Homeಕರ್ನಾಟಕ‘ಹಲಾಲ್‌ ವಿಚಾರದಲ್ಲಿ ನಾವು ಸಂಘಟನೆಗಳ ಪರವಾಗಿದ್ದೇವೆ’: ಕಿಡಿಗೇಡಿ ಕೃತ್ಯಗಳನ್ನು ಸಮರ್ಥಿಸಿಕೊಂಡ ಸಚಿವೆ ಜೊಲ್ಲೆ

‘ಹಲಾಲ್‌ ವಿಚಾರದಲ್ಲಿ ನಾವು ಸಂಘಟನೆಗಳ ಪರವಾಗಿದ್ದೇವೆ’: ಕಿಡಿಗೇಡಿ ಕೃತ್ಯಗಳನ್ನು ಸಮರ್ಥಿಸಿಕೊಂಡ ಸಚಿವೆ ಜೊಲ್ಲೆ

- Advertisement -
- Advertisement -

ಬಿಜೆಪಿ ಬೆಂಬಲಿತ ಸಂಘಟನೆಗಳು ರಾಜ್ಯದಲ್ಲಿ ಮುಸ್ಲಿಂ ದ್ವೇಷ ಹರಡುತ್ತಿರುವ ದುಷ್ಕಕೃತ್ಯವನ್ನು ರಾಜ್ಯ ಸರ್ಕಾರ ಮತ್ತೆ ಸಮರ್ಥಿಸಿಕೊಂಡಿದೆ. ರಾಜ್ಯ ಮುಜರಾಯಿ, ಹಜ್ ಮತ್ತು ವಕ್ಫ್‌ ಸಚಿವರಾಗಿರುವ ಶಶಿಕಲಾ ಜೊಲ್ಲೆ ಅವರು, ‘ಸಂಘಟನೆಗಳ ಪರವಾಗಿ ನಾವು ಇದ್ದೇವೆ’ ಎಂದು ಶನಿವಾರ ಹೇಳಿದ್ದಾರೆ.

ಹಲಾಲ್ ಮತ್ತು ಜಟ್ಕಾ ವಿವಾದದ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಬಿಜೆಪಿ ಬೆಂಬಲಿತ ಸಂಗಟನೆಗಳನ್ನು ಹಿಂದೂಪರ ಸಂಘಟನೆಗಳು ಎಂದು ಉಲ್ಲೇಖಿಸುತ್ತಾ, “ಸಂಘಟನೆಗಳು ಮಾಡುತ್ತಿರುವುದು ಸರಿಯನಿಸುತ್ತಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಈ ಸಂಘಟನೆಗಳು ಮಾಡುತ್ತಿರುವ ರೀತಿಯಲ್ಲಿ ಜಟ್ಕಾ ಕಟ್‌ ಬಗ್ಗೆ ಎಲ್ಲೆಡೆ ಜಾಗೃತಿ ಮೂಡಿಸುವ ಅಗತ್ಯವಿದೆ. ಯಾಕೆಂದರೆ ಬೇರೆ ದೇವರಿಗೆ ಅರ್ಪಿಸುವುದರಿಂದ ಸಮಸ್ಯೆ ಉದ್ಭವಿಸುತ್ತದೆ. ಈ ಸಂಘಟನೆಗಳ ಪರವಾಗಿ ನಾವು ಇದ್ದೇವೆ” ಎಂದು ಜೊಲ್ಲೆ ಹೇಳಿದ್ದಾರೆ.

ಇದನ್ನೂ ಓದಿ: ಹಲಾಲ್‌‌ ಮಾಂಸ ಮಾರಾಟ ಮಾಡಿದ ಅಂಗಡಿ ಮಾಲಿಕನಿಗೆ ಹಲ್ಲೆ: ಐವರು ಬಜರಂಗದಳದ ದುಷ್ಕರ್ಮಿಗಳು ಅರೆಸ್ಟ್‌

ಈ ನಡುವೆ ಶಿವಮೊಗ್ಗದಲ್ಲಿ ಮಾಂಸದ ಅಂಗಡಿಗೆ ನುಗ್ಗಿ ಅಂಗಡಿಯ ಮಾಲಿಕನಿಗೆ ಹಲ್ಲೆ ನಡೆಸಿ ಐವರು ಬಜರಂಗದಳದ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ದುಷ್ಕರ್ಮಿಗಳು ಅಂಗಡಿಯ ಮಾಲಕನಿಗೆ ಹಲಾಲ್ ಮಾಂಸ ಮಾರಾಟ ಮಾಡಬಾರದು ಎಂದು ತಾಕೀತು ಮಾಡಿದ್ದರು. ಈ ವೇಳೆ ಅಂಗಡಿ ಮಾಲಿಕ ಹಲಾಲ್ ಮಾಂಸ ಬೇಡವೆಂದರೆ ಬೇರೆ ಅಂಗಡಿಯಲ್ಲಿ ಖರೀದಿ ಮಾಡಿ ಎಂದು ಹೇಳಿದ್ದಕ್ಕೆ, ಅರೋಪಿಗಳು ಅವರಿಗೆ ಅವಾಚ್ಯ ಪದಗಳಲ್ಲಿ ಬೈದು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಐವರು ದುಷ್ಕರ್ಮಿಗಳು ಮಾಂಸದ ಅಂಗಡಿಯೊಳಗೆ ನುಗ್ಗಿ ಹಿಂದೂಗಳೇ ಇರುವ ಪ್ರದೇಶದಲ್ಲಿ ಮಾಂಸವನ್ನು ಮಾರಾಟ ಮಾಡುತ್ತಿದ್ದೀರಿ. ಹಲಾಲ್ ಮಾಂಸವನ್ನು ಮಾರಾಟ ಮಾಡದಂತೆ ತಾಕೀತು ಮಾಡಿದ್ದರು.

ಇದೇ ದುಷ್ಕರ್ಮಿಗಳು ಅಲ್ಲಿನ ಜನತಾ ಹೋಟೆಲ್‌‌ಗೆ ಕೂಡಾ ನುಗ್ಗಿ ಹಲಾಲ್ ಮಾಡಿರುವ ಮಾಂಸವನ್ನು ಮಾರಾಟ ಮಾಡದಂತೆ ಕೇಳಿಕೊಂಡಿದ್ದಾರೆ. ಈ ವೇಳೆ ವಾಗ್ವಾದಕ್ಕೆ ಇಳಿದಿದ್ದ ಸಿಬ್ಬಂದಿಯ ಮೇಲೆ ದಾಳಿ ಮಾಡಿದ್ದಾರೆ ಎಂದು ಕೂಡಾ ವರದಿಯಾಗಿದೆ. ಈ ಘಟನೆಯ ಬಗ್ಗೆ ಕೂಡಾ ಎಫ್‌ಐಆರ್‌ ದಾಖಲಾಗಿದೆ ಎಂದು ಜಿಲ್ಲಾ ಎಸ್‌ಪಿ ಲಕ್ಷ್ಮಿ ಪ್ರಸಾದ್‌ ಹೇಳಿದ್ದಾರೆ. ಎರಡೂ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...