Homeಮುಖಪುಟಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ಬಿಜೆಪಿ & ಅವರ ಪರಿವಾರ ಎಂದಿಗೂ ಬ್ರಿಟಿಷರ ವಿರುದ್ಧ ಹೋರಾಡಲಿಲ್ಲ. ಅವರು ಸ್ವಾತಂತ್ರ್ಯ ಚಳವಳಿಯ ವಿರುದ್ಧವಿದ್ದರು. ಹಾಗಾಗಿ ಇಂದಿಗೂ ಚಳವಳಿಗಳಿಗೆ ಅವರು ಹೆದರುತ್ತಾರೆ"

- Advertisement -
- Advertisement -

ಬೃಹತ್ ಆಂದೋಲನವೇ ಬ್ರಿಟಿಷ್ ವಸಾಹತುಶಾಹಿಯಿಂದ ಭಾರತವನ್ನು ಬಿಡುಗಡೆಗೊಳಿಸಿತು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೆನಪಿಸಲು ಬಯಸುತ್ತೇವೆ. ಅದಕ್ಕಾಗಿ ನಾವು ಆಂದೋಲನ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ ಎಂದು ಹೇಳುವ ಮೂಲಕ ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ನರೇಂದ್ರ ಮೋದಿಯವರ ಆಂದೋಲನ್ ಜೀವಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದೆ.

ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ಮೋದಿಯವರು “ದೇಶದಲ್ಲಿ ಆಂದೋಲನ್‌ ಜೀವಿ (ಹೋರಾಟಗಾರರು) ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ” ಎಂದು ಹೇಳಿದ್ದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚಾ ಡಾ.ದರ್ಶನ್ ಪಾಲ್ “ಬಿಜೆಪಿ ಮತ್ತು ಅವರ ಪರಿವಾರ ಎಂದಿಗೂ ಬ್ರಿಟಿಷರ ವಿರುದ್ಧ ಹೋರಾಡಲಿಲ್ಲ. ಅವರು ಸ್ವಾತಂತ್ರ್ಯ ಚಳವಳಿಯ ವಿರುದ್ಧವಿದ್ದರು. ಹಾಗಾಗಿ ಇಂದಿಗೂ ಚಳವಳಿಗಳಿಗೆ ಅವರು ಹೆದರುತ್ತಾರೆ” ಎಂದು ತಿರುಗೇಟು ನೀಡಿದ್ದಾರೆ.

ಕೇಂದ್ರ ಸರ್ಕಾರ ಈಗಲಾದರೂ ನಮ್ಮ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಒಪ್ಪಿಕೊಂಡರೆ, ರೈತರು ಕೃಷಿಗೆ ಮರಳಲು ಹೆಚ್ಚು ಸಂತೋಷಪಡುತ್ತಾರೆ. ಆದರೆ ಸರ್ಕಾರದ ಅಹಂ ಮನೋಭಾವವೇ ಹೆಚ್ಚು ಆಂದೋಲನ್ ಜೀವಿಗಳನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಎಂಎಸ್‌ಪಿ ಕುರಿತ ಪ್ರಧಾನಿಯವರ ಖಾಲಿ ಹೇಳಿಕೆಗಳು ರೈತರಿಗೆ ಯಾವುದೇ ರೀತಿಯಲ್ಲಿ ಪ್ರಯೋಜನವಾಗುವುದಿಲ್ಲ ಮತ್ತು ಹಿಂದಿನ ಕಾಲದಲ್ಲಿಯೂ ಇಂತಹ ಅರ್ಥಹೀನ ಹೇಳಿಕೆಗಳನ್ನು ನೀಡಲಾಗಿದೆ. ಎಲ್ಲಾ ಬೆಳೆಗಳಿಗೆ ಎಂಎಸ್‌ಪಿ ಖಾತ್ರಿ ಮಾಡುವ ಕಾನೂನು ಜಾರಿಮಾಡಿದರೆ ಮಾತ್ರ ರೈತರು ವಾಸ್ತವದಲ್ಲಿ ನ್ಯಾಯಯುತವಾಗಿ ಮತ್ತು ಸುಸ್ಥಿರ ರೀತಿಯಲ್ಲಿ ಪ್ರಯೋಜನ ಪಡೆಯುತ್ತಾರೆ ಎಂದು ದರ್ಶನ್ ಪಾಲ್ ಹೇಳಿದ್ದಾರೆ.

ಯಾವುದೇ “ವಿದೇಶಿ ವಿನಾಶಕಾರಿ ಐಡಿಯಾಲಜಿ” ಯಿಂದ ನಾವು ದೂರವಾಗಿದ್ದೇವೆ. ಆದರೆ ಪ್ರಧಾನಮಂತ್ರಿಯ ಎಫ್‌ಡಿಐ ವಿಧಾನವು ಅಪಾಯಕಾರಿ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ. ಪ್ರಪಂಚದ ಯಾವುದೇ ಭಾಗದಲ್ಲಿ ಮೂಲಭೂತ ಮಾನವ ಹಕ್ಕುಗಳನ್ನು ಎತ್ತಿಹಿಡಿಯುವ ರಚನಾತ್ಮಕ ಪ್ರಜಾಪ್ರಭುತ್ವ ಪ್ರಕ್ರಿಯೆಗಳನ್ನು ನಾವು ಬೆಂಬಲಿಸುತ್ತೇವೆ ಮತ್ತು ಪ್ರಪಂಚದಾದ್ಯಂತದ ಸಮಾನ ಮನಸ್ಕ ನಾಗರಿಕರಿಂದ ಇದೇ ರೀತಿಯ ಬೆಂಬಲವನ್ನು ನಿರೀಕ್ಷಿಸುತ್ತೇವೆ, ಏಕೆಂದರೆ “ಎಲ್ಲಿಯೇ ನಡೆಯುವ ಅನ್ಯಾಯವು, ಎಲ್ಲೆಡೆಯು ನ್ಯಾಯಕ್ಕೆ ಅಪಾಯವಾಗಿದೆ” ಎಂದು ಮೋರ್ಚಾ ಹೇಳಿದೆ.

ರೈತರ ಬೇಡಿಕೆಗಳನ್ನು ಗಂಭೀರವಾಗಿ ಮತ್ತು ಪ್ರಾಮಾಣಿಕವಾಗಿ ಪರಿಹರಿಸುವಲ್ಲಿ ಸರ್ಕಾರದ ಬದ್ಧತೆ ಮೇಲೆ ನಮಗೆ ಅನುಮಾನವಿದೆ. ಏಕೆಂದರೆ ವಿದ್ಯುತ್ ತಿದ್ದುಪಡಿ ಮಸೂದೆ 2021 ಕರಡು ಮಸೂದೆಯನ್ನು ಹಿಂತೆಗೆದುಕೊಳ್ಳುವುದಾಗಿ ರೈತರ ಸಂಘಟನೆಗಳಿಗೆ ಭರವಸೆ ನೀಡಿದ್ದ ಕೇಂದ್ರ ಇಂದು ಅದನ್ನು ಸಂಸತ್ತಿನಲಲ್ಲಿ ಪರಿಚಯಿಸುತ್ತಿದೆ ಎಂದು ಡಾ.ದರ್ಶನ್ ಪಾಲ್ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶ, ರಾಜಸ್ಥಾನ, ಹರಿಯಾಣ ಮತ್ತು ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಕಿಸಾನ್ ಮಹಾಪಂಚಾಯತ್‌ಗಳಿಗೆ ಜನಪ್ರಹಾವೇ ಹರಿದುಬರುತ್ತಿದೆ. ಇದು ದೆಹಲಿಯ ಗಡಿಗಳಲ್ಲಿ ಹೋರಾಟನಿರತ ರೈತರ ಸ್ಫೂರ್ತಿ ಮತ್ತು ಉತ್ಸಾಹವನ್ನು ಹಿಮ್ಮಡಿಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

ಎಂಎಸ್‌ಪಿ ಮುಂಚೆಯು ಇತ್ತು, ಮುಂದೆಯು ಇರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳೀದ್ದಾರೆ. ಆದರೆ ಅವರು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ತರುತ್ತೇವೆ ಎಂದು ಹೇಳಿಲ್ಲ. ಇಂದು ದೇಶವು ನಂಬಿಕೆಯ ಮೇಲೆ ನಡೆಯುತ್ತಿಲ್ಲ ಬದಲಿಗೆ ಕಾನೂನು ಮತ್ತು ಸಂವಿಧಾನದ ಮೇಲೆ ನಡೆಯುತ್ತಿದೆ ಎಂದು ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಪ್ರಧಾನಿಗಳು ಶಾಂತಿಯುತವಾಗಿ ಹೋರಾಡುತ್ತಿರುವ ರೈತರನ್ನು ಆಂದೋಲನ್ ಜೀವಿಗಳೆಂದು ವ್ಯಂಗ್ಯವಾಡಿದ್ದಾರೆ. ವಿದೇಶಿ ವಿನಾಶಕಾರಿ ಐಡಿಯಾಲಜಿಯಿಂದ ಪ್ರೇರಿತರಾದವರು ಎಂದು ಅವಮಾನ ಮಾಡಿದ್ದಾರೆ. ತಮ್ಮ ಅಧಿಕಾರ ದುರಪಯೋಗ ಪಡಿಸಿಕೊಂಡು ರೈತರನ್ನು ಅವಮಾನಿಸುವ ಪ್ರಧಾನಿಗಳ ನಡೆಯನ್ನು ಆಲ್‌ ಇಂಡಿಯಾ ಕಿಸಾನ್ ಮಜ್ದೂರ್ ಸಭಾ ಖಂಡಿಸಿದೆ.

11 ಸುತ್ತಿನ ಮಾತುಕತೆಗಳಲ್ಲಿ ರೈತರು ಸಮಸ್ಯೆಗಳನ್ನು ವಿವರವಾಗಿ ಚರ್ಚಿಸಿದ್ದಾರೆ. ಆದರೆ ಮೋದಿಯವರು ತಮ್ಮ ಕಾರ್ಪೊರೇಟ್ ಗೆಳೆಯರಿಗಾಗಿ ಈ ಕಾನೂನುಗಳನ್ನು ವಾಪಸ್ ಪಡೆಯದೆ ಹಠಮಾರಿ ಧೋರಣೆ ಪ್ರದರ್ಶಿಸಿದ್ದಾರೆ ಎಂದು ಆಲ್‌ ಇಂಡಿಯಾ ಕಿಸಾನ್ ಮಜ್ದೂರ್ ಸಭಾದ ಪ್ರಧಾನ ಕಾರ್ಯದರ್ಶಿ ಆಶಿಸ್ ಮಿತ್ತಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....