Homeಕರ್ನಾಟಕತನ್ನನ್ನು ನಿಂದಿಸುತ್ತಿದ್ದಾರೆಂದು ಅಳುವ ಪ್ರಧಾನಿಯನ್ನು ನೋಡುತ್ತಿದ್ದೇವೆ: ಮೋದಿಯನ್ನು ಗೇಲಿ ಮಾಡಿದ ಪ್ರಿಯಾಂಕಾ

ತನ್ನನ್ನು ನಿಂದಿಸುತ್ತಿದ್ದಾರೆಂದು ಅಳುವ ಪ್ರಧಾನಿಯನ್ನು ನೋಡುತ್ತಿದ್ದೇವೆ: ಮೋದಿಯನ್ನು ಗೇಲಿ ಮಾಡಿದ ಪ್ರಿಯಾಂಕಾ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, “ಪ್ರಧಾನಿಗೆ ಜನರ ಬಗ್ಗೆ ಕಾಳಜಿ ಇಲ್ಲ ಬದಲಿಗೆ ಅನುಕಂಪ ಪಡೆಯಲು ನಿಮ್ಮ ಬಳಿ ಅಳುತ್ತಾರೆ” ಎಂದು ಹೇಳಿದ್ದಾರೆ.

ಹೊಸಕೋಟೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ, ”ತನ್ನನ್ನು ನಿಂದಿಸುತ್ತಿದ್ದಾರೆ ಎಂದು ಜನರ ಬಳಿ ಹೇಳಿಕೊಂಡು ಅನುಕಂಪ ಗಿಟ್ಟಿಸಿಕೊಳ್ಳುವ ಪ್ರಧಾನಿಯನ್ನು ಇದೇ ಮೊದಲಬಾರಿಗೆ ನೋಡುತ್ತಿದ್ದೇನೆ” ಎಂದು ಗೇಲಿ ಮಾಡಿದ್ದಾರೆ.

ಬಿಜೆಪಿಯನ್ನು ವ್ಯಂಗ್ಯವಾಡಿದ ಅವರು, ಕೇಸರಿ ಪಕ್ಷವು ಪ್ರಜಾಪ್ರಭುತ್ವವನ್ನೇ ಕದಿಯುತ್ತಿದೆ ಎಂದರು. ಹಳೆಯ ಪಕ್ಷವಾದ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.

”ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಾನಾ ತರಹದ ಕಳ್ಳರಿದ್ದಾರೆ, ಕೆಲವರು ಮನೆಗಳಲ್ಲಿ ಕಳ್ಳತನ ಮಾಡುತ್ತಾರೆ… ಈಗ ಸರ್ಕಾರವನ್ನೇ ಕದಿಯುವ ಕಳ್ಳರು ಕೂಡ ಬಂದಿದ್ದಾರೆ, ಪ್ರಜಾಪ್ರಭುತ್ವವನ್ನೇ ಕದಿಯುತ್ತಿದ್ದಾರೆ… ಅದನ್ನು ತಡೆಯಿರಿ…,” ಎಂದು ಪ್ರಿಯಾಂಕಾ ಹೇಳಿದರು.

ಮಾಜಿ ಕಾಂಗ್ರೆಸ್ ಸಂಸದರು ದೇಶಕ್ಕಾಗಿ ಪ್ರಾಣ ಕೊಡಲು ಸಿದ್ಧರಾಗಿದ್ದಾರೆ. ರಾಹುಲ್‌ ಗಾಂಧಿ ಅವರನ್ನು ನೋಡಿ ಪಾಠ ಕಲಿಯಿರಿ ಎಂದು ಈ ಹಿಂದೆ ಏಪ್ರಿಲ್ 30ರಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರೀಯಾಂಕಾ ಹೇಳಿದರು.

ಇದನ್ನೂ ಓದಿ: ‘ನೂರು ‘ಮನ್ ಕಿ ಬಾತ್’ ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ ‘ಜನ್ ಕಿ ಬಾತ್’ ಕೇಳುತ್ತಿರಾ?’: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ಜಮಖಂಡಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ”ಸಾರ್ವಜನಿಕರ ಮುಂದೆ ನಿಂದನೆಯಾಗುತ್ತಿದೆ ಎಂದು ಹೇಳುವ ಮೊದಲ ಪ್ರಧಾನಿಯನ್ನು ನಾನು ನೋಡಿದ್ದೇನೆ, ಪ್ರಧಾನಿ ಬಳಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಪಟ್ಟಿ ಇಲ್ಲ, ಆದರೆ ನಿಂದನೆಯ ಪಟ್ಟಿ ಇದೆ. ಮೋದಿಜೀ , ‘ಗಾಲಿ ಕ್ಯಾ ಮೇ ದೇಶ್ ಕೆ ಲಿಯೇ ಗೋಲಿ ಖಾ ಲುಂಗಾ’ ಎಂದು ಹೇಳುವ ನನ್ನ ಸಹೋದರನಿಂದ (ರಾಹುಲ್ ಗಾಂಧಿ) ಪಾಠ ಕಲಿಯಿರಿ” ಎಂದು ಹೇಳಿದರು.

”ನನ್ನ ಕುಟುಂಬದ ಮೇಲೆ ಎಸೆದಿರುವ ನಿಂದನೆಗಳ ಸಂಖ್ಯೆಯನ್ನು ನಾನು ಎಣಿಸಲು ಪ್ರಾರಂಭಿಸಿದರೆ ಮತ್ತು ಬಿಜೆಪಿಯ ಒಬ್ಬೊಬ್ಬರ ಹೆಸರ ಮೇಲೂ ನಾನು ಹಲವಾರು ಪುಸ್ತಕಗಳನ್ನು ಪ್ರಕಟಿಸಬೇಕಾಗಬಹುದು” ಎಂದು ಹೇಳಿದರು.

ಮೊನ್ನೆ ಭಾನುವಾರ ಬೆಳಗಾವಿಯ ಕುಡಚಿಯಲ್ಲಿ ಪ್ರಿಯಾಂಕಾ ಗಾಂಧಿ ಅವರು ರೋಡ್‌ಶೋ ನಡೆಸಿದರು. ಈ ವೇಳೆ, ”ಹಣದುಬ್ಬರವನ್ನು ತಂದವರು ಯಾರು? ಜನರನ್ನು ಲೂಟಿ ಮಾಡಿದವರು ಯಾರು? ಜಿಎಸ್‌ಟಿಯನ್ನು ತಂದು ನಿಮ್ಮನ್ನು ತೊಂದರೆಗೊಳಿಸಿದ್ದು ಯಾರು? 40% ಕಮಿಷನ್ ಸರ್ಕಾರವನ್ನು ನಡೆಸುವವರು ಯಾರು?” ಸರಣಿ ಪ್ರಶ್ನೆಗಳನ್ನು ಕೇಳಿದ್ದರು.

”ಬಿಜೆಪಿಯು ಸುಳ್ಳು ಭರವಸೆಗಳನ್ನು ನೀಡುತ್ತದೆ ಮತ್ತು ಎಂದಿಗೂ ಈಡೇರಿಸುವುದಿಲ್ಲ. ಆದರೆ ಕಾಂಗ್ರೆಸ್ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ಕಾಂಗ್ರೆಸ್ ಯಾವಾಗಲೂ ಜನರಿಗಾಗಿ ಕೆಲಸ ಮಾಡುವ ಉದ್ದೇಶವನ್ನು ಹೊಂದಿದೆ ಮತ್ತು ಜನರಿಗೆ ದ್ರೋಹ ಮಾಡಬಾರದು” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...