲಸಗಳನ್ನು ಮಾಡುವ ಮನಸ್ಥಿತಿಯಲ್ಲಿಲ್ಲ. ಹಾಗಿಲ್ಲದೇ ಹೋಗಿದ್ದರೆ ಬಿಲ್ಡರ್‌ಗಳು ಸರ್ಕಾರದ ಬಳಿ ಹೋಗಿ, ಕಾರ್ಮಿಕರನ್ನು ‘ಹೇಗಾದರೂ ಮಾಡಿ’ ಇಲ್ಲಿಯೇ ಉಳಿಸಿ ಎಂದು ಒತ್ತಡ ಹಾಕುತ್ತಿರಲಿಲ್ಲ. ಹಾಗಾಗಿ ಇನ್ನೂ ಭಿನ್ನ ರೀತಿಯಲ್ಲಿ ಈ ವಿದ್ಯಮಾನವನ್ನು ನೋಡುವ ಅಗತ್ಯವನ್ನು ನಾವೆಲ್ಲರೂ ಮನಗಾಣಬೇಕಿದೆ.


ಇದನ್ನೂ ಓದಿ: ಅನಿಮಲ್ ಫಾರ್ಮ್‌ ನೆನಪು ಮಾಡುವ ಸರ್ಕಾರದ ದಿನಕ್ಕೊಂದು ನಿಯಮಗಳು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...