Homeಮುಖಪುಟದ್ವೇಷದ ಚಂಡಮಾರುತಕ್ಕೆ ತತ್ತರಿಸಿದ್ದೇವೆ, ಮುಸ್ಲಿಮರ ಮನದ ಮಾತು ಕೇಳಿ: ಮೋದಿಗೆ ಜಾಮಾ ಮಸೀದಿ ಶಾಹಿ ಇಮಾಮ್...

ದ್ವೇಷದ ಚಂಡಮಾರುತಕ್ಕೆ ತತ್ತರಿಸಿದ್ದೇವೆ, ಮುಸ್ಲಿಮರ ಮನದ ಮಾತು ಕೇಳಿ: ಮೋದಿಗೆ ಜಾಮಾ ಮಸೀದಿ ಶಾಹಿ ಇಮಾಮ್ ಮನವಿ

- Advertisement -
- Advertisement -

ಜಾಮಾ ಮಸೀದಿಯ ಮುಖಂಡ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಅವರು ಭಾರತದಲ್ಲಿನ “ದ್ವೇಷದ ಚಂಡಮಾರುತ”ದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಮುಸ್ಲಿಮರ ‘ಮನ್ ಕಿ ಬಾತ್’ ಆಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಐತಿಹಾಸಿಕ ಜಾಮಾ ಮಸೀದಿಯಲ್ಲಿ ಶುಕ್ರವಾರದ (ಆಗಸ್ಟ್ 11) ಧರ್ಮೋಪದೇಶದಲ್ಲಿ ಮಾತನಾಡಿದ ಅಹ್ಮದ್ ಬುಖಾರಿ ಅವರು, ನೂಹ್ ಗಲಭೆ, ರೈಲಿನಲ್ಲಿ ಪೊಲೀಸ್ ಅಧಿಕಾರಿಯಿಂದ ನಾಲ್ವರ ಹತ್ಯೆಯಂತಹ ಇತ್ತೀಚಿನ ಘಟನೆಗಳನ್ನು ಉಲ್ಲೇಖಿಸಿದರು. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಮುಸ್ಲಿಂ ಸಮುದಾಯದ ಬುದ್ಧಿಜೀವಿಗಳೊಂದಿಗೆ ಸಂವಾದ ನಡೆಸುವಂತೆ ಸಲಹೆ ನೀಡಿದರು.

”ದೇಶದಲ್ಲಿ ಪ್ರಸ್ತುತ ಸನ್ನಿವೇಶ ನೋಡಿ ನಾನು ಈ ಮಾತುಗಳನ್ನು ಹೇಳುತ್ತಿದ್ದೇನೆ. ಭಾರತದ ಪರಿಸ್ಥಿತಿ ಚಿಂತಾಜನಕವಾಗಿದೆ. ದೇಶದಲ್ಲಿ ಬೀಸುತ್ತಿರುವ ದ್ವೇಷದ ಚಂಡಮಾರುತವು ಶಾಂತಿಗೆ ಗಂಭೀರ ಅಪಾಯವನ್ನುಂಟುಮಾಡುತ್ತಿದೆ. ದ್ವೇಷದ ಚಂಡಮಾರುತಕ್ಕೆ ತತ್ತರಿಸಿದ್ದೇವೆ” ಎಂದು ಬುಖಾರಿ ಹೇಳಿದರು.

”ನೀವು ನಿಮ್ಮ ‘ಮನ್ ಕಿ ಬಾತ್’ ಎಂದು ಹೇಳುತ್ತೀರಿ ಆದರೆ ನೀವು ಮುಸ್ಲಿಮರ ‘ಮನ್ ಕಿ ಬಾತ್’ ಅನ್ನು ಸಹ ಕೇಳಬೇಕು. ಸದ್ಯ ಉಂಟಾಗಿರುವ ಪರಿಸ್ಥಿತಿಗಳಿಂದ ಮುಸ್ಲಿಮರು ತೊಂದರೆಗೀಡಾಗಿದ್ದಾರೆ. ಅವರು ತಮ್ಮ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ” ಎಂದು ಪ್ರಧಾನಿ ಮೋದಿಯ ಮಾಸಿಕ ರೇಡಿಯೊ ಕಾರ್ಯಕ್ರಮವನ್ನು ಉಲ್ಲೇಖಿಸಿ ಬುಖಾರಿ ಹೇಳಿದರು.

”ದ್ವೇಷ ಮತ್ತು ಕೋಮು ಹಿಂಸಾಚಾರವನ್ನು ಎದುರಿಸುವಲ್ಲಿ ಕಾನೂನು ದುರ್ಬಲವಾಗಿದೆ ಎನ್ನುವುದು ಸಾಬೀತಾಗುತ್ತಿದೆ. ಒಂದು ಧರ್ಮದ ಜನರಿಗೆ ಬಹಿರಂಗವಾಗಿ ಬೆದರಿಕೆ ಹಾಕಲಾಗುತ್ತಿದೆ. ಮುಸ್ಲಿಮರಿಗೆ ಬಹಿಷ್ಕಾರದ ಕರೆಗಳು ಮತ್ತು ಅವರೊಂದಿಗೆ ವ್ಯಾಪಾರ ಮತ್ತು ವ್ಯವಹಾರವನ್ನು ಕೊನೆಗೊಳಿಸುವಂತೆ ಘೋಷಿಸಲಾದ ಪಂಚಾಯತ್‌ಗಳನ್ನು ನಡೆಸಲಾಗುತ್ತಿದೆ. ಜಗತ್ತಿನಲ್ಲಿ 57 ಇಸ್ಲಾಮಿಕ್ ದೇಶಗಳಿವೆ, ಅಲ್ಲಿ ಮುಸ್ಲಿಮೇತರರು ವಾಸಿಸುತ್ತಿದ್ದಾರೆ ಆದರೆ ಅವರು ಯಾವುದೇ ಬೆದರಿಕೆಯನ್ನು ಎದುರಿಸುತ್ತಿಲ್ಲ. ಅವರ ಜೀವನ ಅಥವಾ ಜೀವನೋಪಾಯಕ್ಕೆ ಅಲ್ಲಿ ಯಾವುದೇ ತೊಂದರೆಯಿಲ್ಲ” ಎಂದು ಬುಖಾರಿ ಹೇಳಿದರು.

”ಭಾರತದಲ್ಲಿ ಯಾಕೆ ಈ ದ್ವೇಷ? ಹಿಂದೂ-ಮುಸ್ಲಿಂ ನಡುವಿನ ಸಂಬಂಧ ಅಪಾಯದಂಚಿನಲ್ಲಿದೆ. ನಮ್ಮ ಪೂರ್ವಜರು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಇಂತಹ ದಿನಕ್ಕಾಗಿಯೇ? ಪರಿಸ್ಥಿತಿಯನ್ನು ನಿಯಂತ್ರಿಸುವುದು ಸರ್ಕಾರದ ಕೈಯಲ್ಲಿದೆ. ಮುಸ್ಲಿಂ ಬುದ್ಧಿಜೀವಿಗಳೊಂದಿಗೆ ಮಾತನಾಡಲು ನಾನು ಪ್ರಧಾನಿ ಮತ್ತು ಗೃಹ ಸಚಿವರಿಗೆ ಮನವಿ ಮಾಡುತ್ತೇನೆ. ದೇಶದ ಮುಸ್ಲಿಮರ ಪರವಾಗಿ ಮಾತನಾಡಲು ಬಯಸುತ್ತೇನೆ. ದ್ವೇಷದ ಚಂಡಮಾರುತದಿಂದ ದೇಶವನ್ನು ಉಳಿಸಲು ಮುಸ್ಲಿಂ ಸಮುದಾಯದ ಸದಸ್ಯರೊಂದಿಗೆ ಕೇಂದ್ರವು ಸಭೆ ನಡೆಸಬಹುದು” ಎಂದು ಬುಖಾರಿ ಸಲಹೆ ನೀಡಿದರು.

ಇದನ್ನೂ ಓದಿ: ಅವಿಶ್ವಾಸ ನಿರ್ಣಯದ ವೇಳೆ ಬೆತ್ತಲಾದ ಕುಂಭಕರ್ಣ: ಮೋದಿ ವಿರುದ್ಧ ಮತ್ತೆ ಗುಡುಗಿದ ನಟ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...