Homeಮುಖಪುಟಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ಬಿಜೆಪಿ & ಅವರ ಪರಿವಾರ ಎಂದಿಗೂ ಬ್ರಿಟಿಷರ ವಿರುದ್ಧ ಹೋರಾಡಲಿಲ್ಲ. ಅವರು ಸ್ವಾತಂತ್ರ್ಯ ಚಳವಳಿಯ ವಿರುದ್ಧವಿದ್ದರು. ಹಾಗಾಗಿ ಇಂದಿಗೂ ಚಳವಳಿಗಳಿಗೆ ಅವರು ಹೆದರುತ್ತಾರೆ"

- Advertisement -
- Advertisement -

ಬೃಹತ್ ಆಂದೋಲನವೇ ಬ್ರಿಟಿಷ್ ವಸಾಹತುಶಾಹಿಯಿಂದ ಭಾರತವನ್ನು ಬಿಡುಗಡೆಗೊಳಿಸಿತು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೆನಪಿಸಲು ಬಯಸುತ್ತೇವೆ. ಅದಕ್ಕಾಗಿ ನಾವು ಆಂದೋಲನ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ ಎಂದು ಹೇಳುವ ಮೂಲಕ ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ನರೇಂದ್ರ ಮೋದಿಯವರ ಆಂದೋಲನ್ ಜೀವಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದೆ.

ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ಮೋದಿಯವರು “ದೇಶದಲ್ಲಿ ಆಂದೋಲನ್‌ ಜೀವಿ (ಹೋರಾಟಗಾರರು) ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ” ಎಂದು ಹೇಳಿದ್ದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚಾ ಡಾ.ದರ್ಶನ್ ಪಾಲ್ “ಬಿಜೆಪಿ ಮತ್ತು ಅವರ ಪರಿವಾರ ಎಂದಿಗೂ ಬ್ರಿಟಿಷರ ವಿರುದ್ಧ ಹೋರಾಡಲಿಲ್ಲ. ಅವರು ಸ್ವಾತಂತ್ರ್ಯ ಚಳವಳಿಯ ವಿರುದ್ಧವಿದ್ದರು. ಹಾಗಾಗಿ ಇಂದಿಗೂ ಚಳವಳಿಗಳಿಗೆ ಅವರು ಹೆದರುತ್ತಾರೆ” ಎಂದು ತಿರುಗೇಟು ನೀಡಿದ್ದಾರೆ.

ಕೇಂದ್ರ ಸರ್ಕಾರ ಈಗಲಾದರೂ ನಮ್ಮ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಒಪ್ಪಿಕೊಂಡರೆ, ರೈತರು ಕೃಷಿಗೆ ಮರಳಲು ಹೆಚ್ಚು ಸಂತೋಷಪಡುತ್ತಾರೆ. ಆದರೆ ಸರ್ಕಾರದ ಅಹಂ ಮನೋಭಾವವೇ ಹೆಚ್ಚು ಆಂದೋಲನ್ ಜೀವಿಗಳನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಎಂಎಸ್‌ಪಿ ಕುರಿತ ಪ್ರಧಾನಿಯವರ ಖಾಲಿ ಹೇಳಿಕೆಗಳು ರೈತರಿಗೆ ಯಾವುದೇ ರೀತಿಯಲ್ಲಿ ಪ್ರಯೋಜನವಾಗುವುದಿಲ್ಲ ಮತ್ತು ಹಿಂದಿನ ಕಾಲದಲ್ಲಿಯೂ ಇಂತಹ ಅರ್ಥಹೀನ ಹೇಳಿಕೆಗಳನ್ನು ನೀಡಲಾಗಿದೆ. ಎಲ್ಲಾ ಬೆಳೆಗಳಿಗೆ ಎಂಎಸ್‌ಪಿ ಖಾತ್ರಿ ಮಾಡುವ ಕಾನೂನು ಜಾರಿಮಾಡಿದರೆ ಮಾತ್ರ ರೈತರು ವಾಸ್ತವದಲ್ಲಿ ನ್ಯಾಯಯುತವಾಗಿ ಮತ್ತು ಸುಸ್ಥಿರ ರೀತಿಯಲ್ಲಿ ಪ್ರಯೋಜನ ಪಡೆಯುತ್ತಾರೆ ಎಂದು ದರ್ಶನ್ ಪಾಲ್ ಹೇಳಿದ್ದಾರೆ.

ಯಾವುದೇ “ವಿದೇಶಿ ವಿನಾಶಕಾರಿ ಐಡಿಯಾಲಜಿ” ಯಿಂದ ನಾವು ದೂರವಾಗಿದ್ದೇವೆ. ಆದರೆ ಪ್ರಧಾನಮಂತ್ರಿಯ ಎಫ್‌ಡಿಐ ವಿಧಾನವು ಅಪಾಯಕಾರಿ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ. ಪ್ರಪಂಚದ ಯಾವುದೇ ಭಾಗದಲ್ಲಿ ಮೂಲಭೂತ ಮಾನವ ಹಕ್ಕುಗಳನ್ನು ಎತ್ತಿಹಿಡಿಯುವ ರಚನಾತ್ಮಕ ಪ್ರಜಾಪ್ರಭುತ್ವ ಪ್ರಕ್ರಿಯೆಗಳನ್ನು ನಾವು ಬೆಂಬಲಿಸುತ್ತೇವೆ ಮತ್ತು ಪ್ರಪಂಚದಾದ್ಯಂತದ ಸಮಾನ ಮನಸ್ಕ ನಾಗರಿಕರಿಂದ ಇದೇ ರೀತಿಯ ಬೆಂಬಲವನ್ನು ನಿರೀಕ್ಷಿಸುತ್ತೇವೆ, ಏಕೆಂದರೆ “ಎಲ್ಲಿಯೇ ನಡೆಯುವ ಅನ್ಯಾಯವು, ಎಲ್ಲೆಡೆಯು ನ್ಯಾಯಕ್ಕೆ ಅಪಾಯವಾಗಿದೆ” ಎಂದು ಮೋರ್ಚಾ ಹೇಳಿದೆ.

ರೈತರ ಬೇಡಿಕೆಗಳನ್ನು ಗಂಭೀರವಾಗಿ ಮತ್ತು ಪ್ರಾಮಾಣಿಕವಾಗಿ ಪರಿಹರಿಸುವಲ್ಲಿ ಸರ್ಕಾರದ ಬದ್ಧತೆ ಮೇಲೆ ನಮಗೆ ಅನುಮಾನವಿದೆ. ಏಕೆಂದರೆ ವಿದ್ಯುತ್ ತಿದ್ದುಪಡಿ ಮಸೂದೆ 2021 ಕರಡು ಮಸೂದೆಯನ್ನು ಹಿಂತೆಗೆದುಕೊಳ್ಳುವುದಾಗಿ ರೈತರ ಸಂಘಟನೆಗಳಿಗೆ ಭರವಸೆ ನೀಡಿದ್ದ ಕೇಂದ್ರ ಇಂದು ಅದನ್ನು ಸಂಸತ್ತಿನಲಲ್ಲಿ ಪರಿಚಯಿಸುತ್ತಿದೆ ಎಂದು ಡಾ.ದರ್ಶನ್ ಪಾಲ್ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶ, ರಾಜಸ್ಥಾನ, ಹರಿಯಾಣ ಮತ್ತು ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಕಿಸಾನ್ ಮಹಾಪಂಚಾಯತ್‌ಗಳಿಗೆ ಜನಪ್ರಹಾವೇ ಹರಿದುಬರುತ್ತಿದೆ. ಇದು ದೆಹಲಿಯ ಗಡಿಗಳಲ್ಲಿ ಹೋರಾಟನಿರತ ರೈತರ ಸ್ಫೂರ್ತಿ ಮತ್ತು ಉತ್ಸಾಹವನ್ನು ಹಿಮ್ಮಡಿಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

ಎಂಎಸ್‌ಪಿ ಮುಂಚೆಯು ಇತ್ತು, ಮುಂದೆಯು ಇರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳೀದ್ದಾರೆ. ಆದರೆ ಅವರು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ತರುತ್ತೇವೆ ಎಂದು ಹೇಳಿಲ್ಲ. ಇಂದು ದೇಶವು ನಂಬಿಕೆಯ ಮೇಲೆ ನಡೆಯುತ್ತಿಲ್ಲ ಬದಲಿಗೆ ಕಾನೂನು ಮತ್ತು ಸಂವಿಧಾನದ ಮೇಲೆ ನಡೆಯುತ್ತಿದೆ ಎಂದು ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಪ್ರಧಾನಿಗಳು ಶಾಂತಿಯುತವಾಗಿ ಹೋರಾಡುತ್ತಿರುವ ರೈತರನ್ನು ಆಂದೋಲನ್ ಜೀವಿಗಳೆಂದು ವ್ಯಂಗ್ಯವಾಡಿದ್ದಾರೆ. ವಿದೇಶಿ ವಿನಾಶಕಾರಿ ಐಡಿಯಾಲಜಿಯಿಂದ ಪ್ರೇರಿತರಾದವರು ಎಂದು ಅವಮಾನ ಮಾಡಿದ್ದಾರೆ. ತಮ್ಮ ಅಧಿಕಾರ ದುರಪಯೋಗ ಪಡಿಸಿಕೊಂಡು ರೈತರನ್ನು ಅವಮಾನಿಸುವ ಪ್ರಧಾನಿಗಳ ನಡೆಯನ್ನು ಆಲ್‌ ಇಂಡಿಯಾ ಕಿಸಾನ್ ಮಜ್ದೂರ್ ಸಭಾ ಖಂಡಿಸಿದೆ.

11 ಸುತ್ತಿನ ಮಾತುಕತೆಗಳಲ್ಲಿ ರೈತರು ಸಮಸ್ಯೆಗಳನ್ನು ವಿವರವಾಗಿ ಚರ್ಚಿಸಿದ್ದಾರೆ. ಆದರೆ ಮೋದಿಯವರು ತಮ್ಮ ಕಾರ್ಪೊರೇಟ್ ಗೆಳೆಯರಿಗಾಗಿ ಈ ಕಾನೂನುಗಳನ್ನು ವಾಪಸ್ ಪಡೆಯದೆ ಹಠಮಾರಿ ಧೋರಣೆ ಪ್ರದರ್ಶಿಸಿದ್ದಾರೆ ಎಂದು ಆಲ್‌ ಇಂಡಿಯಾ ಕಿಸಾನ್ ಮಜ್ದೂರ್ ಸಭಾದ ಪ್ರಧಾನ ಕಾರ್ಯದರ್ಶಿ ಆಶಿಸ್ ಮಿತ್ತಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...