Homeಮುಖಪುಟದ್ವೇಷದ ಚಂಡಮಾರುತಕ್ಕೆ ತತ್ತರಿಸಿದ್ದೇವೆ, ಮುಸ್ಲಿಮರ ಮನದ ಮಾತು ಕೇಳಿ: ಮೋದಿಗೆ ಜಾಮಾ ಮಸೀದಿ ಶಾಹಿ ಇಮಾಮ್...

ದ್ವೇಷದ ಚಂಡಮಾರುತಕ್ಕೆ ತತ್ತರಿಸಿದ್ದೇವೆ, ಮುಸ್ಲಿಮರ ಮನದ ಮಾತು ಕೇಳಿ: ಮೋದಿಗೆ ಜಾಮಾ ಮಸೀದಿ ಶಾಹಿ ಇಮಾಮ್ ಮನವಿ

- Advertisement -
- Advertisement -

ಜಾಮಾ ಮಸೀದಿಯ ಮುಖಂಡ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಅವರು ಭಾರತದಲ್ಲಿನ “ದ್ವೇಷದ ಚಂಡಮಾರುತ”ದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಮುಸ್ಲಿಮರ ‘ಮನ್ ಕಿ ಬಾತ್’ ಆಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಐತಿಹಾಸಿಕ ಜಾಮಾ ಮಸೀದಿಯಲ್ಲಿ ಶುಕ್ರವಾರದ (ಆಗಸ್ಟ್ 11) ಧರ್ಮೋಪದೇಶದಲ್ಲಿ ಮಾತನಾಡಿದ ಅಹ್ಮದ್ ಬುಖಾರಿ ಅವರು, ನೂಹ್ ಗಲಭೆ, ರೈಲಿನಲ್ಲಿ ಪೊಲೀಸ್ ಅಧಿಕಾರಿಯಿಂದ ನಾಲ್ವರ ಹತ್ಯೆಯಂತಹ ಇತ್ತೀಚಿನ ಘಟನೆಗಳನ್ನು ಉಲ್ಲೇಖಿಸಿದರು. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಮುಸ್ಲಿಂ ಸಮುದಾಯದ ಬುದ್ಧಿಜೀವಿಗಳೊಂದಿಗೆ ಸಂವಾದ ನಡೆಸುವಂತೆ ಸಲಹೆ ನೀಡಿದರು.

”ದೇಶದಲ್ಲಿ ಪ್ರಸ್ತುತ ಸನ್ನಿವೇಶ ನೋಡಿ ನಾನು ಈ ಮಾತುಗಳನ್ನು ಹೇಳುತ್ತಿದ್ದೇನೆ. ಭಾರತದ ಪರಿಸ್ಥಿತಿ ಚಿಂತಾಜನಕವಾಗಿದೆ. ದೇಶದಲ್ಲಿ ಬೀಸುತ್ತಿರುವ ದ್ವೇಷದ ಚಂಡಮಾರುತವು ಶಾಂತಿಗೆ ಗಂಭೀರ ಅಪಾಯವನ್ನುಂಟುಮಾಡುತ್ತಿದೆ. ದ್ವೇಷದ ಚಂಡಮಾರುತಕ್ಕೆ ತತ್ತರಿಸಿದ್ದೇವೆ” ಎಂದು ಬುಖಾರಿ ಹೇಳಿದರು.

”ನೀವು ನಿಮ್ಮ ‘ಮನ್ ಕಿ ಬಾತ್’ ಎಂದು ಹೇಳುತ್ತೀರಿ ಆದರೆ ನೀವು ಮುಸ್ಲಿಮರ ‘ಮನ್ ಕಿ ಬಾತ್’ ಅನ್ನು ಸಹ ಕೇಳಬೇಕು. ಸದ್ಯ ಉಂಟಾಗಿರುವ ಪರಿಸ್ಥಿತಿಗಳಿಂದ ಮುಸ್ಲಿಮರು ತೊಂದರೆಗೀಡಾಗಿದ್ದಾರೆ. ಅವರು ತಮ್ಮ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ” ಎಂದು ಪ್ರಧಾನಿ ಮೋದಿಯ ಮಾಸಿಕ ರೇಡಿಯೊ ಕಾರ್ಯಕ್ರಮವನ್ನು ಉಲ್ಲೇಖಿಸಿ ಬುಖಾರಿ ಹೇಳಿದರು.

”ದ್ವೇಷ ಮತ್ತು ಕೋಮು ಹಿಂಸಾಚಾರವನ್ನು ಎದುರಿಸುವಲ್ಲಿ ಕಾನೂನು ದುರ್ಬಲವಾಗಿದೆ ಎನ್ನುವುದು ಸಾಬೀತಾಗುತ್ತಿದೆ. ಒಂದು ಧರ್ಮದ ಜನರಿಗೆ ಬಹಿರಂಗವಾಗಿ ಬೆದರಿಕೆ ಹಾಕಲಾಗುತ್ತಿದೆ. ಮುಸ್ಲಿಮರಿಗೆ ಬಹಿಷ್ಕಾರದ ಕರೆಗಳು ಮತ್ತು ಅವರೊಂದಿಗೆ ವ್ಯಾಪಾರ ಮತ್ತು ವ್ಯವಹಾರವನ್ನು ಕೊನೆಗೊಳಿಸುವಂತೆ ಘೋಷಿಸಲಾದ ಪಂಚಾಯತ್‌ಗಳನ್ನು ನಡೆಸಲಾಗುತ್ತಿದೆ. ಜಗತ್ತಿನಲ್ಲಿ 57 ಇಸ್ಲಾಮಿಕ್ ದೇಶಗಳಿವೆ, ಅಲ್ಲಿ ಮುಸ್ಲಿಮೇತರರು ವಾಸಿಸುತ್ತಿದ್ದಾರೆ ಆದರೆ ಅವರು ಯಾವುದೇ ಬೆದರಿಕೆಯನ್ನು ಎದುರಿಸುತ್ತಿಲ್ಲ. ಅವರ ಜೀವನ ಅಥವಾ ಜೀವನೋಪಾಯಕ್ಕೆ ಅಲ್ಲಿ ಯಾವುದೇ ತೊಂದರೆಯಿಲ್ಲ” ಎಂದು ಬುಖಾರಿ ಹೇಳಿದರು.

”ಭಾರತದಲ್ಲಿ ಯಾಕೆ ಈ ದ್ವೇಷ? ಹಿಂದೂ-ಮುಸ್ಲಿಂ ನಡುವಿನ ಸಂಬಂಧ ಅಪಾಯದಂಚಿನಲ್ಲಿದೆ. ನಮ್ಮ ಪೂರ್ವಜರು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಇಂತಹ ದಿನಕ್ಕಾಗಿಯೇ? ಪರಿಸ್ಥಿತಿಯನ್ನು ನಿಯಂತ್ರಿಸುವುದು ಸರ್ಕಾರದ ಕೈಯಲ್ಲಿದೆ. ಮುಸ್ಲಿಂ ಬುದ್ಧಿಜೀವಿಗಳೊಂದಿಗೆ ಮಾತನಾಡಲು ನಾನು ಪ್ರಧಾನಿ ಮತ್ತು ಗೃಹ ಸಚಿವರಿಗೆ ಮನವಿ ಮಾಡುತ್ತೇನೆ. ದೇಶದ ಮುಸ್ಲಿಮರ ಪರವಾಗಿ ಮಾತನಾಡಲು ಬಯಸುತ್ತೇನೆ. ದ್ವೇಷದ ಚಂಡಮಾರುತದಿಂದ ದೇಶವನ್ನು ಉಳಿಸಲು ಮುಸ್ಲಿಂ ಸಮುದಾಯದ ಸದಸ್ಯರೊಂದಿಗೆ ಕೇಂದ್ರವು ಸಭೆ ನಡೆಸಬಹುದು” ಎಂದು ಬುಖಾರಿ ಸಲಹೆ ನೀಡಿದರು.

ಇದನ್ನೂ ಓದಿ: ಅವಿಶ್ವಾಸ ನಿರ್ಣಯದ ವೇಳೆ ಬೆತ್ತಲಾದ ಕುಂಭಕರ್ಣ: ಮೋದಿ ವಿರುದ್ಧ ಮತ್ತೆ ಗುಡುಗಿದ ನಟ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...