Homeಮುಖಪುಟಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ಬಿಜೆಪಿ & ಅವರ ಪರಿವಾರ ಎಂದಿಗೂ ಬ್ರಿಟಿಷರ ವಿರುದ್ಧ ಹೋರಾಡಲಿಲ್ಲ. ಅವರು ಸ್ವಾತಂತ್ರ್ಯ ಚಳವಳಿಯ ವಿರುದ್ಧವಿದ್ದರು. ಹಾಗಾಗಿ ಇಂದಿಗೂ ಚಳವಳಿಗಳಿಗೆ ಅವರು ಹೆದರುತ್ತಾರೆ"

- Advertisement -
- Advertisement -

ಬೃಹತ್ ಆಂದೋಲನವೇ ಬ್ರಿಟಿಷ್ ವಸಾಹತುಶಾಹಿಯಿಂದ ಭಾರತವನ್ನು ಬಿಡುಗಡೆಗೊಳಿಸಿತು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೆನಪಿಸಲು ಬಯಸುತ್ತೇವೆ. ಅದಕ್ಕಾಗಿ ನಾವು ಆಂದೋಲನ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ ಎಂದು ಹೇಳುವ ಮೂಲಕ ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ನರೇಂದ್ರ ಮೋದಿಯವರ ಆಂದೋಲನ್ ಜೀವಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದೆ.

ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ಮೋದಿಯವರು “ದೇಶದಲ್ಲಿ ಆಂದೋಲನ್‌ ಜೀವಿ (ಹೋರಾಟಗಾರರು) ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ” ಎಂದು ಹೇಳಿದ್ದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚಾ ಡಾ.ದರ್ಶನ್ ಪಾಲ್ “ಬಿಜೆಪಿ ಮತ್ತು ಅವರ ಪರಿವಾರ ಎಂದಿಗೂ ಬ್ರಿಟಿಷರ ವಿರುದ್ಧ ಹೋರಾಡಲಿಲ್ಲ. ಅವರು ಸ್ವಾತಂತ್ರ್ಯ ಚಳವಳಿಯ ವಿರುದ್ಧವಿದ್ದರು. ಹಾಗಾಗಿ ಇಂದಿಗೂ ಚಳವಳಿಗಳಿಗೆ ಅವರು ಹೆದರುತ್ತಾರೆ” ಎಂದು ತಿರುಗೇಟು ನೀಡಿದ್ದಾರೆ.

ಕೇಂದ್ರ ಸರ್ಕಾರ ಈಗಲಾದರೂ ನಮ್ಮ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಒಪ್ಪಿಕೊಂಡರೆ, ರೈತರು ಕೃಷಿಗೆ ಮರಳಲು ಹೆಚ್ಚು ಸಂತೋಷಪಡುತ್ತಾರೆ. ಆದರೆ ಸರ್ಕಾರದ ಅಹಂ ಮನೋಭಾವವೇ ಹೆಚ್ಚು ಆಂದೋಲನ್ ಜೀವಿಗಳನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಎಂಎಸ್‌ಪಿ ಕುರಿತ ಪ್ರಧಾನಿಯವರ ಖಾಲಿ ಹೇಳಿಕೆಗಳು ರೈತರಿಗೆ ಯಾವುದೇ ರೀತಿಯಲ್ಲಿ ಪ್ರಯೋಜನವಾಗುವುದಿಲ್ಲ ಮತ್ತು ಹಿಂದಿನ ಕಾಲದಲ್ಲಿಯೂ ಇಂತಹ ಅರ್ಥಹೀನ ಹೇಳಿಕೆಗಳನ್ನು ನೀಡಲಾಗಿದೆ. ಎಲ್ಲಾ ಬೆಳೆಗಳಿಗೆ ಎಂಎಸ್‌ಪಿ ಖಾತ್ರಿ ಮಾಡುವ ಕಾನೂನು ಜಾರಿಮಾಡಿದರೆ ಮಾತ್ರ ರೈತರು ವಾಸ್ತವದಲ್ಲಿ ನ್ಯಾಯಯುತವಾಗಿ ಮತ್ತು ಸುಸ್ಥಿರ ರೀತಿಯಲ್ಲಿ ಪ್ರಯೋಜನ ಪಡೆಯುತ್ತಾರೆ ಎಂದು ದರ್ಶನ್ ಪಾಲ್ ಹೇಳಿದ್ದಾರೆ.

ಯಾವುದೇ “ವಿದೇಶಿ ವಿನಾಶಕಾರಿ ಐಡಿಯಾಲಜಿ” ಯಿಂದ ನಾವು ದೂರವಾಗಿದ್ದೇವೆ. ಆದರೆ ಪ್ರಧಾನಮಂತ್ರಿಯ ಎಫ್‌ಡಿಐ ವಿಧಾನವು ಅಪಾಯಕಾರಿ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ. ಪ್ರಪಂಚದ ಯಾವುದೇ ಭಾಗದಲ್ಲಿ ಮೂಲಭೂತ ಮಾನವ ಹಕ್ಕುಗಳನ್ನು ಎತ್ತಿಹಿಡಿಯುವ ರಚನಾತ್ಮಕ ಪ್ರಜಾಪ್ರಭುತ್ವ ಪ್ರಕ್ರಿಯೆಗಳನ್ನು ನಾವು ಬೆಂಬಲಿಸುತ್ತೇವೆ ಮತ್ತು ಪ್ರಪಂಚದಾದ್ಯಂತದ ಸಮಾನ ಮನಸ್ಕ ನಾಗರಿಕರಿಂದ ಇದೇ ರೀತಿಯ ಬೆಂಬಲವನ್ನು ನಿರೀಕ್ಷಿಸುತ್ತೇವೆ, ಏಕೆಂದರೆ “ಎಲ್ಲಿಯೇ ನಡೆಯುವ ಅನ್ಯಾಯವು, ಎಲ್ಲೆಡೆಯು ನ್ಯಾಯಕ್ಕೆ ಅಪಾಯವಾಗಿದೆ” ಎಂದು ಮೋರ್ಚಾ ಹೇಳಿದೆ.

ರೈತರ ಬೇಡಿಕೆಗಳನ್ನು ಗಂಭೀರವಾಗಿ ಮತ್ತು ಪ್ರಾಮಾಣಿಕವಾಗಿ ಪರಿಹರಿಸುವಲ್ಲಿ ಸರ್ಕಾರದ ಬದ್ಧತೆ ಮೇಲೆ ನಮಗೆ ಅನುಮಾನವಿದೆ. ಏಕೆಂದರೆ ವಿದ್ಯುತ್ ತಿದ್ದುಪಡಿ ಮಸೂದೆ 2021 ಕರಡು ಮಸೂದೆಯನ್ನು ಹಿಂತೆಗೆದುಕೊಳ್ಳುವುದಾಗಿ ರೈತರ ಸಂಘಟನೆಗಳಿಗೆ ಭರವಸೆ ನೀಡಿದ್ದ ಕೇಂದ್ರ ಇಂದು ಅದನ್ನು ಸಂಸತ್ತಿನಲಲ್ಲಿ ಪರಿಚಯಿಸುತ್ತಿದೆ ಎಂದು ಡಾ.ದರ್ಶನ್ ಪಾಲ್ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶ, ರಾಜಸ್ಥಾನ, ಹರಿಯಾಣ ಮತ್ತು ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಕಿಸಾನ್ ಮಹಾಪಂಚಾಯತ್‌ಗಳಿಗೆ ಜನಪ್ರಹಾವೇ ಹರಿದುಬರುತ್ತಿದೆ. ಇದು ದೆಹಲಿಯ ಗಡಿಗಳಲ್ಲಿ ಹೋರಾಟನಿರತ ರೈತರ ಸ್ಫೂರ್ತಿ ಮತ್ತು ಉತ್ಸಾಹವನ್ನು ಹಿಮ್ಮಡಿಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

ಎಂಎಸ್‌ಪಿ ಮುಂಚೆಯು ಇತ್ತು, ಮುಂದೆಯು ಇರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳೀದ್ದಾರೆ. ಆದರೆ ಅವರು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ತರುತ್ತೇವೆ ಎಂದು ಹೇಳಿಲ್ಲ. ಇಂದು ದೇಶವು ನಂಬಿಕೆಯ ಮೇಲೆ ನಡೆಯುತ್ತಿಲ್ಲ ಬದಲಿಗೆ ಕಾನೂನು ಮತ್ತು ಸಂವಿಧಾನದ ಮೇಲೆ ನಡೆಯುತ್ತಿದೆ ಎಂದು ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಪ್ರಧಾನಿಗಳು ಶಾಂತಿಯುತವಾಗಿ ಹೋರಾಡುತ್ತಿರುವ ರೈತರನ್ನು ಆಂದೋಲನ್ ಜೀವಿಗಳೆಂದು ವ್ಯಂಗ್ಯವಾಡಿದ್ದಾರೆ. ವಿದೇಶಿ ವಿನಾಶಕಾರಿ ಐಡಿಯಾಲಜಿಯಿಂದ ಪ್ರೇರಿತರಾದವರು ಎಂದು ಅವಮಾನ ಮಾಡಿದ್ದಾರೆ. ತಮ್ಮ ಅಧಿಕಾರ ದುರಪಯೋಗ ಪಡಿಸಿಕೊಂಡು ರೈತರನ್ನು ಅವಮಾನಿಸುವ ಪ್ರಧಾನಿಗಳ ನಡೆಯನ್ನು ಆಲ್‌ ಇಂಡಿಯಾ ಕಿಸಾನ್ ಮಜ್ದೂರ್ ಸಭಾ ಖಂಡಿಸಿದೆ.

11 ಸುತ್ತಿನ ಮಾತುಕತೆಗಳಲ್ಲಿ ರೈತರು ಸಮಸ್ಯೆಗಳನ್ನು ವಿವರವಾಗಿ ಚರ್ಚಿಸಿದ್ದಾರೆ. ಆದರೆ ಮೋದಿಯವರು ತಮ್ಮ ಕಾರ್ಪೊರೇಟ್ ಗೆಳೆಯರಿಗಾಗಿ ಈ ಕಾನೂನುಗಳನ್ನು ವಾಪಸ್ ಪಡೆಯದೆ ಹಠಮಾರಿ ಧೋರಣೆ ಪ್ರದರ್ಶಿಸಿದ್ದಾರೆ ಎಂದು ಆಲ್‌ ಇಂಡಿಯಾ ಕಿಸಾನ್ ಮಜ್ದೂರ್ ಸಭಾದ ಪ್ರಧಾನ ಕಾರ್ಯದರ್ಶಿ ಆಶಿಸ್ ಮಿತ್ತಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...