Homeಅಂತರಾಷ್ಟ್ರೀಯಚೀನಾವನ್ನು ಎದುರಿಸಲು ಯುರೋಪಿನಲ್ಲಿರುವ ತನ್ನ ಸೈನ್ಯವನ್ನು ಕಡಿಮೆ ಮಾಡುತ್ತಿದ್ದೇವೆ: ಅಮೆರಿಕಾ

ಚೀನಾವನ್ನು ಎದುರಿಸಲು ಯುರೋಪಿನಲ್ಲಿರುವ ತನ್ನ ಸೈನ್ಯವನ್ನು ಕಡಿಮೆ ಮಾಡುತ್ತಿದ್ದೇವೆ: ಅಮೆರಿಕಾ

- Advertisement -
- Advertisement -

ಭಾರತ, ಮಲೇಷ್ಯಾ, ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್‌ನಂತಹ ಏಷ್ಯಾದ ದೇಶಗಳಿಗೆ ಚೀನಾ ಕಡೆಯಿಂದ ಹೆಚ್ಚುತ್ತಿರುವ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಅದನ್ನು ಎದುರಿಸಲು ಅಮೆರಿಕಾ ತನ್ನ ಜಾಗತಿಕ ಪಡೆಗಳ ನಿಯೋಜನೆಯನ್ನು ಪರಿಶೀಲಿಸುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಹೇಳಿದ್ದಾರೆ.

ಜರ್ಮನ್ ಮಾರ್ಷಲ್ ಫಂಡ್‌ನ ವರ್ಚುವಲ್ ಬ್ರಸೆಲ್ಸ್ ಫೋರಂ 2020 ರ ಸಂದರ್ಭದಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಪೊಂಪಿಯೊ ಈ ಹೇಳಿಕೆಗಳನ್ನು ನೀಡಿದ್ದಾರೆ.

“ನಾವು ಪಿಎಲ್‌ಎಯನ್ನು ಎದುರಿಸಲು ಸೂಕ್ತವಾದ ಸ್ಥಿತಿಯಲ್ಲಿದ್ದೇವೆ ಎಂದು ಖಚಿತಪಡಿಸಿಕೊಳ್ಳಲಿದ್ದೇವೆ. ಇದು ನಮ್ಮ ಕಾಲದ ಸವಾಲು ಎಂದು ನಾವು ಭಾವಿಸುತ್ತೇವೆ. ಅದನ್ನು ಮಾಡಲು ನಮ್ಮಲ್ಲಿ ಸಂಪನ್ಮೂಲಗಳಿವೆ ಎಂದು ನಾವು ಖಚಿತಪಡಿಸಿಕೊಳ್ಳಲಿದ್ದೇವೆ” ಎಂದು ಪೊಂಪಿಯೊ ಹೇಳಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದ ಮೇರೆಗೆ ಸೇನೆಯ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಇದರ ಭಾಗವಾಗಿ ಅಮೆರಿಕಾವು ಜರ್ಮನಿಯಲ್ಲಿ ತನ್ನ ಸೈನಿಕರ ಸಂಖ್ಯೆಯನ್ನು ಸುಮಾರು 52,000 ದಿಂದ 25,000 ಕ್ಕೆ ಇಳಿಸುತ್ತಿದೆ ಎಂದು ಅವರು ಹೇಳಿದರು.

ಕೆಲವು ಪ್ರದೇಶಗಳಲ್ಲಿ ಅಮೆರಿಕಾದ ಕೆಲವು ಸಂಪನ್ಮೂಲಗಳು ಇರಲಿವೆ ಆದರೆ ಚೀನಾದ ಬೆದರಿಕೆಯ ಬಗ್ಗೆ ಮಾತನಾಡಬೇಕಾದರೆ ಭಾರತ, ವಿಯೇಟ್ನಾಂ, ಮಲೇಶ್ಯಾ, ಇಂಡೋನೇಷಿಯಾ ಹಾಗೂ ಪಿಲಿಫೈನ್ ನ ದಕ್ಷಿಣ ಚೀನಾ ಸಮುದ್ರಗಳ ಬಗೆಗಿನ ಸವಾಲುಗಳಿವೆ ಎಂದು ಹೇಳಿದ್ದಾರೆ.

“ಅಮರಿಕಾ ಮಾಡಲು ನಿರ್ಧರಿಸಿದ ವ್ಯತ್ಯಾಸವು ಕೆಲವು ಸ್ಥಳಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ, ಇತರ ರಾಷ್ಟ್ರಗಳು ತಮ್ಮದೇ ಆದ ರಕ್ಷಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗಬಹುದು. ಆದ್ದರಿಂದ, ನಾವು ಇದನ್ನು ಜಗತ್ತಿನ ಎಲ್ಲ ಪಾಲುದಾರರೊಂದಿಗೆ ಪೂರ್ಣ ಸಮಾಲೋಚನೆಯಲ್ಲಿ ಮಾಡಲು ಬಯಸುತ್ತೇವೆ, ಯುರೋಪಿಯನ್ ದೇಶಗಳೊಂದಿಗೆ ಖಂಡಿತವಾಗಿಯೂ” ಎಂದು ಪೊಂಪಿಯೊ ಹೇಳಿದ್ದಾರೆ.

ಮಿತ್ರರಾಷ್ಟ್ರಗಳು ಮತ್ತು ಸ್ನೇಹಿತರೊಂದಿಗೆ ಸಮಾಲೋಚಿಸಿ ಸೈನ್ಯದ ಸ್ಥಿತಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಪೊಂಪಿಯೊ ಹೇಳಿದ್ದಾರೆ.

ಕಳೆದ ವಾರ ಪೊಂಪಿಯೊ ಚೀನಾದ ಸೈನ್ಯ ಭಾರತದೊಂದಿಗಿನ ಗಡಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ ಮತ್ತು ದಕ್ಷಿಣ ಚೀನಾ ಸಮುದ್ರವನ್ನು ಮಿಲಿಟರೀಕರಣಗೊಳಿಸಿದೆ ಎಂದು ಟೀಕಿಸಿದ್ದರು.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಚೀನಾ ಮಿಲಿಟರಿ ಮತ್ತು ಆರ್ಥಿಕ ಪ್ರಭಾವವನ್ನು ವೇಗವಾಗಿ ವಿಸ್ತರಿಸುತ್ತಿರುವುದು ಅಮೆರಿಕಾದ ಕಳವಳಕ್ಕೆ ಕಾರಣವಾಗಿದೆ. ಚೀನಾವು ದಕ್ಷಿಣ ಚೀನಾ ಸಮುದ್ರ ಮತ್ತು ಪೂರ್ವ ಚೀನಾ ಸಮುದ್ರ ಎರಡರಲ್ಲೂ ತೀವ್ರವಾಗಿ ಪ್ರಾದೇಶಿಕ ವಿವಾದಗಳಲ್ಲಿ ತೊಡಗಿದೆ. ಈ ಪ್ರದೇಶದಲ್ಲಿ ಅದು ಅನೇಕ ದ್ವೀಪಗಳನ್ನು ನಿಯಂತ್ರಿಸುತ್ತಿದೆ ಮತ್ತು ಮಿಲಿಟರಿಕರಣಗೊಳಿಸಿದೆ. ಎರಡೂ ಪ್ರದೇಶಗಳು ಖನಿಜಗಳು, ತೈಲ ಮತ್ತು ಇತರ ನೈಸರ್ಗಿಕ ಸಂಪನ್ಮೂಲಗಳಿಂದ ಸಮೃದ್ಧವಾಗಿವೆ ಮತ್ತು ಜಾಗತಿಕ ವ್ಯಾಪಾರಕ್ಕೆ ಪ್ರಮುಖ ಸ್ಥಳವಾಗಿದೆ ಎಂದು ಹೇಳಲಾಗಿದೆ.


ಓದಿ: ಬಾಯ್‍ಕಾಟ್ ಚೈನಾ ಅಬ್ಬರದ ಕೂಗು ವಾಣಿಜ್ಯದಲ್ಲಿ ಕಾರ್ಯಗತ ಸಾಧ್ಯವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...