Homeಮುಖಪುಟ‘ನಾವು ತಾಳ್ಮೆಯಿಂದಿದ್ದೇವೆ, ಆದರೆ ಮಿತಿ ಮೀರದಿರಿ’ - ರೈತರಿಗೆ ಎಚ್ಚರಿಕೆ ನೀಡಿದ ಹರಿಯಾಣ ಸಿಎಂ

‘ನಾವು ತಾಳ್ಮೆಯಿಂದಿದ್ದೇವೆ, ಆದರೆ ಮಿತಿ ಮೀರದಿರಿ’ – ರೈತರಿಗೆ ಎಚ್ಚರಿಕೆ ನೀಡಿದ ಹರಿಯಾಣ ಸಿಎಂ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ದ ಪ್ರತಿಭಟಿಸುತ್ತಿರುವ ರೈತರನ್ನು ಉಲ್ಲೇಖಿಸಿ ಹರಿಯಾಣ ಮುಖ್ಯಮಂತ್ರಿ ಮನೋಹರ್‌‌ ಲಾ‌ಲ್‌ ಖಟ್ಟರ್‌‌ ಅವರು ‘ನಾವು ತಾಳ್ಮೆಯಿಂದಿದ್ದೇವೆ, ಆದರೆ ಮಿತಿ ಮೀರದಿರಿ’ ಎಂದು ಬುಧವಾರ ಎಚ್ಚರಿಕೆ ನೀಡಿದ್ದಾರೆ. ಖಟ್ಟರ್‌ ಅವರು ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿರೋಧವನ್ನು ತೀವ್ರವಾಗಿ ಎದುರಿಸುತ್ತಿದ್ದಾರೆ.

ಉತ್ತರ ಪ್ರದೇಶ-ದೆಹಲಿ ಗಡಿಯಾದ ಘಾಜಿಪುರದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸ್ಥಳೀಯ ಬಿಜೆಪಿ ಕಾರ್ಯಕರ್ತರ ನಡುವೆ ಇಂದು ಘರ್ಷಣೆ ನಡೆದ ನಂತರ ಮುಖ್ಯಮಂತ್ರಿ ಈ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಭಯೋತ್ಪಾದನೆ ಆರೋಪ ಹೊತ್ತು 12 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

“ಕಿಸಾನ್ (ರೈತ) ಎಂಬ ಪದವು ಪವಿತ್ರವಾಗಿದೆ, ಅದನ್ನು ಎಲ್ಲರೂ ಗೌರವದಿಂದ ಕಾಣುತ್ತಾರೆ. ಕೆಲವು ದುರದೃಷ್ಟಕರ ಘಟನೆಗಳಿಂದಾಗಿ ಈ ಪದವು ಕಳಂಕಿತವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆಯನ್ನು ಕಸಿದುಕೊಳ್ಳಲಾಗಿದೆ, ಕೊಲೆಗಳು ನಡೆಯುತ್ತಿವೆ, ರಸ್ತೆಗಳು ನಿರ್ಬಂಧಿಸಲ್ಪಟ್ಟಿವೆ. ಇದು ಪ್ರಜಾಪ್ರಭುತ್ವ ವಿರೋಧಿ ಘಟನೆಗಳಾಗಿದ್ದು, ನಾನು ಇದನ್ನು ಖಂಡಿಸುತ್ತೇನೆ” ಖಟ್ಟರ್ ಹೇಳಿದ್ದಾರೆ.

“ನಾವು ತಾಳ್ಮೆಯನ್ನು ಕಾಪಾಡಿಕೊಂಡಿದ್ದೇವೆ ಆದರೆ ಅವರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹಳ್ಳಿಗಳನ್ನು ಭೇಟಿ ಮಾಡಬಾರದು ಎಂದು ಬೆದರಿಕೆ ಹಾಕುತ್ತಿದ್ದಾರೆ. ಸರ್ಕಾರ ನಡೆಸುತ್ತಿರುವವರಿಗೆ ಜನರನ್ನು ಭೇಟಿ ಮಾಡುವ ಜವಾಬ್ದಾರಿ ಇದೆ. ನಮ್ಮನ್ನು ಎಷ್ಟೇ ಪ್ರಚೋದಿಸಿದರೂ ಅವರು ಹರಿಯಾಣದ ನಮ್ಮದೆ ಸ್ವಂತ ಜನರಾಗಿದ್ದರಿಂದ ನಾವು ತಾಳ್ಮೆಯನ್ನು ಕಾಪಾಡಿಕೊಂಡಿದ್ದೇವೆ. ಆದರೆ ಅವರು ತಮ್ಮ ಮಿತಿಯನ್ನು ಮೀರುವುದು ಒಳ್ಳೆಯದಲ್ಲ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ರೈತ ಹೋರಾಟದ ಸ್ಥಳಗಳಲ್ಲಿ ಒಂದಾದ ಘಾಜಿಪುರ ಗಡಿಯಲ್ಲಿ ಬುಧವಾರ ರೈತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗಿದೆ. ಇಂದು ಬೆಳಗ್ಗೆ ಉತ್ತರ ಪ್ರದೇಶ ಗೇಟ್ ಬಳಿಯ ರೈತರ ಪ್ರತಿಭಟನಾ ಸ್ಥಳದ ಬಳಿ ಬಿಜೆಪಿ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ದಾಂಧಲೆ ನಡೆಸಿದ್ದಾರೆಂದು ಭಾರತೀಯ ಕಿಸಾನ್ ಯೂನಿಯನ್ ಆರೋಪಿಸಿದೆ.

ಘಟನೆಯಲ್ಲಿ ಹೋರಾಟ ನಿರತ ರೈತರಿಗೆ ಗಾಯಗಳಾಗಿದ್ದು, ಕೆಲ ವಾಹನಗಳು ಜಖಂಗೊಂಡಿವೆ. ಇದೇ ವೇಳೆ ಬಿಜೆಪಿಯ ಕಾರ್ಯಕರ್ತನೊಬ್ಬ ರೈತರ ಮೇಲೆ ಕತ್ತಿ ಎತ್ತಿಕೊಂಡು ಹಲ್ಲೆಗೆ ಮುಂದಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಉತ್ತರ ಪ್ರದೇಶದ ನೂತನ ಸಚಿವರಾಗಿ ಆಯ್ಕೆಯಾಗಿರುವ ಅಮಿತ್ ವಾಲ್ಮಿಕಿ ಅವರನ್ನು ಸ್ವಾಗತಿಸಿಸುವ ನೆಪದಲ್ಲಿ ದೆಹಲಿ – ಮೀರತ್ ಎಕ್ಸ್‌ಪ್ರೆಸ್ ವೇನಲ್ಲಿರುವ ಪ್ರತಿಭಟನಾ ಸ್ಥಳದ ಬಳಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು, ಡೋಲು ಬಾರಿಸುತ್ತ ರೈತ ವಿರೋಧಿ ಘೋಷಣೆಗಳನ್ನು ಕೂಗುವ ಮೂಲಕ ರೈತರನ್ನು ಪ್ರಚೋದಿಸಿದ್ದಾರೆ ಎನ್ನಲಾಗಿದೆ.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು ಕಳೆದ ಏಳು ತಿಂಗಳಿನಿಂದ ದೆಹಲಿಯ ಮೂರು ಗಡಿಗಳಾದ ಸಿಂಗು, ಟಿಕ್ರಿ ಮತ್ತು ಗಾಜಿಪುರದಲ್ಲಿ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದಾರೆ.

ಇದನ್ನೂ ಓದಿ: ಯುಪಿ: ಅತ್ಯಾಚಾರ ಆರೋಪಿಗಳ ಕಪಾಳಕ್ಕೆ ಹೊಡೆದು ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...