Homeಮುಖಪುಟರೈತ ಹೋರಾಟ: ಕೇಂದ್ರದೊಂದಿಗೆ ಮಾತುಕತೆಗೆ ಸಿದ್ದವಿದ್ದೇವೆ, ಹಕ್ಕೊತ್ತಾಯಗಳು ಅವೆ ಇರಲಿವೆ- ರಾಕೇಶ್‌ ಟಿಕಾಯತ್

ರೈತ ಹೋರಾಟ: ಕೇಂದ್ರದೊಂದಿಗೆ ಮಾತುಕತೆಗೆ ಸಿದ್ದವಿದ್ದೇವೆ, ಹಕ್ಕೊತ್ತಾಯಗಳು ಅವೆ ಇರಲಿವೆ- ರಾಕೇಶ್‌ ಟಿಕಾಯತ್

- Advertisement -
- Advertisement -

ನಾಲ್ಕು ತಿಂಗಳಿಂದ ದೆಹಲಿಯ ಗಡಿಗಳಲ್ಲಿ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್‌ ಮೋರ್ಚಾದ ರೈತ ಮುಖಂಡರನ್ನು ಕೇಂದ್ರ ಸರ್ಕಾರ ಮಾತುಕತೆಗೆ ಆಹ್ವಾನಿಸಿದರೆ ನಾವು ಮಾತುಕತೆಗೆ ಸಿದ್ದರಿದ್ದೇವೆ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡ ರಾಕೇಶ್‌ ಟಿಕಾಯತ್‌ ತಿಳಿಸಿದ್ದಾರೆ.

ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹರಿಯಾಣದ ಗೃಹ ಸಚಿವ ಅನಿಲ್‌ ವಿಜ್,‌ ʼಕೇಂದ್ರ ಸರ್ಕಾರ ಕೂಡಲೇ ಹೋರಾಟನಿರತ ರೈತರೊಂದಿಗೆ ಮಾತುಕತೆ ಪುನರಾರಂಭಿಸಬೇಕುʼ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ರವರನ್ನು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ರಾಕೇಶ್‌ ಟಿಕಾಯತ್‌ ಪ್ರತಿಕ್ರಿಯೆ ನೀಡಿದ್ದು, ಮಾತುಕತೆಗೆ ರೈತರು ಸಿದ್ದರಿದ್ದೇವೆ ಎಂದಿದ್ದಾರೆ.

“ಜನವರಿ 22 ರಂದು ನಡೆದ 11ನೇ ಸುತ್ತಿನ ಮಾತುಕತೆಗಳ ನಂತರ ಕೇಂದ್ರ ಸರ್ಕಾರ ಮತ್ತು ರೈತರೊಂದಿಗಿನ ಮಾತುಕತೆಗಳು ನಿಂತುಹೋಗಿವೆ. ಆದರೆ ಮೂರು ಕರಾಳ ಕಾನೂನುಗಳು ರದ್ದಾಗಬೇಕು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ಜಾರಿಗೊಳಿಸಬೇಕು ಎಂಬುದು ನಮ್ಮ ಹಕ್ಕೊತ್ತಾಯವಾಗಿದೆ. ಇದರಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ಸರ್ಕಾರ ಮಾತುಕತೆಗೆ ಕರೆದರೆ ಸಂಯುಕ್ತ ಕಿಸಾನ್‌ ಮೋರ್ಚಾ ಭಾಗವಹಿಸುತ್ತದೆ. ಇಲ್ಲದಿದ್ದಲ್ಲಿ ಕೊರೊನಾ ಅಲ್ಲ, ಅದಕ್ಕಿಂತಲೂ ದೊಡ್ಡದು ಬಂದರೂ ಸಹ ನಮ್ಮ ಹೋರಾಟ ನಿಲ್ಲುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ರವರು ಹೋರಾಟ ಮುಂದೂಡಿ, ಮಾತುಕತೆಗೆ ಬನ್ನಿ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಅವರು ಅಧಿಕೃತವಾಗಿ ನಮ್ಮನ್ನು ಆಹ್ವಾನಿಸಿಲ್ಲ. ಅಧಿಕೃತ ಕರೆ ಬಂದಲ್ಲಿ ಮಾತ್ರ ಮಾತುಕತೆಯಲ್ಲಿ ಭಾಗವಹಿಸುತ್ತೇವೆ. ಅಲ್ಲಿಯವರೆಗೂ ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸುತ್ತಲೇ ನಮ್ಮ ರೈತ ಹೋರಾಟ ಮುಂದುವರೆಯಲಿದೆ ಎಂದು ಟಿಕಾಯತ್‌ ಹೇಳಿದ್ದಾರೆ.

“ಕೊರೊನಾ ದೃಷ್ಟಿಯಿಂದ ಮಕ್ಕಳು ಮತ್ತು ವೃದ್ಧರಿಗೆ ಮನೆಗೆ ಹಿಂತಿರುಗುವಂತೆ ಹೇಳಬೇಕೆಂದು ನಾನು ಸಂಘಟನೆಯ ಮುಖಂಡರನ್ನು ಹಲವು ಬಾರಿ ಒತ್ತಾಯಿಸಿದ್ದೆ. ಈಗ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದೆ. ರೈತರು ಮತ್ತು ಅವರ ಸಂಘಗಳು ಕೊರೊನಾ ನಿಯಮಾವಳಿಗಳನ್ನು ಅನುಸರಿಸಬೇಕು” ಎಂದಿದ್ದಾರೆ.

“ರೈತರು ತಮ್ಮ ಪ್ರತಿಭಟನೆಯನ್ನು ಮುಂದೂಡಬೇಕು ಮತ್ತು ನಮ್ಮೊಂದಿಗೆ ಚರ್ಚಿಸಬೇಕು. ಪ್ರತಿಭಟನಾ ನಿರತ ರೈತರೊಂದಿಗೆ ಮೂರು ಕಾನೂನುಗಳ ಬಗ್ಗೆ ಚರ್ಚಿಸಲು ಕೇಂದ್ರವು ಮುಂದಿನ ಸುತ್ತಿನ ಮಾತುಕತೆಗೆ ಸಿದ್ಧವಾಗಿದೆ ಎಂದು ಕೃಷಿ ಸಚಿವ ತೋಮರ್ ನಿನ್ನೆ ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಹಿನ್ನೆಲೆ ರೈತ ಹೋರಾಟ ಮುಂದೂಡಿ, ಮಾತುಕತೆಗೆ ಬನ್ನಿ ಎಂದ ಕೃಷಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...