Homeಅಂತರಾಷ್ಟ್ರೀಯಚೀನಾವನ್ನು ಎದುರಿಸಲು ಯುರೋಪಿನಲ್ಲಿರುವ ತನ್ನ ಸೈನ್ಯವನ್ನು ಕಡಿಮೆ ಮಾಡುತ್ತಿದ್ದೇವೆ: ಅಮೆರಿಕಾ

ಚೀನಾವನ್ನು ಎದುರಿಸಲು ಯುರೋಪಿನಲ್ಲಿರುವ ತನ್ನ ಸೈನ್ಯವನ್ನು ಕಡಿಮೆ ಮಾಡುತ್ತಿದ್ದೇವೆ: ಅಮೆರಿಕಾ

- Advertisement -
- Advertisement -

ಭಾರತ, ಮಲೇಷ್ಯಾ, ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್‌ನಂತಹ ಏಷ್ಯಾದ ದೇಶಗಳಿಗೆ ಚೀನಾ ಕಡೆಯಿಂದ ಹೆಚ್ಚುತ್ತಿರುವ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಅದನ್ನು ಎದುರಿಸಲು ಅಮೆರಿಕಾ ತನ್ನ ಜಾಗತಿಕ ಪಡೆಗಳ ನಿಯೋಜನೆಯನ್ನು ಪರಿಶೀಲಿಸುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಹೇಳಿದ್ದಾರೆ.

ಜರ್ಮನ್ ಮಾರ್ಷಲ್ ಫಂಡ್‌ನ ವರ್ಚುವಲ್ ಬ್ರಸೆಲ್ಸ್ ಫೋರಂ 2020 ರ ಸಂದರ್ಭದಲ್ಲಿ ಕೇಳಿದ ಪ್ರಶ್ನೆಗೆ ಉತ್ತರವಾಗಿ ಪೊಂಪಿಯೊ ಈ ಹೇಳಿಕೆಗಳನ್ನು ನೀಡಿದ್ದಾರೆ.

“ನಾವು ಪಿಎಲ್‌ಎಯನ್ನು ಎದುರಿಸಲು ಸೂಕ್ತವಾದ ಸ್ಥಿತಿಯಲ್ಲಿದ್ದೇವೆ ಎಂದು ಖಚಿತಪಡಿಸಿಕೊಳ್ಳಲಿದ್ದೇವೆ. ಇದು ನಮ್ಮ ಕಾಲದ ಸವಾಲು ಎಂದು ನಾವು ಭಾವಿಸುತ್ತೇವೆ. ಅದನ್ನು ಮಾಡಲು ನಮ್ಮಲ್ಲಿ ಸಂಪನ್ಮೂಲಗಳಿವೆ ಎಂದು ನಾವು ಖಚಿತಪಡಿಸಿಕೊಳ್ಳಲಿದ್ದೇವೆ” ಎಂದು ಪೊಂಪಿಯೊ ಹೇಳಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದ ಮೇರೆಗೆ ಸೇನೆಯ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಇದರ ಭಾಗವಾಗಿ ಅಮೆರಿಕಾವು ಜರ್ಮನಿಯಲ್ಲಿ ತನ್ನ ಸೈನಿಕರ ಸಂಖ್ಯೆಯನ್ನು ಸುಮಾರು 52,000 ದಿಂದ 25,000 ಕ್ಕೆ ಇಳಿಸುತ್ತಿದೆ ಎಂದು ಅವರು ಹೇಳಿದರು.

ಕೆಲವು ಪ್ರದೇಶಗಳಲ್ಲಿ ಅಮೆರಿಕಾದ ಕೆಲವು ಸಂಪನ್ಮೂಲಗಳು ಇರಲಿವೆ ಆದರೆ ಚೀನಾದ ಬೆದರಿಕೆಯ ಬಗ್ಗೆ ಮಾತನಾಡಬೇಕಾದರೆ ಭಾರತ, ವಿಯೇಟ್ನಾಂ, ಮಲೇಶ್ಯಾ, ಇಂಡೋನೇಷಿಯಾ ಹಾಗೂ ಪಿಲಿಫೈನ್ ನ ದಕ್ಷಿಣ ಚೀನಾ ಸಮುದ್ರಗಳ ಬಗೆಗಿನ ಸವಾಲುಗಳಿವೆ ಎಂದು ಹೇಳಿದ್ದಾರೆ.

“ಅಮರಿಕಾ ಮಾಡಲು ನಿರ್ಧರಿಸಿದ ವ್ಯತ್ಯಾಸವು ಕೆಲವು ಸ್ಥಳಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ, ಇತರ ರಾಷ್ಟ್ರಗಳು ತಮ್ಮದೇ ಆದ ರಕ್ಷಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗಬಹುದು. ಆದ್ದರಿಂದ, ನಾವು ಇದನ್ನು ಜಗತ್ತಿನ ಎಲ್ಲ ಪಾಲುದಾರರೊಂದಿಗೆ ಪೂರ್ಣ ಸಮಾಲೋಚನೆಯಲ್ಲಿ ಮಾಡಲು ಬಯಸುತ್ತೇವೆ, ಯುರೋಪಿಯನ್ ದೇಶಗಳೊಂದಿಗೆ ಖಂಡಿತವಾಗಿಯೂ” ಎಂದು ಪೊಂಪಿಯೊ ಹೇಳಿದ್ದಾರೆ.

ಮಿತ್ರರಾಷ್ಟ್ರಗಳು ಮತ್ತು ಸ್ನೇಹಿತರೊಂದಿಗೆ ಸಮಾಲೋಚಿಸಿ ಸೈನ್ಯದ ಸ್ಥಿತಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಪೊಂಪಿಯೊ ಹೇಳಿದ್ದಾರೆ.

ಕಳೆದ ವಾರ ಪೊಂಪಿಯೊ ಚೀನಾದ ಸೈನ್ಯ ಭಾರತದೊಂದಿಗಿನ ಗಡಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ ಮತ್ತು ದಕ್ಷಿಣ ಚೀನಾ ಸಮುದ್ರವನ್ನು ಮಿಲಿಟರೀಕರಣಗೊಳಿಸಿದೆ ಎಂದು ಟೀಕಿಸಿದ್ದರು.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಚೀನಾ ಮಿಲಿಟರಿ ಮತ್ತು ಆರ್ಥಿಕ ಪ್ರಭಾವವನ್ನು ವೇಗವಾಗಿ ವಿಸ್ತರಿಸುತ್ತಿರುವುದು ಅಮೆರಿಕಾದ ಕಳವಳಕ್ಕೆ ಕಾರಣವಾಗಿದೆ. ಚೀನಾವು ದಕ್ಷಿಣ ಚೀನಾ ಸಮುದ್ರ ಮತ್ತು ಪೂರ್ವ ಚೀನಾ ಸಮುದ್ರ ಎರಡರಲ್ಲೂ ತೀವ್ರವಾಗಿ ಪ್ರಾದೇಶಿಕ ವಿವಾದಗಳಲ್ಲಿ ತೊಡಗಿದೆ. ಈ ಪ್ರದೇಶದಲ್ಲಿ ಅದು ಅನೇಕ ದ್ವೀಪಗಳನ್ನು ನಿಯಂತ್ರಿಸುತ್ತಿದೆ ಮತ್ತು ಮಿಲಿಟರಿಕರಣಗೊಳಿಸಿದೆ. ಎರಡೂ ಪ್ರದೇಶಗಳು ಖನಿಜಗಳು, ತೈಲ ಮತ್ತು ಇತರ ನೈಸರ್ಗಿಕ ಸಂಪನ್ಮೂಲಗಳಿಂದ ಸಮೃದ್ಧವಾಗಿವೆ ಮತ್ತು ಜಾಗತಿಕ ವ್ಯಾಪಾರಕ್ಕೆ ಪ್ರಮುಖ ಸ್ಥಳವಾಗಿದೆ ಎಂದು ಹೇಳಲಾಗಿದೆ.


ಓದಿ: ಬಾಯ್‍ಕಾಟ್ ಚೈನಾ ಅಬ್ಬರದ ಕೂಗು ವಾಣಿಜ್ಯದಲ್ಲಿ ಕಾರ್ಯಗತ ಸಾಧ್ಯವೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...