Homeಮುಖಪುಟಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ಬಿಜೆಪಿ & ಅವರ ಪರಿವಾರ ಎಂದಿಗೂ ಬ್ರಿಟಿಷರ ವಿರುದ್ಧ ಹೋರಾಡಲಿಲ್ಲ. ಅವರು ಸ್ವಾತಂತ್ರ್ಯ ಚಳವಳಿಯ ವಿರುದ್ಧವಿದ್ದರು. ಹಾಗಾಗಿ ಇಂದಿಗೂ ಚಳವಳಿಗಳಿಗೆ ಅವರು ಹೆದರುತ್ತಾರೆ"

- Advertisement -
- Advertisement -

ಬೃಹತ್ ಆಂದೋಲನವೇ ಬ್ರಿಟಿಷ್ ವಸಾಹತುಶಾಹಿಯಿಂದ ಭಾರತವನ್ನು ಬಿಡುಗಡೆಗೊಳಿಸಿತು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೆನಪಿಸಲು ಬಯಸುತ್ತೇವೆ. ಅದಕ್ಕಾಗಿ ನಾವು ಆಂದೋಲನ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ ಎಂದು ಹೇಳುವ ಮೂಲಕ ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ನರೇಂದ್ರ ಮೋದಿಯವರ ಆಂದೋಲನ್ ಜೀವಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದೆ.

ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ಮೋದಿಯವರು “ದೇಶದಲ್ಲಿ ಆಂದೋಲನ್‌ ಜೀವಿ (ಹೋರಾಟಗಾರರು) ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ” ಎಂದು ಹೇಳಿದ್ದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚಾ ಡಾ.ದರ್ಶನ್ ಪಾಲ್ “ಬಿಜೆಪಿ ಮತ್ತು ಅವರ ಪರಿವಾರ ಎಂದಿಗೂ ಬ್ರಿಟಿಷರ ವಿರುದ್ಧ ಹೋರಾಡಲಿಲ್ಲ. ಅವರು ಸ್ವಾತಂತ್ರ್ಯ ಚಳವಳಿಯ ವಿರುದ್ಧವಿದ್ದರು. ಹಾಗಾಗಿ ಇಂದಿಗೂ ಚಳವಳಿಗಳಿಗೆ ಅವರು ಹೆದರುತ್ತಾರೆ” ಎಂದು ತಿರುಗೇಟು ನೀಡಿದ್ದಾರೆ.

ಕೇಂದ್ರ ಸರ್ಕಾರ ಈಗಲಾದರೂ ನಮ್ಮ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಒಪ್ಪಿಕೊಂಡರೆ, ರೈತರು ಕೃಷಿಗೆ ಮರಳಲು ಹೆಚ್ಚು ಸಂತೋಷಪಡುತ್ತಾರೆ. ಆದರೆ ಸರ್ಕಾರದ ಅಹಂ ಮನೋಭಾವವೇ ಹೆಚ್ಚು ಆಂದೋಲನ್ ಜೀವಿಗಳನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಎಂಎಸ್‌ಪಿ ಕುರಿತ ಪ್ರಧಾನಿಯವರ ಖಾಲಿ ಹೇಳಿಕೆಗಳು ರೈತರಿಗೆ ಯಾವುದೇ ರೀತಿಯಲ್ಲಿ ಪ್ರಯೋಜನವಾಗುವುದಿಲ್ಲ ಮತ್ತು ಹಿಂದಿನ ಕಾಲದಲ್ಲಿಯೂ ಇಂತಹ ಅರ್ಥಹೀನ ಹೇಳಿಕೆಗಳನ್ನು ನೀಡಲಾಗಿದೆ. ಎಲ್ಲಾ ಬೆಳೆಗಳಿಗೆ ಎಂಎಸ್‌ಪಿ ಖಾತ್ರಿ ಮಾಡುವ ಕಾನೂನು ಜಾರಿಮಾಡಿದರೆ ಮಾತ್ರ ರೈತರು ವಾಸ್ತವದಲ್ಲಿ ನ್ಯಾಯಯುತವಾಗಿ ಮತ್ತು ಸುಸ್ಥಿರ ರೀತಿಯಲ್ಲಿ ಪ್ರಯೋಜನ ಪಡೆಯುತ್ತಾರೆ ಎಂದು ದರ್ಶನ್ ಪಾಲ್ ಹೇಳಿದ್ದಾರೆ.

ಯಾವುದೇ “ವಿದೇಶಿ ವಿನಾಶಕಾರಿ ಐಡಿಯಾಲಜಿ” ಯಿಂದ ನಾವು ದೂರವಾಗಿದ್ದೇವೆ. ಆದರೆ ಪ್ರಧಾನಮಂತ್ರಿಯ ಎಫ್‌ಡಿಐ ವಿಧಾನವು ಅಪಾಯಕಾರಿ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ. ಪ್ರಪಂಚದ ಯಾವುದೇ ಭಾಗದಲ್ಲಿ ಮೂಲಭೂತ ಮಾನವ ಹಕ್ಕುಗಳನ್ನು ಎತ್ತಿಹಿಡಿಯುವ ರಚನಾತ್ಮಕ ಪ್ರಜಾಪ್ರಭುತ್ವ ಪ್ರಕ್ರಿಯೆಗಳನ್ನು ನಾವು ಬೆಂಬಲಿಸುತ್ತೇವೆ ಮತ್ತು ಪ್ರಪಂಚದಾದ್ಯಂತದ ಸಮಾನ ಮನಸ್ಕ ನಾಗರಿಕರಿಂದ ಇದೇ ರೀತಿಯ ಬೆಂಬಲವನ್ನು ನಿರೀಕ್ಷಿಸುತ್ತೇವೆ, ಏಕೆಂದರೆ “ಎಲ್ಲಿಯೇ ನಡೆಯುವ ಅನ್ಯಾಯವು, ಎಲ್ಲೆಡೆಯು ನ್ಯಾಯಕ್ಕೆ ಅಪಾಯವಾಗಿದೆ” ಎಂದು ಮೋರ್ಚಾ ಹೇಳಿದೆ.

ರೈತರ ಬೇಡಿಕೆಗಳನ್ನು ಗಂಭೀರವಾಗಿ ಮತ್ತು ಪ್ರಾಮಾಣಿಕವಾಗಿ ಪರಿಹರಿಸುವಲ್ಲಿ ಸರ್ಕಾರದ ಬದ್ಧತೆ ಮೇಲೆ ನಮಗೆ ಅನುಮಾನವಿದೆ. ಏಕೆಂದರೆ ವಿದ್ಯುತ್ ತಿದ್ದುಪಡಿ ಮಸೂದೆ 2021 ಕರಡು ಮಸೂದೆಯನ್ನು ಹಿಂತೆಗೆದುಕೊಳ್ಳುವುದಾಗಿ ರೈತರ ಸಂಘಟನೆಗಳಿಗೆ ಭರವಸೆ ನೀಡಿದ್ದ ಕೇಂದ್ರ ಇಂದು ಅದನ್ನು ಸಂಸತ್ತಿನಲಲ್ಲಿ ಪರಿಚಯಿಸುತ್ತಿದೆ ಎಂದು ಡಾ.ದರ್ಶನ್ ಪಾಲ್ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶ, ರಾಜಸ್ಥಾನ, ಹರಿಯಾಣ ಮತ್ತು ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಕಿಸಾನ್ ಮಹಾಪಂಚಾಯತ್‌ಗಳಿಗೆ ಜನಪ್ರಹಾವೇ ಹರಿದುಬರುತ್ತಿದೆ. ಇದು ದೆಹಲಿಯ ಗಡಿಗಳಲ್ಲಿ ಹೋರಾಟನಿರತ ರೈತರ ಸ್ಫೂರ್ತಿ ಮತ್ತು ಉತ್ಸಾಹವನ್ನು ಹಿಮ್ಮಡಿಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

ಎಂಎಸ್‌ಪಿ ಮುಂಚೆಯು ಇತ್ತು, ಮುಂದೆಯು ಇರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳೀದ್ದಾರೆ. ಆದರೆ ಅವರು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ತರುತ್ತೇವೆ ಎಂದು ಹೇಳಿಲ್ಲ. ಇಂದು ದೇಶವು ನಂಬಿಕೆಯ ಮೇಲೆ ನಡೆಯುತ್ತಿಲ್ಲ ಬದಲಿಗೆ ಕಾನೂನು ಮತ್ತು ಸಂವಿಧಾನದ ಮೇಲೆ ನಡೆಯುತ್ತಿದೆ ಎಂದು ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಪ್ರಧಾನಿಗಳು ಶಾಂತಿಯುತವಾಗಿ ಹೋರಾಡುತ್ತಿರುವ ರೈತರನ್ನು ಆಂದೋಲನ್ ಜೀವಿಗಳೆಂದು ವ್ಯಂಗ್ಯವಾಡಿದ್ದಾರೆ. ವಿದೇಶಿ ವಿನಾಶಕಾರಿ ಐಡಿಯಾಲಜಿಯಿಂದ ಪ್ರೇರಿತರಾದವರು ಎಂದು ಅವಮಾನ ಮಾಡಿದ್ದಾರೆ. ತಮ್ಮ ಅಧಿಕಾರ ದುರಪಯೋಗ ಪಡಿಸಿಕೊಂಡು ರೈತರನ್ನು ಅವಮಾನಿಸುವ ಪ್ರಧಾನಿಗಳ ನಡೆಯನ್ನು ಆಲ್‌ ಇಂಡಿಯಾ ಕಿಸಾನ್ ಮಜ್ದೂರ್ ಸಭಾ ಖಂಡಿಸಿದೆ.

11 ಸುತ್ತಿನ ಮಾತುಕತೆಗಳಲ್ಲಿ ರೈತರು ಸಮಸ್ಯೆಗಳನ್ನು ವಿವರವಾಗಿ ಚರ್ಚಿಸಿದ್ದಾರೆ. ಆದರೆ ಮೋದಿಯವರು ತಮ್ಮ ಕಾರ್ಪೊರೇಟ್ ಗೆಳೆಯರಿಗಾಗಿ ಈ ಕಾನೂನುಗಳನ್ನು ವಾಪಸ್ ಪಡೆಯದೆ ಹಠಮಾರಿ ಧೋರಣೆ ಪ್ರದರ್ಶಿಸಿದ್ದಾರೆ ಎಂದು ಆಲ್‌ ಇಂಡಿಯಾ ಕಿಸಾನ್ ಮಜ್ದೂರ್ ಸಭಾದ ಪ್ರಧಾನ ಕಾರ್ಯದರ್ಶಿ ಆಶಿಸ್ ಮಿತ್ತಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...