Homeಮುಖಪುಟ'ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ, ನೀವೂ ಧ್ವನಿಯಾಗಿ'; ಕೇಂದ್ರದ ವಿರುದ್ಧದ ಪ್ರತಿಭಟನೆಗೆ ಬಿಜೆಪಿಯನ್ನು ಆಹ್ವಾನಿಸಿದ ಸಿಎಂ

‘ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ, ನೀವೂ ಧ್ವನಿಯಾಗಿ’; ಕೇಂದ್ರದ ವಿರುದ್ಧದ ಪ್ರತಿಭಟನೆಗೆ ಬಿಜೆಪಿಯನ್ನು ಆಹ್ವಾನಿಸಿದ ಸಿಎಂ

- Advertisement -
- Advertisement -

‘ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಫೆಬ್ರವರಿ 07ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಶಾಸಕರು, ಸಂಸದರು, ನಾಯಕರಿಗೂ ಈ ಮೂಲಕ ನಾವು ಪ್ರತಿಭಟನೆಗೆ ಕರೆ ಕೊಡುತ್ತಿದ್ದೇವೆ. ನಾವು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ. ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ. ನೀವೂ ರಾಜ್ಯದ ಜನರ ಧ್ವನಿಯಾಗಿ, ರಾಜ್ಯದ ಜನರ ಪರವಾಗಿ ನಿಲ್ಲಿ ಎಂದು ಬಿಜೆಪಿಯವರಿಗೆ ಕರೆ ಕೊಡುತ್ತೇವೆ. ಕನ್ನಡಿಗರಿಗೆ ದ್ರೋಹ ಮಾಡಬೇಡಿ, ಬನ್ನಿ ರಾಜ್ಯದ ಪರವಾಗಿ ಧ್ವನಿ ಎತ್ತೋಣ ಎಂದು ಕರೆಯುತ್ತಿದ್ದೇವೆ. ಪ್ರತಿಭಟಿಸದೆ ಸುಮ್ಮನಿದ್ದರೆ ಕನ್ನಡಿಗರಿಗೆ ದ್ರೋಹ ಮಾಡಿದಂತಾಗುತ್ತದೆ’ ಎಂದು ಹೇಳಿದ್ದಾರೆ.

‘ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿ ಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ. ಹೋರಾಟಕ್ಕೆ ಜೊತೆ ನೀಡಲು ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ಕನ್ನಡಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಕೇಂದ್ರದ ಕಿವಿಯನ್ನು ತೆರೆಸಲು ಹೋರಾಡುತ್ತಿದ್ದೇವೆ’ ಎಂದು ಹೇಳಿದರು.

‘ಭದ್ರಾ ಯೋಜನೆಗೆ ₹5,300 ಕೋಟಿ ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಈವರಗೆ ಒಂದು ರೂಪಾಯಿ ಕೂಡ ಬಿಡುಗಡೆ ಮಾಡಿಲ್ಲ. ಬರ ಪರಿಹಾರದ ಹಣವೂ ಇಲ್ಲ. ನರೇಗಾ ಅಡಿ 150 ಮಾನವ ದಿನಗಳಿಗೆ ಕೂಲಿ ಕೊಡಲು ಕೂಡ ಅನುಮತಿ ನೀಡಿಲ್ಲ. ಇಂಥ ಹಲವು ಕಾರಣಗಳಿಗಾಗಿ ಅನಿವಾರ್ಯವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದರು.

‘ದೇಶದ ಜನರ ಗಮನ ಸೆಳೆಯಬೇಕು, ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಬಗ್ಗೆ, ಹಣಕಾಸು ಹಂಚಿಕೆಯಲ್ಲಾಗಿರುವ ತಾರತಮ್ಯ, ಬರ ಪರಿಹಾರದಲ್ಲಿ ತೋರಿರುವ ಮಲತಾಯಿ ಧೋರಣೆ ಬಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲ ಶಾಸಕರು, ಮೇಲ್ಮನೆ ಶಾಸಕರು ಭಾಗವಹಿಸುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನದ ಮೂಲಕ ಕೇಂದ್ರ ಮತ್ತು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿ ಜನರ ಸೇವೆಯನ್ನು ಮಾಡಲು ಒಪ್ಪಿಕೊಂಡಿದ್ದೇವೆ. ಕೇಂದ್ರ ಸರ್ಕಾರದ ತೆರಿಗೆ ಹಣವೆಂದರೆ ರಾಜ್ಯಗಳಿಂದ ಬರುವ ತೆರಿಗೆ ಹಣ, ಸೆಸ್, ಪೆಟ್ರೋಲ್ ಡೀಸೆಲ್, ಸರ್ಚಾರ್ಜ್. ಇವುಗಳಿಂದ ಸಂಗ್ರಹವಾಗುವ ಹಣವನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಹಣಕಾಸು ಆಯೋಗ ರಚನೆಯಾಗಿದೆ. ಸಂವಿಧಾನದ 7ನೇ ಪರಿಚ್ಛೇಧ ಅದನ್ನು ಸ್ವತಂತ್ರ ಸಂಸ್ಥೆಯಾಗಿಸಿದೆ. ಇಲ್ಲಿಯವರೆಗೆ 15 ಹಣಕಾಸು ಆಯೋಗಗಳು ಆಗಿವೆ. ಪ್ರಸ್ತುತ 16ನೇ ಹಣಕಾಸು ಆಯೋಗ ರಚನೆಯಾಗಿದ್ದು, ಅಧ್ಯಕ್ಷರ ನೇಮಕವಾಗಿದೆ’ ಎಂದು ವಿವರಿಸಿದರು.

’14ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆಯ ಪಾಲು ಶೇ 4.71% ಇದ್ದದ್ದು, 15ನೇ ಹಣಕಾಸು ಆಯೋಗದಲ್ಲಿ 3.64% ಗೆ ಇಳಿಕೆಯಾಯಿತು. ಅಂದರೆ ಶೇ 1.07% ಕಡಿಮೆಯಾಗಿದೆ. ಅದರಿಂದ 4 ವರ್ಷಗಳಲ್ಲಿ 45,000 ಕೋಟಿ ರೂ. ರಾಜ್ಯಕ್ಕೆ ಕಡಿತ ಆಯಿತು. ಇದು ಕೇವಲ ನಗದು ಹಂಚಿಕೆಯೊಂದರಲ್ಲೇ ಆಗಿರುವ ಅನ್ಯಾಯ. ಅಂದಾಜಿನ ಪ್ರಕಾರ ಈ ವರ್ಷ ನಗದು ಹಂಚಿಕೆಯಲ್ಲಿ 62,098 ಕೋಟಿ ರೂ.ಗಳು ಕರ್ನಾಟಕಕ್ಕೆ ಕಡಿಮೆಯಾಗಲಿದೆ’ ಎಂದು ಹೇಳಿದರು.

‘ಹಣಕಾಸು ಆಯೋಗ ನಗದು ಹಂಚಿಕೆ ಮಾಡುವಾಗ ಶೇ 4.71 ರಿಂದ ಶೇ 3.74 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು 5,495 ಕೋಟಿ ರೂ.ಗಳ ವಿಶೇಷ ಅನುದಾನ ನೀಡಲು ಶಿಫಾರಸ್ಸು ಮಾಡಲಾಗಿತ್ತು. ಮಧ್ಯಂತರ ಬಜೆಟ್ ನಲ್ಲಿ ಈ ಬಗ್ಗೆ ಶಿಫಾರಸ್ಸು ಮಾಡಿದರು. ಈ ಹಣವೂ ರಾಜ್ಯಕ್ಕೆ ಬರಲಿಲ್ಲ. ಈ ಮೊತ್ತವನ್ನು ಕೇಂದ್ರ ಸರ್ಕಾರವನ್ನು ಕೇಳಿ ಪಡೆಯಲು ವಿಧಾನಸಭೆಯಲ್ಲಿ ವಿಷಯ ಮಂಡಿಸಿದ್ದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದನ್ನು ತಿರಸ್ಕರಿಸಿದರು. ಅಂತಿಮ ವರದಿಯಲ್ಲಿ 3000 ಕೋಟಿ ರೂ. ಫೆರಿಫೆರಲ್ ರಿಂಗ್ ರೋಡಿಗೆ, ಕೆರೆಗಳನ್ನು ಅಭಿವೃದ್ಧಿ ಪಡಿಸಲು ರೂ.3,000 ಕೋಟಿ ಸೇರಿ 6000 ಕೋಟಿ ರೂ. ಗಳನ್ನು ಹೆಚ್ವರಿಯಾಗಿ ಕೊಡಲು ಶಿಫಾರಸು ಮಾಡಲಾಯಿತು. ಈ ಹಣವೂ ಬರಲಿಲ್ಲ’ ಎಂದರು.

‘ಮೋದಿ ಅವರು ಪ್ರಧಾನಿ ಆದ ಬಳಿಕ 2020-21 ರಿಂದ 2025-26 ರವೆಗಿನ ಅವಧಿಗೆ ರಚನೆಯಾದ 15ನೇ ಹಣಕಾಸು ಆಯೋಗದ ತೆರಿಗೆ ಪಾಲು ಹಂಚಿಕೆಯಲ್ಲಿ 62,098 ಕೋಟಿ ರೂ.ಗಳಷ್ಟು ರಾಜ್ಯಕ್ಕೆ ನಷ್ಟವಾಗಿದೆ.
ಅಂತೆಯೇ 2020-21 ಹಾಗೂ 2021-22 ನೇ ಸಾಲಿಗೆ ವಿಶೇಷ ಅನುದಾನ ಕೊಡದೆ ರಾಜ್ಯಕ್ಕೆ 11,495 ಕೋಟಿ ರೂ.ಗಳು ನಷ್ಟವಾಗಿದೆ. ಒಟ್ಟಾರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲಿನಲ್ಲಿ 73,593 ಕೋಟಿ ರೂ.ಗಳು ಕಡಿಮೆಯಾಗಿದೆ. ಜಿಎಸ್‌ಟಿ ಜಾರಿಗೆ ಬಂದಾಗ ಇದು ಅವೈಜ್ಞಾನಿಕ ಎಂದು ನಾವು ಸಾರಿ ಸಾರಿ ಹೇಳಿದೆವು. ಆಗ ರಾಜ್ಯದ ತೆರಿಗೆ ಬೆಳವಣಿಗೆ ದರ 15% ಇತ್ತು. ಇದರಿಂದ ತೆರಿಗೆ, ಕೇಂದ್ರದ ಅನುದಾನವೂ ಹೆಚ್ಚಾಗತ್ತೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ, ಅದನ್ನೂ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ತುಂಬಿ ಕೊಡುವುದಾಗಿ ಕೇಂದ್ರ ಹೇಳಿತ್ತು.‌ ಈ ಪರಿಹಾರ ಜೂನ್ 2022 ಕ್ಕೆ ನಿಲ್ಲಿಸಿದ್ದಾರೆ. ಈಗ ಪರಿಹಾರ ಕೊಡುತ್ತಿಲ್ಲ. 5 ವರ್ಷಗಳ ಕಾಲ ಮಾತ್ರ ಪರಿಹಾರ ಕೊಟ್ಟರು. ಇದರಿಂದಾಗಿ ಈಗ ನಮ್ಮ ತೆರಿಗೆ ಬೆಳವಣಿಗೆ 15% ಗೆ ಮತ್ತೆ ತಲುಪಲು ಆಗಲೇ ಇಲ್ಲ. ಹೀಗಾಗಿ ಪರಿಹಾರ ಮುಂದುವರಿಸಿ ಎಂದು ಕೇಳಿದೆವು. ಇವತ್ತಿನವರೆಗೂ ಮುಂದುವರೆಸುವ ಬಗ್ಗೆ ತೀರ್ಮಾನವನ್ನೇ ಮಾಡಿಲ್ಲ. ಈಗಲೂ ನಮಗೆ, ನಮ್ಮ ರಾಜ್ಯಕ್ಕೆ ಜಿಎಸ್‌ಟಿ ನಲ್ಲಿ ಅನ್ಯಾಯ ಆಗುತ್ತಲೇ ಇದೆ’ ಎಂದು ವಿವರಿಸಿದರು.

‘ರಾಜ್ಯದಿಂದ ಪ್ರತಿ ವರ್ಷ ಕೇಂದ್ರಕ್ಕೆ ₹4,30,000 ಕೋಟಿ ತೆರಿಗೆ ವಸೂಲಿ ಆಗಿ ಹೋಗುತ್ತಿದೆ. ತೆರಿಗೆ ಸಂಗ್ರಹಣೆಯಲ್ಲಿ ಮಹಾರಾಷ್ಟ್ರ ಬಿಟ್ಟರೆ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ನಮಗೆ ಈ ವರ್ಷ ತೆರಿಗೆ ಪಾಲಿನಲ್ಲಿ ರೂ.37,252 ಕೋಟಿ ಬರುವುದು. ಕೇಂದ್ರ ಪುರಸ್ಕೃತ ಯೋಜನೆಯಲ್ಲಿ 13,005 ಕೋಟಿ ರೂಪಾಯಿ, ಎರಡೂ ಸೇರಿ ಕೇವಲ 50,257 ಕೋಟಿ ರೂಪಾಯಿ ರಾಜ್ಯಕ್ಕೆ ಬಂದಿದೆ. ರಾಜ್ಯಕ್ಕೆ ಇದು ಭೀಕರ ಅನ್ಯಾಯ ಅಲ್ಲವೇ? ಒಟ್ಟು ಲೆಕ್ಕದಲ್ಲಿ ರಾಜ್ಯದಿಂದ ₹100 ಕೇಂದ್ರಕ್ಕೆ ಹೋದರೆ ಅದರಲ್ಲಿ ನಮಗೆ ₹12- 13 ಮಾತ್ರ ವಾಪಾಸ್ ಬರುತ್ತಿದೆ. ಉಳಿದದ್ದು ಕೇಂದ್ರ ಸರ್ಕಾರ ಇಟ್ಟುಕೊಳ್ಳುತ್ತಿದೆ ಎಂದು ಕೇಂದ್ರ ಸರ್ಕಾರವೇ ಅಂಕಿ ಅಂಶಗಳನ್ನು ನೀಡಿದೆ. 2017-18 ರಲ್ಲಿ ಕೇಂದ್ರದ ಬಜೆಟ್ ಗಾತ್ರ ₹21,46,735 ಕೋಟಿ ಇತ್ತು. ಆಗ ರಾಜ್ಯಕ್ಕೆ ತೆರಿಗೆ ಪಾಲು ₹31,908 ಕೋಟಿ, ಅನುದಾನ ಹಾಗೂ ನಗದು ಹಂಚಿಕೆ ₹16,072 ಕೋಟಿ, ಎರಡೂ ಸೇರಿಸಿ ₹47,990 ಕೋಟಿ ಸಿಕ್ಕಿತ್ತು’ ಎಂದರು.

‘2023-24 ಸಾಲಿನಲ್ಲಿ ₹45,03,097 ಕೋಟಿ ಕೇಂದ್ರ ಬಜೆಟ್ ಆಗಿದ್ದು, ರಾಜ್ಯಕ್ಕೆ ₹50,257 ಕೋಟಿ ಮಾತ್ರ ಸಿಗುವ ಅಂದಾಜಿದೆ. ತೆರಿಗೆ ಹಂಚಿಕೆ 2.2 ಇಂದ 2024-25 ಕ್ಕೆ 1.23 ಗೆ ಇಳಿದಿದೆ. ಇದರಿಂದಾಗಿ ರಾಜ್ಯಕ್ಕೆ ಆಗುವ ಅನ್ಯಾಯದ ಪ್ರಮಾಣ ಹೆಚ್ಚುತ್ತಲೇ ಇದೆ. ಬಜೆಟ್ ಗಾತ್ರ ಡಬಲ್ ಆದಾಗ, ರಾಜ್ಯದ ತೆರಿಗೆಯ ಪಾಲು ದುಪ್ಪಟ್ಟಾಗಬೇಕಿತ್ತು. ಆದರೆ, ಈಗ ಅರ್ಧಕ್ಕಿಂತ ಹೆಚ್ಚು ಕಡಿಮೆ ಆಗಿದೆ. ಸೆಸ್, ಸರ್ ಚಾರ್ಜ್ ಪ್ರತೀ ವರ್ಷ ಹೆಚ್ಚಿಸಿಕೊಂಡು ಹೋಗುತ್ತಿದ್ದಾರೆ. ಸೆಸ್, ಸರ್ ಚಾರ್ಜ್ ಮೂಲಕ ಕೇಂದ್ರ ವಸೂಲಿ ಮಾಡುವ ತೆರಿಗೆಯಲ್ಲಿ ರಾಜ್ಯಗಳಿಗೆ ನಯಾಪೈಸೆ ವಾಪಾಸ್ ಬರಲ್ಲ. ಆದರೆ ಸೆಸ್, ಸರ್ ಚಾರ್ಜ್ ಎರಡೂ ಕೊಡೋದು ರಾಜ್ಯಗಳೇ.
ಆದ್ದರಿಂದ 16ನೇ ಹಣಕಾಸು ಆಯೋಗದ ಮುಂದೆ ಸೆಸ್ ಹಾಗೂ ಸರ್ ಚಾರ್ಜ್ ನಲ್ಲೂ ಪಾಲು ಕೊಡಲೇಬೇಕು ಎಂದು ಒತ್ತಾಯಿಸುತ್ತೇವೆ. ಈ ಬಗ್ಗೆ ಗಟ್ಟಿಯಾಗಿ ಧ್ವನಿ ಎತ್ತಲಿದ್ದೇವೆ. ಇದರ ಜತೆಗೆ ಶೇ.1 ರಷ್ಟು ರಕ್ಷಣಾ ಇಲಾಖೆಗೆ ಇಟ್ಟುಕೊಳ್ಳುತ್ತಾರೆ. ಹೀಗೆ ಮೋದಿ ಅವರು ಬಂದ ನಂತರ ರಚನೆಯಾದ 15ನೇ ಹಣಕಾಸು ಆಯೋಗದ ಬಳಿಕ ರಾಜ್ಯಕ್ಕೆ 1,87,867 ಕೋಟಿ ರೂ. ಅನ್ಯಾಯವಾಗಿದೆ’ ಎಂದು ಸಿದ್ದರಾಮಯ್ಯ ಅಂಕಿ ಅಂಶಗಳ ಸಹಿತ ವಿವರಿಸಿದರು.

‘ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ರೂಪಾಯಿ ಕೊಡುತ್ತೇವೆ ಎಂದು ತಿಳಿಸಿದ್ದರು. ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ಮಂಡಿಸುವಾಗ ಇದನ್ನೇ ಪುನಃ ನೀರಾವರಿ ಯೋಜನೆಯ ಅನುದಾನ ಎಂದು ಉಲ್ಲೇಖಿಸಿದ್ದರು. ₹2.5 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸುವ ಯೋಜನೆ ಇದು. ಆದರೆ ಇದುವರೆಗೂ ಒಂದೇ ಒಂದು ರೂಪಾಯಿ ಬಂದಿಲ್ಲ. ಈಗಲಾದರೂ ಬಿಡುಗಡೆ ಮಾಡಿ ಎಂದು ನಾನು ಒತ್ತಾಯಿಸುತ್ತೇನೆ. ಮಹದಾಯಿ ಯೋಜನೆಯ ಪರಿಸರ ತೀರುವಳಿ ಇಂದಿನವರೆಗೆ ಆಗಿಲ್ಲ. ಯೋಜನೆ ಪ್ರಾರಂಭಿಸಲು ತೀರುವಳಿ ಕೊಡಿ ಎಂದರೆ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿಲ್ಲ. ಇಂದಿನವರೆಗೆ ಗೆಜೆಟ್ ನೋಟಿಫಿಕೇಶನ್ ಮಾಡಿಕೊಟ್ಟಿಲ್ಲ.
ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟುಗೆ ಇವತ್ತಿನವರೆಗೂ ಅನುಮತಿ ಕೊಟ್ಟಿಲ್ಲ. 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದೆ. 123 ತೀವ್ರ ಬರಗಾಲ ಪೀಡಿತವಾಗಿದ್ದರೂ ಕೇಂದ್ರದಿಂದ ನಯಾಪೈಸೆ ಬಂದಿಲ್ಲ’ ಎಂದು ಹೇಳಿದರು.

‘ಸೆಪ್ಟೆಂಬರ್ 23 ರಂದು ಕೇಂದ್ರ ತಂಡ ಬಂದು ಬರಗಾಲ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಕೊಟ್ಟಿದೆ. ಬಳಿಕ ಶಬರಿ ಕಾದಂತೆ ನಮ್ಮ ಮಂತ್ರಿಗಳು ಭೇಟಿಗೆ ಕಾದು ವಾಪಾಸ್ ಬಂದಿದ್ದಾರೆ. ಭೇಟಿ ಮಾಡಿದಾಗ ಸಭೆ ಕರೆಯುತ್ತೇನೆ ಎಂದ ಅಮಿತ್ ಶಾ ಇವತ್ತಿನವರೆಗೂ ಸಭೆಯನ್ನೇ ಕರೆದಿಲ್ಲ. ಸಭೆ ಕರೆಯದೆ ಬರ ಪರಿಹಾರ ಬರುವುದೇ ಇಲ್ಲ.
ಅಮಿತ್ ಶಾ ಅವರು ಇವತ್ತಿನವರೆಗೂ ಪ್ರಾಥಮಿಕ ಸಭೆಯನ್ನೇ ಕರೆದಿಲ್ಲ. ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಬಂದಾಗಲೂ ಮನವಿ ಮಾಡಿದ್ದೆ. 35 ಸಾವಿರ ಕೋಟಿ ಬೆಳೆ ನಷ್ಟ ಆಗಿದೆ. ಇದಕ್ಕೆ ₹17,901 ಕೋಟಿ  ಪರಿಹಾರವನ್ನು ಕೇಂದ್ರದಿಂದ ಕೇಳಿದ್ದೇವೆ. ಎನ್‌ಡಿಆರ್‌ಎಫ್‌ ನಿಂದ ನಯಾ ಪೈಸೆ ಬಿಡುಗಡೆ ಮಾಡಿಲ್ಲ. 2019 ರಲ್ಲಿ ಪ್ರವಾಹ ಬಂದಾಗ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಎನ್‌ಡಿಆರ್‌ಎಫ್‌ಗಾಗಿ ಗೋಗರೆದರೂ ಪರಿಹಾರ ಕೊಡಲಿಲ್ಲ’ ಎಂದು ಹೇಳಿದರು.

‘ಉತ್ತರದ ರಾಜ್ಯಗಳಿಗೆ ಅನುದಾನ ಕೊಡಬೇಡಿ ಎಂದು ಹೇಳುವುದಿಲ್ಲ. ಆದರೆ ದಕ್ಷಿಣ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಿ. ಚಿನ್ನದ ಮೊಟ್ಟೆ ಇಡುವ ಕೋಳಿ ಎಂದು ಕತ್ತು ಕುಯ್ಯಬಾರದು, ಹಾಲು ಕೊಡುವ ಕೆಚ್ಚಲನ್ನೇ ಕತ್ತರಿಸಬಾರದು ಎನ್ನುವುದು ನಮ್ಮ ಮನವಿ. ನಮ್ಮ ನಿರಂತರ ಬೇಡಿಕೆ, ಮನವಿಗಳಿಗೂ ಕೇಂದ್ರ ಬೆಲೆ ಕೊಟ್ಟಿಲ್ಲ. ಯಡಿಯೂರಪ್ಪ, ಬೊಮ್ಮಾಯಿಯವರು ಪ್ರಧಾನಿಗಳ ಮುಂದೆ ಬಾಯಿ ಬಿಡುವುದಿಲ್ಲ. ವಿರೋಧಪಕ್ಷದ ನಾಯಕ ಆರ್.ಅಶೋಕ್ ಗೆ ಈ ವಿಷಯಗಳೆಲ್ಲಾ ಅರ್ಥವೇ ಆಗಲ್ಲ. ಪ್ರಲ್ಹಾದ್ ಜೋಷಿ ಮತ್ತು ಶೋಭಾ ಕರಂದ್ಲಾಜೆ ರಾಜ್ಯದಿಂದ ಕೇಂದ್ರ ಮಂತ್ರಿಗಳಾಗಿದ್ದಾರೆ. 27 ಜನ ಸಂಸದರು ಸಂಸತ್ತಿನಲ್ಲಿ ಮಾತೇ ಆಡಿಲ್ಲ. ಜನ ಇವರನ್ನು ಆಯ್ಕೆ ಮಾಡಿ ಕಳುಹಿಸಿದರೆ ಕಣ್ಣುಮುಚ್ಚಿ ಕುಳಿತಿದ್ದಾರೆ. ಇವರು ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಬಾಯಿಯನ್ನೇ ಬಿಡುತ್ತಿಲ್ಲ. ₹11 ಸಾವಿರ ಕೋಟಿ ಕೇಂದ್ರ ಹಣಕಾಸು ಸಚಿವರಿಂದಲೇ ತಿರಸ್ಕಾರವಾಗಿದೆ. ರಾಜ್ಯದಿಂದ ಆಯ್ಕೆ ಆದ ನಿರ್ಮಲಾ ಸೀತಾರಾಮನ್ ರಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ’ ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು.

‘ನರೇಂದ್ರ ಮೋದಿಯವರು ಸೂಕ್ಷ್ಮ ಇದ್ದಾರೆ, ಪ್ರತಿಭಟನೆ ಬಳಿಕವಾದರೂ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಿ ಕರ್ನಾಟಕದ ಪಾಲಿನ ಹಣವನ್ನು ವಾಪಾಸ್ ಕೊಡಬಹುದು ಎಂಬ ಆಶಾಭಾವನೆ ಇದೆ.
ಮುಂಬರುವ ಅಧಿವೇಶನದಲ್ಲಿ ಶ್ವೇತಪತ್ರ ಹೊರಡಿಸಲು ರಾಜ್ಯ ಸರ್ಕಾರವು ಚಿಂತನೆ ನಡೆಸಿದೆ’ ಎಂದು ಹೇಳಿದರು.

ಇದನ್ನೂ ಓದಿ; ತೆರಿಗೆ ಹಂಚಿಕೆ ತಾರತಮ್ಯ ಇಲ್ಲ ಎಂದ ವಿತ್ತ ಸಚಿವೆ; ‘ಪಟ್ಟಭದ್ರ ಹಿತಾಸಕ್ತಿಗಳ ವಿನಾಶಕಾರಿ ನಿರೂಪಣೆ’ ಎಂದು ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...