Homeಮುಖಪುಟ‘ನಾವು ತಾಳ್ಮೆಯಿಂದಿದ್ದೇವೆ, ಆದರೆ ಮಿತಿ ಮೀರದಿರಿ’ - ರೈತರಿಗೆ ಎಚ್ಚರಿಕೆ ನೀಡಿದ ಹರಿಯಾಣ ಸಿಎಂ

‘ನಾವು ತಾಳ್ಮೆಯಿಂದಿದ್ದೇವೆ, ಆದರೆ ಮಿತಿ ಮೀರದಿರಿ’ – ರೈತರಿಗೆ ಎಚ್ಚರಿಕೆ ನೀಡಿದ ಹರಿಯಾಣ ಸಿಎಂ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ದ ಪ್ರತಿಭಟಿಸುತ್ತಿರುವ ರೈತರನ್ನು ಉಲ್ಲೇಖಿಸಿ ಹರಿಯಾಣ ಮುಖ್ಯಮಂತ್ರಿ ಮನೋಹರ್‌‌ ಲಾ‌ಲ್‌ ಖಟ್ಟರ್‌‌ ಅವರು ‘ನಾವು ತಾಳ್ಮೆಯಿಂದಿದ್ದೇವೆ, ಆದರೆ ಮಿತಿ ಮೀರದಿರಿ’ ಎಂದು ಬುಧವಾರ ಎಚ್ಚರಿಕೆ ನೀಡಿದ್ದಾರೆ. ಖಟ್ಟರ್‌ ಅವರು ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿರೋಧವನ್ನು ತೀವ್ರವಾಗಿ ಎದುರಿಸುತ್ತಿದ್ದಾರೆ.

ಉತ್ತರ ಪ್ರದೇಶ-ದೆಹಲಿ ಗಡಿಯಾದ ಘಾಜಿಪುರದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸ್ಥಳೀಯ ಬಿಜೆಪಿ ಕಾರ್ಯಕರ್ತರ ನಡುವೆ ಇಂದು ಘರ್ಷಣೆ ನಡೆದ ನಂತರ ಮುಖ್ಯಮಂತ್ರಿ ಈ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಭಯೋತ್ಪಾದನೆ ಆರೋಪ ಹೊತ್ತು 12 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

“ಕಿಸಾನ್ (ರೈತ) ಎಂಬ ಪದವು ಪವಿತ್ರವಾಗಿದೆ, ಅದನ್ನು ಎಲ್ಲರೂ ಗೌರವದಿಂದ ಕಾಣುತ್ತಾರೆ. ಕೆಲವು ದುರದೃಷ್ಟಕರ ಘಟನೆಗಳಿಂದಾಗಿ ಈ ಪದವು ಕಳಂಕಿತವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆಯನ್ನು ಕಸಿದುಕೊಳ್ಳಲಾಗಿದೆ, ಕೊಲೆಗಳು ನಡೆಯುತ್ತಿವೆ, ರಸ್ತೆಗಳು ನಿರ್ಬಂಧಿಸಲ್ಪಟ್ಟಿವೆ. ಇದು ಪ್ರಜಾಪ್ರಭುತ್ವ ವಿರೋಧಿ ಘಟನೆಗಳಾಗಿದ್ದು, ನಾನು ಇದನ್ನು ಖಂಡಿಸುತ್ತೇನೆ” ಖಟ್ಟರ್ ಹೇಳಿದ್ದಾರೆ.

“ನಾವು ತಾಳ್ಮೆಯನ್ನು ಕಾಪಾಡಿಕೊಂಡಿದ್ದೇವೆ ಆದರೆ ಅವರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹಳ್ಳಿಗಳನ್ನು ಭೇಟಿ ಮಾಡಬಾರದು ಎಂದು ಬೆದರಿಕೆ ಹಾಕುತ್ತಿದ್ದಾರೆ. ಸರ್ಕಾರ ನಡೆಸುತ್ತಿರುವವರಿಗೆ ಜನರನ್ನು ಭೇಟಿ ಮಾಡುವ ಜವಾಬ್ದಾರಿ ಇದೆ. ನಮ್ಮನ್ನು ಎಷ್ಟೇ ಪ್ರಚೋದಿಸಿದರೂ ಅವರು ಹರಿಯಾಣದ ನಮ್ಮದೆ ಸ್ವಂತ ಜನರಾಗಿದ್ದರಿಂದ ನಾವು ತಾಳ್ಮೆಯನ್ನು ಕಾಪಾಡಿಕೊಂಡಿದ್ದೇವೆ. ಆದರೆ ಅವರು ತಮ್ಮ ಮಿತಿಯನ್ನು ಮೀರುವುದು ಒಳ್ಳೆಯದಲ್ಲ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ರೈತ ಹೋರಾಟದ ಸ್ಥಳಗಳಲ್ಲಿ ಒಂದಾದ ಘಾಜಿಪುರ ಗಡಿಯಲ್ಲಿ ಬುಧವಾರ ರೈತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗಿದೆ. ಇಂದು ಬೆಳಗ್ಗೆ ಉತ್ತರ ಪ್ರದೇಶ ಗೇಟ್ ಬಳಿಯ ರೈತರ ಪ್ರತಿಭಟನಾ ಸ್ಥಳದ ಬಳಿ ಬಿಜೆಪಿ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ದಾಂಧಲೆ ನಡೆಸಿದ್ದಾರೆಂದು ಭಾರತೀಯ ಕಿಸಾನ್ ಯೂನಿಯನ್ ಆರೋಪಿಸಿದೆ.

ಘಟನೆಯಲ್ಲಿ ಹೋರಾಟ ನಿರತ ರೈತರಿಗೆ ಗಾಯಗಳಾಗಿದ್ದು, ಕೆಲ ವಾಹನಗಳು ಜಖಂಗೊಂಡಿವೆ. ಇದೇ ವೇಳೆ ಬಿಜೆಪಿಯ ಕಾರ್ಯಕರ್ತನೊಬ್ಬ ರೈತರ ಮೇಲೆ ಕತ್ತಿ ಎತ್ತಿಕೊಂಡು ಹಲ್ಲೆಗೆ ಮುಂದಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಉತ್ತರ ಪ್ರದೇಶದ ನೂತನ ಸಚಿವರಾಗಿ ಆಯ್ಕೆಯಾಗಿರುವ ಅಮಿತ್ ವಾಲ್ಮಿಕಿ ಅವರನ್ನು ಸ್ವಾಗತಿಸಿಸುವ ನೆಪದಲ್ಲಿ ದೆಹಲಿ – ಮೀರತ್ ಎಕ್ಸ್‌ಪ್ರೆಸ್ ವೇನಲ್ಲಿರುವ ಪ್ರತಿಭಟನಾ ಸ್ಥಳದ ಬಳಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು, ಡೋಲು ಬಾರಿಸುತ್ತ ರೈತ ವಿರೋಧಿ ಘೋಷಣೆಗಳನ್ನು ಕೂಗುವ ಮೂಲಕ ರೈತರನ್ನು ಪ್ರಚೋದಿಸಿದ್ದಾರೆ ಎನ್ನಲಾಗಿದೆ.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು ಕಳೆದ ಏಳು ತಿಂಗಳಿನಿಂದ ದೆಹಲಿಯ ಮೂರು ಗಡಿಗಳಾದ ಸಿಂಗು, ಟಿಕ್ರಿ ಮತ್ತು ಗಾಜಿಪುರದಲ್ಲಿ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದಾರೆ.

ಇದನ್ನೂ ಓದಿ: ಯುಪಿ: ಅತ್ಯಾಚಾರ ಆರೋಪಿಗಳ ಕಪಾಳಕ್ಕೆ ಹೊಡೆದು ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...