Homeಮುಖಪುಟನಿಲ್ಲದ ಸೆಕ್ಷನ್‌ 66A ಪ್ರಹಾರ: ರದ್ದುಗೊಂಡ ಕಾನೂನಿನ ಬಳಕೆಗೆ ಸುಪ್ರೀಂ ಬೇಸರ

ನಿಲ್ಲದ ಸೆಕ್ಷನ್‌ 66A ಪ್ರಹಾರ: ರದ್ದುಗೊಂಡ ಕಾನೂನಿನ ಬಳಕೆಗೆ ಸುಪ್ರೀಂ ಬೇಸರ

- Advertisement -
- Advertisement -

IT ಕಾಯ್ದೆಯ ಸೆಕ್ಷನ್‌ 66A ಇನ್ನೂ ಬಳಕೆಯಾಗುತ್ತಿರುವುದು ಭಯಾನಕ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. ರೋಹಿಂಟನ್ ನಾರೀಮನ್, ಕೆ.ಎಮ್‌.ಜೋಸೆಫ್‌, ಬಿ.ಆರ್‌.ಗವಾಯಿ ಅವರಿದ್ದ ಸುಪ್ರೀಂ ಕೋರ್ಟ್‌ ಪೀಠ ಕೆಂದ್ರ ಸರ್ಕಾರಕ್ಕೆ ಈ ಸಂಬಂಧ ನೋಟಿಸ್ ಕೂಡ ನೀಡಿತು. 2015ರಲ್ಲಿಯೇ ರದ್ದಾದ ಕಾನೂನಿನಡಿ ಇನ್ನೂ FIR ದಾಖಲಾಗುತ್ತಿದ್ದರೆ ಅದು ಸುಪ್ರೀಂ ಕೋರ್ಟ್‌ ತೀರ್ಪಿನ ಉಲ್ಲಂಘನೆಯಾಗುತ್ತದೆ. ನಾವು ಏನು ಕೇಳುತ್ತಿದ್ದೇವೆ, ನಮ್ಮ ಮುಂದೆ ಏನು ನಡೆಯುತ್ತಿದೆ ಇದು ಅತ್ಯಂತ ಆಘಾತಕಾರಿ ವಿಷಯ ಎಂದು ನ್ಯಾಯಮೂರ್ತಿ ರೋಹಿಂಟನ್ ನಾರೀಮನ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಪೀಪಲ್ ಯೂನಿಯನ್‌ ಫಾರ್‌ ಸಿವಿಲ್ ಲಿಬರ್ಟೀಸ್ (PUCL) ಎಂಬ ನಾಗರಿಕ ಹಕ್ಕುಗಳ ಹೋರಾಟ ಸಂಘಟನೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ 2 ವಾರಗಳಲ್ಲಿ ಉತ್ತರ ನೀಡುವಂತೆ ಸುಪ್ರೀಂ ಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ಚಿತ್ರ ಕೃಪೆ: ಬಾರ್‌ ಎಂಡ್ ಬೆಂಚ್‌

ಇದನ್ನೂ ಓದಿ: ಸರ್ಕಾರದ ಹೊಸ ಐಟಿ ಮಾರ್ಗಸೂಚಿ: ಬಳಕೆದಾರರ ಖಾಸಗಿತನ ರಕ್ಷಿಸಲು ದೆಹಲಿ ಹೈಕೋರ್ಟ್‌ಗೆ ವಾಟ್ಸಾಪ್ ಮೊರೆ

ಸುಪ್ರೀಂ ಕೋರ್ಟ್‌ನಲ್ಲಿ ಸರ್ಕಾರವನ್ನು ಪ್ರತಿನಿಧಿಸಿ ಉತ್ತರಿಸಿದ ಆಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, “ಸುಪ್ರೀಂ ಕೋರ್ಟ್ 66A ಯನ್ನು ರದ್ದುಪಡಿಸಿದ್ದರೂ ಸೆಕ್ಷನ್‌ ಬಳಕೆಯಲ್ಲಿ ಇದೆ. 66A ಸೆಕ್ಷನ್‌ನಡಿ ಪ್ರಕರಣಗಳಲ್ಲಿ FIR ಕೂಡ ದಾಖಲಿಸಲಾಗುತ್ತಿದೆ. ಪ್ರಕರಣಗಳನ್ನು ದಾಖಲಿಸುವ ಸಂದರ್ಭದಲ್ಲಿ ಈ ಸೆಕ್ಷನ್‌ಅನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ ಎಂಬ ಅಡಿ ಬರಹವನ್ನು ನಮೂದಿಸಲಾಗುತ್ತದೆ. ಸಂಸತ್ತಿನಲ್ಲಿ IT ಕಾಯ್ದೆ 2000 ಕ್ಕೆ ಬದಲಾವಣೆ ತಂದು 66A ಸೆಕ್ಷನ್‌ ಮುಂದೆ ಬ್ರಾಕೆಟ್‌ನಲ್ಲಿ ರದ್ದುಪಡಿಸಲಾಗಿದೆ ಎಂದು ತಿದ್ದುಪಡಿ ಮಾಡಿದರೆ ಮಾತ್ರ ಸೆಕ್ಷನ್ ರದ್ದಾಗಲಿದೆ” ಎಂದು ತಿಳಿಸಿದ್ದಾರೆ.

ರದ್ದಾಗಿರುವ ಸೆಕ್ಷನ್‌ 66A ಅಡಿಯಲ್ಲಿ ಕೇವಲ ಪ್ರಕರಣಗಳನ್ನು ಮಾತ್ರ ದಾಖಲಿಸಲಾಗುತ್ತಿಲ್ಲ. ಜಿಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆ ಕೂಡ ನಡೆಯುತ್ತಿದೆ. ಮಾರ್ಚ್‌ 10, 2021ರ ವೇಳೆಗೆ ದೇಶದಲ್ಲಿ ಸೆಕ್ಷನ್‌ 66A ಗೆ ಸಂಬಂಧಿಸಿದ 745 ಪ್ರಕರಣಗಳು ಸಕ್ರಿಯವಾಗಿವೆ ಎಂದು  ಜೊಂಬಿ ಟ್ರ್ಯಾಕರ್‌ ವೆಬ್‌ಸೈಟ್‌ ವರದಿ ಹೆಳುತ್ತದೆ ಎಂದು PUCL ಸಂಘಟನೆಯ ಪರವಾಗಿ ನ್ಯಾಯವಾದಿ ಅಪರ್ಣಾ ಭಟ್‌ ಸುಪ್ರೀಂ ಕೋರ್ಟ್‌ಗೆ ಅಂಕಿ ಅಂಶಗಳನ್ನು ಸಲ್ಲಿಸಿದ್ದಾರೆ.

ಸೆಕ್ಷನ್‌ 66A ಅಡಿಯಲ್ಲಿ ದೇಶದಾದ್ಯಂತ ದಾಖಲಾಗಿರುವ ಎಲ್ಲಾ FIR ಗಳ ಮತ್ತು ವಿಚಾರಣೆ ನಡೆಯುತ್ತಿರುವ ಪ್ರಕರಣಗಳ ಅಂಕಿ ಅಂಶವನ್ನು ಸಂಗ್ರಹಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕು. ಸೆಕ್ಷನ್‌ 66A ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ತಕ್ಷಣವೇ ಕೈಬಿಡಬೇಕೆಂದು ಕೇಂದ್ರ ಸರ್ಕಾರಕ್ಕೆ ಆದೇಶಿಸುವಂತೆ ಈ ಸಾರ್ವಜನಿಕ ಅರ್ಜಿಯಲ್ಲಿ ಕೋರಲಾಗಿದೆ.

IT ಕಾಯ್ದೆ 2000 ರ ಸೆಕ್ಷನ್ 66A ರದ್ದಾಗಿದೆ ಎಂಬ ಸುದ್ದಿಯನ್ನು ಎಲ್ಲಾ ಇಂಗ್ಲಿಷ್ ಪತ್ರಿಕೆ ಮತ್ತು ಪ್ರಾದೇಶಿಕ ಪತ್ರಿಕೆಯಲ್ಲಿ ಪ್ರಕಟಿಸುವಂತೆ ಸರ್ಕಾರಕ್ಕೆ ಆದೇಶಿಸಬೇಕೆಂದು PUCL ತನ್ನ ಅರ್ಜಿಯಲ್ಲಿ ಕೋರ್ಟ್‌ಗೆ ಮನವಿ ಮಾಡಿದೆ.

2018ರಲ್ಲಿ ಕೂಡ PUCL ಸಂಘಟನೆ ಇಂತಹದ್ದೇ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ದಾಖಲಿಸಿತ್ತು. 2019ರಲ್ಲಿ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ಎಲ್ಲಾ ಹೈಕೋರ್ಟ್‌ಗಳಲ್ಲಿ ಐಟಿ ಕಾಯ್ದೆಯ ಸೆಕ್ಷನ್‌ 66A ರದ್ದಾಗಿರುವ ಕುರಿತು ಮಾಹಿತಿ ಲಭ್ಯವಾಗಬೇಕು ಮತ್ತು ಸಂಬಂಧಿಸಿದ ದಾಖಲೆಗಳು ಸಾರ್ವಜನಿಕರಿಗೆ ಸಿಗಬೇಕು ಎಂದು ಆದೇಶಿಸಿತ್ತು.

ಇದನ್ನೂ ಓದಿ: ಹೊಸ ಐಟಿ ನಿಯಮ: ಏಪ್ರಿಲ್‌ನಲ್ಲಿ 59,350 ಕಂಟೆಂಟ್‌‌‌ಗಳನ್ನು ಕಿತ್ತು ಹಾಕಿದ ಗೂಗಲ್!

ಏನಿದು Section 66A of IT Act, 2000 ?

IT ಕಾಯ್ದೆಯ ಸೆಕ್ಷನ್‌ 66A ಯನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿ ವರ್ಷಗಳೇ ಕಳೆದಿವೆ. ಸಾಮಾಜಿಕ ಜಾಲತಾಣಗಳಲ್ಲಿ, ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಹಂಚಿಕೊಂಡ ಪೋಸ್ಟ್‌ ಅಥವಾ ಸಂದೇಶಗಳು ಆಕ್ಷೇಪಾರ್ಹವೆನಿಸಿದ ತಕ್ಷಣಕ್ಕೆ ಪೊಲೀಸರು ಯಾವುದೇ ವಿಚಾರಣೆಯನ್ನು ನಡೆಸದೇ ಬಂಧಿಸುವ ಅಧಿಕಾರವನ್ನು IT ಕಾಯ್ದೆಯ ಸೆಕ್ಷನ್‌ 66A ಪೊಲೀಸರಿಗೆ ನೀಡುತ್ತದೆ. ಸರ್ಕಾರದ ಯೋಜನೆಗಳನ್ನು ಟೀಕಿಸುವ, ವಿಮರ್ಶಿಸುವವರ ಮೇಲೆ ಈ ಸೆಕ್ಷನ್‌ನ ಪ್ರಹಾರ ಇದುವರೆಗೆ ನಡೆದುಬಂದಿದೆ. ಜನರ ಅಭಿವ್ಯಕ್ತಿ ಸ್ವಾತಂತ್ರಯವನ್ನೇ ಕಿತ್ತುಕೊಳ್ಳುವ ಐಟಿ ಕಾಯ್ದೆಯ ಸೆಕ್ಷನ್‌ 66A ಯನ್ನು ರದ್ದು ಮಾಡಿ ಸುಪ್ರೀಂ ಕೋರ್ಟ್ 2015 ರಲ್ಲಿ ತೀರ್ಪು ನೀಡಿದೆ. ಶ್ರೇಯಾ ಸಿಂಘಾಲ್ ವಿ. ಭಾರತ ಸರ್ಕಾರ ಪ್ರಕರಣದಲ್ಲಿ ಮಾರ್ಚ್‌ 24 2015 ರಂದು ಸುಪ್ರೀಂ ಕೋರ್ಟ್ ಐಟಿ ಕಾಯ್ದೆಯ 66A ಸೆಕ್ಷನ್ ಅಸಂವಿಧಾನಿಕವಾದುದು, ಜನರ ಮೂಲಭೂತ ಹಕ್ಕುಗಳನ್ನೇ ಕಿತ್ತುಕೊಳ್ಳುವ ಇಂತಹ ಕಾನೂನಗಳನ್ನು ಮುಂದೆ ಬಳಕೆ ಮಾಡಬಾರದೆಂದು  ಭಾರತ ಸರ್ಕಾರಕ್ಕೆ ಆದೇಶಿಸಿದೆ.


ಇದನ್ನೂ ಓದಿ: ಭಾರತದಲ್ಲಿ ಕಾನೂನು ರಕ್ಷಣೆ ಕಳೆದುಕೊಂಡ ಟ್ವಿಟರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...