Homeಕರ್ನಾಟಕ‘ಹಲಾಲ್‌ ವಿಚಾರದಲ್ಲಿ ನಾವು ಸಂಘಟನೆಗಳ ಪರವಾಗಿದ್ದೇವೆ’: ಕಿಡಿಗೇಡಿ ಕೃತ್ಯಗಳನ್ನು ಸಮರ್ಥಿಸಿಕೊಂಡ ಸಚಿವೆ ಜೊಲ್ಲೆ

‘ಹಲಾಲ್‌ ವಿಚಾರದಲ್ಲಿ ನಾವು ಸಂಘಟನೆಗಳ ಪರವಾಗಿದ್ದೇವೆ’: ಕಿಡಿಗೇಡಿ ಕೃತ್ಯಗಳನ್ನು ಸಮರ್ಥಿಸಿಕೊಂಡ ಸಚಿವೆ ಜೊಲ್ಲೆ

- Advertisement -
- Advertisement -

ಬಿಜೆಪಿ ಬೆಂಬಲಿತ ಸಂಘಟನೆಗಳು ರಾಜ್ಯದಲ್ಲಿ ಮುಸ್ಲಿಂ ದ್ವೇಷ ಹರಡುತ್ತಿರುವ ದುಷ್ಕಕೃತ್ಯವನ್ನು ರಾಜ್ಯ ಸರ್ಕಾರ ಮತ್ತೆ ಸಮರ್ಥಿಸಿಕೊಂಡಿದೆ. ರಾಜ್ಯ ಮುಜರಾಯಿ, ಹಜ್ ಮತ್ತು ವಕ್ಫ್‌ ಸಚಿವರಾಗಿರುವ ಶಶಿಕಲಾ ಜೊಲ್ಲೆ ಅವರು, ‘ಸಂಘಟನೆಗಳ ಪರವಾಗಿ ನಾವು ಇದ್ದೇವೆ’ ಎಂದು ಶನಿವಾರ ಹೇಳಿದ್ದಾರೆ.

ಹಲಾಲ್ ಮತ್ತು ಜಟ್ಕಾ ವಿವಾದದ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಬಿಜೆಪಿ ಬೆಂಬಲಿತ ಸಂಗಟನೆಗಳನ್ನು ಹಿಂದೂಪರ ಸಂಘಟನೆಗಳು ಎಂದು ಉಲ್ಲೇಖಿಸುತ್ತಾ, “ಸಂಘಟನೆಗಳು ಮಾಡುತ್ತಿರುವುದು ಸರಿಯನಿಸುತ್ತಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ಈ ಸಂಘಟನೆಗಳು ಮಾಡುತ್ತಿರುವ ರೀತಿಯಲ್ಲಿ ಜಟ್ಕಾ ಕಟ್‌ ಬಗ್ಗೆ ಎಲ್ಲೆಡೆ ಜಾಗೃತಿ ಮೂಡಿಸುವ ಅಗತ್ಯವಿದೆ. ಯಾಕೆಂದರೆ ಬೇರೆ ದೇವರಿಗೆ ಅರ್ಪಿಸುವುದರಿಂದ ಸಮಸ್ಯೆ ಉದ್ಭವಿಸುತ್ತದೆ. ಈ ಸಂಘಟನೆಗಳ ಪರವಾಗಿ ನಾವು ಇದ್ದೇವೆ” ಎಂದು ಜೊಲ್ಲೆ ಹೇಳಿದ್ದಾರೆ.

ಇದನ್ನೂ ಓದಿ: ಹಲಾಲ್‌‌ ಮಾಂಸ ಮಾರಾಟ ಮಾಡಿದ ಅಂಗಡಿ ಮಾಲಿಕನಿಗೆ ಹಲ್ಲೆ: ಐವರು ಬಜರಂಗದಳದ ದುಷ್ಕರ್ಮಿಗಳು ಅರೆಸ್ಟ್‌

ಈ ನಡುವೆ ಶಿವಮೊಗ್ಗದಲ್ಲಿ ಮಾಂಸದ ಅಂಗಡಿಗೆ ನುಗ್ಗಿ ಅಂಗಡಿಯ ಮಾಲಿಕನಿಗೆ ಹಲ್ಲೆ ನಡೆಸಿ ಐವರು ಬಜರಂಗದಳದ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ದುಷ್ಕರ್ಮಿಗಳು ಅಂಗಡಿಯ ಮಾಲಕನಿಗೆ ಹಲಾಲ್ ಮಾಂಸ ಮಾರಾಟ ಮಾಡಬಾರದು ಎಂದು ತಾಕೀತು ಮಾಡಿದ್ದರು. ಈ ವೇಳೆ ಅಂಗಡಿ ಮಾಲಿಕ ಹಲಾಲ್ ಮಾಂಸ ಬೇಡವೆಂದರೆ ಬೇರೆ ಅಂಗಡಿಯಲ್ಲಿ ಖರೀದಿ ಮಾಡಿ ಎಂದು ಹೇಳಿದ್ದಕ್ಕೆ, ಅರೋಪಿಗಳು ಅವರಿಗೆ ಅವಾಚ್ಯ ಪದಗಳಲ್ಲಿ ಬೈದು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಐವರು ದುಷ್ಕರ್ಮಿಗಳು ಮಾಂಸದ ಅಂಗಡಿಯೊಳಗೆ ನುಗ್ಗಿ ಹಿಂದೂಗಳೇ ಇರುವ ಪ್ರದೇಶದಲ್ಲಿ ಮಾಂಸವನ್ನು ಮಾರಾಟ ಮಾಡುತ್ತಿದ್ದೀರಿ. ಹಲಾಲ್ ಮಾಂಸವನ್ನು ಮಾರಾಟ ಮಾಡದಂತೆ ತಾಕೀತು ಮಾಡಿದ್ದರು.

ಇದೇ ದುಷ್ಕರ್ಮಿಗಳು ಅಲ್ಲಿನ ಜನತಾ ಹೋಟೆಲ್‌‌ಗೆ ಕೂಡಾ ನುಗ್ಗಿ ಹಲಾಲ್ ಮಾಡಿರುವ ಮಾಂಸವನ್ನು ಮಾರಾಟ ಮಾಡದಂತೆ ಕೇಳಿಕೊಂಡಿದ್ದಾರೆ. ಈ ವೇಳೆ ವಾಗ್ವಾದಕ್ಕೆ ಇಳಿದಿದ್ದ ಸಿಬ್ಬಂದಿಯ ಮೇಲೆ ದಾಳಿ ಮಾಡಿದ್ದಾರೆ ಎಂದು ಕೂಡಾ ವರದಿಯಾಗಿದೆ. ಈ ಘಟನೆಯ ಬಗ್ಗೆ ಕೂಡಾ ಎಫ್‌ಐಆರ್‌ ದಾಖಲಾಗಿದೆ ಎಂದು ಜಿಲ್ಲಾ ಎಸ್‌ಪಿ ಲಕ್ಷ್ಮಿ ಪ್ರಸಾದ್‌ ಹೇಳಿದ್ದಾರೆ. ಎರಡೂ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...