Homeಕರ್ನಾಟಕ‘ಹಲಾಲ್‌ ವಿಚಾರದಲ್ಲಿ ನಾವು ಸಂಘಟನೆಗಳ ಪರವಾಗಿದ್ದೇವೆ’: ಕಿಡಿಗೇಡಿ ಕೃತ್ಯಗಳನ್ನು ಸಮರ್ಥಿಸಿಕೊಂಡ ಸಚಿವೆ ಜೊಲ್ಲೆ

‘ಹಲಾಲ್‌ ವಿಚಾರದಲ್ಲಿ ನಾವು ಸಂಘಟನೆಗಳ ಪರವಾಗಿದ್ದೇವೆ’: ಕಿಡಿಗೇಡಿ ಕೃತ್ಯಗಳನ್ನು ಸಮರ್ಥಿಸಿಕೊಂಡ ಸಚಿವೆ ಜೊಲ್ಲೆ

- Advertisement -
- Advertisement -

ಬಿಜೆಪಿ ಬೆಂಬಲಿತ ಸಂಘಟನೆಗಳು ರಾಜ್ಯದಲ್ಲಿ ಮುಸ್ಲಿಂ ದ್ವೇಷ ಹರಡುತ್ತಿರುವ ದುಷ್ಕಕೃತ್ಯವನ್ನು ರಾಜ್ಯ ಸರ್ಕಾರ ಮತ್ತೆ ಸಮರ್ಥಿಸಿಕೊಂಡಿದೆ. ರಾಜ್ಯ ಮುಜರಾಯಿ, ಹಜ್ ಮತ್ತು ವಕ್ಫ್‌ ಸಚಿವರಾಗಿರುವ ಶಶಿಕಲಾ ಜೊಲ್ಲೆ ಅವರು, ‘ಸಂಘಟನೆಗಳ ಪರವಾಗಿ ನಾವು ಇದ್ದೇವೆ’ ಎಂದು ಶನಿವಾರ ಹೇಳಿದ್ದಾರೆ.

ಹಲಾಲ್ ಮತ್ತು ಜಟ್ಕಾ ವಿವಾದದ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಬಿಜೆಪಿ ಬೆಂಬಲಿತ ಸಂಗಟನೆಗಳನ್ನು ಹಿಂದೂಪರ ಸಂಘಟನೆಗಳು ಎಂದು ಉಲ್ಲೇಖಿಸುತ್ತಾ, “ಸಂಘಟನೆಗಳು ಮಾಡುತ್ತಿರುವುದು ಸರಿಯನಿಸುತ್ತಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಈ ಸಂಘಟನೆಗಳು ಮಾಡುತ್ತಿರುವ ರೀತಿಯಲ್ಲಿ ಜಟ್ಕಾ ಕಟ್‌ ಬಗ್ಗೆ ಎಲ್ಲೆಡೆ ಜಾಗೃತಿ ಮೂಡಿಸುವ ಅಗತ್ಯವಿದೆ. ಯಾಕೆಂದರೆ ಬೇರೆ ದೇವರಿಗೆ ಅರ್ಪಿಸುವುದರಿಂದ ಸಮಸ್ಯೆ ಉದ್ಭವಿಸುತ್ತದೆ. ಈ ಸಂಘಟನೆಗಳ ಪರವಾಗಿ ನಾವು ಇದ್ದೇವೆ” ಎಂದು ಜೊಲ್ಲೆ ಹೇಳಿದ್ದಾರೆ.

ಇದನ್ನೂ ಓದಿ: ಹಲಾಲ್‌‌ ಮಾಂಸ ಮಾರಾಟ ಮಾಡಿದ ಅಂಗಡಿ ಮಾಲಿಕನಿಗೆ ಹಲ್ಲೆ: ಐವರು ಬಜರಂಗದಳದ ದುಷ್ಕರ್ಮಿಗಳು ಅರೆಸ್ಟ್‌

ಈ ನಡುವೆ ಶಿವಮೊಗ್ಗದಲ್ಲಿ ಮಾಂಸದ ಅಂಗಡಿಗೆ ನುಗ್ಗಿ ಅಂಗಡಿಯ ಮಾಲಿಕನಿಗೆ ಹಲ್ಲೆ ನಡೆಸಿ ಐವರು ಬಜರಂಗದಳದ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ದುಷ್ಕರ್ಮಿಗಳು ಅಂಗಡಿಯ ಮಾಲಕನಿಗೆ ಹಲಾಲ್ ಮಾಂಸ ಮಾರಾಟ ಮಾಡಬಾರದು ಎಂದು ತಾಕೀತು ಮಾಡಿದ್ದರು. ಈ ವೇಳೆ ಅಂಗಡಿ ಮಾಲಿಕ ಹಲಾಲ್ ಮಾಂಸ ಬೇಡವೆಂದರೆ ಬೇರೆ ಅಂಗಡಿಯಲ್ಲಿ ಖರೀದಿ ಮಾಡಿ ಎಂದು ಹೇಳಿದ್ದಕ್ಕೆ, ಅರೋಪಿಗಳು ಅವರಿಗೆ ಅವಾಚ್ಯ ಪದಗಳಲ್ಲಿ ಬೈದು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಐವರು ದುಷ್ಕರ್ಮಿಗಳು ಮಾಂಸದ ಅಂಗಡಿಯೊಳಗೆ ನುಗ್ಗಿ ಹಿಂದೂಗಳೇ ಇರುವ ಪ್ರದೇಶದಲ್ಲಿ ಮಾಂಸವನ್ನು ಮಾರಾಟ ಮಾಡುತ್ತಿದ್ದೀರಿ. ಹಲಾಲ್ ಮಾಂಸವನ್ನು ಮಾರಾಟ ಮಾಡದಂತೆ ತಾಕೀತು ಮಾಡಿದ್ದರು.

ಇದೇ ದುಷ್ಕರ್ಮಿಗಳು ಅಲ್ಲಿನ ಜನತಾ ಹೋಟೆಲ್‌‌ಗೆ ಕೂಡಾ ನುಗ್ಗಿ ಹಲಾಲ್ ಮಾಡಿರುವ ಮಾಂಸವನ್ನು ಮಾರಾಟ ಮಾಡದಂತೆ ಕೇಳಿಕೊಂಡಿದ್ದಾರೆ. ಈ ವೇಳೆ ವಾಗ್ವಾದಕ್ಕೆ ಇಳಿದಿದ್ದ ಸಿಬ್ಬಂದಿಯ ಮೇಲೆ ದಾಳಿ ಮಾಡಿದ್ದಾರೆ ಎಂದು ಕೂಡಾ ವರದಿಯಾಗಿದೆ. ಈ ಘಟನೆಯ ಬಗ್ಗೆ ಕೂಡಾ ಎಫ್‌ಐಆರ್‌ ದಾಖಲಾಗಿದೆ ಎಂದು ಜಿಲ್ಲಾ ಎಸ್‌ಪಿ ಲಕ್ಷ್ಮಿ ಪ್ರಸಾದ್‌ ಹೇಳಿದ್ದಾರೆ. ಎರಡೂ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...